Homeಕರ್ನಾಟಕಠಾಣೆಯಲ್ಲಿ ಹುಟ್ಟುಹಬ್ಬ ಆಚರಿಸಿ, ಡಿಐಜಿ ಆದೇಶ ಉಲ್ಲಂಘಿಸಿದ ಪಿಎಸ್‌ಐ!

ಠಾಣೆಯಲ್ಲಿ ಹುಟ್ಟುಹಬ್ಬ ಆಚರಿಸಿ, ಡಿಐಜಿ ಆದೇಶ ಉಲ್ಲಂಘಿಸಿದ ಪಿಎಸ್‌ಐ!

- Advertisement -
- Advertisement -

ಪೊಲೀಸ್‌ ಮಹಾನಿರ್ದೇಶಕರಾದ ಪ್ರವೀಣ್ ಸೂದ್‌ ಅವರು ಇತ್ತೀಚೆಗಷ್ಟೇ, ಸುತ್ತೋಲೆಯೊಂದನ್ನು ಹೊರಡಿಸಿ ಪೊಲೀಸ್ ಕಚೇರಿಗಳು ಸಾರ್ವಜನಿಕ ಕಚೇರಿಗಳಾಗಿರುವುದರಿಂದ ಅಲ್ಲಿ ಹುಟ್ಟುಹಬ್ಬ, ಮದುವೆ ವಾರ್ಷಿಕೋತ್ಸವದಂತಹ ಖಾಸಗಿ ಕಾರ್ಯಕ್ರಮಗಳನ್ನು ನಡೆಯದಂತೆ ಎಚ್ಚರಿಕೆ ವಹಿಸಬೇಕು ಎಂದು ಹೇಳಿದ್ದರು. ಆದರೆ ಹಾವೇರಿಯ ಬಂಕಾಪುರ ಠಾಣೆಯ ಪಿಎಸ್‌ಐ ಸಂತೋಷ ಪಾಟೀಲ ಅವರು ಡಿಜಿಪಿಯ ಆದೇಶ ಉಲ್ಲಂಘಿಸಿ ಠಾಣೆಯಲ್ಲೇ ಸಾರ್ವಜನಿಕರೊಂದಿಗೆ ಹುಟ್ಟು ಹಬ್ಬ ಆಚರಿಸಿದ್ದಾರೆ. ಈ ಮೂಲಕ ಸುತ್ತೋಲೆ ಹೊರಡಿಸಿ ಎರಡು ವಾರದ ಒಳಗೆ ಆದೇಶದ ಉಲ್ಲಂಘನೆ ಆಗಿದೆ.

“ಅಪರಾಧ ಹಿನ್ನಲೆಯ ಹಾಗೂ ಸಮಾಜ ಘಾತಕ ಶಕ್ತಿಗಳು ನಡೆಸುವ ಕಾರ್ಯಕ್ರಮದಲ್ಲಿ ಪೊಲೀಸರು ಭಾಗವಹಿಸಬಾರದು. ಯಾವುದೆ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವಾಗ ಕಾರ್ಯಕ್ರಮ ಹಮ್ಮಿಕೊಂಡಿರುವ ವ್ಯಕ್ತಿ ಮತ್ತು ಸಂಘ ಸಂಸ್ಥೆಯ ಪೂರ್ವಾಪರ ಪರಿಶೀಲನೆ ಮಾಡಿ ಅದರಲ್ಲಿ ಭಾಗವಹಸುವುದು ಸರಿಯೆ ಎಂದು ನಿರ್ಧರಿಸಬೇಕು” ಎಂದು ಡಿಜಿ & ಐಜಿಪಿ ಪ್ರವೀಣ್ ಸೂದ್‌ ಆಗಸ್ಟ್‌ 2 ರಂದು ಹೊರಡಿಸಿದ್ದ ಸುತ್ತೋಲೆಯಲ್ಲಿ ಹೇಳಿದ್ದರು.

ಇದನ್ನೂ ಓದಿ: ‘ಸಮಾಜ ಘಾತಕ ಶಕ್ತಿಗಳ ಕಾರ್ಯಕ್ರಮದಲ್ಲಿ ಪೊಲೀಸರು’: ಸುತ್ತೋಲೆ ಹೊರಡಿಸಿದ ಡಿಜಿ & ಐಜಿಪಿ ಪ್ರವೀಣ್ ಸೂದ್‌

ಠಾಣೆಯಲ್ಲೆ ಸಾರ್ವಜನಿಕರೊಂದಿಗೆ ಹುಟ್ಟುಹಬ್ಬ ಆಚರಿಸಿದ್ದ ಚಿತ್ರವು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ನೆಟ್ಟಿಗರು ಆಕ್ಷೇಪ ವ್ಯಕ್ತಪಡಿಸಿದ್ದರು. ಇದರ ನಂತರ ಇದು ಮಾಧ್ಯಮಗಳಲ್ಲಿ ವರದಿಯಾಗಿದ್ದು, ಹಾವೇರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹನುಮಂತರಾಯ ಅವರು ಸಂತೋಷ್‌ ಪಾಟೀಲ ಅವರನ್ನು ಸೇವೆಯಿಂದ ಅಮಾನತುಗೊಳಿಸಿದ್ದಾರೆ.

ಯಾವುದೆ ಪೊಲೀಸ್ ಅಧಿಕಾರಿಗಳು ಅಪರಾಧ ಹಿನ್ನಲೆಯ, ಸಮಾಜ ಘಾತಕ ಶಕ್ತಿಗಳ ಹಾಗೂ ರೌಡಿ ಶೀಟರ್‌ಗಳೊಂದಿಗೆ ಯಾವುದೆ ಸಂಬಂಧ ಹೊಂದುವಂತಿಲ್ಲ ಎಂಬುವುದನ್ನು ನೆನಪಿಸಿದ್ದ ಸುತ್ತೋಲೆ, “ಪೊಲೀಸ್ ಕಚೇರಿಗಳು ಸಾರ್ವಜನಿಕ ಕಚೇರಿಗಳಾಗಿರುವುದರಿಂದ ಅಲ್ಲಿ ಹುಟ್ಟುಹಬ್ಬ, ಮದುವೆ ವಾರ್ಷಿಕೋತ್ಸವದಂತಹ ಖಾಸಗಿ ಕಾರ್ಯಕ್ರಮಗಳನ್ನು ನಡೆಯದಂತೆ ಎಚ್ಚರಿಕೆ ವಹಿಸಬೇಕು” ಎಂದೂ ಹೇಳಿತ್ತು.

ಪಿಎಸ್‌ಐ ಅಮಾನತ್ತಿನ ಬಗ್ಗೆ ಫೇಸ್‌ಬುಕ್‌ನಲ್ಲಿ ಪ್ರತಿಕ್ರಿಯಿಸಿರುವ ಕರ್ನಾಟಕ ರಾಷ್ಟ್ರರಕ್ಷಣ ಸಮಿತಿ ಪಕ್ಷದ ರಾಜ್ಯಾಧ್ಯಕ್ಷ ರವಿಕೃಷ್ಣಾ ರೆಡ್ಡಿ, “DG & IGP ಆದೇಶವನ್ನೇ ಧಿಕ್ಕರಿಸುವ ದುರಹಂಕಾರ ಪೊಲೀಸ್ ಇಲಾಖೆಯಲ್ಲಿದೆ. ಆದರೆ ಜನತೆ ಇನ್ನು ಮೇಲೆ ಸ್ಥಳೀಯ ಭ್ರಷ್ಟ ಮತ್ತು ದುರಹಂಕಾರಿ ಪೊಲೀಸರನ್ನು ಪ್ರಶ್ನಿಸುವುದಿಲ್ಲ. ಅವರ ಮೇಲಧಿಕಾರಿಗಳನ್ನು ಪ್ರಶ್ನಿಸುತ್ತಾರೆ. ಇಲಾಖೆಯ ಆದೇಶವನ್ನು ಮೊನ್ನೆ ಒಬ್ಬ ಅಧಿಕಾರಿ ಉಲ್ಲಂಘಿಸಿದ. ಇಂದು ಅಮಾನತು ಆಗಿ ಮನೆಯಲ್ಲಿ ಇದ್ದಾನೆ. ಕಾನೂನು ಭಂಜಕ ಪೊಲೀಸ್ ಅಧಿಕಾರಿಗಳಿಗೆ ಇದು ಎಚ್ಚರಿಕೆ. ಕಾನೂನು ಪಾಲಿಸಿ; ಕರ್ತವ್ಯ ನಿಭಾಯಿಸಿ. ಖಾಕಿ ಬಟ್ಟೆ ಹಾಕಿಕೊಂಡ ಮಾತ್ರಕ್ಕೆ ಪೊಲೀಸರು ಸಮಾಜೋದ್ಧಾರಕರಲ್ಲ. ಸ್ವಾಭಿಮಾನಿ ಜನತೆ ಪೊಲೀಸರನ್ನು ಸನ್ಮಾನಿಸುವ, ಹೊಗಳುವ, ಅವರನ್ನು ತಲೆಯ ಮೇಲಿಟ್ಟುಕೊಂಡು ಮೆರೆಸುವ ಗುಲಾಮಿ ಮನಸ್ಥಿತಿಯನ್ನು ತೊರೆಯಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೇರಳ: ಮಹಿಳೆಯರ ಸುರಕ್ಷತೆಗಾಗಿ ಪಿಂಕ್ ಪ್ರೊಟೆಕ್ಷನ್ ಯೋಜನೆ ಆರಂಭ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...