Homeಮುಖಪುಟಪಿಎಸ್‌ಐ ನೇಮಕಾತಿ ಅಕ್ರಮ; ಸಿಐಡಿ ಅಧಿಕಾರಿಗಳ ನೋಟಿಸ್‌ ಕುರಿತು ಪ್ರಿಯಾಂಕ್ ವ್ಯಂಗ್ಯ

ಪಿಎಸ್‌ಐ ನೇಮಕಾತಿ ಅಕ್ರಮ; ಸಿಐಡಿ ಅಧಿಕಾರಿಗಳ ನೋಟಿಸ್‌ ಕುರಿತು ಪ್ರಿಯಾಂಕ್ ವ್ಯಂಗ್ಯ

- Advertisement -
- Advertisement -

ನಿನ್ನೆ ಸಂಜೆ ನನ್ನ ನಿವಾಸಕ್ಕೆ ಸಿಐಡಿ ಅಧಿಕಾರಿಗಳು ನೋಟೀಸ್ ತಲುಪಿಸಿದ್ದು, ಈ ನೋಟೀಸ್ ಸರ್ಕಾರ ಹಾಗೂ ಗೃಹ ಇಲಾಖೆಯ ಕಾರ್ಯವೈಖರಿ, ಅಸಮರ್ಥತೆಗೆ ಸಾಕ್ಷಿಯಾಗಿದೆ ಎಂದು ಕಾಂಗ್ರೆಸ್ ನಾಯಕ ಪ್ರಿಯಾಂಕ್‌ ಖರ್ಗೆ ವ್ಯಂಗ್ಯವಾಡಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿ ನಡೆಸಿರುವ ಪ್ರಿಯಾಂಕ್,  ಅಧಿಕಾರಿಗಳು ನೋಟಿಸ್‌ನಲ್ಲಿ ‘ತಾವು ದಿನಾಂಕ 23-04-2022ರಂದು ಪತ್ರಿಕಾಗೋಷ್ಠಿ ನಡೆಸಿ 3-10-2021ರಂದು ನಡೆದ 541 ಸಿವಿಲ್ ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ನಡೆದಿದ್ದು, ತಮ್ಮ ಬಳಿ ಸಾಕ್ಷ್ಯವಿರುವುದಾಗಿ ಮಾಹಿತಿ ನೀಡಿದ್ದೀರಿ. ಈ ಪ್ರಕರಣ ಬಹಳ ಸೂಕ್ಷ್ಮ ಹಾಗೂ ಗಂಭೀರವಾಗಿದೆ. ಲಭ್ಯವಿರುವ ಎಲ್ಲ ಮಾಹಿತಿ ತ್ವರಿತಗತಿಯಲ್ಲಿ ಸಂಗ್ರಹಿಸುವ ಅಗತ್ಯವಿರುವುದರಿಂದ ತಮ್ಮ ಬಳಿ ಇರುವ ಸಾಕ್ಷಿ ಹಾಗೂ ದಾಖಲೆ ಪರಿಶೀಲಿಸಿ ತನಿಖೆ ಕೈಗೊಳ್ಳುವುದು ಅತಿ ಅವಶ್ಯವಾಗಿದೆ. ತನಿಖಾಧಿಕಾರಿಗಳು ದಾಖಲೆ ಸಂಗ್ರಹಿಸಲು ಸೂಚಿಸಿದ್ದು, ತಾವು ಇಂದು 11.30ಕ್ಕೆ ಹಾಜರಾಗಬೇಕು’ ಎಂದು ತಿಳಿಸಿದ್ದಾರೆ. ಇದು ಸರ್ಕಾರದ ಅಸಮರ್ಥತೆಗೆ ಸಾಕ್ಷಿಯಾಗಿದೆ ಎಂದರು.

ಸರ್ಕಾರ ಹಾಗೂ ತನಿಖಾಧಿಕಾರಿಗಳು ನಾನು ಇದುವರೆಗೂ ಈ ವಿಚಾರವಾಗಿ ನಡೆಸಿರುವ ಪತ್ರಿಕಾಗೋಷ್ಠಿಯನ್ನು ಕಣ್ಣು ತೆರೆದು, ಕಿವಿಗೊಟ್ಟಿ ನೋಡಬೇಕು ಎಂದು ಹೇಳಲು ಬಯಸುತ್ತೇನೆ. ನಾನು ಯಾವುದೇ ತನಿಖೆ ಮಾಡಿ, ಸಾರ್ವಜನಿಕ ವಲಯಕ್ಕೆ ಹೊರತುಪಡಿಸಿ ನನ್ನ ಬಳಿ ಸಾಕ್ಷ್ಯಾಧಾರಗಳಿವೆ ಎಂದು ಹೇಳಿಕೊಂಡಿಲ್ಲ. ನಾನು ಸಾರ್ವಜನಿಕ ವಲಯದಲ್ಲಿ ಲಭ್ಯವಿರುವ ಸಾಕ್ಷ್ಯಾಧಾರಗಳನ್ನಷ್ಟೇ ಮಾಧ್ಯಮಗಳ ಮುಂದಿಟ್ಟಿದ್ದೇನೆ. ಸಾರ್ವಜನಿಕ ವಲಯಗಳಲ್ಲಿ ಇರುವ ಮಾಹಿತಿ ಅವರ ಬಳಿ ಇಲ್ಲ ಎಂದು ಹೇಳುತ್ತಿರುವುದು ಬಹಳ ಆಶ್ಚರ್ಯವಾಗುತ್ತಿದೆ ಎಂದು ತಿಳಿಸಿದ್ದಾರೆ.

ಜ.1ರಂದು ಅಭ್ಯರ್ಥಿಗಳು ಗೃಹ ಸಚಿವರನ್ನು ಭೇಟಿ ಮಾಡಿರುವ ಮಾಹಿತಿಯನ್ನು ಸಚಿವರೇ ಟ್ವೀಟ್ ಮಾಡಿದ್ದಾರೆ. ಜ.22ರಂದು ಗೃಹ ಸಚಿವರು ಶಿವಮೊಗ್ಗದಲ್ಲಿ ಈ ಪರೀಕ್ಷೆ ಪಾಸ್ ಮಾಡಲಾಗದವರು ಅಸೂಯೆಯಿಂದ ಅಕ್ರಮ ನಡೆದಿರುವ ಆರೋಪ ಮಾಡಿದ್ದಾರೆ ಎಂದು ಬೇಜವಾಬ್ದಾರಿ ಹೇಳಿಕೆ ಕೊಟ್ಟಿದ್ದಾರೆ. ಜ.29ರಂದು ಆರ್ಟಿಕಲ್ 371 ಮೀಸಲಾತಿ ವಿಚಾರವಾಗಿ ಸರ್ಕಾರಕ್ಕೆ ವರದಿ ಬಂದಿತ್ತು. ಫೆ.7ರಂದು ನೇಮಕಾತಿಯನ್ನು ಗೃಹ ಇಲಾಖೆಯೇ ತಡೆ ಹಿಡಿದಿದೆ ಎಂದು ನೆನಪಿಸಿದ್ದಾರೆ.

3-2-2022ರಲ್ಲಿ ಸಚಿವ ಪ್ರಭು ಚೌಹಾಣ್ ಅವರು ಈ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುತ್ತಾರೆ. 10-3-2022ರಂದು ಸುಶೀಲ್ ನಮೋಶಿ ಅವರಿಗೆ ಹಾಗೂ ರವಿ ಅವರ ಪ್ರಶ್ನೆಗಳಿಗೆ ಗೃಹ ಸಚಿವರು ಮೇಲ್ಮನೆಯಲ್ಲಿ ಭಿನ್ನ ಉತ್ತರ ಕೊಟ್ಟಿದ್ದಾರೆ. ಮಾರ್ಚ್ 24ರಂದು ಯು.ಬಿ ವೆಂಕಟೇಶ್ ಅವರ ಪ್ರಶ್ನೆಗೆ ಈ ನೇಮಕಾತಿ ಸುಗಮವಾಗಿ ಸಾಗುತ್ತಿದೆ ಎಂದು ಗೃಹ ಸಚಿವರು ಉತ್ತರ ಕೊಟ್ಟಿದ್ದೀರಿ. ಏ.9ರಂದು ಚೈಕ್ ಪೋಲೀಸ್ ಠಾಣೆಯಲ್ಲಿ ಪೊಲೀಸ್ ಅಧಿಕಾರಿಗಳು ದೂರು ದಾಖಲಿಸಿದ್ದರು. ಇವಿಷ್ಟು ನಾನು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಕೊಟ್ಟ ದಾಖಲೆಗಳು. ಇದ್ಯಾವುದೂ ಸರ್ಕಾರದ ಬಳಿ ಇಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಸಂಭಾವ್ಯ ಪಟ್ಟಿಯಲ್ಲಿ ಹೆಸರಿರುವ ಅಭ್ಯರ್ಥಿ ಇನ್ನು ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳುವ ಮುನ್ನವೇ ಪೊಲೀಸ್ ಸಮವಸ್ತ್ರ ಧರಿಸಿಕೊಂಡು ಓಡಾಡುತ್ತಿರುವ ಮಾಹಿತಿ ಇಲಾಖೆ ಬಳಿ ಇಲ್ಲವೇ? ಎಬಿವಿಪಿ ಕಾರ್ಯಕರ್ತ ಅರುಣ್ ಅಂತಿಮ ಪಟ್ಟಿಯಲ್ಲಿ ಹೆಸರು ಬಂದಿರುವ ಮಾಹಿತಿ ನಮಗೆ ಲಭ್ಯವಾಗಿದ್ದು, ನಿಮಗೆ ಲಭ್ಯವಾಗಿಲ್ಲವೇ? ನನಗೆ ಪತ್ರಿಕೆಗಳು, ಸಾಮಾಜಿಕ ಜಾಲತಾಣಗಳ ಮೂಲಕ ಈ ಎಲ್ಲ ದಾಖಲೆಗಳು, ಪರೀಕ್ಷೆಯ ಒಎಂಆರ್ ಪತ್ರಿಕೆಗಳು ಲಭ್ಯವಾಗುತ್ತಿದ್ದು, ನಿಮಗೆ ಲಭ್ಯವಾಗಿಲ್ಲವೇ? ಎಂದು ಕೇಳಿದ್ದಾರೆ.

ಈ ಪ್ರಕರಣದಲ್ಲಿ ದಿವ್ಯಾ ಹಾಗರಗಿ ಅವರ ಹೆಸರು ಕೇಳಿಬಂತು, ನಂತರ ಮಾಹಂತೇಶ್ ಪಾಟೀಲ್, ಆರ್.ಡಿ ಪಾಟೀಲ್ ಬಂಧನವಾದರು. ನಾವು ಬಿಡುಗಡೆ ಮಾಡಿದ ಆಡಿಯೋ ಸಾಮಾಜಿಕ ಜಾಲತಾಣದಲ್ಲಿತ್ತು. ಅಲ್ಲದೇ ನಾವು ಬಿಡುಗಡೆಗೂ ಮುನ್ನ ಅಂದಿನ ಕನ್ನಡ ಪ್ರಭ ಪತ್ರಿಕೆಯಲ್ಲಿ ಆ ಬಗ್ಗೆ ವರದಿ ಬಂದಿತ್ತು. ಆಮೂಲಕ ಆ ವಿಚಾರ ಸಾರ್ವಜನಿಕ ವಲಯದಲ್ಲಿತ್ತು. ನಾನು ಈ ಆಡಿಯೋವನ್ನು ರಹಸ್ಯ ಕಾರ್ಯಾಚರಣೆ ಮೂಲಕ ಮಾಡಿಲ್ಲವಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಜಾಮೀನು ದೊರೆತ ಬಳಿಕ ಮತ್ತೊಮ್ಮೆ ಜಿಗ್ನೇಶ್‌ ಮೇವಾನಿಯ ಬಂಧನ

ಆ ಆಡಿಯೋದಲ್ಲಿ ಒಬ್ಬ ಅಭ್ಯರ್ಥಿ ನಾವು ಇದರಲ್ಲಿ ಸಿಕ್ಕಿಕೊಳ್ಳುವುದಿಲ್ಲವಲ್ಲವೇ ಎಂದು ಕೇಳಿದಾಗ, ಮಧ್ಯವರ್ತಿ, ಇದರಲ್ಲಿ ಮೇಲಿಂದ ಕೆಳಗಿನವರೆಗೂ ಎಲ್ಲ ಪ್ರಭಾವಿವ್ಯಕ್ತಿಗಳಿದ್ದು, ಸಿಕ್ಕಿಬೀಳುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ. 545 ನೇಮಕಾತಿಯಲ್ಲಿ ಪರೀಕ್ಷೆ ನಡೆಸುವವರು ಭಾಗಿಯಾಗಿದ್ದಾರೆ ಎಂಬ ಮಾತುಗಳಿವೆ. ಇದೆಲ್ಲವೂ ರಾಜ್ಯ ಗುಪ್ತಚರ ಇಲಾಖೆ ಎಷ್ಟು ದುರ್ಬಲವಾಗಿದೆ ಎಂಬುದಕ್ಕೆ ಸಾಕ್ಷಿ. ಈ ಹಿಂದೆ ಗುಪ್ತಚರ ಇಲಾಖೆಗೆ ತನ್ನದೇ ಆದ ಮೂಲ, ಸೂತ್ರಗಳಿರುತ್ತಿದ್ದವು. ಆದರೆ ಈಗ ಪತ್ರಿಕೆ ವರದಿ, ಮಾಧ್ಯಮ ವರದಿ ನೋಡಿ ಸರ್ಕಾರಕ್ಕೆ ಮಾಹಿತಿ ನೀಡುತ್ತಿವೆ. ಇವರಿಗೆ ಸಾಮಾನ್ಯ ಪ್ರಜ್ಞೆಯೂ ಇಲ್ಲವಾಗಿದೆ ಎಂದು ಕುಟುಕಿದ್ದಾರೆ.

ಆಡಿಯೋದಲ್ಲಿ ಶ್ರೀಶೈಲ ಬಿರಾದಾರ್ ಎಂಬ ಅಭ್ಯರ್ಥಿ ಮಧ್ಯವರ್ತಿ ಜತೆ ಮಾತನಾಡಿದ್ದಾರೆ ಎಂಬ ಮಾಹಿತಿ ಸರ್ಕಾರದ ಬಳಿ ಇಲ್ಲವೇ? ಇವರು ಕಣ್ಣಮುಂದೆ ಇರುವ ಸಾಕ್ಷಿಗಳನ್ನು ನೋಡಲು ತಯಾರಿಲ್ಲ. ಹೀಗಾಗಿ ನಾನು ಕಾಲಾನುಕ್ರಮವಾಗಿ ಸರ್ಕಾರಿ ದಾಖಲೆ, ಸಚಿವರ ಹೇಳಿಕೆ, ಅಧಿಕಾರಿಗಳ ಹೇಳಿಕೆಯನ್ನು ಜನರ ಮುಂದೆ ಇಟ್ಟಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...