Homeಮುಖಪುಟಪಿಎಸ್‌ಐ ನೇಮಕಾತಿ ಅಕ್ರಮ; ಸಿಐಡಿ ಅಧಿಕಾರಿಗಳ ನೋಟಿಸ್‌ ಕುರಿತು ಪ್ರಿಯಾಂಕ್ ವ್ಯಂಗ್ಯ

ಪಿಎಸ್‌ಐ ನೇಮಕಾತಿ ಅಕ್ರಮ; ಸಿಐಡಿ ಅಧಿಕಾರಿಗಳ ನೋಟಿಸ್‌ ಕುರಿತು ಪ್ರಿಯಾಂಕ್ ವ್ಯಂಗ್ಯ

- Advertisement -
- Advertisement -

ನಿನ್ನೆ ಸಂಜೆ ನನ್ನ ನಿವಾಸಕ್ಕೆ ಸಿಐಡಿ ಅಧಿಕಾರಿಗಳು ನೋಟೀಸ್ ತಲುಪಿಸಿದ್ದು, ಈ ನೋಟೀಸ್ ಸರ್ಕಾರ ಹಾಗೂ ಗೃಹ ಇಲಾಖೆಯ ಕಾರ್ಯವೈಖರಿ, ಅಸಮರ್ಥತೆಗೆ ಸಾಕ್ಷಿಯಾಗಿದೆ ಎಂದು ಕಾಂಗ್ರೆಸ್ ನಾಯಕ ಪ್ರಿಯಾಂಕ್‌ ಖರ್ಗೆ ವ್ಯಂಗ್ಯವಾಡಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿ ನಡೆಸಿರುವ ಪ್ರಿಯಾಂಕ್,  ಅಧಿಕಾರಿಗಳು ನೋಟಿಸ್‌ನಲ್ಲಿ ‘ತಾವು ದಿನಾಂಕ 23-04-2022ರಂದು ಪತ್ರಿಕಾಗೋಷ್ಠಿ ನಡೆಸಿ 3-10-2021ರಂದು ನಡೆದ 541 ಸಿವಿಲ್ ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ನಡೆದಿದ್ದು, ತಮ್ಮ ಬಳಿ ಸಾಕ್ಷ್ಯವಿರುವುದಾಗಿ ಮಾಹಿತಿ ನೀಡಿದ್ದೀರಿ. ಈ ಪ್ರಕರಣ ಬಹಳ ಸೂಕ್ಷ್ಮ ಹಾಗೂ ಗಂಭೀರವಾಗಿದೆ. ಲಭ್ಯವಿರುವ ಎಲ್ಲ ಮಾಹಿತಿ ತ್ವರಿತಗತಿಯಲ್ಲಿ ಸಂಗ್ರಹಿಸುವ ಅಗತ್ಯವಿರುವುದರಿಂದ ತಮ್ಮ ಬಳಿ ಇರುವ ಸಾಕ್ಷಿ ಹಾಗೂ ದಾಖಲೆ ಪರಿಶೀಲಿಸಿ ತನಿಖೆ ಕೈಗೊಳ್ಳುವುದು ಅತಿ ಅವಶ್ಯವಾಗಿದೆ. ತನಿಖಾಧಿಕಾರಿಗಳು ದಾಖಲೆ ಸಂಗ್ರಹಿಸಲು ಸೂಚಿಸಿದ್ದು, ತಾವು ಇಂದು 11.30ಕ್ಕೆ ಹಾಜರಾಗಬೇಕು’ ಎಂದು ತಿಳಿಸಿದ್ದಾರೆ. ಇದು ಸರ್ಕಾರದ ಅಸಮರ್ಥತೆಗೆ ಸಾಕ್ಷಿಯಾಗಿದೆ ಎಂದರು.

ಸರ್ಕಾರ ಹಾಗೂ ತನಿಖಾಧಿಕಾರಿಗಳು ನಾನು ಇದುವರೆಗೂ ಈ ವಿಚಾರವಾಗಿ ನಡೆಸಿರುವ ಪತ್ರಿಕಾಗೋಷ್ಠಿಯನ್ನು ಕಣ್ಣು ತೆರೆದು, ಕಿವಿಗೊಟ್ಟಿ ನೋಡಬೇಕು ಎಂದು ಹೇಳಲು ಬಯಸುತ್ತೇನೆ. ನಾನು ಯಾವುದೇ ತನಿಖೆ ಮಾಡಿ, ಸಾರ್ವಜನಿಕ ವಲಯಕ್ಕೆ ಹೊರತುಪಡಿಸಿ ನನ್ನ ಬಳಿ ಸಾಕ್ಷ್ಯಾಧಾರಗಳಿವೆ ಎಂದು ಹೇಳಿಕೊಂಡಿಲ್ಲ. ನಾನು ಸಾರ್ವಜನಿಕ ವಲಯದಲ್ಲಿ ಲಭ್ಯವಿರುವ ಸಾಕ್ಷ್ಯಾಧಾರಗಳನ್ನಷ್ಟೇ ಮಾಧ್ಯಮಗಳ ಮುಂದಿಟ್ಟಿದ್ದೇನೆ. ಸಾರ್ವಜನಿಕ ವಲಯಗಳಲ್ಲಿ ಇರುವ ಮಾಹಿತಿ ಅವರ ಬಳಿ ಇಲ್ಲ ಎಂದು ಹೇಳುತ್ತಿರುವುದು ಬಹಳ ಆಶ್ಚರ್ಯವಾಗುತ್ತಿದೆ ಎಂದು ತಿಳಿಸಿದ್ದಾರೆ.

ಜ.1ರಂದು ಅಭ್ಯರ್ಥಿಗಳು ಗೃಹ ಸಚಿವರನ್ನು ಭೇಟಿ ಮಾಡಿರುವ ಮಾಹಿತಿಯನ್ನು ಸಚಿವರೇ ಟ್ವೀಟ್ ಮಾಡಿದ್ದಾರೆ. ಜ.22ರಂದು ಗೃಹ ಸಚಿವರು ಶಿವಮೊಗ್ಗದಲ್ಲಿ ಈ ಪರೀಕ್ಷೆ ಪಾಸ್ ಮಾಡಲಾಗದವರು ಅಸೂಯೆಯಿಂದ ಅಕ್ರಮ ನಡೆದಿರುವ ಆರೋಪ ಮಾಡಿದ್ದಾರೆ ಎಂದು ಬೇಜವಾಬ್ದಾರಿ ಹೇಳಿಕೆ ಕೊಟ್ಟಿದ್ದಾರೆ. ಜ.29ರಂದು ಆರ್ಟಿಕಲ್ 371 ಮೀಸಲಾತಿ ವಿಚಾರವಾಗಿ ಸರ್ಕಾರಕ್ಕೆ ವರದಿ ಬಂದಿತ್ತು. ಫೆ.7ರಂದು ನೇಮಕಾತಿಯನ್ನು ಗೃಹ ಇಲಾಖೆಯೇ ತಡೆ ಹಿಡಿದಿದೆ ಎಂದು ನೆನಪಿಸಿದ್ದಾರೆ.

3-2-2022ರಲ್ಲಿ ಸಚಿವ ಪ್ರಭು ಚೌಹಾಣ್ ಅವರು ಈ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುತ್ತಾರೆ. 10-3-2022ರಂದು ಸುಶೀಲ್ ನಮೋಶಿ ಅವರಿಗೆ ಹಾಗೂ ರವಿ ಅವರ ಪ್ರಶ್ನೆಗಳಿಗೆ ಗೃಹ ಸಚಿವರು ಮೇಲ್ಮನೆಯಲ್ಲಿ ಭಿನ್ನ ಉತ್ತರ ಕೊಟ್ಟಿದ್ದಾರೆ. ಮಾರ್ಚ್ 24ರಂದು ಯು.ಬಿ ವೆಂಕಟೇಶ್ ಅವರ ಪ್ರಶ್ನೆಗೆ ಈ ನೇಮಕಾತಿ ಸುಗಮವಾಗಿ ಸಾಗುತ್ತಿದೆ ಎಂದು ಗೃಹ ಸಚಿವರು ಉತ್ತರ ಕೊಟ್ಟಿದ್ದೀರಿ. ಏ.9ರಂದು ಚೈಕ್ ಪೋಲೀಸ್ ಠಾಣೆಯಲ್ಲಿ ಪೊಲೀಸ್ ಅಧಿಕಾರಿಗಳು ದೂರು ದಾಖಲಿಸಿದ್ದರು. ಇವಿಷ್ಟು ನಾನು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಕೊಟ್ಟ ದಾಖಲೆಗಳು. ಇದ್ಯಾವುದೂ ಸರ್ಕಾರದ ಬಳಿ ಇಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಸಂಭಾವ್ಯ ಪಟ್ಟಿಯಲ್ಲಿ ಹೆಸರಿರುವ ಅಭ್ಯರ್ಥಿ ಇನ್ನು ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳುವ ಮುನ್ನವೇ ಪೊಲೀಸ್ ಸಮವಸ್ತ್ರ ಧರಿಸಿಕೊಂಡು ಓಡಾಡುತ್ತಿರುವ ಮಾಹಿತಿ ಇಲಾಖೆ ಬಳಿ ಇಲ್ಲವೇ? ಎಬಿವಿಪಿ ಕಾರ್ಯಕರ್ತ ಅರುಣ್ ಅಂತಿಮ ಪಟ್ಟಿಯಲ್ಲಿ ಹೆಸರು ಬಂದಿರುವ ಮಾಹಿತಿ ನಮಗೆ ಲಭ್ಯವಾಗಿದ್ದು, ನಿಮಗೆ ಲಭ್ಯವಾಗಿಲ್ಲವೇ? ನನಗೆ ಪತ್ರಿಕೆಗಳು, ಸಾಮಾಜಿಕ ಜಾಲತಾಣಗಳ ಮೂಲಕ ಈ ಎಲ್ಲ ದಾಖಲೆಗಳು, ಪರೀಕ್ಷೆಯ ಒಎಂಆರ್ ಪತ್ರಿಕೆಗಳು ಲಭ್ಯವಾಗುತ್ತಿದ್ದು, ನಿಮಗೆ ಲಭ್ಯವಾಗಿಲ್ಲವೇ? ಎಂದು ಕೇಳಿದ್ದಾರೆ.

ಈ ಪ್ರಕರಣದಲ್ಲಿ ದಿವ್ಯಾ ಹಾಗರಗಿ ಅವರ ಹೆಸರು ಕೇಳಿಬಂತು, ನಂತರ ಮಾಹಂತೇಶ್ ಪಾಟೀಲ್, ಆರ್.ಡಿ ಪಾಟೀಲ್ ಬಂಧನವಾದರು. ನಾವು ಬಿಡುಗಡೆ ಮಾಡಿದ ಆಡಿಯೋ ಸಾಮಾಜಿಕ ಜಾಲತಾಣದಲ್ಲಿತ್ತು. ಅಲ್ಲದೇ ನಾವು ಬಿಡುಗಡೆಗೂ ಮುನ್ನ ಅಂದಿನ ಕನ್ನಡ ಪ್ರಭ ಪತ್ರಿಕೆಯಲ್ಲಿ ಆ ಬಗ್ಗೆ ವರದಿ ಬಂದಿತ್ತು. ಆಮೂಲಕ ಆ ವಿಚಾರ ಸಾರ್ವಜನಿಕ ವಲಯದಲ್ಲಿತ್ತು. ನಾನು ಈ ಆಡಿಯೋವನ್ನು ರಹಸ್ಯ ಕಾರ್ಯಾಚರಣೆ ಮೂಲಕ ಮಾಡಿಲ್ಲವಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಜಾಮೀನು ದೊರೆತ ಬಳಿಕ ಮತ್ತೊಮ್ಮೆ ಜಿಗ್ನೇಶ್‌ ಮೇವಾನಿಯ ಬಂಧನ

ಆ ಆಡಿಯೋದಲ್ಲಿ ಒಬ್ಬ ಅಭ್ಯರ್ಥಿ ನಾವು ಇದರಲ್ಲಿ ಸಿಕ್ಕಿಕೊಳ್ಳುವುದಿಲ್ಲವಲ್ಲವೇ ಎಂದು ಕೇಳಿದಾಗ, ಮಧ್ಯವರ್ತಿ, ಇದರಲ್ಲಿ ಮೇಲಿಂದ ಕೆಳಗಿನವರೆಗೂ ಎಲ್ಲ ಪ್ರಭಾವಿವ್ಯಕ್ತಿಗಳಿದ್ದು, ಸಿಕ್ಕಿಬೀಳುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ. 545 ನೇಮಕಾತಿಯಲ್ಲಿ ಪರೀಕ್ಷೆ ನಡೆಸುವವರು ಭಾಗಿಯಾಗಿದ್ದಾರೆ ಎಂಬ ಮಾತುಗಳಿವೆ. ಇದೆಲ್ಲವೂ ರಾಜ್ಯ ಗುಪ್ತಚರ ಇಲಾಖೆ ಎಷ್ಟು ದುರ್ಬಲವಾಗಿದೆ ಎಂಬುದಕ್ಕೆ ಸಾಕ್ಷಿ. ಈ ಹಿಂದೆ ಗುಪ್ತಚರ ಇಲಾಖೆಗೆ ತನ್ನದೇ ಆದ ಮೂಲ, ಸೂತ್ರಗಳಿರುತ್ತಿದ್ದವು. ಆದರೆ ಈಗ ಪತ್ರಿಕೆ ವರದಿ, ಮಾಧ್ಯಮ ವರದಿ ನೋಡಿ ಸರ್ಕಾರಕ್ಕೆ ಮಾಹಿತಿ ನೀಡುತ್ತಿವೆ. ಇವರಿಗೆ ಸಾಮಾನ್ಯ ಪ್ರಜ್ಞೆಯೂ ಇಲ್ಲವಾಗಿದೆ ಎಂದು ಕುಟುಕಿದ್ದಾರೆ.

ಆಡಿಯೋದಲ್ಲಿ ಶ್ರೀಶೈಲ ಬಿರಾದಾರ್ ಎಂಬ ಅಭ್ಯರ್ಥಿ ಮಧ್ಯವರ್ತಿ ಜತೆ ಮಾತನಾಡಿದ್ದಾರೆ ಎಂಬ ಮಾಹಿತಿ ಸರ್ಕಾರದ ಬಳಿ ಇಲ್ಲವೇ? ಇವರು ಕಣ್ಣಮುಂದೆ ಇರುವ ಸಾಕ್ಷಿಗಳನ್ನು ನೋಡಲು ತಯಾರಿಲ್ಲ. ಹೀಗಾಗಿ ನಾನು ಕಾಲಾನುಕ್ರಮವಾಗಿ ಸರ್ಕಾರಿ ದಾಖಲೆ, ಸಚಿವರ ಹೇಳಿಕೆ, ಅಧಿಕಾರಿಗಳ ಹೇಳಿಕೆಯನ್ನು ಜನರ ಮುಂದೆ ಇಟ್ಟಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...