Homeಮುಖಪುಟಬಿಜೆಪಿ ಸಮಾವೇಶದಲ್ಲಿ ಪ್ರಚೋದನಾಕಾರಿ ಭಾಷಣ; ಶಾಸಕ ಸೋಮಶೇಖರ ರೆಡ್ಡಿ ವಿರುದ್ಧ ಎಫ್ಐಆರ್

ಬಿಜೆಪಿ ಸಮಾವೇಶದಲ್ಲಿ ಪ್ರಚೋದನಾಕಾರಿ ಭಾಷಣ; ಶಾಸಕ ಸೋಮಶೇಖರ ರೆಡ್ಡಿ ವಿರುದ್ಧ ಎಫ್ಐಆರ್

ಈ ಭಾಷಣಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಮಾಜಿ ಸಚಿವ ಜಮೀರ್ ಅಹಮದ್ ಬಳ್ಳಾರಿಗೆ ತೆರಳಿ ತಮ್ಮ ತಲೆ ಕಡಿಯುವಂತೆ ಸೋಮಶೇಖರ ರೆಡ್ಡಿಗೆ ಸವಾಲು ಹಾಕಿದ್ದರು. ಈ ಪ್ರಕರಣ ರಾಜ್ಯದಾದ್ಯಂತ ದೊಡ್ಡ ಮಟ್ಟದ ಸುದ್ದಿಗೆ ಗ್ರಾಸವಾಗಿತ್ತು.

- Advertisement -
- Advertisement -

ರಾಯಚೂರು (ಜನವರಿ 27); ಸಿಎಎ ಪರವಾಗಿ ನಡೆಸಿದ್ದ ಬಿಜೆಪಿ ಸಮಾವೇಶದಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ್ದ ಹಿನ್ನೆಲೆ ಬಳ್ಳಾರಿ ಶಾಸಕ ಸೋಮಶೇಖರ ರೆಡ್ಡಿ ವಿರುದ್ಧ ರಾಯಚೂರಿನ ಸದರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೇಂದ್ರ ಸರ್ಕಾರದ ವಿವಾದಾತ್ಮಕ ಸಿಎಎ ಕಾಯ್ದೆಯನ್ನು ಬೆಂಬಲಿಸಿ ಬಿಜೆಪಿ ನಾಯಕರು ಜನವರಿ 3 ರಂದು ಬಳ್ಳಾರಿಯಲ್ಲಿ ಸಮಾವೇಶ ನಡೆಸಿದ್ದರು. ಈ ಸಮಾವೇಶದಲ್ಲಿ ರಾಜಾರೋಷವಾಗಿ ಮಾತನಾಡಿದ್ದ ಶಾಸಕ ಸೋಮಶೇಖರ ರೆಡ್ಡಿ,

“ನೀವು ಶೇ.17 ರಷ್ಟು ಇದ್ದೀರಿ, ನಾವು ಶೇ.80 ರಷ್ಟು ಇದ್ದೀವಿ. ಒಂದು ವೇಳೆ ನಾವು ಶಿವಾಜಿಯಂತೆ ಖಡ್ಗ ಹಿಡಿದರೆ ನೀವು ಉಳಿಯುವುದಿಲ್ಲ. ನಿಮ್ಮ ಕತೆ ಏನು? ಎಂದು ಒಮ್ಮೆ ಯೋಜಿಸಿ ಸೈಲೆಂಟಾಗಿ ಇಲ್ಲಿ ಇರೋದಾದ್ರೆ ಇರಿ. ನಕರ ಮಾಡಿದರೆ ಗೊತ್ತಲ್ಲ” ಎಂಬರ್ಥದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ್ದರು.

ಈ ಭಾಷಣಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಮಾಜಿ ಸಚಿವ ಜಮೀರ್ ಅಹಮದ್ ಬಳ್ಳಾರಿಗೆ ತೆರಳಿ ತಮ್ಮ ತಲೆ ಕಡಿಯುವಂತೆ ಸೋಮಶೇಖರ ರೆಡ್ಡಿಗೆ ಸವಾಲು ಹಾಕಿದ್ದರು. ಈ ಪ್ರಕರಣ ರಾಜ್ಯದಾದ್ಯಂತ ದೊಡ್ಡ ಮಟ್ಟದ ಸುದ್ದಿಗೆ ಗ್ರಾಸವಾಗಿತ್ತು.

ಇದೇ ಸಂದರ್ಭದಲ್ಲಿ ಸೋಮಶೇಖರ ರೆಡ್ಡಿ ಭಾಷಣದ ವಿರುದ್ಧ ರಾಯಚೂರಿನ ನಾಗರೀಕ ಸಂವಿಧಾನ ಹಕ್ಕುಗಳ ಸಮಿತಿ ಸಂಚಾಲಕ ಆರ್. ಮಾನಸಯ್ಯ ದೂರು ನೀಡಿದ್ದರು. ಈ ದೂರಿನ ಅನ್ವಯ ಸದರ ಬಜಾರ್ ಪೊಲೀಸರು ಶಾಸಕ ಸೋಮಶೇಖರ ರೆಡ್ಡಿ ವಿರುದ್ಧ ಎಫ್ಐಆರ್ ದಾಖಲು ಮಾಡಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಸಂವಿಧಾನದಡಿಯಲ್ಲಿ ಸಮಾಜದ ನಾಗರೀಕರ ಸಬಲೀಕರಣ ದ ಹಕ್ಕುಗಳಿಗೆ ರಕ್ಷಣೆ ಒದಗಿಸುವಲ್ಲಿ ಸರ್ಕಾರಿ ಹುದ್ದೆಯಲ್ಲಿರುವವರು ಸಂಪೂರ್ಣ ಜವಾಬ್ದಾರಿ ಅಕ್ರಮವಾಗಿ ಹಣ ಸಂಬಂಧನಿ ಡಿದವರಿಗೆ ಅಷ್ಟೇ ನ್ಯಾಯ
    ಹಣ ಕೊಡಲಿಲ್ಲವೆಂದರೆ ಅನ್ಯಾಯವನ್ನು ಮಾಯ ಮಾಡುವ ನೂರಕ್ಕೆ 99 ಪರ್ಸೆಂಟೇಜ್ ನೌಕರರಿದ್ದಾರೆ ಬಡಜೀವ ಗಳಂತೂ ಬಲಿದಾನಕ್ಕೆ ರೆಡಿ ಇರಬೇಕಷ್ಟೆ ಸರ್ಕಾರಿ ನೌಕರರು ಲಂಚ ಬಾಕ ರಾಗಿದ್ದಾರೆ ಹೊರೆತು ನ್ಯಾಯಕ್ಕೆ ಬದ್ಧರಾಗಿರುವ ರು ಅಪರೂಪದಲ್ಲಿ ಅಪರೂಪ

  2. ಈ ಸೋಮಶೇಖರ ರೆಡ್ಡಿ ಜನ ಬೆಂಬಲದಿ೦ದ ಗೆದ್ದು ಶಾಸಖನಾಗಿ ಈಗ ಅದೇ ಜನಗಳನ್ನೇ ಕೊಲ್ತೀನಿ ಅಂತಿದ್ದಾನೆ ಆದ್ರೆಜನರು ಮೌನವಾಗಿದ್ದಾರೆ . ಇದರ ಅರ್ಥಏನು?

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...