Homeಮುಖಪುಟಕೊರೊನಾ ಲಾಕ್‌ಡೌನ್‌; ಈ ನಿರಾಶ್ರಿತರಿಗೆ ಶಾಲೆಗಳಲ್ಲಾದರೂ ಆಶ್ರಯ ಕೊಡಿ: ಹೆಚ್ಚಿದ ಒತ್ತಡ

ಕೊರೊನಾ ಲಾಕ್‌ಡೌನ್‌; ಈ ನಿರಾಶ್ರಿತರಿಗೆ ಶಾಲೆಗಳಲ್ಲಾದರೂ ಆಶ್ರಯ ಕೊಡಿ: ಹೆಚ್ಚಿದ ಒತ್ತಡ

- Advertisement -
- Advertisement -

ಲಾಕ್‌ಡೌನ್‌ ಒಂದು ದಿನ ಕಳೆದು ಎರಡನೇ ದಿನಕ್ಕೆ ಕಾಲಿಟ್ಟಿದೆ. ಅಷ್ಟರಲ್ಲಿ ದೇಶಾದ್ಯಂತ ಲಕ್ಷಾಂತರ ಜನತೆ ಅದರಲ್ಲೂ ವಲಸೆ ಕಾರ್ಮಿಕರು ಊಟ ವಸತಿಯಿಲ್ಲದೇ ಪರಿತಪಿಸುತ್ತಿರುವ ವಿಡಿಯೋಗಳು ಪ್ರಜ್ಞಾವಂತರ ಮನಸಾಕ್ಷಿಯನ್ನು ಕಲಕುತ್ತಿವೆ. ಅವರಿಗೆ ಸರ್ಕಾರ ಕೂಡಲೇ ತಾತ್ಕಾಲಿಕ ವ್ಯವಸ್ಥೆ ಮಾಡಬೇಕೆಂಬ ಕೂಗು ಜೋರಾಗಿ ಕೇಳಿಬಂದಿದೆ. ಅದಕ್ಕೆ ಕಾರ್ಯಸಾಧುವಾದ ಪರಿಹಾರವನ್ನು ಸಹ ಹಲವರು ಸೂಚಿಸಿದ್ದಾರೆ.

ಲಾಕ್‌ಡೌನ್‌ ಕಾರಣಕ್ಕೆ ಶಾಲೆಗಳು ಸ್ಥಗಿತಗೊಂಡಿರುವುದರಿಂದ, ನಿರಾಶ್ರಿತ ಜನರಿಗೆ ಸ್ಥಳಾವಕಾಶ ಕಲ್ಪಿಸಲು ಅವುಗಳನ್ನು ತಾತ್ಕಾಲಿಕ ರಾತ್ರಿ ಆಶ್ರಯ ತಾಣಗಳಾಗಿ ಪರಿವರ್ತಿಸಬಹುದು ಮತ್ತು ಅವರಿಗೆ ರಾತ್ರಿಯಲ್ಲಿ ಉಳಿಯಲು ಸ್ಥಳ ನೀಡಬಹುದು. ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ರವರು ಈ ಕುರಿತು ನಿರ್ಧಾರ ತೆಗೆದುಕೊಳ್ಳಬೇಕೆಂದು ಖ್ಯಾತ ಯೂಟ್ಯೂಬರ್‌ ಮತ್ತು ಸಾಮಾಜಿಕ ಕಾರ್ಯಕರ್ತ ಧೃವ್‌ ರಾಠೀ ಒತ್ತಾಯಿಸಿದ್ದಾರೆ.

ಲಾಕ್‌ಡೌನ್‌ ಆದ ಕಾರಣಕ್ಕೆ ದೆಹಲಿಯಿಂದ ಉತ್ತರ ಪ್ರದೇಶ ಮತ್ತು ರಾಜಸ್ಥಾನದವರೆಗೂ ಸಮಾರು 200-250 ಕಿ.ಮೀ ದೂರು ನಡೆದುಹೋಗುವ ಚಿತ್ರಗಳು ಮತ್ತು ವಿಡಿಯೋಗಳು ಮನಕಲಕಿದ್ದವು. ಅದೇ ರೀತಿ ನಿನ್ನೆ ದೆಹಲಿಯ ಯಮುನಾ ಪುಸ್ತ ಬಳಿಯೊಂದರಲ್ಲಿಯೇ 8000 ನೆಲೆಯಿಲ್ಲದ ವಲಸೆ ಕಾರ್ಮಿಕರು ಊಟಕ್ಕಾಗಿ ಸಾಲಾಗಿ ಕುಳಿತಿರುವ ವಿಡಿಯೋ ಸಹ ನೋವು ತರಿಸುತ್ತದೆ. ಸಾಮಾಜಿಕ ಅಂತರ ಸಹ ಕಾಯ್ದುಕೊಳ್ಳಲಾಗದ ಹೀನಾಯ ಪರಿಸ್ಥಿತಿಯಲ್ಲಿ ಆ ಜನ ದಿನದೂಡುತ್ತಿದ್ದಾರೆ.

ಈ ಬಡವರು ಆಗ್ರಾಕ್ಕೆ 250 ಕಿ.ಮೀ ಮತ್ತು ನಂತರ ಕೆಲವರು ರಾಜಸ್ಥಾನಕ್ಕೆ ಹೋಗುತ್ತಾರೆ .. ಅವರಲ್ಲಿ ಒಬ್ಬರು ಬಲ್ವೀರ್ ಎಂಬುವವರು ಎರಡು ದಿನಗಳ ಕಾಲ ಹಸಿವಿನಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ. ಲಾಕ್‌ಡೌನ್‌ ಕಾರಣಕ್ಕೆ ಸಾಯುವುದಕ್ಕಿಂತ ಹಳ್ಳಿಗೆ ಹೋಗಿ ತಾಯಿಯ ಮುಂದೆ ಸಾಯುವುದು ಉತ್ತಮ, ಹೊಟ್ಟೆಪಾಡಿಗಾಗಿ ಬ್ರೆಡ್ ಹುಡುಕಿಕೊಂಡು ನಗರಕ್ಕೆ ಬಂದ ಅವರು ಈಗ ಮತ್ತೆ ಅದೇ ಬ್ರೆಡ್‌ಗಾಗಿ ಹಿಂತಿರುಗುತ್ತಿರುವುದು ನೋವಿನ ವಿಷಯ ಎಂದು ಸೌರಭ್‌ ಶುಕ್ಲಾ ಎಂಬುವವರು ವಿಷಾಧ ವ್ಯಕ್ತಪಡಿಸಿದ್ದಾರೆ.

ಸರ್ಕಾರ ಬಡಜನರ ಬಗ್ಗೆ ಕೂಡಲೇ ಕಾಳಜಿವಹಿಸಿ ಪರ್ಯಾಯ ವ್ಯವಸ್ಥೆ ಮಾಡಬೇಕಿದೆ. ಲಾಕ್‌ಡೌನ್‌ನ ಒಂದೇ ದಿನಕ್ಕೆ ಇಷ್ಟು ಸಮಸ್ಯೆಯಾದರೆ ಇನ್ನು 20 ದಿನ ಹೇಗೆ ಸಹಿಸುವುದು? ಹೇಗೆ ಕೊರೊನಾದಿಂದ ಜನ ಸಾಯಬಾರದೋ ಅದೇ ರೀತಿ ಹಸಿವಿನಿಂದ, ನೆಲೆಯಿಲ್ಲದೇ ಸಾಯಬಾರದು ಎಂಬುದು ಎಲ್ಲರ ಕಾಳಜಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...