Homeಕರ್ನಾಟಕಅಲೆಮಾರಿಗಳಿಗೆ ಶಾಶ್ವತ ವಸತಿ ಕಲ್ಪಿಸಲು ಒತ್ತಾಯ: ಬಜೆಟ್‌ನಲ್ಲಿ ಘೋಷಿಸುವಂತೆ ಮನವಿ

ಅಲೆಮಾರಿಗಳಿಗೆ ಶಾಶ್ವತ ವಸತಿ ಕಲ್ಪಿಸಲು ಒತ್ತಾಯ: ಬಜೆಟ್‌ನಲ್ಲಿ ಘೋಷಿಸುವಂತೆ ಮನವಿ

ಕಳೆದ ಬಿಜೆಪಿ ಸರ್ಕಾರ ಬಜೆಟ್‌ನಲ್ಲಿ ಅಲೆಮಾರಿಗಳಿಗೆ ಮೀಸಲಿಟ್ಟ 550 ಕೋಟಿ ರೂಪಾಯಿಗಳನ್ನು ಬಳಸದೇ ಹಿಂಪಡೆದು ಅನ್ಯಾಯ ಮಾಡಿದೆ. ಅದನ್ನು ಕಾಂಗ್ರೆಸ್ ಸರ್ಕಾರ ಸರಿಪಡಿಸಬೇಕು ಎಂದು ಸಭೆಯಲ್ಲಿ ಒತ್ತಾಯಿಸಲಾಯಿತು.

- Advertisement -
- Advertisement -

ರಾಜ್ಯದಲ್ಲಿರುವ ಲಕ್ಷಾಂತರ ಅಲೆಮಾರಿ ಸಮುದಾಯದ ಜನರಿಗೆ ಶಾಶ್ವತ ವಸತಿ ಕಲ್ಪಿಸಲು ಸಮಗ್ರ ಯೋಜನೆ ರೂಪಿಸಿ, ಬಜೆಟ್‌ನಲ್ಲಿ ಘೋಷಿಸಬೇಕೆಂದು ಕರ್ನಾಟಕ ರಾಜ್ಯ ಎಸ್ಸಿ/ಎಸ್ಟಿ ಅಲೆಮಾರಿ ಬುಡಕಟ್ಟು ಮಹಾಸಭಾ ಒತ್ತಾಯಿಸಿದೆ.

ಜುಲೈ 1 ರಂದು ಬೆಂಗಳೂರಿನ ಶಾಸಕರ ಭವನದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಸಿ ಕೆ ಮಂಜುನಾಥ್ ಮಾತನಾಡಿ, “ರಾಜ್ಯದಲ್ಲಿ ಗುಡಿಸಲು, ಗುಡಾರಗಳಲ್ಲಿ ವಾಸವಿರುವ ಅಲೆಮಾರಿ ಕುಟುಂಬಗಳಿಗೆ 7 ಲಕ್ಷ ಸಹಾಯಧನದ ಅನುದಾನದಲ್ಲಿ ತುರ್ತಾಗಿ ಮನೆ ನಿರ್ಮಿಸಿಕೊಡಬೇಕು ಮತ್ತು ಈ ಕುಟುಂಬಗಳಿಗೆ ಮೂಲಭೂತ ಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳಬೇಕು” ಎಂದರು.

ಸಂಘದ ರಾಜ್ಯ ಉಪಾಧ್ಯಕ್ಷರಾದ ವೀರೇಶ್‌ರವರು ಮಾತನಾಡಿ, “2011 ರ ಜನಗಣತಿಯಂತೆ ರಾಜ್ಯದಲ್ಲಿ ಸುಮಾರು 25 ಲಕ್ಷಕ್ಕೂ ಹೆಚ್ಚಿನ ಅಲೆಮಾರಿ ವಾಸವಿದ್ದಾರೆ. ಕರ್ನಾಟಕ ರಾಜ್ಯ ಕಾನೂನು ಶಾಲೆಯ ಸಮೀಕ್ಷಾ ವರದಿಯಂತೆ ಶೇಕಡ 48% ಅಲೆಮಾರಿ ಕುಟುಂಬಗಳು ವಾಸಕ್ಕೆ ಸ್ವಂತ ನಿವೇಶನ/ಸೂರಿಲ್ಲದೆ ರೈಲ್ವೆ ಟ್ರ್ಯಾಕಿನ ಪಕ್ಕದಲ್ಲಿ, ಊರ ಹೊರಗಿನ ಸ್ಮಶಾನದ ಪಕ್ಕದಲ್ಲಿ, ಪಾಳು ಭೂಮಿಯಲ್ಲಿ ಪ್ರಾಣಿಗಳಿಗಿಂತ ಕಡೆಯಾಗಿ ಬದುಕುತಿದ್ದಾರೆ. 87% ಅಲೆಮಾರಿಗಳು ಇಂದಿಗೂ ತುಂಡು ಭೂಮಿಯ ಒಡೆತನವಿಲ್ಲದೆ (ಕೃಷಿಭೂಮಿ) ಜೀವನ ನಿರ್ವಹಣೆಗೆ ಭಿಕ್ಷಾಟನೆ, ಚಿಂದಿ ಆಯುವ, ವೇಶ ಹಾಕುವ ಸಣ್ಣ ಪುಟ್ಟ ಕೆಲಸ ಮಾಡುತ್ತಿದ್ದಾರೆ. ಈ ಜನಾಂಗದ ಶೈಕ್ಷಣಿಕ, ಆರ್ಥಿಕ, ಔದ್ಯೋಗಿಕ, ರಾಜಕೀಯ, ಸಾಮಾಜಿಕ ಅಭಿವೃದ್ಧಿಗೆ ಪೂರಕವಾಗುವಂತಹ ಪ್ರಸ್ತುತ ಇರುವ ಕಾರ್ಯಕ್ರಮಗಳ ಜೊತೆಗೆ ಹೆಚ್ಚುವರಿ ವಿಶೇಷ ಅಭಿವೃದ್ಧಿ ಕಾರ್ಯಕ್ರಮ ರೂಪಿಸಬೇಕೆಂದು” ಮನವಿ ಮಾಡಿದರು.

ಅಲೆಮಾರಿಗಳಿಗೆ ಶಾಶ್ವತ ವಸತಿ ಕಲ್ಪಿಸಲು ಕಳೆದ ಬಿಜೆಪಿ ಸರ್ಕಾರ ಬಜೆಟ್‌ನಲ್ಲಿ ಮೀಸಲಿಟ್ಟ 550 ಕೋಟಿ ರೂಪಾಯಿಗಳನ್ನು ಬಳಸದೇ ಹಿಂಪಡೆದು ಅನ್ಯಾಯ ಮಾಡಿದೆ. ಅಲೆಮಾರಿಗಳ ವಸತಿ ಘಟಕವೆಚ್ಚ ಗ್ರಾಮೀಣ ಪ್ರದೇಶಕ್ಕೆ 3.50.ಲಕ್ಷ, ನಗರ ಪ್ರದೇಶಕ್ಕೆ 5.50 ಲಕ್ಷ ಇದ್ದ ವೆಚ್ಚವನ್ನು 2 ಲಕ್ಷಕ್ಕೆ ಬಿಜೆಪಿ ಸರ್ಕಾರ ಇಳಿಸಿದೆ. ನೂತನ ಕಾಂಗ್ರೆಸ್ ಸರ್ಕಾರ ಈ ಹಿಂದಿನಂತೆ ಘಟಕ ವೆಚ್ಚವನ್ನು 7.50 ಲಕ್ಷಕ್ಕೆ ಹೆಚ್ಚಿಸಿ ಅರ್ಜಿ ಸಲ್ಲಿಸಿರುವ ಎಲ್ಲಾ ಅಲೆಮಾರಿಗಳಿಗೆ ವಸತಿ ಒದಗಿಸಬೇಕು ಎಂದು ಅವರು ಒತ್ತಾಯಿಸಿದರು.

ಪ್ರಸ್ತುತ ಜಾತಿ ಪತ್ರದ ಗೊಂದಲಕ್ಕೆ ಸಮುದಾಯಗಳ ಕುಲಶಾಸ್ತ್ರೀಯ ಅಧ್ಯಯನ ನಡೆಸಿ, ಅಲೆಮಾರಿ ಜಾತಿಗಳ ಪರ್ಯಾಯ ಹೆಸರುಗಳನ್ನು ಗುರುತಿಸಿ ಅಲೆಮಾರಿಗಳಿಗೆ ಜಾತಿಪತ್ರ ನೀಡಬೇಕು. ರಾಜ್ಯ ಸರ್ಕಾರದಿಂದ ಅಲೆಮಾರಿಗಳ ಸ್ಥಿತಿಗತಿಗಳನ್ನು ವೈಜ್ಞಾನಿಕವಾಗಿ ಅಧ್ಯಯನ ನಡೆಸಿ ಅವರ ಜೀವನಮಟ್ಟವನ್ನು ಸುಧಾರಿಸುವ ಹಾಗು ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸಲು ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಒದಗಿಸಲು ಹೈ ಕೋರ್ಟಿನ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಶಾಸನ ಬದ್ಧ ಶಾಶ್ವತ ಅಲೆಮಾರಿ ಸಮುದಾಯಗಳ ಆಯೋಗ ರಚನೆ ಮಾಡಬೇಕು ಎಂದರು.

2011 ರ ಜನಗಣತಿಯಂತೆ ರಾಜ್ಯದಲ್ಲಿ ವಾಸವಿರುವ 25 ಲಕ್ಷ ಅಲೆಮಾರಿಗಳಲ್ಲಿ ಶೇಕಡ 87%
ಭೂ ರಹಿತ ಕುಟುಂಬಗಳಿವೆ. ಅವರಿಗೆ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಭೂ ಒಡೆತನ ಯೋಜನೆಯಡಿ ಪ್ರತಿ ಕುಟುಂಬಕ್ಕೆ 2 ಎಕರೆ ಕೃಷಿ ಭೂಮಿಯನ್ನು ಖರೀದಿಸಿಕೊಡಬೇಕು ಇದಕ್ಕೆ ತಗಲುವ ವೆಚ್ಚ 350 ಕೋಟಿ ಅನುದಾನವನ್ನು ಮೊದಲ ಅದ್ಯತೆಯಾಗಿ ಕಾಯ್ದಿರಿಸಬೇಕು. ಹಾಗು ಈ ಜಮೀನುಗಳಿಗೆ ಗಂಗಾಕಲ್ಯಾಣ ಯೋಜನೆಯಡಿ ನೀರಾವರಿ ಸೌಲಭ್ಯ ಕಲ್ಪಿಸಬೇಕು ಎಂದರು.

ಕೃಷಿ ಭೂಮಿ ಹೊಂದಿರುವ ಅಲೆಮಾರಿ ಕುಟುಂಬಗಳಿಗೆ ಕೃಷಿ ಮಾಡಲು ಶೇಕಡ 90 ರ ಸಹಾಯಧನದಲ್ಲಿ ಟ್ರ್ಯಾಕ್ಟರ್ ಹಾಗು ಇತರೆ ಕೃಷಿ ಪರಿಕರಗಳನ್ನು ಖರೀದಿಸಲು ಅನುದಾನ ನೀಡಬೇಕು. ಉದ್ಯಮ ಶೀಲತೆ ಯೋಜನೆಯಡಿ ನೀಡುವ 2 ಲಕ್ಷ ಸಾಲವನ್ನು ಹಿಂದಿನಂತೆ 9 ಲಕ್ಷಕ್ಕೆ ಹೆಚ್ಚಿಸಿ ಸಹಾಯಧನದ ಜೊತೆ ನಿಗಮದಿಂದಲೇ ನೇರವಾಗಿ ಸಾಲ ಸೌಲಭ್ಯ ಒದಗಿಸಬೇಕು ಎಂದು ಸಭೆಯಲ್ಲಿ ಹಕ್ಕೊತ್ತಾಯ ಮಂಡಿಸಲಾಯಿತು.

ಅಲೆಮಾರಿ ಮಕ್ಕಳು ವಸತಿ ಶಾಲೆಯಲ್ಲಿ ಪ್ರವೇಶ ಪಡೆಯಲು ಈಗಿರುವ 10 % ಮೀಸಲನ್ನು 20%ಗೆ ಹೆಚ್ಚಿಸಬೇಕು. ಹಾಗು ನವೋದಯ ಶಾಲೆಗಳಲ್ಲೂ ವಿಶೇಷ ಮೀಸಲು ನೀಡಿ ಪ್ರವೇಶ ಕಲ್ಪಿಸಬೇಕು. ಪಿಯುಸಿ ವಿಜ್ಞಾನ ಉತ್ತೀರ್ಣರಾದ ನಂತರ ವೈದ್ಯಕೀಯ, ದಂತವೈದ್ಯ, ಬಿಎಸ್ಸಿ ನರ್ಸಿಂಗ್ ಇಂಜಿನಿಯರ್, ಮುಂತಾದ ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶ ಪಡೆಯಲು ಅವಶ್ಯವಿರುವ ಸಿಇಟಿ, ನೀಟ್ ತರಬೇತಿಯನ್ನು ಪ್ರತಿಷ್ಠಿತ ಕೋಚಿಂಗ್ ಸೆಂಟರ್ ನಲ್ಲಿ ಉಚಿತವಾಗಿ ತರಬೇತಿ ಕೊಡಿಸಬೇಕು.

ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಬ್ಯಾಕ್ ಲಾಗ್ ಹುದ್ದೆಗಳನ್ನು ತುಂಬಬೇಕು. ಇದರಲ್ಲಿ ಅಲೆಮಾರಿಗಳಿಗೆ ಹೆಚ್ಚಿನ ಹುದ್ದೆ ದೊರೆಯುವಂತೆ ಕ್ರಮ ಕೈಗೊಳ್ಳಬೇಕು. ಅಲೆಮಾರಿಗಳ ಪಾರಂಪರಿಕ ವಿಶಿಷ್ಟ ಕಲೆಗಳು ಹಾಗೂ ಪಾರಂಪರಿಕ ಔಷಧೀಯ ಜ್ಞಾನವನ್ನು ಮುಂದಿನ ತಲೆಮಾರಿಗೆ ಉಳಿಸಲು ಅಲೆಮಾರಿ ವಿಶ್ವವಿದ್ಯಾಲಯ ಸ್ಥಾಪಿಸಲು ಕ್ರಮ ಕೈಗೊಳ್ಳಬೇಕು ಎಂದು ಸಭೆಯಲ್ಲಿ ಒತ್ತಾಯಿಸಲಾಯಿತು.

ಸಭೆಯಲ್ಲಿ ಸಂಘದ ರಾಜ್ಯಾಧ್ಯಕ್ಷರಾದ ಶ್ರೀನಿವಾಸ ಶಿಳ್ಳೇಖ್ಯಾತ, ಕಾಂಗ್ರೆಸ ಪಕ್ಷದ ರಾಜ್ಯ ಉಪಾಧ್ಯಕ್ಷರಾದ ಬಿ ಗೋಪಾಲ್, ಪ್ರೊ. ಚಂದ್ರಕಾಂತರವರು, ಕರ್ನಾಟಕ ರಾಜ್ಯ ಸುಡುಗಾಡುಸಿದ್ದ ಮಹಾಸಂಘದ ರಾಜ್ಯಾಧ್ಯಕ್ಷರಾದ ಸಾಯಿಬಣ್ಣ ಪರಿ ಸೇರಿದಂತೆ ಹಲವರು ಭಾಗವಹಿಸಿದ್ದರು.

ಇದನ್ನೂ ಓದಿ: ನಾಳೆಯೇ ಮೊದಲ ಜಂಟಿ ಅಧಿವೇಶನ: ಬಿಜೆಪಿಯಲ್ಲಿ ಇನ್ನೂ ಮುಗಿಯದ ವಿಪಕ್ಷ ನಾಯಕನ ಆಯ್ಕೆಯ ಪ್ರಹಸನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...