Homeಕರ್ನಾಟಕಮುಂದಿನ ಚುನಾವಣೆಗೆ ಸ್ಪರ್ಧಿಸುವುದಾಗಿ ಹೇಳಿದ ಪಿಎಸ್‌ಐ ಹಗರಣದ ಆರೋಪಿ ರುದ್ರಗೌಡ ಪಾಟಿಲ!

ಮುಂದಿನ ಚುನಾವಣೆಗೆ ಸ್ಪರ್ಧಿಸುವುದಾಗಿ ಹೇಳಿದ ಪಿಎಸ್‌ಐ ಹಗರಣದ ಆರೋಪಿ ರುದ್ರಗೌಡ ಪಾಟಿಲ!

- Advertisement -
- Advertisement -

ಪಿಎಸ್‌ಐ ನೇಮಕಾತಿ ಹಗರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ ರುದ್ರಗೌಡ ಪಾಟಿಲ ಅಲಿಯಾಸ್ ಆರ್‌‌ಡಿ ಪಾಟಿಲ ಅವರು ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಯೋಜಿಸುತ್ತಿರುವುದಾಗಿ ಶನಿವಾರ ಹೇಳಿದ್ದಾರೆ. ಈ ಬಗ್ಗೆ ಅವರು ಫೇಸ್‌‌‌ಬುಕ್‌ ಮೂಲಕ ವೀಡಿಯೊವನ್ನು ಬಿಡುಗಡೆ ಮಾಡಿದ್ದಾರೆ.

ಜಾಮೀನಿನ ಮೇಲೆ ಬಿಡುಗಡೆ ಹೊಂದಿದ್ದ ರುದ್ರಗೌಡ ಅವರನ್ನು ಮತ್ತೆ ಬಂಧಿಸಲು ಗುರುವಾರ ಕಲಬುರಗಿಯಲ್ಲಿರುವ ಅವರ ನಿವಾಸಕ್ಕೆ ತೆರಳಿದ್ದ ಕರ್ನಾಟಕ ಅಪರಾಧ ತನಿಖಾ ಇಲಾಖೆ (ಸಿಐಡಿ) ಅಧಿಕಾರಿಗಳಿಂದ ಅವರು ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ ಎಂದು ಕಲಬುರಗಿ ಪೊಲೀಸರು ತಿಳಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸ್ಥಳದಿಂದ ಪರಾರಿಯಾಗುವ ವೇಳೆ ರುದ್ರಗೌಡ ಅವರನ್ನು ವಶಕ್ಕೆ ತೆಗೆದುಕೊಳ್ಳಲು ಯತ್ನಿಸಿದ ಸಿಐಡಿ ಅಧಿಕಾರಿಗಳನ್ನು ತಳ್ಳಿದ್ದರು ಎಂದು ವರದಿಯಾಗಿದೆ.ಈ ಘಟನೆ ನಡೆದ ನಂತರ ವೀಡಿಯೊ ಬಿಡುಗಡೆ ಮಾಡಲಾಗಿದೆ.

ರುದ್ರಗೌಡ ಅವರನ್ನು ಈ ಹಿಂದೆ 2022ರ ಏಪ್ರಿಲ್‌ನಲ್ಲಿ ಬಂಧಿಸಲಾಗಿತ್ತು. ನಂತರ ಅವರನ್ನು ಡಿಸೆಂಬರ್‌ನಲ್ಲಿ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು. ಆದರೆ ಜಾಮೀನು ಷರತ್ತುಗಳನ್ನು ಅನುಸರಿಸಲು ವಿಫಲವಾದ ಕಾರಣ, ಸಿಐಡಿ ಅಧಿಕಾರಿಗಳು ಗುರುವಾರ ಸಂಜೆ 5.30 ರ ಸುಮಾರಿಗೆ ಬಂಧನ ವಾರಂಟ್‌ನೊಂದಿಗೆ ಅವರ ಮನೆಗೆ ತಲುಪಿದ್ದರು. ಅದೇ ದಿನ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ತಂಡವೂ ಪಾಟೀಲ್ ಅವರ ನಿವಾಸದಲ್ಲಿ ವಿಚಾರಣೆ ನಡೆಸಿತ್ತು.

ಕರ್ನಾಟಕ ಸಿಐಡಿ ಪೊಲೀಸರು ರುದ್ರಗೌಡ ವಿರುದ್ಧ ಕಲಬುರಗಿಯ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. “ಆರೋಪಿಯನ್ನು ವಶಕ್ಕೆ ಪಡೆಯಲು ನಿವಾಸಕ್ಕೆ ತೆರಳಿದಾಗ ನಮ್ಮನ್ನು ತಳ್ಳಿ ಪರಾರಿಯಾಗಿದ್ದಾರೆ” ಎಂದು ಸಿಐಡಿ ಅಧಿಕಾರಿಗಳು ಹೇಳಿದ್ದಾರೆ.

ರುದ್ರಗೌಡ ಅವರೇ ನಿರ್ವಹಿಸುತ್ತಿದ್ದಾರೆ ಎಂದು ಹೇಳಲಾದ ಫೇಸ್‌ಬುಕ್ ಪೇಜ್‌ನಲ್ಲಿ ವೀಡಿಯೊವನ್ನು ಬಿಡುಗಡೆ ಮಾಡಲಾಗಿದೆ. ವಿಡಿಯೋದಲ್ಲಿ ರುದ್ರಗೌಡ ಪಾಟೀಲ್ ಅವರು ತಾನು ತಲೆಮರೆಸಿಕೊಂಡಿಲ್ಲ ಎಂದು ಹೇಳಿಕೊಂಡಿದ್ದಾರೆ.

“ನಾನು ತಲೆಮರೆಸಿಕೊಂಡಿಲ್ಲ. ಇದು ಸುಳ್ಳು ಸುದ್ದಿ, ಯಾರೂ ಆತಂಕಕ್ಕೆ ಒಳಗಾಗಬಾರದು. ನಿಮ್ಮ ಸೇವೆಯನ್ನು ನಿರ್ವಹಿಸಲು ನಾನು ಶೀಘ್ರದಲ್ಲೇ ನಿಮ್ಮ ಮುಂದೆ ಹಾಜರಾಗುತ್ತೇನೆ. ಜನರು ಬಯಸಿದರೆ, ನಾನು ಅಫಜಲಪುರ ಕ್ಷೇತ್ರದ ಅಭ್ಯರ್ಥಿಯಾಗಿ 2023ರ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುತ್ತೇನೆ” ಎಂದು ರುದ್ರಗೌಡ ವೀಡಿಯೊದಲ್ಲಿ ಹೇಳಿದ್ದಾರೆ.

ಕಳೆದ ವರ್ಷ ಕರ್ನಾಟಕವನ್ನು ಬೆಚ್ಚಿಬೀಳಿಸಿದ ಪಿಎಸ್‌ಐ ನೇಮಕಾತಿ ಹಗರಣದಲ್ಲಿ ತನ್ನನ್ನು ಸಿಲುಕಿಸಲಾಗಿದೆ ಎಂದು ಪ್ರತಿಪಾದಿಸಿದ್ದಾರೆ. “ರಾಜಕೀಯ ಒತ್ತಡಕ್ಕೆ ಮಣಿದು ಅಧಿಕಾರಿಗಳು ನನ್ನನ್ನು ಫಿಕ್ಸ್ ಮಾಡಿದ್ದಾರೆ. ನಾನು ಅಥವಾ ನನ್ನ ಸಹೋದರ ರಾಜಕೀಯವಾಗಿ ಬೆಳೆಯುವುದು ಬೇಡ ಎನ್ನುವ ಕಾರಣಕ್ಕೆ ಕೆಲವರು ಈ ಸಂಚು ರೂಪಿಸಿದ್ದಾರೆ” ಎಂದು ರುದ್ರಗೌಡ ವಿಡಿಯೊದಲ್ಲಿ ಹೇಳಿಕೊಂಡಿದ್ದಾರೆ.

“ಇದೇ ರೀತಿಯ ಎಷ್ಟು ಪ್ರಕರಣಗಳಲ್ಲಿ ನನ್ನನ್ನು ಬಂಧಿಸಿದರೂ ನಾನು ಹೆದರುವುದಿಲ್ಲ. ನಾನು ತಲೆಮರೆಸಿಕೊಂಡಿಲ್ಲ. ಮಾಧ್ಯಮಗಳಿಗೆ ಸತ್ಯಾಸತ್ಯತೆ ಗೊತ್ತಿರುವುದಿಲ್ಲ. ಹಾಗಾಗಿ ಸುಳ್ಳು ಸುದ್ದಿಗಳನ್ನು ಹರಡುತ್ತಿದ್ದಾರೆ. ನಾನು ಯಾವುದೇ ಅಧಿಕಾರಿಯಿಂದ ಓಡಿಹೋಗಿಲ್ಲ, ಈ ನೆಲದ ಕಾನೂನಿನ ಬಗ್ಗೆ ನನಗೆ ಗೌರವವಿದೆ. ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಗುರುವಾರ ಬೆಳಿಗ್ಗೆ 6 ರಿಂದ ರಾತ್ರಿ 11 ರವರೆಗೆ ನನ್ನನ್ನು ವಿಚಾರಣೆ ನಡೆಸಿದ್ದರು. ಈ ವೇಳೆ ನಾನು ತನಿಖೆಗೆ ಸಂಪೂರ್ಣವಾಗಿ ಸಹಕರಿಸಿದ್ದೇನೆ” ಎಂದು ಅವರು ತನ್ನನ್ನು ಸಮರ್ಥಿಸಿಕೊಂಡಿದ್ದಾರೆ.

ತನ್ನನ್ನು ಬಂಧಿಸಲು ಆಗಮಿಸಿದ್ದ ಸಿಐಡಿ ಅಧಿಕಾರಿಗಳನ್ನು ತಳ್ಳಿ ತಮ್ಮ ನಿವಾಸದಿಂದ ಪರಾರಿಯಾಗಿದ್ದಾರೆ ಎಂಬ ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗಳನ್ನು ಅವರು ಅಲ್ಲಗಳೆದರು. “ನಾನು ಮನೆಯಿಂದ ಹೊರಟಾಗ ಸಿಐಡಿ ಅಧಿಕಾರಿಯನ್ನು ತಳ್ಳಿ ಓಡಿ ಹೋಗಿದ್ದೇನೆ ಎಂದು ಮಾಧ್ಯಮಗಳು ಸುಳ್ಳು ವರದಿ ಮಾಡುತ್ತಿವೆ” ಎಂದು ಆರೋಪಿಸಿದರು.

“ನಾನು ಎಲ್ಲಿಯೂ ಓಡಿಹೋಗಿಲ್ಲ ಮತ್ತು ಭಯಪಡುವ ಅಗತ್ಯವಿಲ್ಲ. ಈ ನಿಟ್ಟಿನಲ್ಲಿ ಯಾವುದೇ ಸುದ್ದಿಗೆ ಕಿವಿಗೊಡಬೇಡಿ. ಕಷ್ಟಗಳ ನಡುವೆಯೂ ಜನಸೇವೆಯನ್ನು ಮುಂದುವರಿಸುತ್ತೇನೆ. ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ನಾನು ಈ ಹಿಂದೆ ಎಲ್ಲಿಯೂ ಹೇಳಿಕೊಂಡಿಲ್ಲ. ಇಂದು ನಾನು ಅದರ ಬಗ್ಗೆ ಮಾತನಾಡುತ್ತಿದ್ದೇನೆ. ಕ್ಷೇತ್ರದ ಜನತೆ ಬಯಸಿದರೆ ಅಫಜಲಪುರ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ. ನನ್ನ ಅಭಿಮಾನಿಗಳು, ಹಿತೈಷಿಗಳು ಹಾಗೂ ಮತದಾರರ ಆಶೀರ್ವಾದ ನನ್ನ ಸಹೋದರ ಮಹಾಂತೇಶ ಪಾಟೀಲರ ಮೇಲಿರಲಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪಿಎಸ್‌ಐ ಹಗರಣ: ಎಡಿಜಿಪಿ ಅಮೃತ್ ಪೌಲ್ ಬಂಧನ; 10 ದಿನ ಪೊಲೀಸ್ ಕಸ್ಟಡಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...