Homeಮುಖಪುಟಸರ್ಕಾರದ ಅನುಮತಿ ಇಲ್ಲದೆ ಮಾರಾಟವಾದ ದಲಿತರ ಭೂಮಿ ವಾಪಸ್ ಕೊಡಿಸುವ ಪಿಟಿಸಿಎಲ್ ತಿದ್ದುಪಡಿ ಕಾಯ್ದೆ ಮಂಡನೆ

ಸರ್ಕಾರದ ಅನುಮತಿ ಇಲ್ಲದೆ ಮಾರಾಟವಾದ ದಲಿತರ ಭೂಮಿ ವಾಪಸ್ ಕೊಡಿಸುವ ಪಿಟಿಸಿಎಲ್ ತಿದ್ದುಪಡಿ ಕಾಯ್ದೆ ಮಂಡನೆ

ಪರಿಶಿಷ್ಟ ಜಾತಿ/ಪಂಗಡಗಳಿಗೆ ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತನ್ನು ಮೊದಲ ಅಧಿವೇಶನದಲ್ಲಿಯೇ ಈಡೇರಿಸಿದ್ದೇವೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ.

- Advertisement -
- Advertisement -

ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ ಕೆಲವು ಭೂಮಿಗಳ ವರ್ಗಾವಣೆ ನಿಷೇಧ ತಿದ್ದುಪಡಿ ವಿಧೇಯಕ (ಪಿಟಿಸಿಲ್ ತಿದ್ದುಪಡಿ ಮಸೂದೆ) 2023 ಅನ್ನು ಇಂದು ವಿಧಾನಸಭಾ ಅಧಿವೇಶನದಲ್ಲಿ ಕಂದಾಯ ಸಚಿವರಾದ ಕೃಷ್ಣ ಭೈರೇಗೌಡರು ಮಂಡಿಸಿದರು.

ನಂತರ ಮಾತನಾಡಿದ ಸಚಿವರು, “1978ರಲ್ಲಿ ಈ ಕಾನೂನನ್ನು ಇದೇ ಸದನ ಮಂಜೂರು ಮಾಡಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಸೇರಿದ ಜನರ ಸರ್ಕಾರದಿಂದ ಮಂಜೂರಾತಿಯಾಗಿರುವ ಜಮೀನುಗಳನ್ನು ಪರಭಾರೆ ಮಾಡಬೇಕಾದರೆ ಸರ್ಕಾರದ ಅನುಮತಿ ತೆಗೆದುಕೊಂಡಿರಬೇಕು. ಒಂದು ವೇಳೆ ಅನುಮತಿಯಿಲ್ಲದೇ ಮಾರಿದ್ದರೆ ಅಂತಹ ಜಮೀನುಗಳನ್ನು ಮೂಲ ಮಂಜೂರುದಾರರಿಗೆ ಮತ್ತೆ ಅವರಿಗೆ ಜಮೀನಿನ ಹಕ್ಕನ್ನು ನೀಡಬೇಕು ಎಂದು ಕಾನೂನು ತಂದಿತ್ತು. ಅಂದು ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಶ್ರೀಮತಿ ಇಂದಿರಾಗಾಂಧಿಯವರು ಪ್ರಧಾನಿಯಾಗಿದ್ದಾಗ ದೇಶದಲ್ಲಿ ಬಡವರಾಗಿದ್ದ ದಲಿತರು ತಿಳುವಳಿಕೆಯ ಕೊರತೆಯಿಂದ ಅವರ ಜಮೀನುಗಳನ್ನು ಸರ್ಕಾರದ ಅನುಮತಿಯಿಲ್ಲದೇ ಬೇರೆಯವರು ಕೊಂಡುಕೊಳ್ಳುವುದನ್ನು ಕಡಿವಾಣ ಹಾಕಲು ಮುಂದಾಗಿದ್ದರು ಎಂದರು.

ಅಂದು ದಲಿತರಿಗೆ ಇದ್ದ ಏಕೈಕ ಆಸ್ತಿ ಸರ್ಕಾರ ಮಂಜೂರು ಮಾಡಿದ್ದ ಜಮೀನನ್ನು ಅವರಿಗೆ ಉಳಿಸಲು ಈ ಮಾದರಿ ಕಾನೂನನ್ನು ರಚನೆ ಮಾಡಿ ಎಲ್ಲಾ ರಾಜ್ಯಗಳಿಗೆ ಕಳಿಸಿಕೊಟ್ಟಿದ್ದರು. ಆಗ ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿದ್ದ ದೇವರಾಜ ಅರಸುರವರು ಮತ್ತು ಕಂದಾಯ ಸಚಿವರಾಗಿದ್ದ ಬಸವಲಿಂಗಪ್ಪನವರು ಮಸೂದೆ ಮಂಡಿಸಿ 1978 ರಿಂದ ಕಾನೂನು ಜಾರಿಯಲ್ಲಿದೆ ಎಂದು ಸಚಿವರಾದ ಕೃಷ್ಣಭೈರೇಗೌಡರು ತಿಳಿಸಿದರು.

ಈ ಕಾನೂನಿನ ಅನ್ವಯ ನಮ್ಮ ಜಮೀನು ವಾಪಸ್ ಕೊಡಬೇಕೆಂದು ಪರಿಶಿಷ್ಟ ಜಾತಿಯ ಒಬ್ಬರು ದಾವೆ ಹೂಡಿದ್ದರು. ಆದರೆ ಎಸಿಯವರು ನಿಮ್ಮ ಜಮೀನು ಮಾರಿ ಬಹಳ ವರ್ಷಗಳಾಗಿವೆ ಹಾಗಾಗಿ ಈಗ ಕೇಳಲು ಬರುವುದಿಲ್ಲ ಎಂದು ತೀರ್ಪು ನೀಡಿದ್ದರು. ಕೊನೆಗೆ ಅದೇ ಕೇಸು ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಆಗ ಸುಪ್ರೀಂ ಕೋರ್ಟ್ ಸೆಕ್ಷನ್ 5 ರಲ್ಲಿ ಕಾಲಮಿತಿ ನಿಗದಿ ಮಾಡಿಲ್ಲ ಅನ್ನುವ ನ್ಯೂನತೆಯನ್ನು ಗುರುತಿಸಿ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಇದ್ದ ಹಕ್ಕನ್ನು ಕೊಡಲಾಗಿಲ್ಲ ಎಂದು ಸಚಿವರು ವಿವರಿಸಿದರು.

ಆದರೆ ಮೂಲ ಕಾನೂನಿನಲ್ಲಿ ಯಾವತ್ತೇ ಭೂಮಿ ಮಂಜೂರಾಗಿದ್ದರೂ, ಯಾವತ್ತೂ ಪರಬಾರೆಯಾಗಿದ್ದರೂ ಸಹ ಯಾವತ್ತು ಬೇಕಾದರೂ ಪ್ರಶ್ನಿಸಿ ಪರಬಾರೆ ಮಾಡಿಕೊಳ್ಳಬೇಕು ಎಂದಿದೆ. ಆದರೆ ಕಾನೂನಿನಲ್ಲಿ ಕಾಲಮಿತಿಯ ಬಗ್ಗೆ ಸ್ಪಷ್ಟತೆ ಇಲ್ಲ ಎಂದು ಸುಪ್ರೀಂ ಹೇಳಿದೆ. ಹಾಗಾಗಿ ಎಸಿಗಳು ಸುಪ್ರೀಂ ಕೋರ್ಟ್‌ನ ಈ ಆದೇಶ ಇಟ್ಟುಕೊಂಡು ಕಾಲಮಿತಿ ಮೀರಿದೆ ಎಂಬ ನೆಪ ಹೇಳಿ ಅರ್ಜಿಗಳನ್ನು ತಳ್ಳಿಹಾಕುವುದು ನಡೆಯುತ್ತಿದೆ. 2017 ರಿಂದ ದಲಿತ ಸಮುದಾಯಗಳು ಈ ಕಾನೂನಿನ ನ್ಯೂನತೆ ಸರಿಪಡಿಸಲು ತಿದ್ದುಪಡಿ ತರಲು ಹೋರಾಟ, ಧರಣಿ ಮಾಡುತ್ತಾ ಬಂದಿದ್ದಾರೆ. ಎಲ್ಲಾ ರಾಜಕೀಯ ಪಕ್ಷಗಳಿಗೂ ಮನವಿ ಮಾಡಿದ್ದಾರೆ ಎಂದರು.

ನಮ್ಮ ಪಕ್ಷ ವಿರೋಧ ಪಕ್ಷದಲ್ಲಿದ್ದಾಗಲೇ, ‘ನಮ್ಮ ಸರ್ಕಾರ ಬಂದ ಕೂಡಲೇ ನ್ಯೂನತೆ ಸರಿಪಡಿಸಿ, 1978ರ ಮೂಲ ಕಾನೂನಿಗೆ ಜೀವ ತುಂಬುತ್ತೇವೆ’ ಎಂದು ಹೇಳಿದ್ದೆವು. ನಮ್ಮ ನಾಯಕರಾದ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್‌ರವರು ಚಿತ್ರದುರ್ಗದ ಸಮಾವೇಶದಲ್ಲಿ ದಲಿತರಿಗೆ ಈ ಮಾತನ್ನು ಕೊಟ್ಟಿದ್ದೆವು. ದಲಿತರು ಬಿಜೆಪಿಗೂ ಮನವಿ ಮಾಡಿದ್ದರೂ, ಬಿಜೆಪಿ 4 ವರ್ಷ ಅಧಿಕಾರದಲ್ಲಿದ್ದೂ ಸಹ ಮಾಡಿಲ್ಲ. ಫೆಬ್ರವರಿ ತಿಂಗಳಲ್ಲಿ 162ರಲ್ಲಿ 160ನೇ ಪ್ಯಾರದಲ್ಲಿ ಪ.ಜಾ ಮತ್ತು ಪ.ಪಂದವರ ಜಮೀನನ್ನು ಸಂರಕ್ಷಿಸಲು ಪಿಟಿಸಿಎಲ್ ಕಾಯ್ದೆಗೆ ಸೂಕ್ತ ತಿದ್ದುಪಡಿ ತರಲಾಗುವುದು ಎಂದು ಪೊಳ್ಳು ಭರವಸೆ ನೀಡಿದ್ದರು. ಆದರೆ ನ್ಯಾಯ ಕೊಡದೇ ಅನ್ಯಾಯ ಮುಂದುವರೆಸಿದ್ದರು ಎಂದು ಹೇಳಿದರು.

ನಮ್ಮ ಸರ್ಕಾರ ಮಾತು ಕೊಟ್ಟಂತೆ ಮುಖ್ಯಮಂತ್ರಿಗಳು ಬಜೆಟ್‌ನಲ್ಲಿ ಘೋಷಣೆ ಮಾಡಿದ್ದರು. ಮೊದಲನೇ ಅಧಿವೇಶನದಲ್ಲಿಯೇ ನಾವು ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ಮಂಡಿಸುತ್ತಿದ್ದೇವೆ. “ಸೆಕ್ಷನ್ 5(1)ಸಿ ನಲ್ಲಿ ಯಾವುದೇ ಕಾನೂನಿನಲ್ಲಿ ಏನೇ ಒಳಗೊಂಡಿದ್ದರೂ ಈ ಅಧಿನಿಯಮದ ಉಪಬಂಧಗಳನ್ನು ರದ್ದುಪಡಿಸಲು ಯಾವುದೇ ಕಾಲಮಿತಿ ಇರತಕ್ಕದ್ದಲ್ಲ ಎಂಬ ತಿದ್ದುಪಡಿ ಸೇರಿಸಿದ್ದೇವೆ” ಎಂದರು.

ದಲಿತರ ಜಮೀನು ಉಳಿಯಬೇಕೆಂಬ ಸದುದ್ದೇಶದಿಂದ ಇದನ್ನು ಮಾಡಿದ್ದೇವೆ. ಇದು ಹೊಸ ಕಾನೂನು ಅಲ್ಲ. ಕಾಲಮಿತಿಯ ಏನು ಹೇಳಿಲ್ಲ ಎಂದು ಸುಪ್ರಿಂ ಹೇಳಿದೆ. ಹಾಗಾಗಿ ಮೂಲ ಕಾನೂನಿನಲ್ಲಿ ನಾವು ಕಾಲಮಿತಿ ಇಲ್ಲ ಎಂದು ತಿದ್ದುಪಡಿ ಮಾಡುತ್ತಿದ್ದೇವೆ.

ಇದು ಪ್ರಕರಣಗಳು ಯಾವ ನ್ಯಾಯಾಲಯದಲ್ಲಿ ಇರಲಿ, ಎಸಿ, ಡಿಸಿ, ಹೈಕೋರ್ಟ್, ಸುಪ್ರೀಂ ಕೋರ್ಟ್‌ ಎಲ್ಲೇ ಇರಲಿ, ಪೆಂಡಿಂಗ್ ಇದ್ದರೂ ಸಹ ಅವುಗಳಿಗೆ ಈ ಕಾಯ್ದೆ ಜಾರಿಯಾಗುತ್ತದೆ. ಯಾವುದಾದರೂ ಪ್ರಕರಣಗಳು ನ್ಯಾಯಸಮ್ಮತವಾಗಿ ವಿಲೇ ಆಗಿಹೋಗಿದ್ದರೆ ಅವು ಇದರ ವ್ಯಾಪ್ತಿಗೆ ಬರುವುದಿಲ್ಲ. ಆದರೆ ಈ ಕಾನೂನು ಜಾರಿಗೆ ಬಂದ ನಂತರ ಪೆಂಡಿಂಗ್ ಇರುವ ಕೇಸ್‌ಗಳಿಗೂ ಅನ್ವಯವಾಗುತ್ತದೆ ಎಂದು ಅವರು ತಿಳಿಸಿದರು.

ಮಸೂದೆ ಕುರಿತು ಮಾತನಾಡಿದ ಮಾಜಿ ಸಚಿವರಾದ ಪಿ.ಎಂ ನರೇಂದ್ರ ಸ್ವಾಮಿಯವರು, “2017ರಿಂದ ಈಗಾಗಲೇ ದಲಿತರ ವಿರುದ್ಧವಾಗಿ ತೀರ್ಪು ಬಂದಿರುವ ಪ್ರಕರಣಗಳಿಗೂ ಈ ಕಾಯ್ದೆ ಅನ್ವಯವಾಗುವಂತೆ ತಿದ್ದುಪಡಿ ತರಬೇಕು. ಇಲ್ಲದಿದ್ದರೆ ಬಹಳಷ್ಟು ಜಮೀನು ಈಗಾಗಲೇ ದಲಿತರಿಂದ ಕಿತ್ತುಕೊಳ್ಳಲಾಗಿದೆ, ಅದು ವಾಪಸ್ ಬರುವುದಿಲ್ಲ” ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, “2017ರಿಂದ ಇತ್ತೀಚೆಗೆ 1558 ಪ್ರಕರಣಗಳು ಖರೀದಿದಾರರ ಪರವಾಗಿ ಇತ್ಯರ್ಥವಾಗಿವೆ. 1003 ಪ್ರಕರಣಗಳು ಪರಿಶಿಷ್ಟರ ಪರವಾಗಿ ಇತ್ಯರ್ಥವಾಗಿವೆ. ಗಮನಿಸಿಬೇಕಾದ ವಿಚಾರವೆಂದರೆ ಕಾನೂನಿನಲ್ಲಿ ಡಿಸಿಗಳಿಗೆ ಅಪೀಲ್ ಹೋಗುವ ಪವರ್ ಇದೆ. ಹಾಗಾಗಿ ಜಿಲ್ಲಾಧಿಕಾರಿಗಳ ಮುಂದೆ 2303 ಅಪೀಲ್‌ಗಳು ಹೋಗಿವೆ. ಹೈಕೋರ್ಟ್‌ನಲ್ಲಿ 719 ಅಪೀಲ್‌ಗಳು ಇವೆ. ಎಸಿ ಕೋರ್ಟ್‌ನಲ್ಲಿ ಮೂಲ ಮಂಜೂರುದಾರರ ವಿರುದ್ಧ ಆಗಿದ್ದರೂ ಅವರು ಮೇಲ್ಮನವಿ ಹೋಗಿದ್ದಾರೆ. ಹಾಗಾಗಿ ಆ ಪ್ರಕರಣಗಳಿಗೂ ಈ ತಿದ್ದುಪಡಿ ಅನ್ವಯಿಸುವುದರಿಂದ 95% ಪ್ರಕರಣಗಳಿಗೆ ನ್ಯಾಯ ಸಿಗುತ್ತದೆ ಎಂದರು.

ಇದನ್ನೂ ಓದಿ: ಮಾರಾಟವಾದ ದಲಿತರ ಭೂಮಿ ವಾಪಸ್ ಕೊಡಿಸುವ PTCL ಕಾಯ್ದೆ ಬಗ್ಗೆ ನಿಮಗೆ ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...