Homeಕರ್ನಾಟಕಪ್ರಚೋದನಕಾರಿ ಪೋಸ್ಟ್ : ಹಿಂದುತ್ವ ಮುಖಂಡ ಶರಣ್ ಪಂಪ್‌ವೆಲ್ ವಿರುದ್ದ ಪ್ರಕರಣ ದಾಖಲು

ಪ್ರಚೋದನಕಾರಿ ಪೋಸ್ಟ್ : ಹಿಂದುತ್ವ ಮುಖಂಡ ಶರಣ್ ಪಂಪ್‌ವೆಲ್ ವಿರುದ್ದ ಪ್ರಕರಣ ದಾಖಲು

- Advertisement -
- Advertisement -

ಮಂಗಳೂರಿನಲ್ಲಿ ರಸ್ತೆಯಲ್ಲಿ ನಮಾಝ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಮು ಸೌಹಾರ್ದತೆಗೆ ಧಕ್ಕೆ ತರುವ ಪ್ರಚೋದನಕಾರಿ ಪೋಸ್ಟ್ ಹಾಕಿದ ಹಿಂದುತ್ವ ಮುಖಂಡ ಶರಣ್ ಪಂಪ್‌ವೆಲ್ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಕಳೆದ ಶುಕ್ರವಾರ ನಗರದ ಕಂಕನಾಡಿಯಲ್ಲಿ ಮಸೀದಿ ಪಕ್ಕದ ಒಳ ರಸ್ತೆ ಬದಿಯಲ್ಲಿ ಕೆಲ ಯುವಕರು ನಮಾಝ್ ಮಾಡಿದ ವಿಡಿಯೋ ವೈರಲ್ ಆಗಿತ್ತು. ನಮಾಝ್ ನಿರ್ವಹಿಸಿದ್ದಕ್ಕೆ ಸಂಘಪರಿವಾರ ಆಕ್ಷೇಪ ವ್ಯಕ್ತಪಡಿಸಿತ್ತು. ಇದರ ಬೆನ್ನಲ್ಲೆ ಪೊಲೀಸರು ಸುಮೋಟೊ ಪ್ರಕರಣ (ಐಪಿಸಿ ಸೆಕ್ಷನ್ 341, 283, 143 ಜೊತೆಗೆ 149 ಸೆಕ್ಷನ್) ದಾಖಲಿಸಿಕೊಂಡಿದ್ದರು. ಪೊಲೀಸರ ಕ್ರಮಕ್ಕೆ ಮುಸ್ಲಿಂ ಸಮುದಾಯ ಆಕ್ರೋಶ ವ್ಯಕ್ತಪಡಿಸಿತ್ತು. ಸಾಮಾಜಿಕ ಮಾಧ್ಯಮಗಳಲ್ಲಿ ಕಾಂಗ್ರೆಸ್ ಸರ್ಕಾರ ಮತ್ತು ಪೊಲೀಸ್ ಇಲಾಖೆಯ ವಿರುದ್ಧ ವ್ಯಾಪಕ ಅಸಮಾಧಾನ ವ್ಯಕ್ತವಾಗಿತ್ತು.

ಮೇ 29ರಂದು ಕಾಂಗ್ರೆಸ್ ಮುಖಂಡ ಕೆ ಕೆ ಶಾಹುಲ್ ಹಮೀದ್ ನೇತೃತ್ವದ ಮುಸ್ಲಿಂ ನಾಯಕರ ನಿಯೋಗ ಮಂಗಳೂರು ನಗರ ಪೊಲೀಸ್ ಆಯುಕ್ತರನ್ನು ಭೇಟಿಯಾಗಿ ಕೇಸ್ ವಾಪಸ್ ಪಡೆಯುವಂತೆ ಆಗ್ರಹಿಸಿದ್ದರು. ಇಲ್ಲದಿದ್ದರೆ ಹೋರಾಟದ ಎಚ್ಚರಿಕೆ ನೀಡಿದ್ದರು. ಎಸ್‌ಡಿಪಿಐ ಪಕ್ಷ ಇಂದು (ಮೇ 31) ಶುಕ್ರವಾರ ಪ್ರತಿಭಟನೆ ಕೂಡ ಹಮ್ಮಿಕೊಂಡಿತ್ತು.

ಪೊಲೀಸರ ಕ್ರಮದ ವಿರುದ್ಧ ಆಕ್ರೋಶ ಹೆಚ್ಚಾಗುತ್ತಿದ್ದಂತೆ ಸುಮೋಟೊ ಪ್ರಕರಣ ರದ್ದಾಗಿದೆ. ಈ ಬಗ್ಗೆ ಅಧಿಕೃತ ಹೇಳಿಕೆ ಪ್ರಕಟಿಸಿರುವ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ “ರಸ್ತೆಯಲ್ಲಿ ನಮಾಝ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಚಾರಕ್ಕೆ ಅಡೆತಡೆ ಮಾಡುವ ಯಾವುದೇ ಉದ್ದೇಶ ಇಲ್ಲದಿರುವುದರಿಂದ ಸದ್ರಿ ಪ್ರಕರಣದಲ್ಲಿ ‘ಬಿ’ ಅಂತಿಮ ವರದಿ ಸಲ್ಲಿಸಲಾಗಿದೆ ಮತ್ತು ಹಿರಿಯ ಅಧಿಕಾರಿಗಳಿಗೆ ಯಾವುದೇ ಮಾಹಿತಿಯನ್ನು ನೀಡದೆ ಸುಮೋಟೊ ಪ್ರಕರಣ ದಾಖಲಿಸಿದ ಕದ್ರಿ ಪೊಲೀಸ್ ನಿರೀಕ್ಷಕರನ್ನು ಕಡ್ಡಾಯ ರಜೆಯಲ್ಲಿ ಕಳುಹಿಸಿ, ಎಸಿಪಿ ದರ್ಜೆಯ ಅಧಿಕಾರಿಯನ್ನು ವಿಚಾರಣೆಗೆ ನೇಮಕ ಮಾಡಲಾಗಿದೆ” ಎಂದು ತಿಳಿಸಿದ್ದಾರೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಂತಿ ಭಂಗ ಉಂಟು ಮಾಡುವ ಪೋಸ್ಟ್ ಹಾಕಿದ್ದ ಹಿಂದುತ್ವ ಮುಖಂಡ ಶರಣ್ ಪಂಪ್‌ವೆಲ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಶರಣ್ ಪಂಪವೆಲ್ ಇತ್ತೀಚೆಗೆ ಫೇಸ್‌ಬುಕ್‌ನಲ್ಲಿ ಹಾಕಿದ್ದ ಪೋಸ್ಟ್‌ನ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲು ಮಾಡಲಾಗಿದೆ.

“ಮಂಗಳೂರಿನ ಕಂಕನಾಡಿ ಬಳಿ ಸಾರ್ವಜನಿಕರಿಗೆ ಉದ್ದೇಶಪೂರ್ವಕವಾಗಿ ತೊಂದರೆ ನೀಡಲು ನಡೆಸಿರುವ ನಮಾಜಿನ ಸಂಬಂಧಪಟ್ಟವರಿಗೆ ಈಗಾಗಲೇ ತಿಳಿಸಲಾಗಿದೆ. ಶುಕ್ರವಾರ ಮತ್ತೆ ಅದೇ ಜಾಗದಲ್ಲಿ ನಮಾಝ್ ನಡೆದರೆ ನೇರವಾಗಿ ಬಜರಂಗದಳ ಇದರ ವಿರುದ್ಧ ನೇರ ಕಾರ್ಯಾಚರಣೆ ನಡೆಸಿ ನಿಲ್ಲಿಸಲಾಗುವುದು ಎಂದು ಈ ಮೂಲಕ ಎಚ್ಚರಿಕೆ ನೀಡುತ್ತಿದ್ದೇವೆ” ಎಂಬ ಬರವಣಿಗೆಯೊಂದಿಗೆ ಶರಣ್‌ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದರು.

“ಜನರಲ್ಲಿ ದ್ವೇಷ ಭಾವನೆ ಉಂಟಾಗುವಂತೆ ಹಾಗೂ ಕಾನೂನನ್ನು ಕೈಗೆತ್ತಿಕೊಳ್ಳುವ ಬೆದರಿಕೆ ಹಾಕಿ ಎಚ್ಚರಿಕೆಯನ್ನು ನೀಡಿ ಸಮಾಜದಲ್ಲಿ ಭಯವನ್ನುಂಟು ಮಾಡುವ ರೀತಿಯಲ್ಲಿ ಪೋಸ್ಟ್‌ ಅನ್ನು ಮಾಡಿದ್ದಾಗಿದೆ. ಈ ಬಗ್ಗೆ ಮಂಗಳೂರು ನಗರದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ಉಂಟಾಗುವ ಸಾಧ್ಯತೆ ಇರುವುದರಿಂದ ಪ್ರಕರಣವು ದಾಖಲಾಗಿರುತ್ತದೆ” ಎಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : ಪ್ರಜ್ವಲ್ ರೇವಣ್ಣ ಬಂಧನ: ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಿರುವ ಎಸ್‌ಐಟಿ ಅಧಿಕಾರಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...