Homeಮುಖಪುಟಕೊರೊನಾ ಲಾಕ್‌ಡೌನ್‌; ಈ ನಿರಾಶ್ರಿತರಿಗೆ ಶಾಲೆಗಳಲ್ಲಾದರೂ ಆಶ್ರಯ ಕೊಡಿ: ಹೆಚ್ಚಿದ ಒತ್ತಡ

ಕೊರೊನಾ ಲಾಕ್‌ಡೌನ್‌; ಈ ನಿರಾಶ್ರಿತರಿಗೆ ಶಾಲೆಗಳಲ್ಲಾದರೂ ಆಶ್ರಯ ಕೊಡಿ: ಹೆಚ್ಚಿದ ಒತ್ತಡ

- Advertisement -
- Advertisement -

ಲಾಕ್‌ಡೌನ್‌ ಒಂದು ದಿನ ಕಳೆದು ಎರಡನೇ ದಿನಕ್ಕೆ ಕಾಲಿಟ್ಟಿದೆ. ಅಷ್ಟರಲ್ಲಿ ದೇಶಾದ್ಯಂತ ಲಕ್ಷಾಂತರ ಜನತೆ ಅದರಲ್ಲೂ ವಲಸೆ ಕಾರ್ಮಿಕರು ಊಟ ವಸತಿಯಿಲ್ಲದೇ ಪರಿತಪಿಸುತ್ತಿರುವ ವಿಡಿಯೋಗಳು ಪ್ರಜ್ಞಾವಂತರ ಮನಸಾಕ್ಷಿಯನ್ನು ಕಲಕುತ್ತಿವೆ. ಅವರಿಗೆ ಸರ್ಕಾರ ಕೂಡಲೇ ತಾತ್ಕಾಲಿಕ ವ್ಯವಸ್ಥೆ ಮಾಡಬೇಕೆಂಬ ಕೂಗು ಜೋರಾಗಿ ಕೇಳಿಬಂದಿದೆ. ಅದಕ್ಕೆ ಕಾರ್ಯಸಾಧುವಾದ ಪರಿಹಾರವನ್ನು ಸಹ ಹಲವರು ಸೂಚಿಸಿದ್ದಾರೆ.

ಲಾಕ್‌ಡೌನ್‌ ಕಾರಣಕ್ಕೆ ಶಾಲೆಗಳು ಸ್ಥಗಿತಗೊಂಡಿರುವುದರಿಂದ, ನಿರಾಶ್ರಿತ ಜನರಿಗೆ ಸ್ಥಳಾವಕಾಶ ಕಲ್ಪಿಸಲು ಅವುಗಳನ್ನು ತಾತ್ಕಾಲಿಕ ರಾತ್ರಿ ಆಶ್ರಯ ತಾಣಗಳಾಗಿ ಪರಿವರ್ತಿಸಬಹುದು ಮತ್ತು ಅವರಿಗೆ ರಾತ್ರಿಯಲ್ಲಿ ಉಳಿಯಲು ಸ್ಥಳ ನೀಡಬಹುದು. ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ರವರು ಈ ಕುರಿತು ನಿರ್ಧಾರ ತೆಗೆದುಕೊಳ್ಳಬೇಕೆಂದು ಖ್ಯಾತ ಯೂಟ್ಯೂಬರ್‌ ಮತ್ತು ಸಾಮಾಜಿಕ ಕಾರ್ಯಕರ್ತ ಧೃವ್‌ ರಾಠೀ ಒತ್ತಾಯಿಸಿದ್ದಾರೆ.

ಲಾಕ್‌ಡೌನ್‌ ಆದ ಕಾರಣಕ್ಕೆ ದೆಹಲಿಯಿಂದ ಉತ್ತರ ಪ್ರದೇಶ ಮತ್ತು ರಾಜಸ್ಥಾನದವರೆಗೂ ಸಮಾರು 200-250 ಕಿ.ಮೀ ದೂರು ನಡೆದುಹೋಗುವ ಚಿತ್ರಗಳು ಮತ್ತು ವಿಡಿಯೋಗಳು ಮನಕಲಕಿದ್ದವು. ಅದೇ ರೀತಿ ನಿನ್ನೆ ದೆಹಲಿಯ ಯಮುನಾ ಪುಸ್ತ ಬಳಿಯೊಂದರಲ್ಲಿಯೇ 8000 ನೆಲೆಯಿಲ್ಲದ ವಲಸೆ ಕಾರ್ಮಿಕರು ಊಟಕ್ಕಾಗಿ ಸಾಲಾಗಿ ಕುಳಿತಿರುವ ವಿಡಿಯೋ ಸಹ ನೋವು ತರಿಸುತ್ತದೆ. ಸಾಮಾಜಿಕ ಅಂತರ ಸಹ ಕಾಯ್ದುಕೊಳ್ಳಲಾಗದ ಹೀನಾಯ ಪರಿಸ್ಥಿತಿಯಲ್ಲಿ ಆ ಜನ ದಿನದೂಡುತ್ತಿದ್ದಾರೆ.

ಈ ಬಡವರು ಆಗ್ರಾಕ್ಕೆ 250 ಕಿ.ಮೀ ಮತ್ತು ನಂತರ ಕೆಲವರು ರಾಜಸ್ಥಾನಕ್ಕೆ ಹೋಗುತ್ತಾರೆ .. ಅವರಲ್ಲಿ ಒಬ್ಬರು ಬಲ್ವೀರ್ ಎಂಬುವವರು ಎರಡು ದಿನಗಳ ಕಾಲ ಹಸಿವಿನಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ. ಲಾಕ್‌ಡೌನ್‌ ಕಾರಣಕ್ಕೆ ಸಾಯುವುದಕ್ಕಿಂತ ಹಳ್ಳಿಗೆ ಹೋಗಿ ತಾಯಿಯ ಮುಂದೆ ಸಾಯುವುದು ಉತ್ತಮ, ಹೊಟ್ಟೆಪಾಡಿಗಾಗಿ ಬ್ರೆಡ್ ಹುಡುಕಿಕೊಂಡು ನಗರಕ್ಕೆ ಬಂದ ಅವರು ಈಗ ಮತ್ತೆ ಅದೇ ಬ್ರೆಡ್‌ಗಾಗಿ ಹಿಂತಿರುಗುತ್ತಿರುವುದು ನೋವಿನ ವಿಷಯ ಎಂದು ಸೌರಭ್‌ ಶುಕ್ಲಾ ಎಂಬುವವರು ವಿಷಾಧ ವ್ಯಕ್ತಪಡಿಸಿದ್ದಾರೆ.

ಸರ್ಕಾರ ಬಡಜನರ ಬಗ್ಗೆ ಕೂಡಲೇ ಕಾಳಜಿವಹಿಸಿ ಪರ್ಯಾಯ ವ್ಯವಸ್ಥೆ ಮಾಡಬೇಕಿದೆ. ಲಾಕ್‌ಡೌನ್‌ನ ಒಂದೇ ದಿನಕ್ಕೆ ಇಷ್ಟು ಸಮಸ್ಯೆಯಾದರೆ ಇನ್ನು 20 ದಿನ ಹೇಗೆ ಸಹಿಸುವುದು? ಹೇಗೆ ಕೊರೊನಾದಿಂದ ಜನ ಸಾಯಬಾರದೋ ಅದೇ ರೀತಿ ಹಸಿವಿನಿಂದ, ನೆಲೆಯಿಲ್ಲದೇ ಸಾಯಬಾರದು ಎಂಬುದು ಎಲ್ಲರ ಕಾಳಜಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...