Homeಕರ್ನಾಟಕಅಲೆಮಾರಿಗಳಿಗೆ ಶಾಶ್ವತ ವಸತಿ ಕಲ್ಪಿಸಲು ಒತ್ತಾಯ: ಬಜೆಟ್‌ನಲ್ಲಿ ಘೋಷಿಸುವಂತೆ ಮನವಿ

ಅಲೆಮಾರಿಗಳಿಗೆ ಶಾಶ್ವತ ವಸತಿ ಕಲ್ಪಿಸಲು ಒತ್ತಾಯ: ಬಜೆಟ್‌ನಲ್ಲಿ ಘೋಷಿಸುವಂತೆ ಮನವಿ

ಕಳೆದ ಬಿಜೆಪಿ ಸರ್ಕಾರ ಬಜೆಟ್‌ನಲ್ಲಿ ಅಲೆಮಾರಿಗಳಿಗೆ ಮೀಸಲಿಟ್ಟ 550 ಕೋಟಿ ರೂಪಾಯಿಗಳನ್ನು ಬಳಸದೇ ಹಿಂಪಡೆದು ಅನ್ಯಾಯ ಮಾಡಿದೆ. ಅದನ್ನು ಕಾಂಗ್ರೆಸ್ ಸರ್ಕಾರ ಸರಿಪಡಿಸಬೇಕು ಎಂದು ಸಭೆಯಲ್ಲಿ ಒತ್ತಾಯಿಸಲಾಯಿತು.

- Advertisement -
- Advertisement -

ರಾಜ್ಯದಲ್ಲಿರುವ ಲಕ್ಷಾಂತರ ಅಲೆಮಾರಿ ಸಮುದಾಯದ ಜನರಿಗೆ ಶಾಶ್ವತ ವಸತಿ ಕಲ್ಪಿಸಲು ಸಮಗ್ರ ಯೋಜನೆ ರೂಪಿಸಿ, ಬಜೆಟ್‌ನಲ್ಲಿ ಘೋಷಿಸಬೇಕೆಂದು ಕರ್ನಾಟಕ ರಾಜ್ಯ ಎಸ್ಸಿ/ಎಸ್ಟಿ ಅಲೆಮಾರಿ ಬುಡಕಟ್ಟು ಮಹಾಸಭಾ ಒತ್ತಾಯಿಸಿದೆ.

ಜುಲೈ 1 ರಂದು ಬೆಂಗಳೂರಿನ ಶಾಸಕರ ಭವನದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಸಿ ಕೆ ಮಂಜುನಾಥ್ ಮಾತನಾಡಿ, “ರಾಜ್ಯದಲ್ಲಿ ಗುಡಿಸಲು, ಗುಡಾರಗಳಲ್ಲಿ ವಾಸವಿರುವ ಅಲೆಮಾರಿ ಕುಟುಂಬಗಳಿಗೆ 7 ಲಕ್ಷ ಸಹಾಯಧನದ ಅನುದಾನದಲ್ಲಿ ತುರ್ತಾಗಿ ಮನೆ ನಿರ್ಮಿಸಿಕೊಡಬೇಕು ಮತ್ತು ಈ ಕುಟುಂಬಗಳಿಗೆ ಮೂಲಭೂತ ಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳಬೇಕು” ಎಂದರು.

ಸಂಘದ ರಾಜ್ಯ ಉಪಾಧ್ಯಕ್ಷರಾದ ವೀರೇಶ್‌ರವರು ಮಾತನಾಡಿ, “2011 ರ ಜನಗಣತಿಯಂತೆ ರಾಜ್ಯದಲ್ಲಿ ಸುಮಾರು 25 ಲಕ್ಷಕ್ಕೂ ಹೆಚ್ಚಿನ ಅಲೆಮಾರಿ ವಾಸವಿದ್ದಾರೆ. ಕರ್ನಾಟಕ ರಾಜ್ಯ ಕಾನೂನು ಶಾಲೆಯ ಸಮೀಕ್ಷಾ ವರದಿಯಂತೆ ಶೇಕಡ 48% ಅಲೆಮಾರಿ ಕುಟುಂಬಗಳು ವಾಸಕ್ಕೆ ಸ್ವಂತ ನಿವೇಶನ/ಸೂರಿಲ್ಲದೆ ರೈಲ್ವೆ ಟ್ರ್ಯಾಕಿನ ಪಕ್ಕದಲ್ಲಿ, ಊರ ಹೊರಗಿನ ಸ್ಮಶಾನದ ಪಕ್ಕದಲ್ಲಿ, ಪಾಳು ಭೂಮಿಯಲ್ಲಿ ಪ್ರಾಣಿಗಳಿಗಿಂತ ಕಡೆಯಾಗಿ ಬದುಕುತಿದ್ದಾರೆ. 87% ಅಲೆಮಾರಿಗಳು ಇಂದಿಗೂ ತುಂಡು ಭೂಮಿಯ ಒಡೆತನವಿಲ್ಲದೆ (ಕೃಷಿಭೂಮಿ) ಜೀವನ ನಿರ್ವಹಣೆಗೆ ಭಿಕ್ಷಾಟನೆ, ಚಿಂದಿ ಆಯುವ, ವೇಶ ಹಾಕುವ ಸಣ್ಣ ಪುಟ್ಟ ಕೆಲಸ ಮಾಡುತ್ತಿದ್ದಾರೆ. ಈ ಜನಾಂಗದ ಶೈಕ್ಷಣಿಕ, ಆರ್ಥಿಕ, ಔದ್ಯೋಗಿಕ, ರಾಜಕೀಯ, ಸಾಮಾಜಿಕ ಅಭಿವೃದ್ಧಿಗೆ ಪೂರಕವಾಗುವಂತಹ ಪ್ರಸ್ತುತ ಇರುವ ಕಾರ್ಯಕ್ರಮಗಳ ಜೊತೆಗೆ ಹೆಚ್ಚುವರಿ ವಿಶೇಷ ಅಭಿವೃದ್ಧಿ ಕಾರ್ಯಕ್ರಮ ರೂಪಿಸಬೇಕೆಂದು” ಮನವಿ ಮಾಡಿದರು.

ಅಲೆಮಾರಿಗಳಿಗೆ ಶಾಶ್ವತ ವಸತಿ ಕಲ್ಪಿಸಲು ಕಳೆದ ಬಿಜೆಪಿ ಸರ್ಕಾರ ಬಜೆಟ್‌ನಲ್ಲಿ ಮೀಸಲಿಟ್ಟ 550 ಕೋಟಿ ರೂಪಾಯಿಗಳನ್ನು ಬಳಸದೇ ಹಿಂಪಡೆದು ಅನ್ಯಾಯ ಮಾಡಿದೆ. ಅಲೆಮಾರಿಗಳ ವಸತಿ ಘಟಕವೆಚ್ಚ ಗ್ರಾಮೀಣ ಪ್ರದೇಶಕ್ಕೆ 3.50.ಲಕ್ಷ, ನಗರ ಪ್ರದೇಶಕ್ಕೆ 5.50 ಲಕ್ಷ ಇದ್ದ ವೆಚ್ಚವನ್ನು 2 ಲಕ್ಷಕ್ಕೆ ಬಿಜೆಪಿ ಸರ್ಕಾರ ಇಳಿಸಿದೆ. ನೂತನ ಕಾಂಗ್ರೆಸ್ ಸರ್ಕಾರ ಈ ಹಿಂದಿನಂತೆ ಘಟಕ ವೆಚ್ಚವನ್ನು 7.50 ಲಕ್ಷಕ್ಕೆ ಹೆಚ್ಚಿಸಿ ಅರ್ಜಿ ಸಲ್ಲಿಸಿರುವ ಎಲ್ಲಾ ಅಲೆಮಾರಿಗಳಿಗೆ ವಸತಿ ಒದಗಿಸಬೇಕು ಎಂದು ಅವರು ಒತ್ತಾಯಿಸಿದರು.

ಪ್ರಸ್ತುತ ಜಾತಿ ಪತ್ರದ ಗೊಂದಲಕ್ಕೆ ಸಮುದಾಯಗಳ ಕುಲಶಾಸ್ತ್ರೀಯ ಅಧ್ಯಯನ ನಡೆಸಿ, ಅಲೆಮಾರಿ ಜಾತಿಗಳ ಪರ್ಯಾಯ ಹೆಸರುಗಳನ್ನು ಗುರುತಿಸಿ ಅಲೆಮಾರಿಗಳಿಗೆ ಜಾತಿಪತ್ರ ನೀಡಬೇಕು. ರಾಜ್ಯ ಸರ್ಕಾರದಿಂದ ಅಲೆಮಾರಿಗಳ ಸ್ಥಿತಿಗತಿಗಳನ್ನು ವೈಜ್ಞಾನಿಕವಾಗಿ ಅಧ್ಯಯನ ನಡೆಸಿ ಅವರ ಜೀವನಮಟ್ಟವನ್ನು ಸುಧಾರಿಸುವ ಹಾಗು ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸಲು ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಒದಗಿಸಲು ಹೈ ಕೋರ್ಟಿನ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಶಾಸನ ಬದ್ಧ ಶಾಶ್ವತ ಅಲೆಮಾರಿ ಸಮುದಾಯಗಳ ಆಯೋಗ ರಚನೆ ಮಾಡಬೇಕು ಎಂದರು.

2011 ರ ಜನಗಣತಿಯಂತೆ ರಾಜ್ಯದಲ್ಲಿ ವಾಸವಿರುವ 25 ಲಕ್ಷ ಅಲೆಮಾರಿಗಳಲ್ಲಿ ಶೇಕಡ 87%
ಭೂ ರಹಿತ ಕುಟುಂಬಗಳಿವೆ. ಅವರಿಗೆ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಭೂ ಒಡೆತನ ಯೋಜನೆಯಡಿ ಪ್ರತಿ ಕುಟುಂಬಕ್ಕೆ 2 ಎಕರೆ ಕೃಷಿ ಭೂಮಿಯನ್ನು ಖರೀದಿಸಿಕೊಡಬೇಕು ಇದಕ್ಕೆ ತಗಲುವ ವೆಚ್ಚ 350 ಕೋಟಿ ಅನುದಾನವನ್ನು ಮೊದಲ ಅದ್ಯತೆಯಾಗಿ ಕಾಯ್ದಿರಿಸಬೇಕು. ಹಾಗು ಈ ಜಮೀನುಗಳಿಗೆ ಗಂಗಾಕಲ್ಯಾಣ ಯೋಜನೆಯಡಿ ನೀರಾವರಿ ಸೌಲಭ್ಯ ಕಲ್ಪಿಸಬೇಕು ಎಂದರು.

ಕೃಷಿ ಭೂಮಿ ಹೊಂದಿರುವ ಅಲೆಮಾರಿ ಕುಟುಂಬಗಳಿಗೆ ಕೃಷಿ ಮಾಡಲು ಶೇಕಡ 90 ರ ಸಹಾಯಧನದಲ್ಲಿ ಟ್ರ್ಯಾಕ್ಟರ್ ಹಾಗು ಇತರೆ ಕೃಷಿ ಪರಿಕರಗಳನ್ನು ಖರೀದಿಸಲು ಅನುದಾನ ನೀಡಬೇಕು. ಉದ್ಯಮ ಶೀಲತೆ ಯೋಜನೆಯಡಿ ನೀಡುವ 2 ಲಕ್ಷ ಸಾಲವನ್ನು ಹಿಂದಿನಂತೆ 9 ಲಕ್ಷಕ್ಕೆ ಹೆಚ್ಚಿಸಿ ಸಹಾಯಧನದ ಜೊತೆ ನಿಗಮದಿಂದಲೇ ನೇರವಾಗಿ ಸಾಲ ಸೌಲಭ್ಯ ಒದಗಿಸಬೇಕು ಎಂದು ಸಭೆಯಲ್ಲಿ ಹಕ್ಕೊತ್ತಾಯ ಮಂಡಿಸಲಾಯಿತು.

ಅಲೆಮಾರಿ ಮಕ್ಕಳು ವಸತಿ ಶಾಲೆಯಲ್ಲಿ ಪ್ರವೇಶ ಪಡೆಯಲು ಈಗಿರುವ 10 % ಮೀಸಲನ್ನು 20%ಗೆ ಹೆಚ್ಚಿಸಬೇಕು. ಹಾಗು ನವೋದಯ ಶಾಲೆಗಳಲ್ಲೂ ವಿಶೇಷ ಮೀಸಲು ನೀಡಿ ಪ್ರವೇಶ ಕಲ್ಪಿಸಬೇಕು. ಪಿಯುಸಿ ವಿಜ್ಞಾನ ಉತ್ತೀರ್ಣರಾದ ನಂತರ ವೈದ್ಯಕೀಯ, ದಂತವೈದ್ಯ, ಬಿಎಸ್ಸಿ ನರ್ಸಿಂಗ್ ಇಂಜಿನಿಯರ್, ಮುಂತಾದ ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶ ಪಡೆಯಲು ಅವಶ್ಯವಿರುವ ಸಿಇಟಿ, ನೀಟ್ ತರಬೇತಿಯನ್ನು ಪ್ರತಿಷ್ಠಿತ ಕೋಚಿಂಗ್ ಸೆಂಟರ್ ನಲ್ಲಿ ಉಚಿತವಾಗಿ ತರಬೇತಿ ಕೊಡಿಸಬೇಕು.

ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಬ್ಯಾಕ್ ಲಾಗ್ ಹುದ್ದೆಗಳನ್ನು ತುಂಬಬೇಕು. ಇದರಲ್ಲಿ ಅಲೆಮಾರಿಗಳಿಗೆ ಹೆಚ್ಚಿನ ಹುದ್ದೆ ದೊರೆಯುವಂತೆ ಕ್ರಮ ಕೈಗೊಳ್ಳಬೇಕು. ಅಲೆಮಾರಿಗಳ ಪಾರಂಪರಿಕ ವಿಶಿಷ್ಟ ಕಲೆಗಳು ಹಾಗೂ ಪಾರಂಪರಿಕ ಔಷಧೀಯ ಜ್ಞಾನವನ್ನು ಮುಂದಿನ ತಲೆಮಾರಿಗೆ ಉಳಿಸಲು ಅಲೆಮಾರಿ ವಿಶ್ವವಿದ್ಯಾಲಯ ಸ್ಥಾಪಿಸಲು ಕ್ರಮ ಕೈಗೊಳ್ಳಬೇಕು ಎಂದು ಸಭೆಯಲ್ಲಿ ಒತ್ತಾಯಿಸಲಾಯಿತು.

ಸಭೆಯಲ್ಲಿ ಸಂಘದ ರಾಜ್ಯಾಧ್ಯಕ್ಷರಾದ ಶ್ರೀನಿವಾಸ ಶಿಳ್ಳೇಖ್ಯಾತ, ಕಾಂಗ್ರೆಸ ಪಕ್ಷದ ರಾಜ್ಯ ಉಪಾಧ್ಯಕ್ಷರಾದ ಬಿ ಗೋಪಾಲ್, ಪ್ರೊ. ಚಂದ್ರಕಾಂತರವರು, ಕರ್ನಾಟಕ ರಾಜ್ಯ ಸುಡುಗಾಡುಸಿದ್ದ ಮಹಾಸಂಘದ ರಾಜ್ಯಾಧ್ಯಕ್ಷರಾದ ಸಾಯಿಬಣ್ಣ ಪರಿ ಸೇರಿದಂತೆ ಹಲವರು ಭಾಗವಹಿಸಿದ್ದರು.

ಇದನ್ನೂ ಓದಿ: ನಾಳೆಯೇ ಮೊದಲ ಜಂಟಿ ಅಧಿವೇಶನ: ಬಿಜೆಪಿಯಲ್ಲಿ ಇನ್ನೂ ಮುಗಿಯದ ವಿಪಕ್ಷ ನಾಯಕನ ಆಯ್ಕೆಯ ಪ್ರಹಸನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...