Homeಮುಖಪುಟಸರ್ಕಾರದ ಅನುಮತಿ ಇಲ್ಲದೆ ಮಾರಾಟವಾದ ದಲಿತರ ಭೂಮಿ ವಾಪಸ್ ಕೊಡಿಸುವ ಪಿಟಿಸಿಎಲ್ ತಿದ್ದುಪಡಿ ಕಾಯ್ದೆ ಮಂಡನೆ

ಸರ್ಕಾರದ ಅನುಮತಿ ಇಲ್ಲದೆ ಮಾರಾಟವಾದ ದಲಿತರ ಭೂಮಿ ವಾಪಸ್ ಕೊಡಿಸುವ ಪಿಟಿಸಿಎಲ್ ತಿದ್ದುಪಡಿ ಕಾಯ್ದೆ ಮಂಡನೆ

ಪರಿಶಿಷ್ಟ ಜಾತಿ/ಪಂಗಡಗಳಿಗೆ ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತನ್ನು ಮೊದಲ ಅಧಿವೇಶನದಲ್ಲಿಯೇ ಈಡೇರಿಸಿದ್ದೇವೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ.

- Advertisement -
- Advertisement -

ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ ಕೆಲವು ಭೂಮಿಗಳ ವರ್ಗಾವಣೆ ನಿಷೇಧ ತಿದ್ದುಪಡಿ ವಿಧೇಯಕ (ಪಿಟಿಸಿಲ್ ತಿದ್ದುಪಡಿ ಮಸೂದೆ) 2023 ಅನ್ನು ಇಂದು ವಿಧಾನಸಭಾ ಅಧಿವೇಶನದಲ್ಲಿ ಕಂದಾಯ ಸಚಿವರಾದ ಕೃಷ್ಣ ಭೈರೇಗೌಡರು ಮಂಡಿಸಿದರು.

ನಂತರ ಮಾತನಾಡಿದ ಸಚಿವರು, “1978ರಲ್ಲಿ ಈ ಕಾನೂನನ್ನು ಇದೇ ಸದನ ಮಂಜೂರು ಮಾಡಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಸೇರಿದ ಜನರ ಸರ್ಕಾರದಿಂದ ಮಂಜೂರಾತಿಯಾಗಿರುವ ಜಮೀನುಗಳನ್ನು ಪರಭಾರೆ ಮಾಡಬೇಕಾದರೆ ಸರ್ಕಾರದ ಅನುಮತಿ ತೆಗೆದುಕೊಂಡಿರಬೇಕು. ಒಂದು ವೇಳೆ ಅನುಮತಿಯಿಲ್ಲದೇ ಮಾರಿದ್ದರೆ ಅಂತಹ ಜಮೀನುಗಳನ್ನು ಮೂಲ ಮಂಜೂರುದಾರರಿಗೆ ಮತ್ತೆ ಅವರಿಗೆ ಜಮೀನಿನ ಹಕ್ಕನ್ನು ನೀಡಬೇಕು ಎಂದು ಕಾನೂನು ತಂದಿತ್ತು. ಅಂದು ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಶ್ರೀಮತಿ ಇಂದಿರಾಗಾಂಧಿಯವರು ಪ್ರಧಾನಿಯಾಗಿದ್ದಾಗ ದೇಶದಲ್ಲಿ ಬಡವರಾಗಿದ್ದ ದಲಿತರು ತಿಳುವಳಿಕೆಯ ಕೊರತೆಯಿಂದ ಅವರ ಜಮೀನುಗಳನ್ನು ಸರ್ಕಾರದ ಅನುಮತಿಯಿಲ್ಲದೇ ಬೇರೆಯವರು ಕೊಂಡುಕೊಳ್ಳುವುದನ್ನು ಕಡಿವಾಣ ಹಾಕಲು ಮುಂದಾಗಿದ್ದರು ಎಂದರು.

ಅಂದು ದಲಿತರಿಗೆ ಇದ್ದ ಏಕೈಕ ಆಸ್ತಿ ಸರ್ಕಾರ ಮಂಜೂರು ಮಾಡಿದ್ದ ಜಮೀನನ್ನು ಅವರಿಗೆ ಉಳಿಸಲು ಈ ಮಾದರಿ ಕಾನೂನನ್ನು ರಚನೆ ಮಾಡಿ ಎಲ್ಲಾ ರಾಜ್ಯಗಳಿಗೆ ಕಳಿಸಿಕೊಟ್ಟಿದ್ದರು. ಆಗ ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿದ್ದ ದೇವರಾಜ ಅರಸುರವರು ಮತ್ತು ಕಂದಾಯ ಸಚಿವರಾಗಿದ್ದ ಬಸವಲಿಂಗಪ್ಪನವರು ಮಸೂದೆ ಮಂಡಿಸಿ 1978 ರಿಂದ ಕಾನೂನು ಜಾರಿಯಲ್ಲಿದೆ ಎಂದು ಸಚಿವರಾದ ಕೃಷ್ಣಭೈರೇಗೌಡರು ತಿಳಿಸಿದರು.

ಈ ಕಾನೂನಿನ ಅನ್ವಯ ನಮ್ಮ ಜಮೀನು ವಾಪಸ್ ಕೊಡಬೇಕೆಂದು ಪರಿಶಿಷ್ಟ ಜಾತಿಯ ಒಬ್ಬರು ದಾವೆ ಹೂಡಿದ್ದರು. ಆದರೆ ಎಸಿಯವರು ನಿಮ್ಮ ಜಮೀನು ಮಾರಿ ಬಹಳ ವರ್ಷಗಳಾಗಿವೆ ಹಾಗಾಗಿ ಈಗ ಕೇಳಲು ಬರುವುದಿಲ್ಲ ಎಂದು ತೀರ್ಪು ನೀಡಿದ್ದರು. ಕೊನೆಗೆ ಅದೇ ಕೇಸು ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಆಗ ಸುಪ್ರೀಂ ಕೋರ್ಟ್ ಸೆಕ್ಷನ್ 5 ರಲ್ಲಿ ಕಾಲಮಿತಿ ನಿಗದಿ ಮಾಡಿಲ್ಲ ಅನ್ನುವ ನ್ಯೂನತೆಯನ್ನು ಗುರುತಿಸಿ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಇದ್ದ ಹಕ್ಕನ್ನು ಕೊಡಲಾಗಿಲ್ಲ ಎಂದು ಸಚಿವರು ವಿವರಿಸಿದರು.

ಆದರೆ ಮೂಲ ಕಾನೂನಿನಲ್ಲಿ ಯಾವತ್ತೇ ಭೂಮಿ ಮಂಜೂರಾಗಿದ್ದರೂ, ಯಾವತ್ತೂ ಪರಬಾರೆಯಾಗಿದ್ದರೂ ಸಹ ಯಾವತ್ತು ಬೇಕಾದರೂ ಪ್ರಶ್ನಿಸಿ ಪರಬಾರೆ ಮಾಡಿಕೊಳ್ಳಬೇಕು ಎಂದಿದೆ. ಆದರೆ ಕಾನೂನಿನಲ್ಲಿ ಕಾಲಮಿತಿಯ ಬಗ್ಗೆ ಸ್ಪಷ್ಟತೆ ಇಲ್ಲ ಎಂದು ಸುಪ್ರೀಂ ಹೇಳಿದೆ. ಹಾಗಾಗಿ ಎಸಿಗಳು ಸುಪ್ರೀಂ ಕೋರ್ಟ್‌ನ ಈ ಆದೇಶ ಇಟ್ಟುಕೊಂಡು ಕಾಲಮಿತಿ ಮೀರಿದೆ ಎಂಬ ನೆಪ ಹೇಳಿ ಅರ್ಜಿಗಳನ್ನು ತಳ್ಳಿಹಾಕುವುದು ನಡೆಯುತ್ತಿದೆ. 2017 ರಿಂದ ದಲಿತ ಸಮುದಾಯಗಳು ಈ ಕಾನೂನಿನ ನ್ಯೂನತೆ ಸರಿಪಡಿಸಲು ತಿದ್ದುಪಡಿ ತರಲು ಹೋರಾಟ, ಧರಣಿ ಮಾಡುತ್ತಾ ಬಂದಿದ್ದಾರೆ. ಎಲ್ಲಾ ರಾಜಕೀಯ ಪಕ್ಷಗಳಿಗೂ ಮನವಿ ಮಾಡಿದ್ದಾರೆ ಎಂದರು.

ನಮ್ಮ ಪಕ್ಷ ವಿರೋಧ ಪಕ್ಷದಲ್ಲಿದ್ದಾಗಲೇ, ‘ನಮ್ಮ ಸರ್ಕಾರ ಬಂದ ಕೂಡಲೇ ನ್ಯೂನತೆ ಸರಿಪಡಿಸಿ, 1978ರ ಮೂಲ ಕಾನೂನಿಗೆ ಜೀವ ತುಂಬುತ್ತೇವೆ’ ಎಂದು ಹೇಳಿದ್ದೆವು. ನಮ್ಮ ನಾಯಕರಾದ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್‌ರವರು ಚಿತ್ರದುರ್ಗದ ಸಮಾವೇಶದಲ್ಲಿ ದಲಿತರಿಗೆ ಈ ಮಾತನ್ನು ಕೊಟ್ಟಿದ್ದೆವು. ದಲಿತರು ಬಿಜೆಪಿಗೂ ಮನವಿ ಮಾಡಿದ್ದರೂ, ಬಿಜೆಪಿ 4 ವರ್ಷ ಅಧಿಕಾರದಲ್ಲಿದ್ದೂ ಸಹ ಮಾಡಿಲ್ಲ. ಫೆಬ್ರವರಿ ತಿಂಗಳಲ್ಲಿ 162ರಲ್ಲಿ 160ನೇ ಪ್ಯಾರದಲ್ಲಿ ಪ.ಜಾ ಮತ್ತು ಪ.ಪಂದವರ ಜಮೀನನ್ನು ಸಂರಕ್ಷಿಸಲು ಪಿಟಿಸಿಎಲ್ ಕಾಯ್ದೆಗೆ ಸೂಕ್ತ ತಿದ್ದುಪಡಿ ತರಲಾಗುವುದು ಎಂದು ಪೊಳ್ಳು ಭರವಸೆ ನೀಡಿದ್ದರು. ಆದರೆ ನ್ಯಾಯ ಕೊಡದೇ ಅನ್ಯಾಯ ಮುಂದುವರೆಸಿದ್ದರು ಎಂದು ಹೇಳಿದರು.

ನಮ್ಮ ಸರ್ಕಾರ ಮಾತು ಕೊಟ್ಟಂತೆ ಮುಖ್ಯಮಂತ್ರಿಗಳು ಬಜೆಟ್‌ನಲ್ಲಿ ಘೋಷಣೆ ಮಾಡಿದ್ದರು. ಮೊದಲನೇ ಅಧಿವೇಶನದಲ್ಲಿಯೇ ನಾವು ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ಮಂಡಿಸುತ್ತಿದ್ದೇವೆ. “ಸೆಕ್ಷನ್ 5(1)ಸಿ ನಲ್ಲಿ ಯಾವುದೇ ಕಾನೂನಿನಲ್ಲಿ ಏನೇ ಒಳಗೊಂಡಿದ್ದರೂ ಈ ಅಧಿನಿಯಮದ ಉಪಬಂಧಗಳನ್ನು ರದ್ದುಪಡಿಸಲು ಯಾವುದೇ ಕಾಲಮಿತಿ ಇರತಕ್ಕದ್ದಲ್ಲ ಎಂಬ ತಿದ್ದುಪಡಿ ಸೇರಿಸಿದ್ದೇವೆ” ಎಂದರು.

ದಲಿತರ ಜಮೀನು ಉಳಿಯಬೇಕೆಂಬ ಸದುದ್ದೇಶದಿಂದ ಇದನ್ನು ಮಾಡಿದ್ದೇವೆ. ಇದು ಹೊಸ ಕಾನೂನು ಅಲ್ಲ. ಕಾಲಮಿತಿಯ ಏನು ಹೇಳಿಲ್ಲ ಎಂದು ಸುಪ್ರಿಂ ಹೇಳಿದೆ. ಹಾಗಾಗಿ ಮೂಲ ಕಾನೂನಿನಲ್ಲಿ ನಾವು ಕಾಲಮಿತಿ ಇಲ್ಲ ಎಂದು ತಿದ್ದುಪಡಿ ಮಾಡುತ್ತಿದ್ದೇವೆ.

ಇದು ಪ್ರಕರಣಗಳು ಯಾವ ನ್ಯಾಯಾಲಯದಲ್ಲಿ ಇರಲಿ, ಎಸಿ, ಡಿಸಿ, ಹೈಕೋರ್ಟ್, ಸುಪ್ರೀಂ ಕೋರ್ಟ್‌ ಎಲ್ಲೇ ಇರಲಿ, ಪೆಂಡಿಂಗ್ ಇದ್ದರೂ ಸಹ ಅವುಗಳಿಗೆ ಈ ಕಾಯ್ದೆ ಜಾರಿಯಾಗುತ್ತದೆ. ಯಾವುದಾದರೂ ಪ್ರಕರಣಗಳು ನ್ಯಾಯಸಮ್ಮತವಾಗಿ ವಿಲೇ ಆಗಿಹೋಗಿದ್ದರೆ ಅವು ಇದರ ವ್ಯಾಪ್ತಿಗೆ ಬರುವುದಿಲ್ಲ. ಆದರೆ ಈ ಕಾನೂನು ಜಾರಿಗೆ ಬಂದ ನಂತರ ಪೆಂಡಿಂಗ್ ಇರುವ ಕೇಸ್‌ಗಳಿಗೂ ಅನ್ವಯವಾಗುತ್ತದೆ ಎಂದು ಅವರು ತಿಳಿಸಿದರು.

ಮಸೂದೆ ಕುರಿತು ಮಾತನಾಡಿದ ಮಾಜಿ ಸಚಿವರಾದ ಪಿ.ಎಂ ನರೇಂದ್ರ ಸ್ವಾಮಿಯವರು, “2017ರಿಂದ ಈಗಾಗಲೇ ದಲಿತರ ವಿರುದ್ಧವಾಗಿ ತೀರ್ಪು ಬಂದಿರುವ ಪ್ರಕರಣಗಳಿಗೂ ಈ ಕಾಯ್ದೆ ಅನ್ವಯವಾಗುವಂತೆ ತಿದ್ದುಪಡಿ ತರಬೇಕು. ಇಲ್ಲದಿದ್ದರೆ ಬಹಳಷ್ಟು ಜಮೀನು ಈಗಾಗಲೇ ದಲಿತರಿಂದ ಕಿತ್ತುಕೊಳ್ಳಲಾಗಿದೆ, ಅದು ವಾಪಸ್ ಬರುವುದಿಲ್ಲ” ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, “2017ರಿಂದ ಇತ್ತೀಚೆಗೆ 1558 ಪ್ರಕರಣಗಳು ಖರೀದಿದಾರರ ಪರವಾಗಿ ಇತ್ಯರ್ಥವಾಗಿವೆ. 1003 ಪ್ರಕರಣಗಳು ಪರಿಶಿಷ್ಟರ ಪರವಾಗಿ ಇತ್ಯರ್ಥವಾಗಿವೆ. ಗಮನಿಸಿಬೇಕಾದ ವಿಚಾರವೆಂದರೆ ಕಾನೂನಿನಲ್ಲಿ ಡಿಸಿಗಳಿಗೆ ಅಪೀಲ್ ಹೋಗುವ ಪವರ್ ಇದೆ. ಹಾಗಾಗಿ ಜಿಲ್ಲಾಧಿಕಾರಿಗಳ ಮುಂದೆ 2303 ಅಪೀಲ್‌ಗಳು ಹೋಗಿವೆ. ಹೈಕೋರ್ಟ್‌ನಲ್ಲಿ 719 ಅಪೀಲ್‌ಗಳು ಇವೆ. ಎಸಿ ಕೋರ್ಟ್‌ನಲ್ಲಿ ಮೂಲ ಮಂಜೂರುದಾರರ ವಿರುದ್ಧ ಆಗಿದ್ದರೂ ಅವರು ಮೇಲ್ಮನವಿ ಹೋಗಿದ್ದಾರೆ. ಹಾಗಾಗಿ ಆ ಪ್ರಕರಣಗಳಿಗೂ ಈ ತಿದ್ದುಪಡಿ ಅನ್ವಯಿಸುವುದರಿಂದ 95% ಪ್ರಕರಣಗಳಿಗೆ ನ್ಯಾಯ ಸಿಗುತ್ತದೆ ಎಂದರು.

ಇದನ್ನೂ ಓದಿ: ಮಾರಾಟವಾದ ದಲಿತರ ಭೂಮಿ ವಾಪಸ್ ಕೊಡಿಸುವ PTCL ಕಾಯ್ದೆ ಬಗ್ಗೆ ನಿಮಗೆ ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...