Homeಕರ್ನಾಟಕಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ಭಾಗಿಯಾದ ನಾಯಕರ ರಕ್ಷಣೆಗೆ ಪರೀಕ್ಷೆ ರದ್ದು: ಡಿ.ಕೆ.ಶಿವಕುಮಾರ್‌

ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ಭಾಗಿಯಾದ ನಾಯಕರ ರಕ್ಷಣೆಗೆ ಪರೀಕ್ಷೆ ರದ್ದು: ಡಿ.ಕೆ.ಶಿವಕುಮಾರ್‌

- Advertisement -
- Advertisement -

ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ ತನಿಖೆ ಪೂರ್ಣಗೊಳ್ಳುವ ಮುನ್ನವೇ ಪರೀಕ್ಷೆ ರದ್ದು ಮಾಡಿ, ಮರುಪರೀಕ್ಷೆಗೆ ಆದೇಶಿಸಿರುವುದು ಖಂಡನೀಯ. ಇದು ಈ ಅಕ್ರಮದಲ್ಲಿ ಭಾಗಿಯಾಗಿರುವ ಆಡಳಿತ ಪಕ್ಷದ ನಾಯಕರ ರಕ್ಷಣೆಯ ಪ್ರಯತ್ನವಾಗಿದ್ದು, ಇದರಿಂದ ಪ್ರಾಮಾಣಿಕವಾಗಿ ಪರೀಕ್ಷೆ ಬರೆದು ಪಾಸಾಗಿರುವ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಜಿಲ್ಲಾ ಹಾಗೂ ರಾಜ್ಯ ಮಟ್ಟದ ನೇಮಕಾತಿ ಸಮಿತಿ ರದ್ದು ಮಾಡಿ, ಪರೀಕ್ಷೆಯೇ ಮಾನದಂಡ ಎಂದು ಪ್ರವೇಶ ಪರೀಕ್ಷೆಗಳನ್ನು ಆರಂಭಿಸಲಾಯಿತು. ಇದು ಆರಂಭವಾದ ನಂತರ ಲೋಕಸೇವಾ ಆಯೋಗದ ನೇಮಕಾತಿಯಲ್ಲಿ ಗೊಂದಲ ಉದ್ಭವಿಸಿದ್ದನ್ನು ನೋಡಿದ್ದೇವೆ. ಇದರ ವಿಚಾರಣೆ ನಡೆದಿದ್ದು, ಕೋರ್ಟ್ ಹಾಗೂ ಸರ್ಕಾರ ಭಿನ್ನ ತೀರ್ಮಾನ ಕೈಗೊಂಡಿರುವುದನ್ನು ನೋಡಿದ್ದೇವೆ. ಸರ್ಕಾರದ ಎಲ್ಲ ನೇಮಕಾತಿ ಪ್ರಕ್ರಿಯೆಯಲ್ಲೂ ಭ್ರಷ್ಟಾಚಾರ, ಅಕ್ರಮ, ಹಗರಣಗಳ ಸರಮಾಲೆ ಇದೆ. ಪಿಡಬ್ಲ್ಯೂಡಿ, ಶಿಕ್ಷಣ ಇಲಾಖೆ ಸೇರಿದಂತೆ ಅನೇಕ ಕಡೆಗಳಲ್ಲಿ ಅಕ್ರಮವಾಗಿದೆ. ರಾಜ್ಯದಲ್ಲಿ ಯುವಕರ, ಉದ್ಯೋಗಕಾಂಕ್ಷಿಗಳ ಭವಿಷ್ಯಕ್ಕೆ ಕೊಳ್ಳಿ ಇಡಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಿಎಸ್‌ಐ ನೇಮಕಾತಿ ಅಕ್ರಮ ವಿಚಾರವಾಗಿ ತನಿಖೆ ನಡೆಯುತ್ತಿದೆ. ಇಪ್ಪತ್ತು ದಿನಗಳ ನಂತರ ಪೊಲೀಸರು ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಿಸಿದ್ದು, ನಾನು ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಬಿಜೆಪಿಯವರು ಈ ಅಕ್ರಮದ ಆರೋಪವನ್ನು ಬೇರೆಯವರ ಮೇಲೆ ಹಾಕಲು ಪ್ರಯತ್ನಿಸಿದ್ದರು. ಕಾಂಗ್ರೆಸ್ ನವರೂ ಇದರಲ್ಲಿ ಭಾಗಿಯಾಗಿದ್ದಾರೆ ಎಂದು ಬಿಂಬಿಸಲು ಪ್ರಯತ್ನಿಸಿದರು. ಬಿಜೆಪಿಯವರು ತಾವು ಹಣ್ಣು ತಿಂದು ಬೇರೆಯವರ ಮೂತಿ ಮೇಲೆ ಸಿಪ್ಪೆ ಇಡುವ ಪ್ರಯತ್ನ ಮಾಡುತ್ತಾರೆ. ಅದು ಯಶಸ್ಸಾಗುವುದಿಲ್ಲ ಎಂದು ಹೇಳಿದರು.

ಗೃಹಮಂತ್ರಿಗಳು ಈ ನೇಮಕಾತಿಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ಅಧಿವೇಶನದಲ್ಲೇ ಹೇಳಿದ್ದರು. ನಮ್ಮ ಶಾಸಕರು, ನಾಯಕರು ಈ ಅಕ್ರಮದ ವಿಚಾರ ಬಹಿರಂಗ ಪಡಿಸಿದರೆ, ಅವರನ್ನು ಬೆದರಿಸಲು ನೊಟೀಸ್ ನೀಡುತ್ತೀರಿ. ಕಾಂಗ್ರೆಸ್ ಪಕ್ಷ ಇದಕ್ಕೆಲ್ಲ ಹೆದರುವುದಿಲ್ಲ. ಈ ಪ್ರಕರಣದ ಪ್ರಮುಖ ಆರೋಪಿಯನ್ನು ನಿಮ್ಮ ಮುಂಖಂಡರೇ ಗೌಪ್ಯ ಸ್ಥಳದಲ್ಲಿ ಇಟ್ಟಿದ್ದರು ಎಂದು ನಿಮಗೆ ಗೊತ್ತಿದೆ. ಅವರ ವಿಚಾರಣೆ ಮಾಡುವ ಮುನ್ನವೇ, ಇದರಲ್ಲಿ ಯಾರೆಲ್ಲಾ ಭಾಗಿಯಾಗಿದ್ದಾರೆ ಎಂದು ಬಹಿರಂಗವಾಗುವ ಮುನ್ನವೇ ಈ ಹಿಂದೆ ನಡೆದಿರುವ ಪರೀಕ್ಷೆ ರದ್ದು ಮಾಡಿ ಮರುಪರೀಕ್ಷೆಗೆ ಆದೇಶ ನೀಡಿರುವುದು ಎಷ್ಟರ ಮಟ್ಟಿಗೆ ಸರಿ? ಎಂದು ಪ್ರಶ್ನಿಸಿದ್ದಾರೆ.

ಈ ನಿರ್ಣಯ ಕೈಗೊಳ್ಳಬೇಕಾದರೆ ಈ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ಖಚಿತವಾಗಿರಬೇಕು. ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರೇ ಈ ಪಿಎಸ್‌ಐ ನೇಮಕಾತಿಯಲ್ಲಿ ಯಾರು ಅಕ್ರಮ ಮಾಡಿದ್ದಾರೋ, ಅವರನ್ನು ಹೊರತುಪಡಿಸಿ, ಪ್ರಾಮಾಣಿಕವಾಗಿ ಪರೀಕ್ಷೆ ಬರೆದವರಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಹೇಳಿದ್ದರು. ಆದರೆ ಸರ್ಕಾರ ಅವರ ಹೇಳಿಕೆ ನಿರ್ಲಕ್ಷಿಸಿ ಈ ನಿರ್ಧಾರ ತೆಗೆದುಕೊಂಡಿದೆ. ಇದೊಂದು ಬಿಜೆಪಿ ಅಕ್ರಮವಾಗಿದ್ದು, ಬಿಜೆಪಿ ನಾಯಕರ ರಕ್ಷಣೆಗೆ ಪರೀಕ್ಷೆ ರದ್ದು ಪಡಿಸಲಾಗಿದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಈ ಪ್ರಕರಣದಿಂದ ರಾಜ್ಯದ ಘನತೆ ಏನಾಗಿದೆ ಎಂದು ಸರ್ಕಾರ ಅರಿತಿದೆಯೇ? ಪೊಲೀಸ್ ಅಧಿಕಾರಿಯಾಗುವ ಅಭ್ಯರ್ಥಿಗಳಲ್ಲಿ ಈ ಭ್ರಷ್ಟಾಚಾರದ ಭಾವನೆ ಮೂಡಿದರೆ ಮುಂದೆ ಏನಾಗಬಹುದು ಎಂಬ ಪರಿಜ್ಞಾನ ಸರ್ಕಾರಕ್ಕೆ ಇದೆಯಾ? ಇತರೆ ಇಲಾಖೆಗಳಲ್ಲಿ ನೇಮಕಾತಿ ಅಕ್ರಮದ ಬಗ್ಗೆ ಸಚಿವರು ಯಾಕೆ ಮಾತನಾಡುತ್ತಿಲ್ಲ. ನಮ್ಮ ವಿರೋಧ ಪಕ್ಷದ ನಾಯಕರು ಕೆಲವು ಸಚಿವರ ರಾಜೀನಾಮೆ ಕೇಳಿದ್ದಾರೆ. ಆದರೆ ಕೊಡದಷ್ಟು ಅವರು ಭಂಡರಾಗಿದ್ದಾರೆ ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿರಿ: ಕನ್ನಡ ಪ್ರಶ್ನೆಪತ್ರಿಕೆಯಲ್ಲಿ ತಪ್ಪುಗಳ ಸರಮಾಲೆ: 5 ಎಡವಟ್ಟುಗಳಿಗೆ ಮಾತ್ರ ಕೆಇಎ ಸಮಜಾಯಿಷಿ!

ಈ ಅಕ್ರಮಕ್ಕೆ ಮುಖ್ಯಮಂತ್ರಿಗಳೂ ಜವಾಬ್ದಾರರಾಗಿದ್ದಾರೆ. ನಿಮ್ಮ ಸರ್ಕಾರ ಅಕ್ರಮಗಳ ಸರಮಾಲೆ ಧರಿಸಿದೆ. ಈ ಅಕ್ರಮದಲ್ಲಿ ಭಾಗಿಯಾಗಿರುವ ನಿಮ್ಮ ನಾಯಕರು, ಅಧಿಕಾರಿಗಳ ಹೆಸರನ್ನು ನಾವು ಬಹಿರಂಗ ಪಡಿಸುವ ಮುನ್ನ ನೀವೇ ಬಹಿರಂಗ ಮಾಡಬೇಕು. ಇಡೀ ನಿಮ್ಮ ಪಕ್ಷ ಈ ನೇಮಕಾತಿ ಅಕ್ರಮದ ಕೊಳಕಿನಲ್ಲಿ ಮುಳುಗಿ ಒದ್ದಾಡುತ್ತಿದೆ. ಈ ಮಕ್ಕಳು ನ್ಯಾಯಾಲಯದ ಮೆಟ್ಟಿಲೇರಲು ನೀವೇ ದಾರಿ ಮಾಡಿಕೊಡುತ್ತಿದ್ದೀರಿ. ನ್ಯಾಯಾಲಯದ ವಿಚಾರಣೆ ಹೆಸರಲ್ಲಿ ಇದು ಮುಂದಕ್ಕೆ ಹೋಗಬೇಕು ಎಂಬುದು ನಿಮ್ಮ ಕುತಂತ್ರ ಎಂದು ಹರಿಹಾಯ್ದಿದ್ದಾರೆ.

ಕಾಂಗ್ರೆಸ್ ಸರ್ಕಾರ ಸಿಇಟಿ ಆರಂಭಿಸಿ, ಒಂದು ಪ್ರಾಧಿಕಾರ ರಚಿಸಿ ಕಾಲೇಜು ಸೀಟು ಹಂಚಿಕೆಯಲ್ಲಿ ಪಾರದರ್ಶಕತೆಯನ್ನು ತಂದಿತು. ಈಗಿರುವ ತಂತ್ರಜ್ಞಾನ ಬಳಸಿಕೊಂಡು ಪಾರದರ್ಶಕತೆ ಹೆಚ್ಚಿಸಬೇಕು. ಆದರೆ ನೀವು ನಿಮ್ಮ ಕಾರ್ಯಕರ್ತರಿಗೆ ಕುಮ್ಮಕ್ಕು ನೀಡಿ, ಒಂದೊಂದು ಹುದ್ದೆಗೂ 80 ಲಕ್ಷ ವಸೂಲಿ ಮಾಡಿಕೊಂಡಿದ್ದೀರಿ. ವರದಿಯಲ್ಲಿ ನಿಮ್ಮವರ ಹೆಸರು ಬರಲಿದೆ ಎಂಬ ಕಾರಣಕ್ಕೆ ಮರುಪರೀಕ್ಷೆಗೆ ಆದೇಶಿಸಿದ್ದೀರಿ. ನಿಮ್ಮ ಈ ತಪ್ಪಿಗೆ ಯಾರು ಶಿಕ್ಷೆ ನೀಡಬೇಕು? ನಿಮಗೆ ರಾಜ್ಯದ ಜನತೆ, ಯುವಕರು, ರಾಜ್ಯದ ತಂದೆ ತಾಯಂದಿರು, ಮತದಾರ ಪ್ರಭುಗಳು ಶಿಕ್ಷೆ ನೀಡಲಿದ್ದಾರೆ. ನಿಮ್ಮನ್ನು ಜನರೇ ಕಿತ್ತೊಗೆಯುತ್ತಾರೆ. ಆ ಕಾಲ ಸನಿಹವಾಗುತ್ತಿದೆ ಎಂದು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...