ಎಲ್ಲಾ ಭಾರತೀಯ ಟಿವಿ ಚಾನೆಲ್ಗಳಲ್ಲಿ ಪ್ರಸಾರವಾದ ಪ್ರಚೋದನಕಾರಿ ಸುದ್ದಿಗಳನ್ನು ಉಲ್ಲೇಖಿಸಿ ಅವುಗಳ ಪ್ರಸಾರವನ್ನು ನಿಷೇಧಿಸುವಂತೆ ಕೋರಿ ಬಾಂಗ್ಲಾದೇಶ ಹೈಕೋರ್ಟ್ನಲ್ಲಿ ರಿಟ್ ಅರ್ಜಿಯನ್ನು ಸಲ್ಲಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ವಕೀಲ ಎಖ್ಲಾಸ್ ಉದ್ದೀನ್ ಭುಯಾನ್ ಅವರು ಈ ಅರ್ಜಿ ಸಲ್ಲಿಸಿದ್ದು, ಈ ಬಗ್ಗೆ ಅವರು ಸೋಮವಾರ ದೃಢಪಡಿಸಿದ್ದಾರೆ ಎಂದು ಢಾಕಾ ಟ್ರಿಬ್ಯೂನ್ ವರದಿ ಮಾಡಿದೆ. ಪ್ರಚೋದನಕಾರಿ ಸುದ್ದಿ
ನ್ಯಾಯಮೂರ್ತಿ ಫಾತಿಮಾ ನಜೀಬ್ ಮತ್ತು ನ್ಯಾಯಮೂರ್ತಿ ಸಿಕ್ದರ್ ಮಹಮುದೂರ್ ರಾಜಿ ಅವರನ್ನೊಳಗೊಂಡ ಹೈಕೋರ್ಟ್ ಪೀಠದಲ್ಲಿ ಅರ್ಜಿಯ ವಿಚಾರಣೆ ನಡೆಯಬಹುದು ಎಂದು ಭೂಯಾನ್ ಹೇಳಿದ್ದಾರೆ. ಬಾಂಗ್ಲಾದೇಶದಲ್ಲಿ ಎಲ್ಲಾ ಭಾರತೀಯ ಟಿವಿ ಚಾನೆಲ್ಗಳ ಪ್ರಸಾರವನ್ನು ನಿಷೇಧಿಸುವಂತೆ ಕೋರಿ ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿದೆ ಎಂದು ವರದಿ ತಿಳಿಸಿದೆ.
ಎಲ್ಲಾ ಭಾರತೀಯ ಟಿವಿ ಚಾನೆಲ್ಗಳ ಪ್ರಸಾರವನ್ನು ನಿಷೇಧಿಸಲು ಕೇಬಲ್ ಟೆಲಿವಿಷನ್ ನೆಟ್ವರ್ಕ್ ಆಪರೇಷನ್ ಆಕ್ಟ್ 2006 ರ ಸೆಕ್ಷನ್ 29 ರ ಅಡಿಯಲ್ಲಿ ನಿರ್ದೇಶನವನ್ನು ನೀಡಬೇಕು ಎಂದು ರಿಟ್ ಅರ್ಜಿ ಬಯಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
“ಬಾಂಗ್ಲಾದೇಶದಲ್ಲಿ ಭಾರತೀಯ ಟಿವಿ ಚಾನೆಲ್ಗಳ ಮೇಲೆ ನಿಷೇಧ ಹೇರುವ ನಿಯಮವನ್ನು ಏಕೆ ಹೊರಡಿಸಬಾರದು” ಎಂದು ಅದು ಕೇಳಿದೆ. ಸ್ಟಾರ್ ಜಲ್ಶಾ, ಸ್ಟಾರ್ ಪ್ಲಸ್, ಝೀ ಬಾಂಗ್ಲಾ, ರಿಪಬ್ಲಿಕ್ ಬಾಂಗ್ಲಾ ಮತ್ತು ಇತರ ಎಲ್ಲಾ ಭಾರತೀಯ ಟಿವಿ ಚಾನೆಲ್ಗಳಂತಹ ಚಾನೆಲ್ಗಳನ್ನು ನಿಷೇಧಿಸಲು ರಿಟ್ ಅರ್ಜಿ ಕರೆ ನೀಡುತ್ತದೆ ಎಂದು ವರದಿ ಹೇಳಿದೆ.
ಭಾರತೀಯ ಚಾನೆಲ್ಗಳಲ್ಲಿ ಪ್ರಚೋದನಕಾರಿ ಸುದ್ದಿಗಳನ್ನು ಪ್ರಸಾರ ಮಾಡಲಾಗುತ್ತಿದೆ ಮತ್ತು ಬಾಂಗ್ಲಾದೇಶದ ಸಂಸ್ಕೃತಿಯನ್ನು ವಿರೋಧಿಸುವ ವಿಷಯದ ಅನಿಯಂತ್ರಿತ ಪ್ರಸಾರಗಳು ಯುವಕರ ನಾಶಕ್ಕೆ ಕಾರಣವಾಗುತ್ತಿವೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ ಎಂದು ಮಾಧ್ಯಮ ವರದಿಗಳು ಹೇಳಿವೆ. ಭಾರತದ ಈ ಚಾನಲ್ಗಳು ಯಾವುದೇ ನಿಯಮಗಳಿಗೆ ಬದ್ಧವಾಗಿಲ್ಲ ಎಂದು ಅರ್ಜಿಯು ಹೇಳಿದೆ.
ಬಾಂಗ್ಲಾದೇಶದ ಮಾಹಿತಿ ಸಚಿವಾಲಯ ಮತ್ತು ಗೃಹ ಸಚಿವಾಲಯದ ಕಾರ್ಯದರ್ಶಿಗಳು, ಬಾಂಗ್ಲಾದೇಶ ದೂರಸಂಪರ್ಕ ನಿಯಂತ್ರಣ ಆಯೋಗ (ಬಿಟಿಆರ್ಸಿ) ಮತ್ತು ಇತರರನ್ನು ಅರ್ಜಿಯಲ್ಲಿ ಪ್ರತಿವಾದಿಗಳಾಗಿ ಹೆಸರಿಸಲಾಗಿದೆ. ಪ್ರಚೋದನಕಾರಿ ಸುದ್ದಿ
ಆಗಸ್ಟ್ನಲ್ಲಿ ಪ್ರಧಾನಿ ಶೇಖ್ ಹಸೀನಾ ಅವರನ್ನು ಪದಚ್ಯುತಗೊಳಿಸಿದ ನಂತರ ಮುಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಸಂಬಂಧಗಳು ಹದಗೆಟ್ಟಿವೆ. ಅಲ್ಲಿ ಅಲ್ಪಸಂಖ್ಯಾತರು, ವಿಶೇಷವಾಗಿ ಹಿಂದೂಗಳ ಮೇಲಿನ ದಾಳಿಗಳು ನಡೆಯುತ್ತಿವೆ ಎಂದು ವರದಿ ಹೇಳಿವೆ.
ನವೆಂಬರ್ 25 ರಂದು ಢಾಕಾದ ಹಜರತ್ ಶಹಜಲಾಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇಂಟರ್ನ್ಯಾಷನಲ್ ಸೊಸೈಟಿ ಫಾರ್ ಕೃಷ್ಣ ಕಾನ್ಶಿಯಸ್ನೆಸ್ (ಇಸ್ಕಾನ್) ನ ಮಾಜಿ ಸದಸ್ಯ ಹಿಂದೂ ಅರ್ಚಕ ಚಿನ್ಮೋಯ್ ಕೃಷ್ಣ ದಾಸ್ ಅವರನ್ನು ಬಂಧಿಸಿದ ನಂತರ ಭಾರತ ಮತ್ತು ಬಾಂಗ್ಲಾದೇಶದ ನಡುವೆ ರಾಜತಾಂತ್ರಿಕ ಸಂಘರ್ಷ ಭುಗಿಲೆದ್ದಿದೆ.
ಬಾಂಗ್ಲಾದೇಶದ ಸಮ್ಮಿಲಿತಾ ಸನಾತನಿ ಜಾಗರಣ್ ಜೋಟೆಯ ವಕ್ತಾರರಾದ ದಾಸ್ ಅವರನ್ನು ನವೆಂಬರ್ 26 ರಂದು ದೇಶದ್ರೋಹದ ಪ್ರಕರಣದಲ್ಲಿ ಚಟ್ಟೋಗ್ರಾಮ್ನ ಆರನೇ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಜಾಮೀನು ನಿರಾಕರಿಸಿ ಜೈಲಿಗೆ ಕಳುಹಿಸಿತು. ಈ ವೇಳೆ ಅವರ ಬೆಂಬಲಿಗರು ಮತ್ತು ಭದ್ರತಾ ಸಿಬ್ಬಂದಿ ನಡುವೆ ಘರ್ಷಣೆ ನಡೆದಿದ್ದು, ಅವರ ವಕೀಲರ ಹತ್ಯೆ ನಡೆದಿದೆ ಎಂದು ವರದಿಯಾಗಿದೆ.


