Homeಮುಖಪುಟಪಿಎಸ್‌ಐ ನೇಮಕಾತಿ ಅಕ್ರಮ; ಸಿಐಡಿ ಅಧಿಕಾರಿಗಳ ನೋಟಿಸ್‌ ಕುರಿತು ಪ್ರಿಯಾಂಕ್ ವ್ಯಂಗ್ಯ

ಪಿಎಸ್‌ಐ ನೇಮಕಾತಿ ಅಕ್ರಮ; ಸಿಐಡಿ ಅಧಿಕಾರಿಗಳ ನೋಟಿಸ್‌ ಕುರಿತು ಪ್ರಿಯಾಂಕ್ ವ್ಯಂಗ್ಯ

- Advertisement -
- Advertisement -

ನಿನ್ನೆ ಸಂಜೆ ನನ್ನ ನಿವಾಸಕ್ಕೆ ಸಿಐಡಿ ಅಧಿಕಾರಿಗಳು ನೋಟೀಸ್ ತಲುಪಿಸಿದ್ದು, ಈ ನೋಟೀಸ್ ಸರ್ಕಾರ ಹಾಗೂ ಗೃಹ ಇಲಾಖೆಯ ಕಾರ್ಯವೈಖರಿ, ಅಸಮರ್ಥತೆಗೆ ಸಾಕ್ಷಿಯಾಗಿದೆ ಎಂದು ಕಾಂಗ್ರೆಸ್ ನಾಯಕ ಪ್ರಿಯಾಂಕ್‌ ಖರ್ಗೆ ವ್ಯಂಗ್ಯವಾಡಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿ ನಡೆಸಿರುವ ಪ್ರಿಯಾಂಕ್,  ಅಧಿಕಾರಿಗಳು ನೋಟಿಸ್‌ನಲ್ಲಿ ‘ತಾವು ದಿನಾಂಕ 23-04-2022ರಂದು ಪತ್ರಿಕಾಗೋಷ್ಠಿ ನಡೆಸಿ 3-10-2021ರಂದು ನಡೆದ 541 ಸಿವಿಲ್ ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ನಡೆದಿದ್ದು, ತಮ್ಮ ಬಳಿ ಸಾಕ್ಷ್ಯವಿರುವುದಾಗಿ ಮಾಹಿತಿ ನೀಡಿದ್ದೀರಿ. ಈ ಪ್ರಕರಣ ಬಹಳ ಸೂಕ್ಷ್ಮ ಹಾಗೂ ಗಂಭೀರವಾಗಿದೆ. ಲಭ್ಯವಿರುವ ಎಲ್ಲ ಮಾಹಿತಿ ತ್ವರಿತಗತಿಯಲ್ಲಿ ಸಂಗ್ರಹಿಸುವ ಅಗತ್ಯವಿರುವುದರಿಂದ ತಮ್ಮ ಬಳಿ ಇರುವ ಸಾಕ್ಷಿ ಹಾಗೂ ದಾಖಲೆ ಪರಿಶೀಲಿಸಿ ತನಿಖೆ ಕೈಗೊಳ್ಳುವುದು ಅತಿ ಅವಶ್ಯವಾಗಿದೆ. ತನಿಖಾಧಿಕಾರಿಗಳು ದಾಖಲೆ ಸಂಗ್ರಹಿಸಲು ಸೂಚಿಸಿದ್ದು, ತಾವು ಇಂದು 11.30ಕ್ಕೆ ಹಾಜರಾಗಬೇಕು’ ಎಂದು ತಿಳಿಸಿದ್ದಾರೆ. ಇದು ಸರ್ಕಾರದ ಅಸಮರ್ಥತೆಗೆ ಸಾಕ್ಷಿಯಾಗಿದೆ ಎಂದರು.

ಸರ್ಕಾರ ಹಾಗೂ ತನಿಖಾಧಿಕಾರಿಗಳು ನಾನು ಇದುವರೆಗೂ ಈ ವಿಚಾರವಾಗಿ ನಡೆಸಿರುವ ಪತ್ರಿಕಾಗೋಷ್ಠಿಯನ್ನು ಕಣ್ಣು ತೆರೆದು, ಕಿವಿಗೊಟ್ಟಿ ನೋಡಬೇಕು ಎಂದು ಹೇಳಲು ಬಯಸುತ್ತೇನೆ. ನಾನು ಯಾವುದೇ ತನಿಖೆ ಮಾಡಿ, ಸಾರ್ವಜನಿಕ ವಲಯಕ್ಕೆ ಹೊರತುಪಡಿಸಿ ನನ್ನ ಬಳಿ ಸಾಕ್ಷ್ಯಾಧಾರಗಳಿವೆ ಎಂದು ಹೇಳಿಕೊಂಡಿಲ್ಲ. ನಾನು ಸಾರ್ವಜನಿಕ ವಲಯದಲ್ಲಿ ಲಭ್ಯವಿರುವ ಸಾಕ್ಷ್ಯಾಧಾರಗಳನ್ನಷ್ಟೇ ಮಾಧ್ಯಮಗಳ ಮುಂದಿಟ್ಟಿದ್ದೇನೆ. ಸಾರ್ವಜನಿಕ ವಲಯಗಳಲ್ಲಿ ಇರುವ ಮಾಹಿತಿ ಅವರ ಬಳಿ ಇಲ್ಲ ಎಂದು ಹೇಳುತ್ತಿರುವುದು ಬಹಳ ಆಶ್ಚರ್ಯವಾಗುತ್ತಿದೆ ಎಂದು ತಿಳಿಸಿದ್ದಾರೆ.

ಜ.1ರಂದು ಅಭ್ಯರ್ಥಿಗಳು ಗೃಹ ಸಚಿವರನ್ನು ಭೇಟಿ ಮಾಡಿರುವ ಮಾಹಿತಿಯನ್ನು ಸಚಿವರೇ ಟ್ವೀಟ್ ಮಾಡಿದ್ದಾರೆ. ಜ.22ರಂದು ಗೃಹ ಸಚಿವರು ಶಿವಮೊಗ್ಗದಲ್ಲಿ ಈ ಪರೀಕ್ಷೆ ಪಾಸ್ ಮಾಡಲಾಗದವರು ಅಸೂಯೆಯಿಂದ ಅಕ್ರಮ ನಡೆದಿರುವ ಆರೋಪ ಮಾಡಿದ್ದಾರೆ ಎಂದು ಬೇಜವಾಬ್ದಾರಿ ಹೇಳಿಕೆ ಕೊಟ್ಟಿದ್ದಾರೆ. ಜ.29ರಂದು ಆರ್ಟಿಕಲ್ 371 ಮೀಸಲಾತಿ ವಿಚಾರವಾಗಿ ಸರ್ಕಾರಕ್ಕೆ ವರದಿ ಬಂದಿತ್ತು. ಫೆ.7ರಂದು ನೇಮಕಾತಿಯನ್ನು ಗೃಹ ಇಲಾಖೆಯೇ ತಡೆ ಹಿಡಿದಿದೆ ಎಂದು ನೆನಪಿಸಿದ್ದಾರೆ.

3-2-2022ರಲ್ಲಿ ಸಚಿವ ಪ್ರಭು ಚೌಹಾಣ್ ಅವರು ಈ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುತ್ತಾರೆ. 10-3-2022ರಂದು ಸುಶೀಲ್ ನಮೋಶಿ ಅವರಿಗೆ ಹಾಗೂ ರವಿ ಅವರ ಪ್ರಶ್ನೆಗಳಿಗೆ ಗೃಹ ಸಚಿವರು ಮೇಲ್ಮನೆಯಲ್ಲಿ ಭಿನ್ನ ಉತ್ತರ ಕೊಟ್ಟಿದ್ದಾರೆ. ಮಾರ್ಚ್ 24ರಂದು ಯು.ಬಿ ವೆಂಕಟೇಶ್ ಅವರ ಪ್ರಶ್ನೆಗೆ ಈ ನೇಮಕಾತಿ ಸುಗಮವಾಗಿ ಸಾಗುತ್ತಿದೆ ಎಂದು ಗೃಹ ಸಚಿವರು ಉತ್ತರ ಕೊಟ್ಟಿದ್ದೀರಿ. ಏ.9ರಂದು ಚೈಕ್ ಪೋಲೀಸ್ ಠಾಣೆಯಲ್ಲಿ ಪೊಲೀಸ್ ಅಧಿಕಾರಿಗಳು ದೂರು ದಾಖಲಿಸಿದ್ದರು. ಇವಿಷ್ಟು ನಾನು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಕೊಟ್ಟ ದಾಖಲೆಗಳು. ಇದ್ಯಾವುದೂ ಸರ್ಕಾರದ ಬಳಿ ಇಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಸಂಭಾವ್ಯ ಪಟ್ಟಿಯಲ್ಲಿ ಹೆಸರಿರುವ ಅಭ್ಯರ್ಥಿ ಇನ್ನು ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳುವ ಮುನ್ನವೇ ಪೊಲೀಸ್ ಸಮವಸ್ತ್ರ ಧರಿಸಿಕೊಂಡು ಓಡಾಡುತ್ತಿರುವ ಮಾಹಿತಿ ಇಲಾಖೆ ಬಳಿ ಇಲ್ಲವೇ? ಎಬಿವಿಪಿ ಕಾರ್ಯಕರ್ತ ಅರುಣ್ ಅಂತಿಮ ಪಟ್ಟಿಯಲ್ಲಿ ಹೆಸರು ಬಂದಿರುವ ಮಾಹಿತಿ ನಮಗೆ ಲಭ್ಯವಾಗಿದ್ದು, ನಿಮಗೆ ಲಭ್ಯವಾಗಿಲ್ಲವೇ? ನನಗೆ ಪತ್ರಿಕೆಗಳು, ಸಾಮಾಜಿಕ ಜಾಲತಾಣಗಳ ಮೂಲಕ ಈ ಎಲ್ಲ ದಾಖಲೆಗಳು, ಪರೀಕ್ಷೆಯ ಒಎಂಆರ್ ಪತ್ರಿಕೆಗಳು ಲಭ್ಯವಾಗುತ್ತಿದ್ದು, ನಿಮಗೆ ಲಭ್ಯವಾಗಿಲ್ಲವೇ? ಎಂದು ಕೇಳಿದ್ದಾರೆ.

ಈ ಪ್ರಕರಣದಲ್ಲಿ ದಿವ್ಯಾ ಹಾಗರಗಿ ಅವರ ಹೆಸರು ಕೇಳಿಬಂತು, ನಂತರ ಮಾಹಂತೇಶ್ ಪಾಟೀಲ್, ಆರ್.ಡಿ ಪಾಟೀಲ್ ಬಂಧನವಾದರು. ನಾವು ಬಿಡುಗಡೆ ಮಾಡಿದ ಆಡಿಯೋ ಸಾಮಾಜಿಕ ಜಾಲತಾಣದಲ್ಲಿತ್ತು. ಅಲ್ಲದೇ ನಾವು ಬಿಡುಗಡೆಗೂ ಮುನ್ನ ಅಂದಿನ ಕನ್ನಡ ಪ್ರಭ ಪತ್ರಿಕೆಯಲ್ಲಿ ಆ ಬಗ್ಗೆ ವರದಿ ಬಂದಿತ್ತು. ಆಮೂಲಕ ಆ ವಿಚಾರ ಸಾರ್ವಜನಿಕ ವಲಯದಲ್ಲಿತ್ತು. ನಾನು ಈ ಆಡಿಯೋವನ್ನು ರಹಸ್ಯ ಕಾರ್ಯಾಚರಣೆ ಮೂಲಕ ಮಾಡಿಲ್ಲವಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಜಾಮೀನು ದೊರೆತ ಬಳಿಕ ಮತ್ತೊಮ್ಮೆ ಜಿಗ್ನೇಶ್‌ ಮೇವಾನಿಯ ಬಂಧನ

ಆ ಆಡಿಯೋದಲ್ಲಿ ಒಬ್ಬ ಅಭ್ಯರ್ಥಿ ನಾವು ಇದರಲ್ಲಿ ಸಿಕ್ಕಿಕೊಳ್ಳುವುದಿಲ್ಲವಲ್ಲವೇ ಎಂದು ಕೇಳಿದಾಗ, ಮಧ್ಯವರ್ತಿ, ಇದರಲ್ಲಿ ಮೇಲಿಂದ ಕೆಳಗಿನವರೆಗೂ ಎಲ್ಲ ಪ್ರಭಾವಿವ್ಯಕ್ತಿಗಳಿದ್ದು, ಸಿಕ್ಕಿಬೀಳುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ. 545 ನೇಮಕಾತಿಯಲ್ಲಿ ಪರೀಕ್ಷೆ ನಡೆಸುವವರು ಭಾಗಿಯಾಗಿದ್ದಾರೆ ಎಂಬ ಮಾತುಗಳಿವೆ. ಇದೆಲ್ಲವೂ ರಾಜ್ಯ ಗುಪ್ತಚರ ಇಲಾಖೆ ಎಷ್ಟು ದುರ್ಬಲವಾಗಿದೆ ಎಂಬುದಕ್ಕೆ ಸಾಕ್ಷಿ. ಈ ಹಿಂದೆ ಗುಪ್ತಚರ ಇಲಾಖೆಗೆ ತನ್ನದೇ ಆದ ಮೂಲ, ಸೂತ್ರಗಳಿರುತ್ತಿದ್ದವು. ಆದರೆ ಈಗ ಪತ್ರಿಕೆ ವರದಿ, ಮಾಧ್ಯಮ ವರದಿ ನೋಡಿ ಸರ್ಕಾರಕ್ಕೆ ಮಾಹಿತಿ ನೀಡುತ್ತಿವೆ. ಇವರಿಗೆ ಸಾಮಾನ್ಯ ಪ್ರಜ್ಞೆಯೂ ಇಲ್ಲವಾಗಿದೆ ಎಂದು ಕುಟುಕಿದ್ದಾರೆ.

ಆಡಿಯೋದಲ್ಲಿ ಶ್ರೀಶೈಲ ಬಿರಾದಾರ್ ಎಂಬ ಅಭ್ಯರ್ಥಿ ಮಧ್ಯವರ್ತಿ ಜತೆ ಮಾತನಾಡಿದ್ದಾರೆ ಎಂಬ ಮಾಹಿತಿ ಸರ್ಕಾರದ ಬಳಿ ಇಲ್ಲವೇ? ಇವರು ಕಣ್ಣಮುಂದೆ ಇರುವ ಸಾಕ್ಷಿಗಳನ್ನು ನೋಡಲು ತಯಾರಿಲ್ಲ. ಹೀಗಾಗಿ ನಾನು ಕಾಲಾನುಕ್ರಮವಾಗಿ ಸರ್ಕಾರಿ ದಾಖಲೆ, ಸಚಿವರ ಹೇಳಿಕೆ, ಅಧಿಕಾರಿಗಳ ಹೇಳಿಕೆಯನ್ನು ಜನರ ಮುಂದೆ ಇಟ್ಟಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...