Homeಮುಖಪುಟಕುಸ್ತಿಪಟುಗಳ ಪ್ರತಿಭಟನೆ ದೇಶಕ್ಕೆ ಕಳಂಕ ಎಂದ ಪಿಟಿ ಉಷಾ: ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ

ಕುಸ್ತಿಪಟುಗಳ ಪ್ರತಿಭಟನೆ ದೇಶಕ್ಕೆ ಕಳಂಕ ಎಂದ ಪಿಟಿ ಉಷಾ: ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ

- Advertisement -
- Advertisement -

ಭಾರತೀಯ ಕುಸ್ತಿ ಫೆಡರೇಶನ್‌ ಅಧ್ಯಕ್ಷ ಹಾಗೂ ಬಿಜೆಪಿ ಸಂಸದರಾಗಿರುವ ಬ್ರಿಜ್‌ಭೂಷಣ್‌ ಸಿಂಗ್‌ ವಿರುದ್ಧ ಲೈಂಗಿಕ ಕಿರುಕುಳ, ಬೆದರಿಕೆ ಆರೋಪ ಮಾಡಿ, ಅವರ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳ ನಡೆ ಬಗ್ಗೆ ಭಾರತೀಯ ಒಲಿಂಪಿಕ್ಸ್‌ ಸಂಸ್ಥೆ(ಐಒಎ) ಅಧ್ಯಕ್ಷೆ ಪಿ.ಟಿ. ಉಷಾ ಟೀಕಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಪಿಟಿ ಉಷಾ, ”ಕುಸ್ತಿಪಟುಗಳು ದೆಹಲಿಯಲ್ಲಿ ಸಾರ್ವಜನಿಕ ಪ್ರತಿಭಟನೆಗೆ ಕುಳಿತುಕೊಳ್ಳಲು ನಿರ್ಧರಿಸುವ ಮುನ್ನ ತಾವು ಮಾಡಿದ ಆರೋಪಗಳನ್ನು ಪರಿಶೀಲಿಸುವ ಸಮಿತಿಯ ವರದಿ ಹೊರಬರುವವರೆಗು ಕಾಯಬೇಕಿತ್ತು. ಅದಕ್ಕೂ ಮುನ್ನ ಪ್ರತಿಭಟನೆಗೆ ಇಳಿದಿರುವುದು ಅಶಿಸ್ತಿನ ನಡೆಯಾಗಿದೆ ಎಂದು ಹೇಳಿದ್ದಾರೆ.

ಈ ಆಟಗಾರರು ಬೀದಿಗಿಳಿದು ಪ್ರತಿಭಟನೆ ಮಾಡಬಾರದಿತ್ತು. ಕನಿಷ್ಠ ಸಮಿತಿಯ ವರದಿ ಬರುವವರೆಗಾದರೂ ಕಾಯಬೇಕಿತ್ತು. ಕುಸ್ತಿಪಟುಗಳ ಪ್ರತಿಭಟನೆಯಿಂದಾಗಿ ದೇಶದ ಘನತೆಗೆ ಧಕ್ಕೆಯಾಗುತ್ತಿದೆ. ಇದು ನಕಾರಾತ್ಮಕ ಧೋರಣೆ ಎಂದಿದ್ದಾರೆ.

ಲೈಂಗಿಕ ಕಿರುಕುಳದ ವಿರುದ್ಧ ಪ್ರತಿಭಟೆನೆ ನಡೆಸುತ್ತಿರುವುದನ್ನು ಟೀಕಿಸಿರುವ ಪಿಟಿ ಉಷಾ ಮೇಲೆ ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ: ಪಿಟಿ ಉಷಾ ಮಹಿಳೆಯಾಗಿ ನಮ್ಮ ಪ್ರತಿಭಟನೆಗೆ ಬೆಂಬಲ ನೀಡದಿರುವುದು ನೋವಾಗಿದೆ: ಕುಸ್ತಿಪಟು ಸಾಕ್ಷಿ ಮಲಿಕ್

ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ​​(ಐಒಎ) ಅಧ್ಯಕ್ಷೆ ಪಿಟಿ ಉಷಾ ಕುಸ್ತಿಪಟುಗಳ ವಿರುದ್ಧ ತೀವ್ರವಾಗಿ ಟೀಕಿಸಿದ ಒಂದು ದಿನದ ನಂತರ ಒಲಂಪಿಕ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಅವರು ಟ್ವೀಟ್ ಮಾಡಿದ್ದಾರೆ.

”ನಮ್ಮ ಕ್ರೀಡಾಪಟುಗಳು ನ್ಯಾಯಕ್ಕಾಗಿ ಬೀದಿಗಿಳಿದಿರುವುದನ್ನು ನೋಡುವುದು ನನಗೆ ನೋವುಂಟುಮಾಡುತ್ತದೆ. ಅವರು ನಮ್ಮ ಮಹಾನ್ ರಾಷ್ಟ್ರವನ್ನು ಪ್ರತಿನಿಧಿಸಲು ಮತ್ತು ನಮಗೆ ಹೆಮ್ಮೆ ತರಲು ಶ್ರಮಿಸಿದ್ದಾರೆ. ರಾಷ್ಟ್ರವಾಗಿ, ಪ್ರತಿಯೊಬ್ಬ ವ್ಯಕ್ತಿಯ ಸಮಗ್ರತೆ ಮತ್ತು ಘನತೆಯನ್ನು ಕಾಪಾಡುವ ಜವಾಬ್ದಾರರು, ಇದು ಎಂದಿಗೂ ಸಂಭವಿಸಬಾರದು” ಎಂದು ಅಭಿಪ್ರಾಯ ಹೊರ ಹಾಕಿದ್ದಾರೆ.

”ಇದೊಂದು ಸೂಕ್ಷ್ಮ ವಿಷಯವಾಗಿದ್ದು, ನಿಷ್ಪಕ್ಷಪಾತ ಮತ್ತು ಪಾರದರ್ಶಕ ರೀತಿಯಲ್ಲಿ ವ್ಯವಹರಿಸಬೇಕು. ನ್ಯಾಯ ಒದಗಿಸಲು ಸಂಬಂಧಪಟ್ಟ ಅಧಿಕಾರಿಗಳು ಶೀಘ್ರ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

”ಪ್ರೀತಿಯ ಪಿಟಿ ಉಷಾ ಅವರೇ, ನಿಮ್ಮ ಸಹ ಕ್ರೀಡಾಪಟುಗಳು ಪುನರಾವರ್ತಿತ ಮತ್ತು ಅನಪೇಕ್ಷಿತ ಲೈಂಗಿಕ ಕಿರುಕುಳದ ಬಗ್ಗೆ ಆರೋಪಿಸಿ ಪ್ರತಿಭಟನೆ ಮಾಡುವುದನ್ನು ಅವಹೇಳನ ಮಾಡುವುದು ನಿಮಗೆ ವ್ಯಕ್ತಿತ್ವಕ್ಕೆ ಸರಿಯಾದುದಲ್ಲ. ಅವರ ಹಕ್ಕುಗಳಿಗಾಗಿ ಅವರು ಪ್ರತಿಭಟಿಸುತ್ತಿದ್ದಾರೆ. ಅದು “ರಾಷ್ಟ್ರದ ಇಮೇಜ್ ಅನ್ನು ಕಳಂಕಗೊಳಿಸುವುದಿಲ್ಲ”. ಅವರ ಕಳವಳಗಳನ್ನು ನಿರ್ಲಕ್ಷಿಸುವುದು – ಅವುಗಳನ್ನು ಕೇಳುವ ಬದಲು, ಅವುಗಳನ್ನು ತನಿಖೆ ಮಾಡುವುದು ಮತ್ತು ಕ್ರಮ ಕೈಗೊಳ್ಳುವ ಕೆಲಸ ಮಾಡಬೇಕು” ಎಂದು ಕಾಂಗ್ರೆಸ್ ನಾಯಕ ಶಶಿ ತರೂರು ಟ್ವೀಟ್ ಮಾಡಿದ್ದಾರೆ.

ಪಿಟಿ ಉಷಾ ಅವರ ಹೇಳಿಕೆ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಹಿರಿಯ ಪತ್ರಕರ್ತ ರಾಜಾರಾಂ ತಲ್ಲೂರು ಅವರು ನಿಮ್ಮಿಂದ ಇದನ್ನು ನಿರೀಕ್ಷಿಸಿರಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ”ನಾನು ಇವತ್ತು ಪಯ್ಯೋಳಿ ಎಕ್ಸ್‌ಪ್ರೆಸ್ ಅಭಿಮಾನಿ ಎಂಬ ನನ್ನ ಇಷ್ಟದ ಹಣೆಪಟ್ಟಿಯನ್ನು ಕಳಚಿಕೊಂಡಿದ್ದೇನೆ” ಎಂದಿದ್ದಾರೆ.

”ದೇಶಕ್ಕೆ ಕೀರ್ತಿ ತಂದ ಕುಸ್ತಿ ಪಟು ಹೆಣ್ಣುಮಕ್ಕಳು, ತಮ್ಮ ಮೇಲೆ ನಡೆದಿರುವ ದೌರ್ಜನ್ಯದ ವಿರುದ್ಧ ಹೋರಾಟಕ್ಕೆ ಸಹಾಯ ಕೊಡಿ ಎಂದು ದಿಲ್ಲಿಯಲ್ಲಿ ಧರಣಿ ಹಮ್ಮಿಕೊಂಡು ಅಂಗಲಾಚಿ ಕುಳಿತಿರುವಾಗ, ಮೊದಲು ಬಂದು ಅವರ ಅಹವಾಲು ಕೇಳಬೇಕಿದ್ದ ಭಾರತ ಒಲಿಂಪಿಕ್ ಅಸೋಸಿಯೇಷನ್‌ನ ಹೊಸ ಅಧ್ಯಕ್ಷೆ ಪಿ ಟಿ ಉಷಾ ಅವರು, ಈ ಹೆಣ್ಣುಮಕ್ಕಳು ದೇಶದ ಮರ್ಯಾದೆಗೆ ಧಕ್ಕೆ ತರುತ್ತಿದ್ದಾರೆ ಎಂದು ಹರಿಹಾಯ್ದಿದ್ದಾರೆ. ಇದು ಅತ್ಯಂತ ಶೋಚನೀಯ ಸ್ಥಿತಿ” ಎಂದು ಹೇಳಿದ್ದಾರೆ.

”ಐದಾರು ತಿಂಗಳ ಹಿಂದೆ ಇದೇ ಪಿ ಟಿ ಉಷಾ ಅವರು ತಮ್ಮ ಅಕಾಡೆಮಿಯಲ್ಲಿ ಭೂವಿವಾದವೊಂದು ಸೃಷ್ಟಿ ಆಗಿದ್ದಾಗ (ಅದರ ಒಳಸುಳಿಗಳು ಏನಿವೆ ನನಗೆ ಅರಿವಿಲ್ಲ), ತಾವೇ ಸ್ವತಃ ಮಾಧ್ಯಮಗಳ ಎದುರು ಬಂದು ತಮ್ಮ ಸಂಸ್ಥೆಯ ದಯನೀಯ ಸ್ಥಿತಿಯ ಬಗ್ಗೆ ಅಲವತ್ತುಕೊಂಡದ್ದು ರಾಷ್ಟ್ರೀಯ ಸುದ್ದಿ ಆಗಿತ್ತು. ಹಾಗಾಗಿ, ಒಂದು ಸಮಸ್ಯೆ ಎದುರಾದಾಗ, ಅದನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಿದರೆ ಪರಿಹಾರ ಸಿಗಬಹುದೆಂಬ ಪೂರ್ವೋದಾಹರಣೆ ಹಾಕಿಕೊಟ್ಟ ಹಿರಿಯಕ್ಕ ಅವರೇ, ಈಗ ಅದನ್ನೇ ಅನುಸರಿಸಿದ ಕಿರಿಯ ಕ್ರೀಡಾಪಟುಗಳ ಮೇಲೆ ಹರಿಹಾಯುವುದು ಖಂಡಿತಕ್ಕೂ ಭಾರತದ ಕ್ರೀಡಾಜಗತ್ತಿನ ನೈತಿಕ ಸ್ಥೈರ್ಯಕ್ಕೆ ಮರ್ಮಾಘಾತ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

”ಈಗ ಸ್ವತಃ ರಾಜ್ಯಸಭಾ ಸದಸ್ಯರಾಗಿ, ಒಲಿಂಪಿಕ್ ಅಸೋಸಿಯೇಷನ್‌ನ ಅಧ್ಯಕ್ಷೆಯಾಗಿ ಉಷಾ ಅವರಿಗೆ ತೀರಿಸಲು ಸಾಕಷ್ಟು ದೊಡ್ಡ ಋಣದ ಹೊರೆ ಇರಬಹುದು. ಆದರೆ, ಅದನ್ನು ತೀರಿಸಲು, ಈ ಕ್ರೀಡಾಪಟುಗಳ ಮೇಲೆ ಆಗಿರುವ ಲೈಂಗಿಕ ದೌರ್ಜನ್ಯದ ಪರೋಕ್ಷ ಸಮರ್ಥನೆಗೆ ಇಳಿಯುವ ಮೂಲಕ ಪಿ ಟಿ ಉಷಾ, ತಮ್ಮ ಜಾಗತಿಕ ಮಟ್ಟದ ಕ್ರೀಡಾಸಾಧನೆಗಳ ಸಾಮಾಜಿಕ ಔನ್ನತ್ಯವನ್ನು ರಾಜಕೀಯದ ಕೆಸರು ರಾಡಿಯಲ್ಲಿ ಮುಳುಗಿಸಿ ಸಣ್ಣವರಾಗಿದ್ದಾರೆ. ಆ ಹೆಣ್ಣುಮಕ್ಕಳ ದೂರನ್ನು ಕನಿಷ್ಠ ಏನೆಂದು ಕೇಳುವ ನೈತಿಕತೆಯನ್ನು ಅವರು ಉಳಿಸಿಕೊಳ್ಳಬೇಕಾಗಿತ್ತು. ತುಂಬಾ ಬೇಸರದಿಂದ ಇದನ್ನು ದಾಖಲಿಸುತ್ತಿದ್ದೇನೆ” ಎಂದು ತಲ್ಲೂರು ಅವರು ಬರೆದುಕೊಂಡಿದ್ದಾರೆ.

ಮಹೇಂದ್ರ ಹಿಪ್ಪರಗಿ ಎನ್ನುವವರು ಸಾಮಾಜಿಕ ಮಾಧ್ಯಮ ಫೇಸ್‌ಬುಕ್ ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದ್ದು, ”ದಿಲ್ಲಿ ಬೀದಿಯಲ್ಲಿ ದೇಶಕ್ಕೆ ಕೀರ್ತಿ ತಂದ ಕುಸ್ತಿಪಟು ಹೆಣ್ಣು ಮಕ್ಕಳು ತಮ್ಮ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯಕ್ಕೆ ನ್ಯಾಯ ಒದಗಿಸಿ ಎಂದು ಅಂಗಲಾಚಿ ಕುಳಿತಿರುವಾಗ ಸ್ವತಃ ಕ್ರೀಡಾಪಟು, ಭಾರತ ಒಲಿಂಪಿಕ್ ಅಸೋಸಿಯೇಷನ್‌ನ ಅಧ್ಯಕ್ಷೆ ಇವೆಲ್ಲಕ್ಕಿಂತ ಮುಖ್ಯವಾಗಿ ತಾನೊಬ್ಬ ಹೆಣ್ಣು ಮಗಳಾಗಿ ಎಲ್ಲರಿಗಿಂತ ಮೊದಲು ಬಂದು ಅವರ ಅಹವಾಲು ಕೇಳಬೇಕಿತ್ತು. ಆದರೆ ಪಿ ಟಿ ಉಷಾ ಧರಣಿ ನಿರತ ಈ ಹೆಣ್ಣು ಮಕ್ಕಳು ದೇಶದ ಮರ್ಯಾದೆಗೆ ಧಕ್ಕೆ ತರುತ್ತಿದ್ದಾರೆ ಎನ್ನುತ್ತಿದ್ದಾಳಲ್ಲ ಈಕೆ ನಿಜವಾಗಿಯೂ ಮನುಷ್ಯಳಾ…?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...