Homeಕರ್ನಾಟಕದಲಿತ ಯುವಕನಿಗೆ ಮೂತ್ರ ಕುಡಿಸಿ ದೌರ್ಜನ್ಯ: ಹೇಯ ಕೃತ್ಯ ಎಸಗಿದ ಪಿಎಸ್‌ಐ ಅಮಾನತ್ತಿಗೆ ಆಗ್ರಹ

ದಲಿತ ಯುವಕನಿಗೆ ಮೂತ್ರ ಕುಡಿಸಿ ದೌರ್ಜನ್ಯ: ಹೇಯ ಕೃತ್ಯ ಎಸಗಿದ ಪಿಎಸ್‌ಐ ಅಮಾನತ್ತಿಗೆ ಆಗ್ರಹ

ದೌರ್ಜನ್ಯ ಎಸಗಿದ ಸಬ್ ಇನ್ಸ್‌ಪೆಕ್ಟರ್‌ರವರನ್ನು ಕೇವಲ ವರ್ಗಾವಣೆ ಮಾಡಿ ಚಿಕ್ಕಮಗಳೂರು ಜಿಲ್ಲಾ ಹಿರಿಯ ಪೊಲೀಸರು ಕಣ್ಣೊರೆಸುವ ತಂತ್ರ ಮಾಡಿ ಕೈತೊಳೆದು ಕೊಂಡಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

- Advertisement -
- Advertisement -

ಗೋಣೀಬೀಡು ಠಾಣೆ ಪಿಎಸ್‌ಐ ತನ್ನ ಮೇಲೆ ವಿನಾಕಾರಣ ತೀವ್ರ ಹಲ್ಲೆ ನಡೆಸಿ, ಮೂತ್ರ ಕುಡಿಸಿ ಜಾತಿ ನಿಂದನೆ ಮಾಡಿದ್ದಾರೆ ಎಂದು ಮೂಡಿಗೆರೆ ಬಳಿಯ ಕಿರಗುಂದದ ದಲಿತ ಯುವಕ ಕೆ.ಎಲ್.ಪುನೀತ್ ಆರೋಪಿಸಿದ್ದಾರೆ. ಈ ಕುರಿತು ಪಿಎಸ್‌ಐ ಮೇಲೆ ಕ್ರಮ ಕೈಗೊಳ್ಳುವಂತೆ ಹಿರಿಯ ಪೋಲೀಸ್ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.

ನಮ್ಮ ಗ್ರಾಮದಿಂದ ಕಾಣೆಯಾಗಿದ್ದ ವಿವಾಹಿತ ಮಹಿಳೆಯೋರ್ವರ ಜೊತೆ ನನಗೆ ಅಕ್ರಮ ಸಂಬಂಧವಿದೆ ಎಂದು ಒಪ್ಪಿಕೊಳ್ಳುವಂತೆ ಒತ್ತಾಯಿಸಿದರು. ಆದರೆ ನಾನು ತಪ್ಪು ಮಾಡಿಲ್ಲವೆಂದು ಹೇಳಿದ್ದರಿಂದ ನನ್ನ ಮೇಲೆ ಈ ಕ್ರೂರ ಹಲ್ಲೆ ನಡೆಸಲಾಯಿತು ಎಂದು ಪುನೀತ್ ಹೇಳಿದ್ದಾರೆ.

ಮೇ10ರಂದು ಗ್ರಾಮದ ಕೆಲವರು ಬಂದು ನನ್ನ ಮೇಲೆ ಹಲ್ಲೆ ನಡೆಸಲು ಮುಂದಾದಾಗ ನಾನು ಸಹಾಯಕ್ಕಾಗಿ ಪೋಲೀಸ್ ಹೆಲ್ಪ್‌ಲೈನ್ 112ಕ್ಕೆ ಕರೆ ಮಾಡಿದ್ದೆ. ನಂತರ ಸ್ಥಳಕ್ಕೆ ಬಂದ ಗೋಣೀಬೀಡು ಪಿಎಸ್‌ಐ ಅರ್ಜುನ್ ಅವರು ತನ್ನ ಮೇಲೆ ಸಾರ್ವಜನಿಕರ ಎದುರೇ ಹಲ್ಲೆ ನಡೆಸಿದ್ದಲ್ಲದೇ ಪೋಲೀಸ್ ಠಾಣೆಯಲ್ಲಿ ನನ್ನ ಬಟ್ಟೆ ಬಿಚ್ಚಿಸಿ ಕೈಕಾಲು ಕಟ್ಟಿ ಮೇಲಕ್ಕೆ ತೂಗುಹಾಕಿ ಪಾದ ಹಾಗೂ ಮೈಕೈಗೆ ತೀವ್ರ ಹಲ್ಲೆ ನಡೆಸಿದ್ದಾರೆ. ಮೂತ್ರ ಕುಡಿಸಿ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ನನ್ನನ್ನು ವಿನಾಕಾರಣ ಠಾಣೆಗೆ ಕರೆದೊಯ್ದು ಬೆಳಗ್ಗಿನಿಂದ ರಾತ್ರಿವರೆಗೂ ಕ್ರೂರವಾಗಿ ದೌರ್ಜನ್ಯ ನಡೆಸಿ, ಮೂತ್ರ ಕುಡಿಸಿ ಜಾತಿ ನಿಂದನೆಮಾಡಿದ ಪಿಎಸ್‌ಐ ಅರ್ಜುನ್ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಪೋಲೀಸ್ ಮಹಾ ನಿರ್ದೇಶಕರು, ಪಶ್ಚಿಮ ವಲಯ ಐಜಿಪಿ ಹಾಗೂ ಎಸ್‌ಪಿ ಎಂ.ಹೆಚ್.ಅಕ್ಷಯ್ ಅವರಿಗೆ ದೂರು ನೀಡಿದ್ದೇನೆ ಎಂದು ಕೆ.ಎಲ್.ಪುನೀತ್ ತಿಳಿಸಿದ್ದಾರೆ.

ಮಾನವ ಹಕ್ಕು ಆಯೋಗಕ್ಕೆ ದೂರು ಸಲ್ಲಿಸಲಾಗಿದ್ದು ಈ ಬಗ್ಗೆ ಪರೀಶಿಲನೆ ನಡೆಸಲು ಡಿವೈಎಸ್‌ಪಿಗೆ ಸೂಚಿಸಲಾಗಿದೆ ಎಂದು ಎಸ್‌ಪಿ ಅಕ್ಷಯ್ ಎಂ ಹಕಾಯ್ ಮಾಹಿತಿ ನೀಡಿದ್ದಾರೆ.

ಘಟನೆಯನ್ನು ಜಿಲ್ಲಾ ದಲಿತರ ಸಂಘರ್ಷ ಸಮಿತಿ ಮುಖಂಡ ರತನ್ ಊರುಬಗೆ ಖಂಡಿಸಿದ್ದು ಪಿಎಸ್‌ಐ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಅಲ್ಲದೇ ಕ್ಷೇತ್ರದ ಶಾಸಕ ಎಂ.ಪಿ ಕುಮಾರಸ್ವಾಮಿಯವರು ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು ಈ ಹಿಂದೆಯೇ ಹಲವು ದೂರುಗಳಿರುವ ಪಿಎಸ್‌ಐ ಅನ್ನು ವರ್ಗಾವಣೆ ಮಾಡಲು ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸೂಚಿಸಿದ್ದೇನೆ ಎಂದು ಹೇಳಿದ್ದರು. ಅದರಂತೆ ಪಿಎಸ್‌ಐ ಅರ್ಜುನ್‌ರವರನ್ನು ವರ್ಗಾವಣೆ ಮಾಡಲಾಗಿದೆ.

ದೌರ್ಜನ್ಯ ಎಸಗಿದ ಸಬ್ ಇನ್ಸ್‌ಪೆಕ್ಟರ್‌ರವರನ್ನು ಕೇವಲ ವರ್ಗಾವಣೆ ಮಾಡಿ ಚಿಕ್ಕಮಗಳೂರು ಜಿಲ್ಲಾ ಹಿರಿಯ ಪೊಲೀಸರು ಕ್ರಮ ಜರುಗಿಸಿದಂತೆ ಕಣ್ಣೊರೆಸುವ ತಂತ್ರ ಮಾಡಿ ಕೈತೊಳೆದು ಕೊಂಡಿದ್ದಾರೆ. ಇದು ಸರಿಯಲ್ಲ, ಯುವಕನೊಂದಿಗೆ ಅನಾಗರಿಕವಾಗಿ ನಡೆದುಕೊಂಡು ಅತ್ಯಂತ ಹೇಯ ಕೃತ್ಯ ಎಸಗಿರುವ ಪಿಎಸ್‌ಐ ಅನ್ನು ತಕ್ಷಣ ಅಮಾನತ್ತು ಮಾಡಿ ಕ್ರಮ ಜರುಗಿಸಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಒತ್ತಾಯ ಕೇಳಿಬಂದಿದೆ.

“ಮೂಡಿಗೆರೆಯ ಪೋಲೀಸ್ ಇನ್ಸ್ಪೆಕ್ಟರ್ ಮಾಡಿದ್ದರೆನ್ನಲಾದ ಈ ಕೃತ್ಯ ಅತ್ಯಂತ ಹೇಯಕರ ಮತ್ತು ವಿಕೃತ. ಇಂತಹ ಅಮಾನವೀಯವಾದ ಕೃತ್ಯಕ್ಕೆ ತಕ್ಕ ಶಿಕ್ಷೆಯಾಗಲೇಬೇಕು. ಇದು ಉಳಿದ ಅಧಿಕಾರಿಗಳಿಗೆ ಪಾಠವಾಗಬೇಕು. ನಾಗರೀಕರನ್ನು ಜಾತೀಯ ಹಿನ್ನೆಲೆಯಲ್ಲಿ ನೋಡುವುದು, ನಿಂದುಸುವುದು ಮತ್ತು ಆ ಕಾರಣದಿಂದ ಸರಕಾರದ ಕಚೇರಿಯಲ್ಲೇ ಹಿಂಸಾತ್ಮಕ ದೌರ್ಜನ್ಯ ಎಸಗುವುದು ಗುರುತರ ಅಪರಾಧ” ಎಂದು ಸಂಕಥನ ಸಂಪಾದಕರಾದ ರಾಜೇಂದ್ರ ಪ್ರಸಾದ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಬಸವನ ಬಾಗೇವಾಡಿಯಲ್ಲಿ ಅಪ್ರಾಪ್ತ ದಲಿತ ಬಾಲಕಿಯರ ಅತ್ಯಾಚಾರ: ಕೈ ಕಟ್ಟಿ ಬಾವಿಗೆ ಎಸೆದು ಕೊಲೆಗೈದ ದುಷ್ಕರ್ಮಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...