Homeಕರ್ನಾಟಕಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

- Advertisement -
- Advertisement -

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ‘ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ’ ಮುಖಂಡರು ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿದರು.

“ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯಗಳಿಗೆ ಸರ್ಕಾರ ಮಂಜೂರು ಮಾಡಿದ ಜಮೀನುಗಳನ್ನು ರಕ್ಷಿಸುವ ಉದ್ದೇಶದಿಂದ 1978ರಲ್ಲಿ ಜಾರಿಗೆ ಬಂದ ಕರ್ನಾಟಕ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡಗಳ (ಕೆಲವು ಜಮೀನುಗಳ ಪರಭಾರೆ ನಿಷೇಧ) ಕಾಯ್ದೆ (ಪಿಟಿಸಿಎಲ್‌ ಆಕ್ಟ್‌) ಅನ್ನು ಸಂರಕ್ಷಿಸುವುದು ಸಾಮಾಜಿಕ ನ್ಯಾಯದ ಮೂಲಭೂತ ಭಾಗವಾಗಿದೆ. ಆದರೆ 2023ರ ತಿದ್ದುಪಡಿ ಕಾಯ್ದೆಯ ನಂತರದಲ್ಲಿ ರಾಜ್ಯ ಸರ್ಕಾರ, ಕಂದಾಯ ಇಲಾಖೆ ಅಧಿಕಾರಿಗಳು, ಜಿಲ್ಲಾ ಮಟ್ಟದ ಎಸಿ, ಡಿಸಿಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ಗಳಲ್ಲಿ ನಡೆಯುತ್ತಿರುವ ಕೆಲವು ವ್ಯಾಖ್ಯಾನಗಳು ಮತ್ತು ಆದೇಶಗಳಿಂದ ಪರಿಶಿಷ್ಟ ಜಾತಿ / ಪಂಗಡದವರಿಗೆ ಉದ್ದೇಶಪೂರ್ವಕವಾಗಿ ಅನ್ಯಾಯ ಆಗುತ್ತಿರುವುದನ್ನು ನಾವು ವಿರೋಧಿಸುತ್ತೇವೆ” ಹೋರಾಟ ಸಮಿತಿ ಹೇಳಿದೆ.

“ಮುಖ್ಯವಾಗಿ ಪಿ.ಟಿ.ಸಿ.ಎಲ್. ಕಾಯ್ದೆ ಕಲಂ 3(1)ಬಿ.ಯಲ್ಲಿ ಬರುವ ಮಂಜೂರು ಜಮೀನುಗಳ ವಿಚಾರಗಳಲ್ಲಿ ಗೊಂದಲಗಳು ಇರುವುದರಿಂದ ಉದ್ದೇಶ ಪೂರ್ವಕವಾಗಿ ನ್ಯಾಯಾಲಯಗಳು ಸರ್ಕಾರದಿಂದ ಮಂಜೂರಾಗಿದ್ದರೂ ಸಹ (ಇನಾಂ, ಜಿ.ಎಂ.ಎಫ್, ಕನಿಷ್ಠ ಬೆಲೆ, ಮಾರುಕಟ್ಟೆ ಬೆಲಗಿಂತ ಕಡಿಮೆ ಬೆಲೆ, ನಿರ್ದಿಷ್ಟ ಬೆಲೆ ಇತ್ಯಾದಿ) ಭೂಮಿಗಳನ್ನು ಉದ್ದೇಶ ಪೂರ್ವಕವಾಗಿ ಕಾಯ್ದೆ ವ್ಯಾಪ್ತಿಯಲ್ಲಿ ಬರುವುದಿಲ್ಲವೆಂದು ವಜಾ ಮಾಡುತ್ತಿದ್ದಾರೆ. ಕಲಂ 3(1)ಬಿ.ಯಲ್ಲಿ ಎಲ್ಲ ಸರ್ಕಾರದಿಂದ ಮಂಜೂರಾದ ಜಮೀನುಗಳು ಎಂದು ಇದ್ದರೂ ಸಹ ನ್ಯಾಯಾಲಯಗಳು ದುರುದ್ದೇಶದಿಂದ ಗೊಂದಲ ಸೃಷ್ಟಿಸುತ್ತಿದ್ದಾರೆ. ಆದ್ದರಿಂದ ಎಲ್ಲಾ ಮಂಜೂರಾದ ಭೂಮಿಗಳ ಬಗ್ಗೆ ಸ್ಪಷ್ಟಪಡಿಸಿ ತಿದ್ದುಪಡಿ ಮಾಡಬೇಕು” ಹೋರಾಟಗಾರರು ಆಗ್ರಹಿಸಿದ್ದಾರೆ.

“ಎಲ್ಲ ನ್ಯಾಯಾಲಯಗಳಲ್ಲಿ ಶೇ90 ಸರ್ಕಾರಿ ವಕೀಲರುಗಳು ಸರ್ಕಾರದ ಕಾಯ್ದೆಗಳು/ ಆದೇಶಗಳನ್ನು ರಕ್ಷಣೆ ಮಾಡುವ ನಿಟ್ಟಿನಲ್ಲಿ ಸರಿಯಾಗಿ ವಾದ ಮಂಡಿಸುತ್ತಿಲ್ಲವಾದ್ದರಿಂದ, ಸರ್ಕಾರ ತಂದಿರುವ ಕಾನೂನುಗಳು ಸೋಲುತ್ತಿವೆ. ಇದಕ್ಕೆ ನೇರ ಕಾರಣ ಸರ್ಕಾರಿ ವಕೀಲರೇ ಆಗಿರುವುದರಿಂದ ಅವರ ಮೇಲೆ ಶಿಸ್ತು ಕ್ರಮ ಜರುಗಿಸಬೇಕು” ಎಂದು ಆಗ್ರಹಿಸಿದರು.

“ಎಸಿ/ಡಿಸಿ/ಹೈಕೋರ್ಟ್/ಸರ್ವೋಚ್ಚ ನ್ಯಾಯಾಲಯಗಳಲ್ಲಿ ಪಿ.ಟಿ.ಸಿ.ಎಲ್. ಕಾಯ್ದೆ ವಿರುದ್ದವಾಗಿ ಆಗುತ್ತಿರುವ ಆದೇಶಗಳನ್ನು ತಡೆಗಟ್ಟಲು ಕಠಿಣ ಕಾನೂನು ರೂಪಿಸಿ ನ್ಯಾಯ ಒದಗಿಸಬೇಕು” ಎಂದು ಒತ್ತಾಯಿಸಿದ್ದಾರೆ.

“ಅತಿ ಮುಖ್ಯವಾಗಿ ಕಾಲಮಿತಿ ಅನ್ವಯಿಸಿ ನೆಕ್ಕಂಟಿ ರಾಮಲಕ್ಷ್ಮೀ ಪ್ರಕರಣದಿಂದ ವಜಾ ಆಗಿರುವ 2023ರ ತಿದ್ದುಪಡಿ ಪೂರ್ವದಲ್ಲಿ ಆಗಿರುವ ಪ್ರಕರಣಗಳು ಬರುವುದಿಲ್ಲವೆಂದು 2023ರ ಪಿ.ಟಿ.ಸಿ.ಎಲ್. ಕಾಯ್ದೆ 5(1)ಡಿ, ತಿದ್ದುಪಡಿಯನ್ನು ರದ್ದುಗೊಳಿಸಿ ಕಾಲಮಿತಿ ಆಧಾರದಲ್ಲಿ ವಜಾಗೊಂಡಿರುವ ಎಲ್ಲ ಪ್ರಕರಣ ಒಳಪಡಿಸಬೇಕು” ಎಂದು ಹೋರಾಟಗಾರರು ಆಗ್ರಹಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...