Homeಮುಖಪುಟಪಿಎಸ್‌ಐ ನೇಮಕಾತಿ ಅಕ್ರಮ; ಸಿಐಡಿ ಅಧಿಕಾರಿಗಳ ನೋಟಿಸ್‌ ಕುರಿತು ಪ್ರಿಯಾಂಕ್ ವ್ಯಂಗ್ಯ

ಪಿಎಸ್‌ಐ ನೇಮಕಾತಿ ಅಕ್ರಮ; ಸಿಐಡಿ ಅಧಿಕಾರಿಗಳ ನೋಟಿಸ್‌ ಕುರಿತು ಪ್ರಿಯಾಂಕ್ ವ್ಯಂಗ್ಯ

- Advertisement -
- Advertisement -

ನಿನ್ನೆ ಸಂಜೆ ನನ್ನ ನಿವಾಸಕ್ಕೆ ಸಿಐಡಿ ಅಧಿಕಾರಿಗಳು ನೋಟೀಸ್ ತಲುಪಿಸಿದ್ದು, ಈ ನೋಟೀಸ್ ಸರ್ಕಾರ ಹಾಗೂ ಗೃಹ ಇಲಾಖೆಯ ಕಾರ್ಯವೈಖರಿ, ಅಸಮರ್ಥತೆಗೆ ಸಾಕ್ಷಿಯಾಗಿದೆ ಎಂದು ಕಾಂಗ್ರೆಸ್ ನಾಯಕ ಪ್ರಿಯಾಂಕ್‌ ಖರ್ಗೆ ವ್ಯಂಗ್ಯವಾಡಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿ ನಡೆಸಿರುವ ಪ್ರಿಯಾಂಕ್,  ಅಧಿಕಾರಿಗಳು ನೋಟಿಸ್‌ನಲ್ಲಿ ‘ತಾವು ದಿನಾಂಕ 23-04-2022ರಂದು ಪತ್ರಿಕಾಗೋಷ್ಠಿ ನಡೆಸಿ 3-10-2021ರಂದು ನಡೆದ 541 ಸಿವಿಲ್ ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ನಡೆದಿದ್ದು, ತಮ್ಮ ಬಳಿ ಸಾಕ್ಷ್ಯವಿರುವುದಾಗಿ ಮಾಹಿತಿ ನೀಡಿದ್ದೀರಿ. ಈ ಪ್ರಕರಣ ಬಹಳ ಸೂಕ್ಷ್ಮ ಹಾಗೂ ಗಂಭೀರವಾಗಿದೆ. ಲಭ್ಯವಿರುವ ಎಲ್ಲ ಮಾಹಿತಿ ತ್ವರಿತಗತಿಯಲ್ಲಿ ಸಂಗ್ರಹಿಸುವ ಅಗತ್ಯವಿರುವುದರಿಂದ ತಮ್ಮ ಬಳಿ ಇರುವ ಸಾಕ್ಷಿ ಹಾಗೂ ದಾಖಲೆ ಪರಿಶೀಲಿಸಿ ತನಿಖೆ ಕೈಗೊಳ್ಳುವುದು ಅತಿ ಅವಶ್ಯವಾಗಿದೆ. ತನಿಖಾಧಿಕಾರಿಗಳು ದಾಖಲೆ ಸಂಗ್ರಹಿಸಲು ಸೂಚಿಸಿದ್ದು, ತಾವು ಇಂದು 11.30ಕ್ಕೆ ಹಾಜರಾಗಬೇಕು’ ಎಂದು ತಿಳಿಸಿದ್ದಾರೆ. ಇದು ಸರ್ಕಾರದ ಅಸಮರ್ಥತೆಗೆ ಸಾಕ್ಷಿಯಾಗಿದೆ ಎಂದರು.

ಸರ್ಕಾರ ಹಾಗೂ ತನಿಖಾಧಿಕಾರಿಗಳು ನಾನು ಇದುವರೆಗೂ ಈ ವಿಚಾರವಾಗಿ ನಡೆಸಿರುವ ಪತ್ರಿಕಾಗೋಷ್ಠಿಯನ್ನು ಕಣ್ಣು ತೆರೆದು, ಕಿವಿಗೊಟ್ಟಿ ನೋಡಬೇಕು ಎಂದು ಹೇಳಲು ಬಯಸುತ್ತೇನೆ. ನಾನು ಯಾವುದೇ ತನಿಖೆ ಮಾಡಿ, ಸಾರ್ವಜನಿಕ ವಲಯಕ್ಕೆ ಹೊರತುಪಡಿಸಿ ನನ್ನ ಬಳಿ ಸಾಕ್ಷ್ಯಾಧಾರಗಳಿವೆ ಎಂದು ಹೇಳಿಕೊಂಡಿಲ್ಲ. ನಾನು ಸಾರ್ವಜನಿಕ ವಲಯದಲ್ಲಿ ಲಭ್ಯವಿರುವ ಸಾಕ್ಷ್ಯಾಧಾರಗಳನ್ನಷ್ಟೇ ಮಾಧ್ಯಮಗಳ ಮುಂದಿಟ್ಟಿದ್ದೇನೆ. ಸಾರ್ವಜನಿಕ ವಲಯಗಳಲ್ಲಿ ಇರುವ ಮಾಹಿತಿ ಅವರ ಬಳಿ ಇಲ್ಲ ಎಂದು ಹೇಳುತ್ತಿರುವುದು ಬಹಳ ಆಶ್ಚರ್ಯವಾಗುತ್ತಿದೆ ಎಂದು ತಿಳಿಸಿದ್ದಾರೆ.

ಜ.1ರಂದು ಅಭ್ಯರ್ಥಿಗಳು ಗೃಹ ಸಚಿವರನ್ನು ಭೇಟಿ ಮಾಡಿರುವ ಮಾಹಿತಿಯನ್ನು ಸಚಿವರೇ ಟ್ವೀಟ್ ಮಾಡಿದ್ದಾರೆ. ಜ.22ರಂದು ಗೃಹ ಸಚಿವರು ಶಿವಮೊಗ್ಗದಲ್ಲಿ ಈ ಪರೀಕ್ಷೆ ಪಾಸ್ ಮಾಡಲಾಗದವರು ಅಸೂಯೆಯಿಂದ ಅಕ್ರಮ ನಡೆದಿರುವ ಆರೋಪ ಮಾಡಿದ್ದಾರೆ ಎಂದು ಬೇಜವಾಬ್ದಾರಿ ಹೇಳಿಕೆ ಕೊಟ್ಟಿದ್ದಾರೆ. ಜ.29ರಂದು ಆರ್ಟಿಕಲ್ 371 ಮೀಸಲಾತಿ ವಿಚಾರವಾಗಿ ಸರ್ಕಾರಕ್ಕೆ ವರದಿ ಬಂದಿತ್ತು. ಫೆ.7ರಂದು ನೇಮಕಾತಿಯನ್ನು ಗೃಹ ಇಲಾಖೆಯೇ ತಡೆ ಹಿಡಿದಿದೆ ಎಂದು ನೆನಪಿಸಿದ್ದಾರೆ.

3-2-2022ರಲ್ಲಿ ಸಚಿವ ಪ್ರಭು ಚೌಹಾಣ್ ಅವರು ಈ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುತ್ತಾರೆ. 10-3-2022ರಂದು ಸುಶೀಲ್ ನಮೋಶಿ ಅವರಿಗೆ ಹಾಗೂ ರವಿ ಅವರ ಪ್ರಶ್ನೆಗಳಿಗೆ ಗೃಹ ಸಚಿವರು ಮೇಲ್ಮನೆಯಲ್ಲಿ ಭಿನ್ನ ಉತ್ತರ ಕೊಟ್ಟಿದ್ದಾರೆ. ಮಾರ್ಚ್ 24ರಂದು ಯು.ಬಿ ವೆಂಕಟೇಶ್ ಅವರ ಪ್ರಶ್ನೆಗೆ ಈ ನೇಮಕಾತಿ ಸುಗಮವಾಗಿ ಸಾಗುತ್ತಿದೆ ಎಂದು ಗೃಹ ಸಚಿವರು ಉತ್ತರ ಕೊಟ್ಟಿದ್ದೀರಿ. ಏ.9ರಂದು ಚೈಕ್ ಪೋಲೀಸ್ ಠಾಣೆಯಲ್ಲಿ ಪೊಲೀಸ್ ಅಧಿಕಾರಿಗಳು ದೂರು ದಾಖಲಿಸಿದ್ದರು. ಇವಿಷ್ಟು ನಾನು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಕೊಟ್ಟ ದಾಖಲೆಗಳು. ಇದ್ಯಾವುದೂ ಸರ್ಕಾರದ ಬಳಿ ಇಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಸಂಭಾವ್ಯ ಪಟ್ಟಿಯಲ್ಲಿ ಹೆಸರಿರುವ ಅಭ್ಯರ್ಥಿ ಇನ್ನು ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳುವ ಮುನ್ನವೇ ಪೊಲೀಸ್ ಸಮವಸ್ತ್ರ ಧರಿಸಿಕೊಂಡು ಓಡಾಡುತ್ತಿರುವ ಮಾಹಿತಿ ಇಲಾಖೆ ಬಳಿ ಇಲ್ಲವೇ? ಎಬಿವಿಪಿ ಕಾರ್ಯಕರ್ತ ಅರುಣ್ ಅಂತಿಮ ಪಟ್ಟಿಯಲ್ಲಿ ಹೆಸರು ಬಂದಿರುವ ಮಾಹಿತಿ ನಮಗೆ ಲಭ್ಯವಾಗಿದ್ದು, ನಿಮಗೆ ಲಭ್ಯವಾಗಿಲ್ಲವೇ? ನನಗೆ ಪತ್ರಿಕೆಗಳು, ಸಾಮಾಜಿಕ ಜಾಲತಾಣಗಳ ಮೂಲಕ ಈ ಎಲ್ಲ ದಾಖಲೆಗಳು, ಪರೀಕ್ಷೆಯ ಒಎಂಆರ್ ಪತ್ರಿಕೆಗಳು ಲಭ್ಯವಾಗುತ್ತಿದ್ದು, ನಿಮಗೆ ಲಭ್ಯವಾಗಿಲ್ಲವೇ? ಎಂದು ಕೇಳಿದ್ದಾರೆ.

ಈ ಪ್ರಕರಣದಲ್ಲಿ ದಿವ್ಯಾ ಹಾಗರಗಿ ಅವರ ಹೆಸರು ಕೇಳಿಬಂತು, ನಂತರ ಮಾಹಂತೇಶ್ ಪಾಟೀಲ್, ಆರ್.ಡಿ ಪಾಟೀಲ್ ಬಂಧನವಾದರು. ನಾವು ಬಿಡುಗಡೆ ಮಾಡಿದ ಆಡಿಯೋ ಸಾಮಾಜಿಕ ಜಾಲತಾಣದಲ್ಲಿತ್ತು. ಅಲ್ಲದೇ ನಾವು ಬಿಡುಗಡೆಗೂ ಮುನ್ನ ಅಂದಿನ ಕನ್ನಡ ಪ್ರಭ ಪತ್ರಿಕೆಯಲ್ಲಿ ಆ ಬಗ್ಗೆ ವರದಿ ಬಂದಿತ್ತು. ಆಮೂಲಕ ಆ ವಿಚಾರ ಸಾರ್ವಜನಿಕ ವಲಯದಲ್ಲಿತ್ತು. ನಾನು ಈ ಆಡಿಯೋವನ್ನು ರಹಸ್ಯ ಕಾರ್ಯಾಚರಣೆ ಮೂಲಕ ಮಾಡಿಲ್ಲವಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಜಾಮೀನು ದೊರೆತ ಬಳಿಕ ಮತ್ತೊಮ್ಮೆ ಜಿಗ್ನೇಶ್‌ ಮೇವಾನಿಯ ಬಂಧನ

ಆ ಆಡಿಯೋದಲ್ಲಿ ಒಬ್ಬ ಅಭ್ಯರ್ಥಿ ನಾವು ಇದರಲ್ಲಿ ಸಿಕ್ಕಿಕೊಳ್ಳುವುದಿಲ್ಲವಲ್ಲವೇ ಎಂದು ಕೇಳಿದಾಗ, ಮಧ್ಯವರ್ತಿ, ಇದರಲ್ಲಿ ಮೇಲಿಂದ ಕೆಳಗಿನವರೆಗೂ ಎಲ್ಲ ಪ್ರಭಾವಿವ್ಯಕ್ತಿಗಳಿದ್ದು, ಸಿಕ್ಕಿಬೀಳುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ. 545 ನೇಮಕಾತಿಯಲ್ಲಿ ಪರೀಕ್ಷೆ ನಡೆಸುವವರು ಭಾಗಿಯಾಗಿದ್ದಾರೆ ಎಂಬ ಮಾತುಗಳಿವೆ. ಇದೆಲ್ಲವೂ ರಾಜ್ಯ ಗುಪ್ತಚರ ಇಲಾಖೆ ಎಷ್ಟು ದುರ್ಬಲವಾಗಿದೆ ಎಂಬುದಕ್ಕೆ ಸಾಕ್ಷಿ. ಈ ಹಿಂದೆ ಗುಪ್ತಚರ ಇಲಾಖೆಗೆ ತನ್ನದೇ ಆದ ಮೂಲ, ಸೂತ್ರಗಳಿರುತ್ತಿದ್ದವು. ಆದರೆ ಈಗ ಪತ್ರಿಕೆ ವರದಿ, ಮಾಧ್ಯಮ ವರದಿ ನೋಡಿ ಸರ್ಕಾರಕ್ಕೆ ಮಾಹಿತಿ ನೀಡುತ್ತಿವೆ. ಇವರಿಗೆ ಸಾಮಾನ್ಯ ಪ್ರಜ್ಞೆಯೂ ಇಲ್ಲವಾಗಿದೆ ಎಂದು ಕುಟುಕಿದ್ದಾರೆ.

ಆಡಿಯೋದಲ್ಲಿ ಶ್ರೀಶೈಲ ಬಿರಾದಾರ್ ಎಂಬ ಅಭ್ಯರ್ಥಿ ಮಧ್ಯವರ್ತಿ ಜತೆ ಮಾತನಾಡಿದ್ದಾರೆ ಎಂಬ ಮಾಹಿತಿ ಸರ್ಕಾರದ ಬಳಿ ಇಲ್ಲವೇ? ಇವರು ಕಣ್ಣಮುಂದೆ ಇರುವ ಸಾಕ್ಷಿಗಳನ್ನು ನೋಡಲು ತಯಾರಿಲ್ಲ. ಹೀಗಾಗಿ ನಾನು ಕಾಲಾನುಕ್ರಮವಾಗಿ ಸರ್ಕಾರಿ ದಾಖಲೆ, ಸಚಿವರ ಹೇಳಿಕೆ, ಅಧಿಕಾರಿಗಳ ಹೇಳಿಕೆಯನ್ನು ಜನರ ಮುಂದೆ ಇಟ್ಟಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...