- Advertisement -
- Advertisement -
ಪಿಎಸ್ಐ ನೇಮಕಾತಿ ಹಗರಣದ ಪ್ರಮುಖ ಆರೋಪಿ ಐಪಿಎಸ್ ಅಧಿಕಾರಿ ಅಮೃತ್ ಪೌಲ್ಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.
ಕಲಬುರಗಿ ನ್ಯಾಯಪೀಠದಲ್ಲಿರುವ ನ್ಯಾಯಮೂರ್ತಿ ಪಿ.ಎಂ.ನವಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಅಮೃತ್ ಪೌಲ್ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಜಾಮೀನು ಮಂಜೂರು ವೇಳೆ ತನಿಖೆಗೆ ಸಹಕರಿಸಬೇಕು, ಅನುಮತಿ ಇಲ್ಲದೆ ವಿದೇಶಕ್ಕೆ ಹೋಗುವಂತಿಲ್ಲ ಎಂದು ನ್ಯಾಯಾಲಯ ಅಮೃತ್ ಪೌಲ್ಗೆ ಷರತ್ತುಗಳನ್ನು ವಿಧಿಸಿದೆ.
ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ 545 ಪಿಎಸ್ಐಗಳ ನೇಮಕಾತಿಯಲ್ಲಿ ಅಕ್ರಮ ಪ್ರಕರಣದಲ್ಲಿ ಅಮೃತ್ ಪೌಲ್ ಮಾರ್ಚ್ನಲ್ಲಿ ಜೈಲು ಸೇರಿದ್ದರು. ನೇಮಕಾತಿ ಅಕ್ರಮದ ಸಮಯದಲ್ಲಿ ಅವರು ರಾಜ್ಯ ಪೊಲೀಸ್ ಇಲಾಖೆಯ ನೇಮಕಾತಿ ವಿಭಾಗದ ಎಡಿಜಿಪಿಯಾಗಿದ್ದರು.
ಪ್ರಕರಣಕ್ಕೆ ಸಂಬಂಧಿಸಿ ಅಮೃತ್ ಪೌಲ್ ಕಳೆದ ಆರು ತಿಂಗಳಿಗೂ ಹೆಚ್ಚು ಕಾಲ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದರು.
ಇದನ್ನು ಓದಿ: ದೇವದುರ್ಗದಲ್ಲಿ ಬಿಜೆಪಿ ಜೊತೆಗೆ ಮೈತ್ರಿ ಇಲ್ಲ: ಜೆಡಿಎಸ್ ಶಾಸಕಿ ಕರೆಮ್ಮ