Homeಕರ್ನಾಟಕಅಲೆಮಾರಿಗಳಿಗೆ ಶಾಶ್ವತ ವಸತಿ ಕಲ್ಪಿಸಲು ಒತ್ತಾಯ: ಬಜೆಟ್‌ನಲ್ಲಿ ಘೋಷಿಸುವಂತೆ ಮನವಿ

ಅಲೆಮಾರಿಗಳಿಗೆ ಶಾಶ್ವತ ವಸತಿ ಕಲ್ಪಿಸಲು ಒತ್ತಾಯ: ಬಜೆಟ್‌ನಲ್ಲಿ ಘೋಷಿಸುವಂತೆ ಮನವಿ

ಕಳೆದ ಬಿಜೆಪಿ ಸರ್ಕಾರ ಬಜೆಟ್‌ನಲ್ಲಿ ಅಲೆಮಾರಿಗಳಿಗೆ ಮೀಸಲಿಟ್ಟ 550 ಕೋಟಿ ರೂಪಾಯಿಗಳನ್ನು ಬಳಸದೇ ಹಿಂಪಡೆದು ಅನ್ಯಾಯ ಮಾಡಿದೆ. ಅದನ್ನು ಕಾಂಗ್ರೆಸ್ ಸರ್ಕಾರ ಸರಿಪಡಿಸಬೇಕು ಎಂದು ಸಭೆಯಲ್ಲಿ ಒತ್ತಾಯಿಸಲಾಯಿತು.

- Advertisement -
- Advertisement -

ರಾಜ್ಯದಲ್ಲಿರುವ ಲಕ್ಷಾಂತರ ಅಲೆಮಾರಿ ಸಮುದಾಯದ ಜನರಿಗೆ ಶಾಶ್ವತ ವಸತಿ ಕಲ್ಪಿಸಲು ಸಮಗ್ರ ಯೋಜನೆ ರೂಪಿಸಿ, ಬಜೆಟ್‌ನಲ್ಲಿ ಘೋಷಿಸಬೇಕೆಂದು ಕರ್ನಾಟಕ ರಾಜ್ಯ ಎಸ್ಸಿ/ಎಸ್ಟಿ ಅಲೆಮಾರಿ ಬುಡಕಟ್ಟು ಮಹಾಸಭಾ ಒತ್ತಾಯಿಸಿದೆ.

ಜುಲೈ 1 ರಂದು ಬೆಂಗಳೂರಿನ ಶಾಸಕರ ಭವನದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಸಿ ಕೆ ಮಂಜುನಾಥ್ ಮಾತನಾಡಿ, “ರಾಜ್ಯದಲ್ಲಿ ಗುಡಿಸಲು, ಗುಡಾರಗಳಲ್ಲಿ ವಾಸವಿರುವ ಅಲೆಮಾರಿ ಕುಟುಂಬಗಳಿಗೆ 7 ಲಕ್ಷ ಸಹಾಯಧನದ ಅನುದಾನದಲ್ಲಿ ತುರ್ತಾಗಿ ಮನೆ ನಿರ್ಮಿಸಿಕೊಡಬೇಕು ಮತ್ತು ಈ ಕುಟುಂಬಗಳಿಗೆ ಮೂಲಭೂತ ಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳಬೇಕು” ಎಂದರು.

ಸಂಘದ ರಾಜ್ಯ ಉಪಾಧ್ಯಕ್ಷರಾದ ವೀರೇಶ್‌ರವರು ಮಾತನಾಡಿ, “2011 ರ ಜನಗಣತಿಯಂತೆ ರಾಜ್ಯದಲ್ಲಿ ಸುಮಾರು 25 ಲಕ್ಷಕ್ಕೂ ಹೆಚ್ಚಿನ ಅಲೆಮಾರಿ ವಾಸವಿದ್ದಾರೆ. ಕರ್ನಾಟಕ ರಾಜ್ಯ ಕಾನೂನು ಶಾಲೆಯ ಸಮೀಕ್ಷಾ ವರದಿಯಂತೆ ಶೇಕಡ 48% ಅಲೆಮಾರಿ ಕುಟುಂಬಗಳು ವಾಸಕ್ಕೆ ಸ್ವಂತ ನಿವೇಶನ/ಸೂರಿಲ್ಲದೆ ರೈಲ್ವೆ ಟ್ರ್ಯಾಕಿನ ಪಕ್ಕದಲ್ಲಿ, ಊರ ಹೊರಗಿನ ಸ್ಮಶಾನದ ಪಕ್ಕದಲ್ಲಿ, ಪಾಳು ಭೂಮಿಯಲ್ಲಿ ಪ್ರಾಣಿಗಳಿಗಿಂತ ಕಡೆಯಾಗಿ ಬದುಕುತಿದ್ದಾರೆ. 87% ಅಲೆಮಾರಿಗಳು ಇಂದಿಗೂ ತುಂಡು ಭೂಮಿಯ ಒಡೆತನವಿಲ್ಲದೆ (ಕೃಷಿಭೂಮಿ) ಜೀವನ ನಿರ್ವಹಣೆಗೆ ಭಿಕ್ಷಾಟನೆ, ಚಿಂದಿ ಆಯುವ, ವೇಶ ಹಾಕುವ ಸಣ್ಣ ಪುಟ್ಟ ಕೆಲಸ ಮಾಡುತ್ತಿದ್ದಾರೆ. ಈ ಜನಾಂಗದ ಶೈಕ್ಷಣಿಕ, ಆರ್ಥಿಕ, ಔದ್ಯೋಗಿಕ, ರಾಜಕೀಯ, ಸಾಮಾಜಿಕ ಅಭಿವೃದ್ಧಿಗೆ ಪೂರಕವಾಗುವಂತಹ ಪ್ರಸ್ತುತ ಇರುವ ಕಾರ್ಯಕ್ರಮಗಳ ಜೊತೆಗೆ ಹೆಚ್ಚುವರಿ ವಿಶೇಷ ಅಭಿವೃದ್ಧಿ ಕಾರ್ಯಕ್ರಮ ರೂಪಿಸಬೇಕೆಂದು” ಮನವಿ ಮಾಡಿದರು.

ಅಲೆಮಾರಿಗಳಿಗೆ ಶಾಶ್ವತ ವಸತಿ ಕಲ್ಪಿಸಲು ಕಳೆದ ಬಿಜೆಪಿ ಸರ್ಕಾರ ಬಜೆಟ್‌ನಲ್ಲಿ ಮೀಸಲಿಟ್ಟ 550 ಕೋಟಿ ರೂಪಾಯಿಗಳನ್ನು ಬಳಸದೇ ಹಿಂಪಡೆದು ಅನ್ಯಾಯ ಮಾಡಿದೆ. ಅಲೆಮಾರಿಗಳ ವಸತಿ ಘಟಕವೆಚ್ಚ ಗ್ರಾಮೀಣ ಪ್ರದೇಶಕ್ಕೆ 3.50.ಲಕ್ಷ, ನಗರ ಪ್ರದೇಶಕ್ಕೆ 5.50 ಲಕ್ಷ ಇದ್ದ ವೆಚ್ಚವನ್ನು 2 ಲಕ್ಷಕ್ಕೆ ಬಿಜೆಪಿ ಸರ್ಕಾರ ಇಳಿಸಿದೆ. ನೂತನ ಕಾಂಗ್ರೆಸ್ ಸರ್ಕಾರ ಈ ಹಿಂದಿನಂತೆ ಘಟಕ ವೆಚ್ಚವನ್ನು 7.50 ಲಕ್ಷಕ್ಕೆ ಹೆಚ್ಚಿಸಿ ಅರ್ಜಿ ಸಲ್ಲಿಸಿರುವ ಎಲ್ಲಾ ಅಲೆಮಾರಿಗಳಿಗೆ ವಸತಿ ಒದಗಿಸಬೇಕು ಎಂದು ಅವರು ಒತ್ತಾಯಿಸಿದರು.

ಪ್ರಸ್ತುತ ಜಾತಿ ಪತ್ರದ ಗೊಂದಲಕ್ಕೆ ಸಮುದಾಯಗಳ ಕುಲಶಾಸ್ತ್ರೀಯ ಅಧ್ಯಯನ ನಡೆಸಿ, ಅಲೆಮಾರಿ ಜಾತಿಗಳ ಪರ್ಯಾಯ ಹೆಸರುಗಳನ್ನು ಗುರುತಿಸಿ ಅಲೆಮಾರಿಗಳಿಗೆ ಜಾತಿಪತ್ರ ನೀಡಬೇಕು. ರಾಜ್ಯ ಸರ್ಕಾರದಿಂದ ಅಲೆಮಾರಿಗಳ ಸ್ಥಿತಿಗತಿಗಳನ್ನು ವೈಜ್ಞಾನಿಕವಾಗಿ ಅಧ್ಯಯನ ನಡೆಸಿ ಅವರ ಜೀವನಮಟ್ಟವನ್ನು ಸುಧಾರಿಸುವ ಹಾಗು ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸಲು ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಒದಗಿಸಲು ಹೈ ಕೋರ್ಟಿನ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಶಾಸನ ಬದ್ಧ ಶಾಶ್ವತ ಅಲೆಮಾರಿ ಸಮುದಾಯಗಳ ಆಯೋಗ ರಚನೆ ಮಾಡಬೇಕು ಎಂದರು.

2011 ರ ಜನಗಣತಿಯಂತೆ ರಾಜ್ಯದಲ್ಲಿ ವಾಸವಿರುವ 25 ಲಕ್ಷ ಅಲೆಮಾರಿಗಳಲ್ಲಿ ಶೇಕಡ 87%
ಭೂ ರಹಿತ ಕುಟುಂಬಗಳಿವೆ. ಅವರಿಗೆ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಭೂ ಒಡೆತನ ಯೋಜನೆಯಡಿ ಪ್ರತಿ ಕುಟುಂಬಕ್ಕೆ 2 ಎಕರೆ ಕೃಷಿ ಭೂಮಿಯನ್ನು ಖರೀದಿಸಿಕೊಡಬೇಕು ಇದಕ್ಕೆ ತಗಲುವ ವೆಚ್ಚ 350 ಕೋಟಿ ಅನುದಾನವನ್ನು ಮೊದಲ ಅದ್ಯತೆಯಾಗಿ ಕಾಯ್ದಿರಿಸಬೇಕು. ಹಾಗು ಈ ಜಮೀನುಗಳಿಗೆ ಗಂಗಾಕಲ್ಯಾಣ ಯೋಜನೆಯಡಿ ನೀರಾವರಿ ಸೌಲಭ್ಯ ಕಲ್ಪಿಸಬೇಕು ಎಂದರು.

ಕೃಷಿ ಭೂಮಿ ಹೊಂದಿರುವ ಅಲೆಮಾರಿ ಕುಟುಂಬಗಳಿಗೆ ಕೃಷಿ ಮಾಡಲು ಶೇಕಡ 90 ರ ಸಹಾಯಧನದಲ್ಲಿ ಟ್ರ್ಯಾಕ್ಟರ್ ಹಾಗು ಇತರೆ ಕೃಷಿ ಪರಿಕರಗಳನ್ನು ಖರೀದಿಸಲು ಅನುದಾನ ನೀಡಬೇಕು. ಉದ್ಯಮ ಶೀಲತೆ ಯೋಜನೆಯಡಿ ನೀಡುವ 2 ಲಕ್ಷ ಸಾಲವನ್ನು ಹಿಂದಿನಂತೆ 9 ಲಕ್ಷಕ್ಕೆ ಹೆಚ್ಚಿಸಿ ಸಹಾಯಧನದ ಜೊತೆ ನಿಗಮದಿಂದಲೇ ನೇರವಾಗಿ ಸಾಲ ಸೌಲಭ್ಯ ಒದಗಿಸಬೇಕು ಎಂದು ಸಭೆಯಲ್ಲಿ ಹಕ್ಕೊತ್ತಾಯ ಮಂಡಿಸಲಾಯಿತು.

ಅಲೆಮಾರಿ ಮಕ್ಕಳು ವಸತಿ ಶಾಲೆಯಲ್ಲಿ ಪ್ರವೇಶ ಪಡೆಯಲು ಈಗಿರುವ 10 % ಮೀಸಲನ್ನು 20%ಗೆ ಹೆಚ್ಚಿಸಬೇಕು. ಹಾಗು ನವೋದಯ ಶಾಲೆಗಳಲ್ಲೂ ವಿಶೇಷ ಮೀಸಲು ನೀಡಿ ಪ್ರವೇಶ ಕಲ್ಪಿಸಬೇಕು. ಪಿಯುಸಿ ವಿಜ್ಞಾನ ಉತ್ತೀರ್ಣರಾದ ನಂತರ ವೈದ್ಯಕೀಯ, ದಂತವೈದ್ಯ, ಬಿಎಸ್ಸಿ ನರ್ಸಿಂಗ್ ಇಂಜಿನಿಯರ್, ಮುಂತಾದ ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶ ಪಡೆಯಲು ಅವಶ್ಯವಿರುವ ಸಿಇಟಿ, ನೀಟ್ ತರಬೇತಿಯನ್ನು ಪ್ರತಿಷ್ಠಿತ ಕೋಚಿಂಗ್ ಸೆಂಟರ್ ನಲ್ಲಿ ಉಚಿತವಾಗಿ ತರಬೇತಿ ಕೊಡಿಸಬೇಕು.

ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಬ್ಯಾಕ್ ಲಾಗ್ ಹುದ್ದೆಗಳನ್ನು ತುಂಬಬೇಕು. ಇದರಲ್ಲಿ ಅಲೆಮಾರಿಗಳಿಗೆ ಹೆಚ್ಚಿನ ಹುದ್ದೆ ದೊರೆಯುವಂತೆ ಕ್ರಮ ಕೈಗೊಳ್ಳಬೇಕು. ಅಲೆಮಾರಿಗಳ ಪಾರಂಪರಿಕ ವಿಶಿಷ್ಟ ಕಲೆಗಳು ಹಾಗೂ ಪಾರಂಪರಿಕ ಔಷಧೀಯ ಜ್ಞಾನವನ್ನು ಮುಂದಿನ ತಲೆಮಾರಿಗೆ ಉಳಿಸಲು ಅಲೆಮಾರಿ ವಿಶ್ವವಿದ್ಯಾಲಯ ಸ್ಥಾಪಿಸಲು ಕ್ರಮ ಕೈಗೊಳ್ಳಬೇಕು ಎಂದು ಸಭೆಯಲ್ಲಿ ಒತ್ತಾಯಿಸಲಾಯಿತು.

ಸಭೆಯಲ್ಲಿ ಸಂಘದ ರಾಜ್ಯಾಧ್ಯಕ್ಷರಾದ ಶ್ರೀನಿವಾಸ ಶಿಳ್ಳೇಖ್ಯಾತ, ಕಾಂಗ್ರೆಸ ಪಕ್ಷದ ರಾಜ್ಯ ಉಪಾಧ್ಯಕ್ಷರಾದ ಬಿ ಗೋಪಾಲ್, ಪ್ರೊ. ಚಂದ್ರಕಾಂತರವರು, ಕರ್ನಾಟಕ ರಾಜ್ಯ ಸುಡುಗಾಡುಸಿದ್ದ ಮಹಾಸಂಘದ ರಾಜ್ಯಾಧ್ಯಕ್ಷರಾದ ಸಾಯಿಬಣ್ಣ ಪರಿ ಸೇರಿದಂತೆ ಹಲವರು ಭಾಗವಹಿಸಿದ್ದರು.

ಇದನ್ನೂ ಓದಿ: ನಾಳೆಯೇ ಮೊದಲ ಜಂಟಿ ಅಧಿವೇಶನ: ಬಿಜೆಪಿಯಲ್ಲಿ ಇನ್ನೂ ಮುಗಿಯದ ವಿಪಕ್ಷ ನಾಯಕನ ಆಯ್ಕೆಯ ಪ್ರಹಸನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...