Homeಮುಖಪುಟಕುಸ್ತಿಪಟುಗಳ ಪ್ರತಿಭಟನೆ ದೇಶಕ್ಕೆ ಕಳಂಕ ಎಂದ ಪಿಟಿ ಉಷಾ: ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ

ಕುಸ್ತಿಪಟುಗಳ ಪ್ರತಿಭಟನೆ ದೇಶಕ್ಕೆ ಕಳಂಕ ಎಂದ ಪಿಟಿ ಉಷಾ: ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ

- Advertisement -
- Advertisement -

ಭಾರತೀಯ ಕುಸ್ತಿ ಫೆಡರೇಶನ್‌ ಅಧ್ಯಕ್ಷ ಹಾಗೂ ಬಿಜೆಪಿ ಸಂಸದರಾಗಿರುವ ಬ್ರಿಜ್‌ಭೂಷಣ್‌ ಸಿಂಗ್‌ ವಿರುದ್ಧ ಲೈಂಗಿಕ ಕಿರುಕುಳ, ಬೆದರಿಕೆ ಆರೋಪ ಮಾಡಿ, ಅವರ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳ ನಡೆ ಬಗ್ಗೆ ಭಾರತೀಯ ಒಲಿಂಪಿಕ್ಸ್‌ ಸಂಸ್ಥೆ(ಐಒಎ) ಅಧ್ಯಕ್ಷೆ ಪಿ.ಟಿ. ಉಷಾ ಟೀಕಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಪಿಟಿ ಉಷಾ, ”ಕುಸ್ತಿಪಟುಗಳು ದೆಹಲಿಯಲ್ಲಿ ಸಾರ್ವಜನಿಕ ಪ್ರತಿಭಟನೆಗೆ ಕುಳಿತುಕೊಳ್ಳಲು ನಿರ್ಧರಿಸುವ ಮುನ್ನ ತಾವು ಮಾಡಿದ ಆರೋಪಗಳನ್ನು ಪರಿಶೀಲಿಸುವ ಸಮಿತಿಯ ವರದಿ ಹೊರಬರುವವರೆಗು ಕಾಯಬೇಕಿತ್ತು. ಅದಕ್ಕೂ ಮುನ್ನ ಪ್ರತಿಭಟನೆಗೆ ಇಳಿದಿರುವುದು ಅಶಿಸ್ತಿನ ನಡೆಯಾಗಿದೆ ಎಂದು ಹೇಳಿದ್ದಾರೆ.

ಈ ಆಟಗಾರರು ಬೀದಿಗಿಳಿದು ಪ್ರತಿಭಟನೆ ಮಾಡಬಾರದಿತ್ತು. ಕನಿಷ್ಠ ಸಮಿತಿಯ ವರದಿ ಬರುವವರೆಗಾದರೂ ಕಾಯಬೇಕಿತ್ತು. ಕುಸ್ತಿಪಟುಗಳ ಪ್ರತಿಭಟನೆಯಿಂದಾಗಿ ದೇಶದ ಘನತೆಗೆ ಧಕ್ಕೆಯಾಗುತ್ತಿದೆ. ಇದು ನಕಾರಾತ್ಮಕ ಧೋರಣೆ ಎಂದಿದ್ದಾರೆ.

ಲೈಂಗಿಕ ಕಿರುಕುಳದ ವಿರುದ್ಧ ಪ್ರತಿಭಟೆನೆ ನಡೆಸುತ್ತಿರುವುದನ್ನು ಟೀಕಿಸಿರುವ ಪಿಟಿ ಉಷಾ ಮೇಲೆ ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ: ಪಿಟಿ ಉಷಾ ಮಹಿಳೆಯಾಗಿ ನಮ್ಮ ಪ್ರತಿಭಟನೆಗೆ ಬೆಂಬಲ ನೀಡದಿರುವುದು ನೋವಾಗಿದೆ: ಕುಸ್ತಿಪಟು ಸಾಕ್ಷಿ ಮಲಿಕ್

ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ​​(ಐಒಎ) ಅಧ್ಯಕ್ಷೆ ಪಿಟಿ ಉಷಾ ಕುಸ್ತಿಪಟುಗಳ ವಿರುದ್ಧ ತೀವ್ರವಾಗಿ ಟೀಕಿಸಿದ ಒಂದು ದಿನದ ನಂತರ ಒಲಂಪಿಕ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಅವರು ಟ್ವೀಟ್ ಮಾಡಿದ್ದಾರೆ.

”ನಮ್ಮ ಕ್ರೀಡಾಪಟುಗಳು ನ್ಯಾಯಕ್ಕಾಗಿ ಬೀದಿಗಿಳಿದಿರುವುದನ್ನು ನೋಡುವುದು ನನಗೆ ನೋವುಂಟುಮಾಡುತ್ತದೆ. ಅವರು ನಮ್ಮ ಮಹಾನ್ ರಾಷ್ಟ್ರವನ್ನು ಪ್ರತಿನಿಧಿಸಲು ಮತ್ತು ನಮಗೆ ಹೆಮ್ಮೆ ತರಲು ಶ್ರಮಿಸಿದ್ದಾರೆ. ರಾಷ್ಟ್ರವಾಗಿ, ಪ್ರತಿಯೊಬ್ಬ ವ್ಯಕ್ತಿಯ ಸಮಗ್ರತೆ ಮತ್ತು ಘನತೆಯನ್ನು ಕಾಪಾಡುವ ಜವಾಬ್ದಾರರು, ಇದು ಎಂದಿಗೂ ಸಂಭವಿಸಬಾರದು” ಎಂದು ಅಭಿಪ್ರಾಯ ಹೊರ ಹಾಕಿದ್ದಾರೆ.

”ಇದೊಂದು ಸೂಕ್ಷ್ಮ ವಿಷಯವಾಗಿದ್ದು, ನಿಷ್ಪಕ್ಷಪಾತ ಮತ್ತು ಪಾರದರ್ಶಕ ರೀತಿಯಲ್ಲಿ ವ್ಯವಹರಿಸಬೇಕು. ನ್ಯಾಯ ಒದಗಿಸಲು ಸಂಬಂಧಪಟ್ಟ ಅಧಿಕಾರಿಗಳು ಶೀಘ್ರ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

”ಪ್ರೀತಿಯ ಪಿಟಿ ಉಷಾ ಅವರೇ, ನಿಮ್ಮ ಸಹ ಕ್ರೀಡಾಪಟುಗಳು ಪುನರಾವರ್ತಿತ ಮತ್ತು ಅನಪೇಕ್ಷಿತ ಲೈಂಗಿಕ ಕಿರುಕುಳದ ಬಗ್ಗೆ ಆರೋಪಿಸಿ ಪ್ರತಿಭಟನೆ ಮಾಡುವುದನ್ನು ಅವಹೇಳನ ಮಾಡುವುದು ನಿಮಗೆ ವ್ಯಕ್ತಿತ್ವಕ್ಕೆ ಸರಿಯಾದುದಲ್ಲ. ಅವರ ಹಕ್ಕುಗಳಿಗಾಗಿ ಅವರು ಪ್ರತಿಭಟಿಸುತ್ತಿದ್ದಾರೆ. ಅದು “ರಾಷ್ಟ್ರದ ಇಮೇಜ್ ಅನ್ನು ಕಳಂಕಗೊಳಿಸುವುದಿಲ್ಲ”. ಅವರ ಕಳವಳಗಳನ್ನು ನಿರ್ಲಕ್ಷಿಸುವುದು – ಅವುಗಳನ್ನು ಕೇಳುವ ಬದಲು, ಅವುಗಳನ್ನು ತನಿಖೆ ಮಾಡುವುದು ಮತ್ತು ಕ್ರಮ ಕೈಗೊಳ್ಳುವ ಕೆಲಸ ಮಾಡಬೇಕು” ಎಂದು ಕಾಂಗ್ರೆಸ್ ನಾಯಕ ಶಶಿ ತರೂರು ಟ್ವೀಟ್ ಮಾಡಿದ್ದಾರೆ.

ಪಿಟಿ ಉಷಾ ಅವರ ಹೇಳಿಕೆ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಹಿರಿಯ ಪತ್ರಕರ್ತ ರಾಜಾರಾಂ ತಲ್ಲೂರು ಅವರು ನಿಮ್ಮಿಂದ ಇದನ್ನು ನಿರೀಕ್ಷಿಸಿರಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ”ನಾನು ಇವತ್ತು ಪಯ್ಯೋಳಿ ಎಕ್ಸ್‌ಪ್ರೆಸ್ ಅಭಿಮಾನಿ ಎಂಬ ನನ್ನ ಇಷ್ಟದ ಹಣೆಪಟ್ಟಿಯನ್ನು ಕಳಚಿಕೊಂಡಿದ್ದೇನೆ” ಎಂದಿದ್ದಾರೆ.

”ದೇಶಕ್ಕೆ ಕೀರ್ತಿ ತಂದ ಕುಸ್ತಿ ಪಟು ಹೆಣ್ಣುಮಕ್ಕಳು, ತಮ್ಮ ಮೇಲೆ ನಡೆದಿರುವ ದೌರ್ಜನ್ಯದ ವಿರುದ್ಧ ಹೋರಾಟಕ್ಕೆ ಸಹಾಯ ಕೊಡಿ ಎಂದು ದಿಲ್ಲಿಯಲ್ಲಿ ಧರಣಿ ಹಮ್ಮಿಕೊಂಡು ಅಂಗಲಾಚಿ ಕುಳಿತಿರುವಾಗ, ಮೊದಲು ಬಂದು ಅವರ ಅಹವಾಲು ಕೇಳಬೇಕಿದ್ದ ಭಾರತ ಒಲಿಂಪಿಕ್ ಅಸೋಸಿಯೇಷನ್‌ನ ಹೊಸ ಅಧ್ಯಕ್ಷೆ ಪಿ ಟಿ ಉಷಾ ಅವರು, ಈ ಹೆಣ್ಣುಮಕ್ಕಳು ದೇಶದ ಮರ್ಯಾದೆಗೆ ಧಕ್ಕೆ ತರುತ್ತಿದ್ದಾರೆ ಎಂದು ಹರಿಹಾಯ್ದಿದ್ದಾರೆ. ಇದು ಅತ್ಯಂತ ಶೋಚನೀಯ ಸ್ಥಿತಿ” ಎಂದು ಹೇಳಿದ್ದಾರೆ.

”ಐದಾರು ತಿಂಗಳ ಹಿಂದೆ ಇದೇ ಪಿ ಟಿ ಉಷಾ ಅವರು ತಮ್ಮ ಅಕಾಡೆಮಿಯಲ್ಲಿ ಭೂವಿವಾದವೊಂದು ಸೃಷ್ಟಿ ಆಗಿದ್ದಾಗ (ಅದರ ಒಳಸುಳಿಗಳು ಏನಿವೆ ನನಗೆ ಅರಿವಿಲ್ಲ), ತಾವೇ ಸ್ವತಃ ಮಾಧ್ಯಮಗಳ ಎದುರು ಬಂದು ತಮ್ಮ ಸಂಸ್ಥೆಯ ದಯನೀಯ ಸ್ಥಿತಿಯ ಬಗ್ಗೆ ಅಲವತ್ತುಕೊಂಡದ್ದು ರಾಷ್ಟ್ರೀಯ ಸುದ್ದಿ ಆಗಿತ್ತು. ಹಾಗಾಗಿ, ಒಂದು ಸಮಸ್ಯೆ ಎದುರಾದಾಗ, ಅದನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಿದರೆ ಪರಿಹಾರ ಸಿಗಬಹುದೆಂಬ ಪೂರ್ವೋದಾಹರಣೆ ಹಾಕಿಕೊಟ್ಟ ಹಿರಿಯಕ್ಕ ಅವರೇ, ಈಗ ಅದನ್ನೇ ಅನುಸರಿಸಿದ ಕಿರಿಯ ಕ್ರೀಡಾಪಟುಗಳ ಮೇಲೆ ಹರಿಹಾಯುವುದು ಖಂಡಿತಕ್ಕೂ ಭಾರತದ ಕ್ರೀಡಾಜಗತ್ತಿನ ನೈತಿಕ ಸ್ಥೈರ್ಯಕ್ಕೆ ಮರ್ಮಾಘಾತ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

”ಈಗ ಸ್ವತಃ ರಾಜ್ಯಸಭಾ ಸದಸ್ಯರಾಗಿ, ಒಲಿಂಪಿಕ್ ಅಸೋಸಿಯೇಷನ್‌ನ ಅಧ್ಯಕ್ಷೆಯಾಗಿ ಉಷಾ ಅವರಿಗೆ ತೀರಿಸಲು ಸಾಕಷ್ಟು ದೊಡ್ಡ ಋಣದ ಹೊರೆ ಇರಬಹುದು. ಆದರೆ, ಅದನ್ನು ತೀರಿಸಲು, ಈ ಕ್ರೀಡಾಪಟುಗಳ ಮೇಲೆ ಆಗಿರುವ ಲೈಂಗಿಕ ದೌರ್ಜನ್ಯದ ಪರೋಕ್ಷ ಸಮರ್ಥನೆಗೆ ಇಳಿಯುವ ಮೂಲಕ ಪಿ ಟಿ ಉಷಾ, ತಮ್ಮ ಜಾಗತಿಕ ಮಟ್ಟದ ಕ್ರೀಡಾಸಾಧನೆಗಳ ಸಾಮಾಜಿಕ ಔನ್ನತ್ಯವನ್ನು ರಾಜಕೀಯದ ಕೆಸರು ರಾಡಿಯಲ್ಲಿ ಮುಳುಗಿಸಿ ಸಣ್ಣವರಾಗಿದ್ದಾರೆ. ಆ ಹೆಣ್ಣುಮಕ್ಕಳ ದೂರನ್ನು ಕನಿಷ್ಠ ಏನೆಂದು ಕೇಳುವ ನೈತಿಕತೆಯನ್ನು ಅವರು ಉಳಿಸಿಕೊಳ್ಳಬೇಕಾಗಿತ್ತು. ತುಂಬಾ ಬೇಸರದಿಂದ ಇದನ್ನು ದಾಖಲಿಸುತ್ತಿದ್ದೇನೆ” ಎಂದು ತಲ್ಲೂರು ಅವರು ಬರೆದುಕೊಂಡಿದ್ದಾರೆ.

ಮಹೇಂದ್ರ ಹಿಪ್ಪರಗಿ ಎನ್ನುವವರು ಸಾಮಾಜಿಕ ಮಾಧ್ಯಮ ಫೇಸ್‌ಬುಕ್ ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದ್ದು, ”ದಿಲ್ಲಿ ಬೀದಿಯಲ್ಲಿ ದೇಶಕ್ಕೆ ಕೀರ್ತಿ ತಂದ ಕುಸ್ತಿಪಟು ಹೆಣ್ಣು ಮಕ್ಕಳು ತಮ್ಮ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯಕ್ಕೆ ನ್ಯಾಯ ಒದಗಿಸಿ ಎಂದು ಅಂಗಲಾಚಿ ಕುಳಿತಿರುವಾಗ ಸ್ವತಃ ಕ್ರೀಡಾಪಟು, ಭಾರತ ಒಲಿಂಪಿಕ್ ಅಸೋಸಿಯೇಷನ್‌ನ ಅಧ್ಯಕ್ಷೆ ಇವೆಲ್ಲಕ್ಕಿಂತ ಮುಖ್ಯವಾಗಿ ತಾನೊಬ್ಬ ಹೆಣ್ಣು ಮಗಳಾಗಿ ಎಲ್ಲರಿಗಿಂತ ಮೊದಲು ಬಂದು ಅವರ ಅಹವಾಲು ಕೇಳಬೇಕಿತ್ತು. ಆದರೆ ಪಿ ಟಿ ಉಷಾ ಧರಣಿ ನಿರತ ಈ ಹೆಣ್ಣು ಮಕ್ಕಳು ದೇಶದ ಮರ್ಯಾದೆಗೆ ಧಕ್ಕೆ ತರುತ್ತಿದ್ದಾರೆ ಎನ್ನುತ್ತಿದ್ದಾಳಲ್ಲ ಈಕೆ ನಿಜವಾಗಿಯೂ ಮನುಷ್ಯಳಾ…?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...