Homeಕರ್ನಾಟಕಠಾಣೆಯಲ್ಲಿ ಹುಟ್ಟುಹಬ್ಬ ಆಚರಿಸಿ, ಡಿಐಜಿ ಆದೇಶ ಉಲ್ಲಂಘಿಸಿದ ಪಿಎಸ್‌ಐ!

ಠಾಣೆಯಲ್ಲಿ ಹುಟ್ಟುಹಬ್ಬ ಆಚರಿಸಿ, ಡಿಐಜಿ ಆದೇಶ ಉಲ್ಲಂಘಿಸಿದ ಪಿಎಸ್‌ಐ!

- Advertisement -
- Advertisement -

ಪೊಲೀಸ್‌ ಮಹಾನಿರ್ದೇಶಕರಾದ ಪ್ರವೀಣ್ ಸೂದ್‌ ಅವರು ಇತ್ತೀಚೆಗಷ್ಟೇ, ಸುತ್ತೋಲೆಯೊಂದನ್ನು ಹೊರಡಿಸಿ ಪೊಲೀಸ್ ಕಚೇರಿಗಳು ಸಾರ್ವಜನಿಕ ಕಚೇರಿಗಳಾಗಿರುವುದರಿಂದ ಅಲ್ಲಿ ಹುಟ್ಟುಹಬ್ಬ, ಮದುವೆ ವಾರ್ಷಿಕೋತ್ಸವದಂತಹ ಖಾಸಗಿ ಕಾರ್ಯಕ್ರಮಗಳನ್ನು ನಡೆಯದಂತೆ ಎಚ್ಚರಿಕೆ ವಹಿಸಬೇಕು ಎಂದು ಹೇಳಿದ್ದರು. ಆದರೆ ಹಾವೇರಿಯ ಬಂಕಾಪುರ ಠಾಣೆಯ ಪಿಎಸ್‌ಐ ಸಂತೋಷ ಪಾಟೀಲ ಅವರು ಡಿಜಿಪಿಯ ಆದೇಶ ಉಲ್ಲಂಘಿಸಿ ಠಾಣೆಯಲ್ಲೇ ಸಾರ್ವಜನಿಕರೊಂದಿಗೆ ಹುಟ್ಟು ಹಬ್ಬ ಆಚರಿಸಿದ್ದಾರೆ. ಈ ಮೂಲಕ ಸುತ್ತೋಲೆ ಹೊರಡಿಸಿ ಎರಡು ವಾರದ ಒಳಗೆ ಆದೇಶದ ಉಲ್ಲಂಘನೆ ಆಗಿದೆ.

“ಅಪರಾಧ ಹಿನ್ನಲೆಯ ಹಾಗೂ ಸಮಾಜ ಘಾತಕ ಶಕ್ತಿಗಳು ನಡೆಸುವ ಕಾರ್ಯಕ್ರಮದಲ್ಲಿ ಪೊಲೀಸರು ಭಾಗವಹಿಸಬಾರದು. ಯಾವುದೆ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವಾಗ ಕಾರ್ಯಕ್ರಮ ಹಮ್ಮಿಕೊಂಡಿರುವ ವ್ಯಕ್ತಿ ಮತ್ತು ಸಂಘ ಸಂಸ್ಥೆಯ ಪೂರ್ವಾಪರ ಪರಿಶೀಲನೆ ಮಾಡಿ ಅದರಲ್ಲಿ ಭಾಗವಹಸುವುದು ಸರಿಯೆ ಎಂದು ನಿರ್ಧರಿಸಬೇಕು” ಎಂದು ಡಿಜಿ & ಐಜಿಪಿ ಪ್ರವೀಣ್ ಸೂದ್‌ ಆಗಸ್ಟ್‌ 2 ರಂದು ಹೊರಡಿಸಿದ್ದ ಸುತ್ತೋಲೆಯಲ್ಲಿ ಹೇಳಿದ್ದರು.

ಇದನ್ನೂ ಓದಿ: ‘ಸಮಾಜ ಘಾತಕ ಶಕ್ತಿಗಳ ಕಾರ್ಯಕ್ರಮದಲ್ಲಿ ಪೊಲೀಸರು’: ಸುತ್ತೋಲೆ ಹೊರಡಿಸಿದ ಡಿಜಿ & ಐಜಿಪಿ ಪ್ರವೀಣ್ ಸೂದ್‌

ಠಾಣೆಯಲ್ಲೆ ಸಾರ್ವಜನಿಕರೊಂದಿಗೆ ಹುಟ್ಟುಹಬ್ಬ ಆಚರಿಸಿದ್ದ ಚಿತ್ರವು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ನೆಟ್ಟಿಗರು ಆಕ್ಷೇಪ ವ್ಯಕ್ತಪಡಿಸಿದ್ದರು. ಇದರ ನಂತರ ಇದು ಮಾಧ್ಯಮಗಳಲ್ಲಿ ವರದಿಯಾಗಿದ್ದು, ಹಾವೇರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹನುಮಂತರಾಯ ಅವರು ಸಂತೋಷ್‌ ಪಾಟೀಲ ಅವರನ್ನು ಸೇವೆಯಿಂದ ಅಮಾನತುಗೊಳಿಸಿದ್ದಾರೆ.

ಯಾವುದೆ ಪೊಲೀಸ್ ಅಧಿಕಾರಿಗಳು ಅಪರಾಧ ಹಿನ್ನಲೆಯ, ಸಮಾಜ ಘಾತಕ ಶಕ್ತಿಗಳ ಹಾಗೂ ರೌಡಿ ಶೀಟರ್‌ಗಳೊಂದಿಗೆ ಯಾವುದೆ ಸಂಬಂಧ ಹೊಂದುವಂತಿಲ್ಲ ಎಂಬುವುದನ್ನು ನೆನಪಿಸಿದ್ದ ಸುತ್ತೋಲೆ, “ಪೊಲೀಸ್ ಕಚೇರಿಗಳು ಸಾರ್ವಜನಿಕ ಕಚೇರಿಗಳಾಗಿರುವುದರಿಂದ ಅಲ್ಲಿ ಹುಟ್ಟುಹಬ್ಬ, ಮದುವೆ ವಾರ್ಷಿಕೋತ್ಸವದಂತಹ ಖಾಸಗಿ ಕಾರ್ಯಕ್ರಮಗಳನ್ನು ನಡೆಯದಂತೆ ಎಚ್ಚರಿಕೆ ವಹಿಸಬೇಕು” ಎಂದೂ ಹೇಳಿತ್ತು.

ಪಿಎಸ್‌ಐ ಅಮಾನತ್ತಿನ ಬಗ್ಗೆ ಫೇಸ್‌ಬುಕ್‌ನಲ್ಲಿ ಪ್ರತಿಕ್ರಿಯಿಸಿರುವ ಕರ್ನಾಟಕ ರಾಷ್ಟ್ರರಕ್ಷಣ ಸಮಿತಿ ಪಕ್ಷದ ರಾಜ್ಯಾಧ್ಯಕ್ಷ ರವಿಕೃಷ್ಣಾ ರೆಡ್ಡಿ, “DG & IGP ಆದೇಶವನ್ನೇ ಧಿಕ್ಕರಿಸುವ ದುರಹಂಕಾರ ಪೊಲೀಸ್ ಇಲಾಖೆಯಲ್ಲಿದೆ. ಆದರೆ ಜನತೆ ಇನ್ನು ಮೇಲೆ ಸ್ಥಳೀಯ ಭ್ರಷ್ಟ ಮತ್ತು ದುರಹಂಕಾರಿ ಪೊಲೀಸರನ್ನು ಪ್ರಶ್ನಿಸುವುದಿಲ್ಲ. ಅವರ ಮೇಲಧಿಕಾರಿಗಳನ್ನು ಪ್ರಶ್ನಿಸುತ್ತಾರೆ. ಇಲಾಖೆಯ ಆದೇಶವನ್ನು ಮೊನ್ನೆ ಒಬ್ಬ ಅಧಿಕಾರಿ ಉಲ್ಲಂಘಿಸಿದ. ಇಂದು ಅಮಾನತು ಆಗಿ ಮನೆಯಲ್ಲಿ ಇದ್ದಾನೆ. ಕಾನೂನು ಭಂಜಕ ಪೊಲೀಸ್ ಅಧಿಕಾರಿಗಳಿಗೆ ಇದು ಎಚ್ಚರಿಕೆ. ಕಾನೂನು ಪಾಲಿಸಿ; ಕರ್ತವ್ಯ ನಿಭಾಯಿಸಿ. ಖಾಕಿ ಬಟ್ಟೆ ಹಾಕಿಕೊಂಡ ಮಾತ್ರಕ್ಕೆ ಪೊಲೀಸರು ಸಮಾಜೋದ್ಧಾರಕರಲ್ಲ. ಸ್ವಾಭಿಮಾನಿ ಜನತೆ ಪೊಲೀಸರನ್ನು ಸನ್ಮಾನಿಸುವ, ಹೊಗಳುವ, ಅವರನ್ನು ತಲೆಯ ಮೇಲಿಟ್ಟುಕೊಂಡು ಮೆರೆಸುವ ಗುಲಾಮಿ ಮನಸ್ಥಿತಿಯನ್ನು ತೊರೆಯಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೇರಳ: ಮಹಿಳೆಯರ ಸುರಕ್ಷತೆಗಾಗಿ ಪಿಂಕ್ ಪ್ರೊಟೆಕ್ಷನ್ ಯೋಜನೆ ಆರಂಭ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...