Homeಮುಖಪುಟಎಕ್ಸಿಟ್ ಪೋಲ್‌ಗಳನ್ನು ಮೋದಿಯೇ ಸಂಯೋಜಿಸಿದ್ದಾರೆ, ಫಲಿತಾಂಶ ಭಿನ್ನವಾಗಿರಲಿದೆ: ಕಾಂಗ್ರೆಸ್‌

ಎಕ್ಸಿಟ್ ಪೋಲ್‌ಗಳನ್ನು ಮೋದಿಯೇ ಸಂಯೋಜಿಸಿದ್ದಾರೆ, ಫಲಿತಾಂಶ ಭಿನ್ನವಾಗಿರಲಿದೆ: ಕಾಂಗ್ರೆಸ್‌

- Advertisement -
- Advertisement -

ಎಕ್ಸಿಟ್ ಪೋಲ್‌ಗಳನ್ನು ಪ್ರಧಾನಿ ನರೇಂದ್ರ ಮೋದಿಯವರು “ಸಂಯೋಜಿತ” ಮಾಡಿದ್ದಾರೆ. ಇವೆಲ್ಲವೂ ಅವರು ಮಾಸ್ಟರ್ ಮೈಂಡ್ ಮಾಡುತ್ತಿರುವ ಮಾನಸಿಕ ಆಟಗಳಾಗಿವೆ, ಆದರೆ ನಿಜವಾದ ಫಲಿತಾಂಶಗಳು ತುಂಬಾ ಭಿನ್ನವಾಗಿರುತ್ತವೆ ಎಂದು ಎಕ್ಸಿಟ್ ಪೋಲ್‌ ಫಲಿತಾಂಶಗಳ ಬಗ್ಗೆ ಕಾಂಗ್ರೆಸ್‌ ಹೇಳಿಕೊಂಡಿದೆ.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ದೊಡ್ಡ ಬಹುಮತವನ್ನು ಗೆಲ್ಲುವ ನಿರೀಕ್ಷೆಯೊಂದಿಗೆ ಪ್ರಧಾನಿ ಮೋದಿ ಸತತ ಮೂರನೇ ಅವಧಿಗೆ ಅಧಿಕಾರಕ್ಕೇರಳಿದ್ದಾರೆ ನಿನ್ನೆ ಬಿಡುಗಡೆಯಾದ ಮತದಾನೋತ್ತರ ಸಮೀಕ್ಷೆಗಳು ಹೇಳಿದ್ದವು.

ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟವು ತಮಿಳುನಾಡು ಮತ್ತು ಕೇರಳದಲ್ಲಿ ತನ್ನ ಖಾತೆಯನ್ನು ತೆರೆಯುತ್ತದೆ ಮತ್ತು ಕರ್ನಾಟಕದಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲಿದೆ ಎಂದು ಹೇಳಿದೆ. ಆದರೆ ಬಿಹಾರ, ರಾಜಸ್ಥಾನ ಮತ್ತು ಹರಿಯಾಣದಂತಹ ರಾಜ್ಯಗಳಲ್ಲಿ  ಲೆಕ್ಕಾಚಾರದಲ್ಲಿ ಕುಸಿತವನ್ನು ಕಾಣಬಹುದು ಎಂದು ಸಮೀಕ್ಷೆಗಳು ತಿಳಿಸಿವೆ.

ಎಕ್ಸಿಟ್ ಪೋಲ್‌ಗಳಿಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಜೂನ್ 4 ರಂದು ನಿರ್ಗಮನ ಖಚಿತವಾಗಿರುವ ವ್ಯಕ್ತಿ ಈ ನಿರ್ಗಮನ ಸಮೀಕ್ಷೆಗಳನ್ನು ಆಯೋಜಿಸಿದ್ದಾರೆ. ಇಂಡಿಯಾ ಮೈತ್ರಿಕೂಟವು ಖಂಡಿತವಾಗಿಯೂ ಕನಿಷ್ಠ 295 ಸ್ಥಾನಗಳನ್ನು ಪಡೆಯಲಿದೆ, ಇದು ಸ್ಪಷ್ಟ ಮತ್ತು ನಿರ್ಣಾಯಕ ಬಹುಮತವಾಗಿದೆ ಎಂದು ಹೇಳಿದ್ದಾರೆ.

“ಹೊರಹೋಗುವ ಪ್ರಧಾನ ಮಂತ್ರಿ ಈ ಮಧ್ಯೆ ಮೂರು ದಿನಗಳ ಕಾಲ ಆತ್ಮತೃಪ್ತಿಯಿಂದ ಉಳಿಯಬಹುದು. ಇವೆಲ್ಲವೂ ಅವರು ಮಾಸ್ಟರ್ ಮೈಂಡ್ ಮಾಡುತ್ತಿರುವ ಮಾನಸಿಕ ಆಟಗಳು. ಆದರೆ ನಿಜವಾದ ಫಲಿತಾಂಶಗಳು ತುಂಬಾ ವಿಭಿನ್ನವಾಗಿರುತ್ತದೆ” ಎಂದು ಎಕ್ಸ್‌ ಪೋಸ್ಟ್‌ನಲ್ಲಿ ಕಾಂಗ್ರೆಸ್ ನಾಯಕ ಹೇಳಿದ್ದಾರೆ.

ಇಂಡಿಯಾ ಮೈತ್ರಿಕೂಟ 295ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಅರವಿಂದ್‌ ಕೇಜ್ರಿವಾಲ್‌ ಪ್ರತಿಪಕ್ಷದ ಇಂಡಿಯಾ ಮೈತ್ರಿಕೂಟದ ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದ್ದಾರೆ.

2024ರ ಲೋಕಸಭೆ ಚುನಾವಣೆಗೆ ಕೊನೆಯ ಹಂತದ ಮತದಾನ ನಿನ್ನೆ ಕೊನೆಗೊಂಡಿದೆ. ಇದರ ಬೆನ್ನಲ್ಲಿ  ಎಕ್ಸಿಟ್ ಪೋಲ್‌ಗಳ ಫಲಿತಾಂಶ ಹೊರಬಿದ್ದಿದೆ.  2014 ಮತ್ತು 2019ರಲ್ಲಿ ಹೆಚ್ಚಿನ ಎಕ್ಸಿಟ್ ಪೋಲ್ ಸಮೀಕ್ಷೆಗಳು ಬಿಜೆಪಿ ನೇತೃತ್ವದ ಎನ್‌ಡಿಎ ಅಧಿಕಾರಕ್ಕೆ ಬರುವುದನ್ನು ಹೇಳಿದ್ದವು. ಆದರೆ ವಿಜಯದ ಅಂತರವನ್ನು ನಿಖರವಾಗಿ ಊಹಿಸಲು ವಿಫಲವಾಗಿದ್ದವು.

ಇದನ್ನು ಓದಿ: ವಿಧಾನಸಭೆ ಚುನಾವಣೆ ಫಲಿತಾಂಶ: ಸಿಕ್ಕಿಂ, ಅರುಣಾಚಲದಲ್ಲಿ ಮತ ಎಣಿಕೆ ಆರಂಭ; ಬಿಜೆಪಿ, ಎಸ್‌ಕೆಎಂಗೆ ಮುನ್ನಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...