Homeಮುಖಪುಟಬಿಜೆಪಿ ಸಮಾವೇಶದಲ್ಲಿ ಪ್ರಚೋದನಾಕಾರಿ ಭಾಷಣ; ಶಾಸಕ ಸೋಮಶೇಖರ ರೆಡ್ಡಿ ವಿರುದ್ಧ ಎಫ್ಐಆರ್

ಬಿಜೆಪಿ ಸಮಾವೇಶದಲ್ಲಿ ಪ್ರಚೋದನಾಕಾರಿ ಭಾಷಣ; ಶಾಸಕ ಸೋಮಶೇಖರ ರೆಡ್ಡಿ ವಿರುದ್ಧ ಎಫ್ಐಆರ್

ಈ ಭಾಷಣಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಮಾಜಿ ಸಚಿವ ಜಮೀರ್ ಅಹಮದ್ ಬಳ್ಳಾರಿಗೆ ತೆರಳಿ ತಮ್ಮ ತಲೆ ಕಡಿಯುವಂತೆ ಸೋಮಶೇಖರ ರೆಡ್ಡಿಗೆ ಸವಾಲು ಹಾಕಿದ್ದರು. ಈ ಪ್ರಕರಣ ರಾಜ್ಯದಾದ್ಯಂತ ದೊಡ್ಡ ಮಟ್ಟದ ಸುದ್ದಿಗೆ ಗ್ರಾಸವಾಗಿತ್ತು.

- Advertisement -
- Advertisement -

ರಾಯಚೂರು (ಜನವರಿ 27); ಸಿಎಎ ಪರವಾಗಿ ನಡೆಸಿದ್ದ ಬಿಜೆಪಿ ಸಮಾವೇಶದಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ್ದ ಹಿನ್ನೆಲೆ ಬಳ್ಳಾರಿ ಶಾಸಕ ಸೋಮಶೇಖರ ರೆಡ್ಡಿ ವಿರುದ್ಧ ರಾಯಚೂರಿನ ಸದರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೇಂದ್ರ ಸರ್ಕಾರದ ವಿವಾದಾತ್ಮಕ ಸಿಎಎ ಕಾಯ್ದೆಯನ್ನು ಬೆಂಬಲಿಸಿ ಬಿಜೆಪಿ ನಾಯಕರು ಜನವರಿ 3 ರಂದು ಬಳ್ಳಾರಿಯಲ್ಲಿ ಸಮಾವೇಶ ನಡೆಸಿದ್ದರು. ಈ ಸಮಾವೇಶದಲ್ಲಿ ರಾಜಾರೋಷವಾಗಿ ಮಾತನಾಡಿದ್ದ ಶಾಸಕ ಸೋಮಶೇಖರ ರೆಡ್ಡಿ,

“ನೀವು ಶೇ.17 ರಷ್ಟು ಇದ್ದೀರಿ, ನಾವು ಶೇ.80 ರಷ್ಟು ಇದ್ದೀವಿ. ಒಂದು ವೇಳೆ ನಾವು ಶಿವಾಜಿಯಂತೆ ಖಡ್ಗ ಹಿಡಿದರೆ ನೀವು ಉಳಿಯುವುದಿಲ್ಲ. ನಿಮ್ಮ ಕತೆ ಏನು? ಎಂದು ಒಮ್ಮೆ ಯೋಜಿಸಿ ಸೈಲೆಂಟಾಗಿ ಇಲ್ಲಿ ಇರೋದಾದ್ರೆ ಇರಿ. ನಕರ ಮಾಡಿದರೆ ಗೊತ್ತಲ್ಲ” ಎಂಬರ್ಥದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ್ದರು.

ಈ ಭಾಷಣಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಮಾಜಿ ಸಚಿವ ಜಮೀರ್ ಅಹಮದ್ ಬಳ್ಳಾರಿಗೆ ತೆರಳಿ ತಮ್ಮ ತಲೆ ಕಡಿಯುವಂತೆ ಸೋಮಶೇಖರ ರೆಡ್ಡಿಗೆ ಸವಾಲು ಹಾಕಿದ್ದರು. ಈ ಪ್ರಕರಣ ರಾಜ್ಯದಾದ್ಯಂತ ದೊಡ್ಡ ಮಟ್ಟದ ಸುದ್ದಿಗೆ ಗ್ರಾಸವಾಗಿತ್ತು.

ಇದೇ ಸಂದರ್ಭದಲ್ಲಿ ಸೋಮಶೇಖರ ರೆಡ್ಡಿ ಭಾಷಣದ ವಿರುದ್ಧ ರಾಯಚೂರಿನ ನಾಗರೀಕ ಸಂವಿಧಾನ ಹಕ್ಕುಗಳ ಸಮಿತಿ ಸಂಚಾಲಕ ಆರ್. ಮಾನಸಯ್ಯ ದೂರು ನೀಡಿದ್ದರು. ಈ ದೂರಿನ ಅನ್ವಯ ಸದರ ಬಜಾರ್ ಪೊಲೀಸರು ಶಾಸಕ ಸೋಮಶೇಖರ ರೆಡ್ಡಿ ವಿರುದ್ಧ ಎಫ್ಐಆರ್ ದಾಖಲು ಮಾಡಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಸಂವಿಧಾನದಡಿಯಲ್ಲಿ ಸಮಾಜದ ನಾಗರೀಕರ ಸಬಲೀಕರಣ ದ ಹಕ್ಕುಗಳಿಗೆ ರಕ್ಷಣೆ ಒದಗಿಸುವಲ್ಲಿ ಸರ್ಕಾರಿ ಹುದ್ದೆಯಲ್ಲಿರುವವರು ಸಂಪೂರ್ಣ ಜವಾಬ್ದಾರಿ ಅಕ್ರಮವಾಗಿ ಹಣ ಸಂಬಂಧನಿ ಡಿದವರಿಗೆ ಅಷ್ಟೇ ನ್ಯಾಯ
    ಹಣ ಕೊಡಲಿಲ್ಲವೆಂದರೆ ಅನ್ಯಾಯವನ್ನು ಮಾಯ ಮಾಡುವ ನೂರಕ್ಕೆ 99 ಪರ್ಸೆಂಟೇಜ್ ನೌಕರರಿದ್ದಾರೆ ಬಡಜೀವ ಗಳಂತೂ ಬಲಿದಾನಕ್ಕೆ ರೆಡಿ ಇರಬೇಕಷ್ಟೆ ಸರ್ಕಾರಿ ನೌಕರರು ಲಂಚ ಬಾಕ ರಾಗಿದ್ದಾರೆ ಹೊರೆತು ನ್ಯಾಯಕ್ಕೆ ಬದ್ಧರಾಗಿರುವ ರು ಅಪರೂಪದಲ್ಲಿ ಅಪರೂಪ

  2. ಈ ಸೋಮಶೇಖರ ರೆಡ್ಡಿ ಜನ ಬೆಂಬಲದಿ೦ದ ಗೆದ್ದು ಶಾಸಖನಾಗಿ ಈಗ ಅದೇ ಜನಗಳನ್ನೇ ಕೊಲ್ತೀನಿ ಅಂತಿದ್ದಾನೆ ಆದ್ರೆಜನರು ಮೌನವಾಗಿದ್ದಾರೆ . ಇದರ ಅರ್ಥಏನು?

LEAVE A REPLY

Please enter your comment!
Please enter your name here

- Advertisment -

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...