Homeಕರ್ನಾಟಕಮುಂದಿನ ಚುನಾವಣೆಗೆ ಸ್ಪರ್ಧಿಸುವುದಾಗಿ ಹೇಳಿದ ಪಿಎಸ್‌ಐ ಹಗರಣದ ಆರೋಪಿ ರುದ್ರಗೌಡ ಪಾಟಿಲ!

ಮುಂದಿನ ಚುನಾವಣೆಗೆ ಸ್ಪರ್ಧಿಸುವುದಾಗಿ ಹೇಳಿದ ಪಿಎಸ್‌ಐ ಹಗರಣದ ಆರೋಪಿ ರುದ್ರಗೌಡ ಪಾಟಿಲ!

- Advertisement -
- Advertisement -

ಪಿಎಸ್‌ಐ ನೇಮಕಾತಿ ಹಗರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ ರುದ್ರಗೌಡ ಪಾಟಿಲ ಅಲಿಯಾಸ್ ಆರ್‌‌ಡಿ ಪಾಟಿಲ ಅವರು ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಯೋಜಿಸುತ್ತಿರುವುದಾಗಿ ಶನಿವಾರ ಹೇಳಿದ್ದಾರೆ. ಈ ಬಗ್ಗೆ ಅವರು ಫೇಸ್‌‌‌ಬುಕ್‌ ಮೂಲಕ ವೀಡಿಯೊವನ್ನು ಬಿಡುಗಡೆ ಮಾಡಿದ್ದಾರೆ.

ಜಾಮೀನಿನ ಮೇಲೆ ಬಿಡುಗಡೆ ಹೊಂದಿದ್ದ ರುದ್ರಗೌಡ ಅವರನ್ನು ಮತ್ತೆ ಬಂಧಿಸಲು ಗುರುವಾರ ಕಲಬುರಗಿಯಲ್ಲಿರುವ ಅವರ ನಿವಾಸಕ್ಕೆ ತೆರಳಿದ್ದ ಕರ್ನಾಟಕ ಅಪರಾಧ ತನಿಖಾ ಇಲಾಖೆ (ಸಿಐಡಿ) ಅಧಿಕಾರಿಗಳಿಂದ ಅವರು ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ ಎಂದು ಕಲಬುರಗಿ ಪೊಲೀಸರು ತಿಳಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸ್ಥಳದಿಂದ ಪರಾರಿಯಾಗುವ ವೇಳೆ ರುದ್ರಗೌಡ ಅವರನ್ನು ವಶಕ್ಕೆ ತೆಗೆದುಕೊಳ್ಳಲು ಯತ್ನಿಸಿದ ಸಿಐಡಿ ಅಧಿಕಾರಿಗಳನ್ನು ತಳ್ಳಿದ್ದರು ಎಂದು ವರದಿಯಾಗಿದೆ.ಈ ಘಟನೆ ನಡೆದ ನಂತರ ವೀಡಿಯೊ ಬಿಡುಗಡೆ ಮಾಡಲಾಗಿದೆ.

ರುದ್ರಗೌಡ ಅವರನ್ನು ಈ ಹಿಂದೆ 2022ರ ಏಪ್ರಿಲ್‌ನಲ್ಲಿ ಬಂಧಿಸಲಾಗಿತ್ತು. ನಂತರ ಅವರನ್ನು ಡಿಸೆಂಬರ್‌ನಲ್ಲಿ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು. ಆದರೆ ಜಾಮೀನು ಷರತ್ತುಗಳನ್ನು ಅನುಸರಿಸಲು ವಿಫಲವಾದ ಕಾರಣ, ಸಿಐಡಿ ಅಧಿಕಾರಿಗಳು ಗುರುವಾರ ಸಂಜೆ 5.30 ರ ಸುಮಾರಿಗೆ ಬಂಧನ ವಾರಂಟ್‌ನೊಂದಿಗೆ ಅವರ ಮನೆಗೆ ತಲುಪಿದ್ದರು. ಅದೇ ದಿನ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ತಂಡವೂ ಪಾಟೀಲ್ ಅವರ ನಿವಾಸದಲ್ಲಿ ವಿಚಾರಣೆ ನಡೆಸಿತ್ತು.

ಕರ್ನಾಟಕ ಸಿಐಡಿ ಪೊಲೀಸರು ರುದ್ರಗೌಡ ವಿರುದ್ಧ ಕಲಬುರಗಿಯ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. “ಆರೋಪಿಯನ್ನು ವಶಕ್ಕೆ ಪಡೆಯಲು ನಿವಾಸಕ್ಕೆ ತೆರಳಿದಾಗ ನಮ್ಮನ್ನು ತಳ್ಳಿ ಪರಾರಿಯಾಗಿದ್ದಾರೆ” ಎಂದು ಸಿಐಡಿ ಅಧಿಕಾರಿಗಳು ಹೇಳಿದ್ದಾರೆ.

ರುದ್ರಗೌಡ ಅವರೇ ನಿರ್ವಹಿಸುತ್ತಿದ್ದಾರೆ ಎಂದು ಹೇಳಲಾದ ಫೇಸ್‌ಬುಕ್ ಪೇಜ್‌ನಲ್ಲಿ ವೀಡಿಯೊವನ್ನು ಬಿಡುಗಡೆ ಮಾಡಲಾಗಿದೆ. ವಿಡಿಯೋದಲ್ಲಿ ರುದ್ರಗೌಡ ಪಾಟೀಲ್ ಅವರು ತಾನು ತಲೆಮರೆಸಿಕೊಂಡಿಲ್ಲ ಎಂದು ಹೇಳಿಕೊಂಡಿದ್ದಾರೆ.

“ನಾನು ತಲೆಮರೆಸಿಕೊಂಡಿಲ್ಲ. ಇದು ಸುಳ್ಳು ಸುದ್ದಿ, ಯಾರೂ ಆತಂಕಕ್ಕೆ ಒಳಗಾಗಬಾರದು. ನಿಮ್ಮ ಸೇವೆಯನ್ನು ನಿರ್ವಹಿಸಲು ನಾನು ಶೀಘ್ರದಲ್ಲೇ ನಿಮ್ಮ ಮುಂದೆ ಹಾಜರಾಗುತ್ತೇನೆ. ಜನರು ಬಯಸಿದರೆ, ನಾನು ಅಫಜಲಪುರ ಕ್ಷೇತ್ರದ ಅಭ್ಯರ್ಥಿಯಾಗಿ 2023ರ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುತ್ತೇನೆ” ಎಂದು ರುದ್ರಗೌಡ ವೀಡಿಯೊದಲ್ಲಿ ಹೇಳಿದ್ದಾರೆ.

ಕಳೆದ ವರ್ಷ ಕರ್ನಾಟಕವನ್ನು ಬೆಚ್ಚಿಬೀಳಿಸಿದ ಪಿಎಸ್‌ಐ ನೇಮಕಾತಿ ಹಗರಣದಲ್ಲಿ ತನ್ನನ್ನು ಸಿಲುಕಿಸಲಾಗಿದೆ ಎಂದು ಪ್ರತಿಪಾದಿಸಿದ್ದಾರೆ. “ರಾಜಕೀಯ ಒತ್ತಡಕ್ಕೆ ಮಣಿದು ಅಧಿಕಾರಿಗಳು ನನ್ನನ್ನು ಫಿಕ್ಸ್ ಮಾಡಿದ್ದಾರೆ. ನಾನು ಅಥವಾ ನನ್ನ ಸಹೋದರ ರಾಜಕೀಯವಾಗಿ ಬೆಳೆಯುವುದು ಬೇಡ ಎನ್ನುವ ಕಾರಣಕ್ಕೆ ಕೆಲವರು ಈ ಸಂಚು ರೂಪಿಸಿದ್ದಾರೆ” ಎಂದು ರುದ್ರಗೌಡ ವಿಡಿಯೊದಲ್ಲಿ ಹೇಳಿಕೊಂಡಿದ್ದಾರೆ.

“ಇದೇ ರೀತಿಯ ಎಷ್ಟು ಪ್ರಕರಣಗಳಲ್ಲಿ ನನ್ನನ್ನು ಬಂಧಿಸಿದರೂ ನಾನು ಹೆದರುವುದಿಲ್ಲ. ನಾನು ತಲೆಮರೆಸಿಕೊಂಡಿಲ್ಲ. ಮಾಧ್ಯಮಗಳಿಗೆ ಸತ್ಯಾಸತ್ಯತೆ ಗೊತ್ತಿರುವುದಿಲ್ಲ. ಹಾಗಾಗಿ ಸುಳ್ಳು ಸುದ್ದಿಗಳನ್ನು ಹರಡುತ್ತಿದ್ದಾರೆ. ನಾನು ಯಾವುದೇ ಅಧಿಕಾರಿಯಿಂದ ಓಡಿಹೋಗಿಲ್ಲ, ಈ ನೆಲದ ಕಾನೂನಿನ ಬಗ್ಗೆ ನನಗೆ ಗೌರವವಿದೆ. ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಗುರುವಾರ ಬೆಳಿಗ್ಗೆ 6 ರಿಂದ ರಾತ್ರಿ 11 ರವರೆಗೆ ನನ್ನನ್ನು ವಿಚಾರಣೆ ನಡೆಸಿದ್ದರು. ಈ ವೇಳೆ ನಾನು ತನಿಖೆಗೆ ಸಂಪೂರ್ಣವಾಗಿ ಸಹಕರಿಸಿದ್ದೇನೆ” ಎಂದು ಅವರು ತನ್ನನ್ನು ಸಮರ್ಥಿಸಿಕೊಂಡಿದ್ದಾರೆ.

ತನ್ನನ್ನು ಬಂಧಿಸಲು ಆಗಮಿಸಿದ್ದ ಸಿಐಡಿ ಅಧಿಕಾರಿಗಳನ್ನು ತಳ್ಳಿ ತಮ್ಮ ನಿವಾಸದಿಂದ ಪರಾರಿಯಾಗಿದ್ದಾರೆ ಎಂಬ ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗಳನ್ನು ಅವರು ಅಲ್ಲಗಳೆದರು. “ನಾನು ಮನೆಯಿಂದ ಹೊರಟಾಗ ಸಿಐಡಿ ಅಧಿಕಾರಿಯನ್ನು ತಳ್ಳಿ ಓಡಿ ಹೋಗಿದ್ದೇನೆ ಎಂದು ಮಾಧ್ಯಮಗಳು ಸುಳ್ಳು ವರದಿ ಮಾಡುತ್ತಿವೆ” ಎಂದು ಆರೋಪಿಸಿದರು.

“ನಾನು ಎಲ್ಲಿಯೂ ಓಡಿಹೋಗಿಲ್ಲ ಮತ್ತು ಭಯಪಡುವ ಅಗತ್ಯವಿಲ್ಲ. ಈ ನಿಟ್ಟಿನಲ್ಲಿ ಯಾವುದೇ ಸುದ್ದಿಗೆ ಕಿವಿಗೊಡಬೇಡಿ. ಕಷ್ಟಗಳ ನಡುವೆಯೂ ಜನಸೇವೆಯನ್ನು ಮುಂದುವರಿಸುತ್ತೇನೆ. ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ನಾನು ಈ ಹಿಂದೆ ಎಲ್ಲಿಯೂ ಹೇಳಿಕೊಂಡಿಲ್ಲ. ಇಂದು ನಾನು ಅದರ ಬಗ್ಗೆ ಮಾತನಾಡುತ್ತಿದ್ದೇನೆ. ಕ್ಷೇತ್ರದ ಜನತೆ ಬಯಸಿದರೆ ಅಫಜಲಪುರ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ. ನನ್ನ ಅಭಿಮಾನಿಗಳು, ಹಿತೈಷಿಗಳು ಹಾಗೂ ಮತದಾರರ ಆಶೀರ್ವಾದ ನನ್ನ ಸಹೋದರ ಮಹಾಂತೇಶ ಪಾಟೀಲರ ಮೇಲಿರಲಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪಿಎಸ್‌ಐ ಹಗರಣ: ಎಡಿಜಿಪಿ ಅಮೃತ್ ಪೌಲ್ ಬಂಧನ; 10 ದಿನ ಪೊಲೀಸ್ ಕಸ್ಟಡಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...