ವೀಕೆಂಡ್ ಕರ್ಫ್ಯೂ ಉಲ್ಲಂಘಿಸಿ ಬೀದಿಬದಿಯಲ್ಲಿ ಕುಳಿತು ತರಕಾರಿ ಮಾರುತ್ತಿದ್ದಾರೆ ಎಂಬ ಕಾರಣಕ್ಕೆ ತರಕಾರಿಗಳನ್ನು ಕಾಲಿನಿಂದ ಒದ್ದು, ಬೀದಿಬದಿ ವ್ಯಾಪಾರಿಗಳ ಮೇಲೆ ದರ್ಪ ತೋರಿಸಿದ್ದ ರಾಯಚೂರು ನಗರದ ಸದರ ಬಜಾರ್ ಠಾಣೆಯ ಪಿಎಸ್ಐ ಅಜಮ್ ಅವರನ್ನು ಅಮಾನತು ಮಾಡಲಾಗಿದೆ.
ಕೊರೊನಾ ಕಾರಣಕ್ಕಾಗಿ ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿದೆ. ಈ ವೇಳೆ ಜನರು ರಸ್ತೆಗೆ ಬರಬಾರದು ಎಂದು ಆದೇಶಿಸಲಾಗಿದೆ. ಆದರೆ, ರಾಯಚೂರಿನ ಚಂದ್ರಮೌಳೇಶ್ವರ ವೃತ್ತದಿಂದ ಪಟೇಲ್ ರಸ್ತೆ ಮಾರ್ಗದಲ್ಲಿ ರೈತರು, ವರ್ತಕರು ತರಕಾರಿ ವ್ಯಾಪಾರ ಮಾಡುತ್ತಿದ್ದರು. ಇದನ್ನು ಕಂಡು ಆಕ್ರೋಶಗೊಂಡ ಪಿಎಸ್ಐ ವ್ಯಾಪಾರಿಗಳಿಗೆ ಬುದ್ದಿವಾದ ಹೇಳುವುದು ಬಿಟ್ಟು ತರಕಾರಿ, ಸೊಪ್ಪನ್ನು ಕಾಲಿನಿಂದ ಒದ್ದು ಚೆಲ್ಲಾಪಿಲ್ಲಿ ಮಾಡಿದ್ದರು.
ಪಿಎಸ್ಐ ಅಜಮ್ ವ್ಯಾಪಾರಿಗಳ ಮೇಲೆ ದರ್ಪ ಎಸಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಪಿಎಸ್ಐ ಅವರ ನಡೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು. ಹೀಗಾಗಿ ರಾಯಚೂರು ಜಿಲ್ಲಾ ಪೊಲೀಸ್ ಅಧೀಕ್ಷಕ ಪ್ರಕಾಶ್ ನಿಕಮ್ ಅವರು ಪಿಎಸ್ಐಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದ ವಿಡಿಯೋದಲ್ಲಿ ಪಿಎಸ್ಐ ವಾಹನದಿಂದ ಇಳಿದು ಬಂದು, ರಸ್ತೆ ಬದಿಯಲ್ಲಿ ವ್ಯಾಪಾರ ಮಾಡುತ್ತಿದ್ದ ವ್ಯಾಪಾರಿಗಳ ತರಕಾರಿ, ಸೋಪ್ಪು, ನಿಂಬೆಹಣ್ಣು ಸೇರಿದಂತೆ ಎಲ್ಲಾವನ್ನು ಬೂಟು ಕಾಲಿನಿಂದ ಒದ್ದು ದರ್ಪ ತೋರಿದ್ದರು.
ಇದನ್ನೂ ಓದಿ: ತಮಿಳುನಾಡಿನಲ್ಲಿ ಮಹಿಳೆಯರು, ಬ್ರಾಹ್ಮಣೇತರರಿಗೆ ಅರ್ಚಕ ಹುದ್ದೆ, ರಾಜ್ಯದಲ್ಲಿಯೂ ಚರ್ಚೆ ಆರಂಭ



ಎಲ್ಲರೂ ಸೇರಿ ಅವನಿಗೆ ಜ್ಯಾಡಿಸಿ ಒದೀರಿ.