Homeಮುಖಪುಟಕುಸ್ತಿಪಟುಗಳ ಪ್ರತಿಭಟನೆ ದೇಶಕ್ಕೆ ಕಳಂಕ ಎಂದ ಪಿಟಿ ಉಷಾ: ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ

ಕುಸ್ತಿಪಟುಗಳ ಪ್ರತಿಭಟನೆ ದೇಶಕ್ಕೆ ಕಳಂಕ ಎಂದ ಪಿಟಿ ಉಷಾ: ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ

- Advertisement -
- Advertisement -

ಭಾರತೀಯ ಕುಸ್ತಿ ಫೆಡರೇಶನ್‌ ಅಧ್ಯಕ್ಷ ಹಾಗೂ ಬಿಜೆಪಿ ಸಂಸದರಾಗಿರುವ ಬ್ರಿಜ್‌ಭೂಷಣ್‌ ಸಿಂಗ್‌ ವಿರುದ್ಧ ಲೈಂಗಿಕ ಕಿರುಕುಳ, ಬೆದರಿಕೆ ಆರೋಪ ಮಾಡಿ, ಅವರ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳ ನಡೆ ಬಗ್ಗೆ ಭಾರತೀಯ ಒಲಿಂಪಿಕ್ಸ್‌ ಸಂಸ್ಥೆ(ಐಒಎ) ಅಧ್ಯಕ್ಷೆ ಪಿ.ಟಿ. ಉಷಾ ಟೀಕಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಪಿಟಿ ಉಷಾ, ”ಕುಸ್ತಿಪಟುಗಳು ದೆಹಲಿಯಲ್ಲಿ ಸಾರ್ವಜನಿಕ ಪ್ರತಿಭಟನೆಗೆ ಕುಳಿತುಕೊಳ್ಳಲು ನಿರ್ಧರಿಸುವ ಮುನ್ನ ತಾವು ಮಾಡಿದ ಆರೋಪಗಳನ್ನು ಪರಿಶೀಲಿಸುವ ಸಮಿತಿಯ ವರದಿ ಹೊರಬರುವವರೆಗು ಕಾಯಬೇಕಿತ್ತು. ಅದಕ್ಕೂ ಮುನ್ನ ಪ್ರತಿಭಟನೆಗೆ ಇಳಿದಿರುವುದು ಅಶಿಸ್ತಿನ ನಡೆಯಾಗಿದೆ ಎಂದು ಹೇಳಿದ್ದಾರೆ.

ಈ ಆಟಗಾರರು ಬೀದಿಗಿಳಿದು ಪ್ರತಿಭಟನೆ ಮಾಡಬಾರದಿತ್ತು. ಕನಿಷ್ಠ ಸಮಿತಿಯ ವರದಿ ಬರುವವರೆಗಾದರೂ ಕಾಯಬೇಕಿತ್ತು. ಕುಸ್ತಿಪಟುಗಳ ಪ್ರತಿಭಟನೆಯಿಂದಾಗಿ ದೇಶದ ಘನತೆಗೆ ಧಕ್ಕೆಯಾಗುತ್ತಿದೆ. ಇದು ನಕಾರಾತ್ಮಕ ಧೋರಣೆ ಎಂದಿದ್ದಾರೆ.

ಲೈಂಗಿಕ ಕಿರುಕುಳದ ವಿರುದ್ಧ ಪ್ರತಿಭಟೆನೆ ನಡೆಸುತ್ತಿರುವುದನ್ನು ಟೀಕಿಸಿರುವ ಪಿಟಿ ಉಷಾ ಮೇಲೆ ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ: ಪಿಟಿ ಉಷಾ ಮಹಿಳೆಯಾಗಿ ನಮ್ಮ ಪ್ರತಿಭಟನೆಗೆ ಬೆಂಬಲ ನೀಡದಿರುವುದು ನೋವಾಗಿದೆ: ಕುಸ್ತಿಪಟು ಸಾಕ್ಷಿ ಮಲಿಕ್

ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ​​(ಐಒಎ) ಅಧ್ಯಕ್ಷೆ ಪಿಟಿ ಉಷಾ ಕುಸ್ತಿಪಟುಗಳ ವಿರುದ್ಧ ತೀವ್ರವಾಗಿ ಟೀಕಿಸಿದ ಒಂದು ದಿನದ ನಂತರ ಒಲಂಪಿಕ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಅವರು ಟ್ವೀಟ್ ಮಾಡಿದ್ದಾರೆ.

”ನಮ್ಮ ಕ್ರೀಡಾಪಟುಗಳು ನ್ಯಾಯಕ್ಕಾಗಿ ಬೀದಿಗಿಳಿದಿರುವುದನ್ನು ನೋಡುವುದು ನನಗೆ ನೋವುಂಟುಮಾಡುತ್ತದೆ. ಅವರು ನಮ್ಮ ಮಹಾನ್ ರಾಷ್ಟ್ರವನ್ನು ಪ್ರತಿನಿಧಿಸಲು ಮತ್ತು ನಮಗೆ ಹೆಮ್ಮೆ ತರಲು ಶ್ರಮಿಸಿದ್ದಾರೆ. ರಾಷ್ಟ್ರವಾಗಿ, ಪ್ರತಿಯೊಬ್ಬ ವ್ಯಕ್ತಿಯ ಸಮಗ್ರತೆ ಮತ್ತು ಘನತೆಯನ್ನು ಕಾಪಾಡುವ ಜವಾಬ್ದಾರರು, ಇದು ಎಂದಿಗೂ ಸಂಭವಿಸಬಾರದು” ಎಂದು ಅಭಿಪ್ರಾಯ ಹೊರ ಹಾಕಿದ್ದಾರೆ.

”ಇದೊಂದು ಸೂಕ್ಷ್ಮ ವಿಷಯವಾಗಿದ್ದು, ನಿಷ್ಪಕ್ಷಪಾತ ಮತ್ತು ಪಾರದರ್ಶಕ ರೀತಿಯಲ್ಲಿ ವ್ಯವಹರಿಸಬೇಕು. ನ್ಯಾಯ ಒದಗಿಸಲು ಸಂಬಂಧಪಟ್ಟ ಅಧಿಕಾರಿಗಳು ಶೀಘ್ರ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

”ಪ್ರೀತಿಯ ಪಿಟಿ ಉಷಾ ಅವರೇ, ನಿಮ್ಮ ಸಹ ಕ್ರೀಡಾಪಟುಗಳು ಪುನರಾವರ್ತಿತ ಮತ್ತು ಅನಪೇಕ್ಷಿತ ಲೈಂಗಿಕ ಕಿರುಕುಳದ ಬಗ್ಗೆ ಆರೋಪಿಸಿ ಪ್ರತಿಭಟನೆ ಮಾಡುವುದನ್ನು ಅವಹೇಳನ ಮಾಡುವುದು ನಿಮಗೆ ವ್ಯಕ್ತಿತ್ವಕ್ಕೆ ಸರಿಯಾದುದಲ್ಲ. ಅವರ ಹಕ್ಕುಗಳಿಗಾಗಿ ಅವರು ಪ್ರತಿಭಟಿಸುತ್ತಿದ್ದಾರೆ. ಅದು “ರಾಷ್ಟ್ರದ ಇಮೇಜ್ ಅನ್ನು ಕಳಂಕಗೊಳಿಸುವುದಿಲ್ಲ”. ಅವರ ಕಳವಳಗಳನ್ನು ನಿರ್ಲಕ್ಷಿಸುವುದು – ಅವುಗಳನ್ನು ಕೇಳುವ ಬದಲು, ಅವುಗಳನ್ನು ತನಿಖೆ ಮಾಡುವುದು ಮತ್ತು ಕ್ರಮ ಕೈಗೊಳ್ಳುವ ಕೆಲಸ ಮಾಡಬೇಕು” ಎಂದು ಕಾಂಗ್ರೆಸ್ ನಾಯಕ ಶಶಿ ತರೂರು ಟ್ವೀಟ್ ಮಾಡಿದ್ದಾರೆ.

ಪಿಟಿ ಉಷಾ ಅವರ ಹೇಳಿಕೆ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಹಿರಿಯ ಪತ್ರಕರ್ತ ರಾಜಾರಾಂ ತಲ್ಲೂರು ಅವರು ನಿಮ್ಮಿಂದ ಇದನ್ನು ನಿರೀಕ್ಷಿಸಿರಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ”ನಾನು ಇವತ್ತು ಪಯ್ಯೋಳಿ ಎಕ್ಸ್‌ಪ್ರೆಸ್ ಅಭಿಮಾನಿ ಎಂಬ ನನ್ನ ಇಷ್ಟದ ಹಣೆಪಟ್ಟಿಯನ್ನು ಕಳಚಿಕೊಂಡಿದ್ದೇನೆ” ಎಂದಿದ್ದಾರೆ.

”ದೇಶಕ್ಕೆ ಕೀರ್ತಿ ತಂದ ಕುಸ್ತಿ ಪಟು ಹೆಣ್ಣುಮಕ್ಕಳು, ತಮ್ಮ ಮೇಲೆ ನಡೆದಿರುವ ದೌರ್ಜನ್ಯದ ವಿರುದ್ಧ ಹೋರಾಟಕ್ಕೆ ಸಹಾಯ ಕೊಡಿ ಎಂದು ದಿಲ್ಲಿಯಲ್ಲಿ ಧರಣಿ ಹಮ್ಮಿಕೊಂಡು ಅಂಗಲಾಚಿ ಕುಳಿತಿರುವಾಗ, ಮೊದಲು ಬಂದು ಅವರ ಅಹವಾಲು ಕೇಳಬೇಕಿದ್ದ ಭಾರತ ಒಲಿಂಪಿಕ್ ಅಸೋಸಿಯೇಷನ್‌ನ ಹೊಸ ಅಧ್ಯಕ್ಷೆ ಪಿ ಟಿ ಉಷಾ ಅವರು, ಈ ಹೆಣ್ಣುಮಕ್ಕಳು ದೇಶದ ಮರ್ಯಾದೆಗೆ ಧಕ್ಕೆ ತರುತ್ತಿದ್ದಾರೆ ಎಂದು ಹರಿಹಾಯ್ದಿದ್ದಾರೆ. ಇದು ಅತ್ಯಂತ ಶೋಚನೀಯ ಸ್ಥಿತಿ” ಎಂದು ಹೇಳಿದ್ದಾರೆ.

”ಐದಾರು ತಿಂಗಳ ಹಿಂದೆ ಇದೇ ಪಿ ಟಿ ಉಷಾ ಅವರು ತಮ್ಮ ಅಕಾಡೆಮಿಯಲ್ಲಿ ಭೂವಿವಾದವೊಂದು ಸೃಷ್ಟಿ ಆಗಿದ್ದಾಗ (ಅದರ ಒಳಸುಳಿಗಳು ಏನಿವೆ ನನಗೆ ಅರಿವಿಲ್ಲ), ತಾವೇ ಸ್ವತಃ ಮಾಧ್ಯಮಗಳ ಎದುರು ಬಂದು ತಮ್ಮ ಸಂಸ್ಥೆಯ ದಯನೀಯ ಸ್ಥಿತಿಯ ಬಗ್ಗೆ ಅಲವತ್ತುಕೊಂಡದ್ದು ರಾಷ್ಟ್ರೀಯ ಸುದ್ದಿ ಆಗಿತ್ತು. ಹಾಗಾಗಿ, ಒಂದು ಸಮಸ್ಯೆ ಎದುರಾದಾಗ, ಅದನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಿದರೆ ಪರಿಹಾರ ಸಿಗಬಹುದೆಂಬ ಪೂರ್ವೋದಾಹರಣೆ ಹಾಕಿಕೊಟ್ಟ ಹಿರಿಯಕ್ಕ ಅವರೇ, ಈಗ ಅದನ್ನೇ ಅನುಸರಿಸಿದ ಕಿರಿಯ ಕ್ರೀಡಾಪಟುಗಳ ಮೇಲೆ ಹರಿಹಾಯುವುದು ಖಂಡಿತಕ್ಕೂ ಭಾರತದ ಕ್ರೀಡಾಜಗತ್ತಿನ ನೈತಿಕ ಸ್ಥೈರ್ಯಕ್ಕೆ ಮರ್ಮಾಘಾತ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

”ಈಗ ಸ್ವತಃ ರಾಜ್ಯಸಭಾ ಸದಸ್ಯರಾಗಿ, ಒಲಿಂಪಿಕ್ ಅಸೋಸಿಯೇಷನ್‌ನ ಅಧ್ಯಕ್ಷೆಯಾಗಿ ಉಷಾ ಅವರಿಗೆ ತೀರಿಸಲು ಸಾಕಷ್ಟು ದೊಡ್ಡ ಋಣದ ಹೊರೆ ಇರಬಹುದು. ಆದರೆ, ಅದನ್ನು ತೀರಿಸಲು, ಈ ಕ್ರೀಡಾಪಟುಗಳ ಮೇಲೆ ಆಗಿರುವ ಲೈಂಗಿಕ ದೌರ್ಜನ್ಯದ ಪರೋಕ್ಷ ಸಮರ್ಥನೆಗೆ ಇಳಿಯುವ ಮೂಲಕ ಪಿ ಟಿ ಉಷಾ, ತಮ್ಮ ಜಾಗತಿಕ ಮಟ್ಟದ ಕ್ರೀಡಾಸಾಧನೆಗಳ ಸಾಮಾಜಿಕ ಔನ್ನತ್ಯವನ್ನು ರಾಜಕೀಯದ ಕೆಸರು ರಾಡಿಯಲ್ಲಿ ಮುಳುಗಿಸಿ ಸಣ್ಣವರಾಗಿದ್ದಾರೆ. ಆ ಹೆಣ್ಣುಮಕ್ಕಳ ದೂರನ್ನು ಕನಿಷ್ಠ ಏನೆಂದು ಕೇಳುವ ನೈತಿಕತೆಯನ್ನು ಅವರು ಉಳಿಸಿಕೊಳ್ಳಬೇಕಾಗಿತ್ತು. ತುಂಬಾ ಬೇಸರದಿಂದ ಇದನ್ನು ದಾಖಲಿಸುತ್ತಿದ್ದೇನೆ” ಎಂದು ತಲ್ಲೂರು ಅವರು ಬರೆದುಕೊಂಡಿದ್ದಾರೆ.

ಮಹೇಂದ್ರ ಹಿಪ್ಪರಗಿ ಎನ್ನುವವರು ಸಾಮಾಜಿಕ ಮಾಧ್ಯಮ ಫೇಸ್‌ಬುಕ್ ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದ್ದು, ”ದಿಲ್ಲಿ ಬೀದಿಯಲ್ಲಿ ದೇಶಕ್ಕೆ ಕೀರ್ತಿ ತಂದ ಕುಸ್ತಿಪಟು ಹೆಣ್ಣು ಮಕ್ಕಳು ತಮ್ಮ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯಕ್ಕೆ ನ್ಯಾಯ ಒದಗಿಸಿ ಎಂದು ಅಂಗಲಾಚಿ ಕುಳಿತಿರುವಾಗ ಸ್ವತಃ ಕ್ರೀಡಾಪಟು, ಭಾರತ ಒಲಿಂಪಿಕ್ ಅಸೋಸಿಯೇಷನ್‌ನ ಅಧ್ಯಕ್ಷೆ ಇವೆಲ್ಲಕ್ಕಿಂತ ಮುಖ್ಯವಾಗಿ ತಾನೊಬ್ಬ ಹೆಣ್ಣು ಮಗಳಾಗಿ ಎಲ್ಲರಿಗಿಂತ ಮೊದಲು ಬಂದು ಅವರ ಅಹವಾಲು ಕೇಳಬೇಕಿತ್ತು. ಆದರೆ ಪಿ ಟಿ ಉಷಾ ಧರಣಿ ನಿರತ ಈ ಹೆಣ್ಣು ಮಕ್ಕಳು ದೇಶದ ಮರ್ಯಾದೆಗೆ ಧಕ್ಕೆ ತರುತ್ತಿದ್ದಾರೆ ಎನ್ನುತ್ತಿದ್ದಾಳಲ್ಲ ಈಕೆ ನಿಜವಾಗಿಯೂ ಮನುಷ್ಯಳಾ…?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...