Homeಮುಖಪುಟಸರ್ಕಾರದ ಅನುಮತಿ ಇಲ್ಲದೆ ಮಾರಾಟವಾದ ದಲಿತರ ಭೂಮಿ ವಾಪಸ್ ಕೊಡಿಸುವ ಪಿಟಿಸಿಎಲ್ ತಿದ್ದುಪಡಿ ಕಾಯ್ದೆ ಮಂಡನೆ

ಸರ್ಕಾರದ ಅನುಮತಿ ಇಲ್ಲದೆ ಮಾರಾಟವಾದ ದಲಿತರ ಭೂಮಿ ವಾಪಸ್ ಕೊಡಿಸುವ ಪಿಟಿಸಿಎಲ್ ತಿದ್ದುಪಡಿ ಕಾಯ್ದೆ ಮಂಡನೆ

ಪರಿಶಿಷ್ಟ ಜಾತಿ/ಪಂಗಡಗಳಿಗೆ ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತನ್ನು ಮೊದಲ ಅಧಿವೇಶನದಲ್ಲಿಯೇ ಈಡೇರಿಸಿದ್ದೇವೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ.

- Advertisement -
- Advertisement -

ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ ಕೆಲವು ಭೂಮಿಗಳ ವರ್ಗಾವಣೆ ನಿಷೇಧ ತಿದ್ದುಪಡಿ ವಿಧೇಯಕ (ಪಿಟಿಸಿಲ್ ತಿದ್ದುಪಡಿ ಮಸೂದೆ) 2023 ಅನ್ನು ಇಂದು ವಿಧಾನಸಭಾ ಅಧಿವೇಶನದಲ್ಲಿ ಕಂದಾಯ ಸಚಿವರಾದ ಕೃಷ್ಣ ಭೈರೇಗೌಡರು ಮಂಡಿಸಿದರು.

ನಂತರ ಮಾತನಾಡಿದ ಸಚಿವರು, “1978ರಲ್ಲಿ ಈ ಕಾನೂನನ್ನು ಇದೇ ಸದನ ಮಂಜೂರು ಮಾಡಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಸೇರಿದ ಜನರ ಸರ್ಕಾರದಿಂದ ಮಂಜೂರಾತಿಯಾಗಿರುವ ಜಮೀನುಗಳನ್ನು ಪರಭಾರೆ ಮಾಡಬೇಕಾದರೆ ಸರ್ಕಾರದ ಅನುಮತಿ ತೆಗೆದುಕೊಂಡಿರಬೇಕು. ಒಂದು ವೇಳೆ ಅನುಮತಿಯಿಲ್ಲದೇ ಮಾರಿದ್ದರೆ ಅಂತಹ ಜಮೀನುಗಳನ್ನು ಮೂಲ ಮಂಜೂರುದಾರರಿಗೆ ಮತ್ತೆ ಅವರಿಗೆ ಜಮೀನಿನ ಹಕ್ಕನ್ನು ನೀಡಬೇಕು ಎಂದು ಕಾನೂನು ತಂದಿತ್ತು. ಅಂದು ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಶ್ರೀಮತಿ ಇಂದಿರಾಗಾಂಧಿಯವರು ಪ್ರಧಾನಿಯಾಗಿದ್ದಾಗ ದೇಶದಲ್ಲಿ ಬಡವರಾಗಿದ್ದ ದಲಿತರು ತಿಳುವಳಿಕೆಯ ಕೊರತೆಯಿಂದ ಅವರ ಜಮೀನುಗಳನ್ನು ಸರ್ಕಾರದ ಅನುಮತಿಯಿಲ್ಲದೇ ಬೇರೆಯವರು ಕೊಂಡುಕೊಳ್ಳುವುದನ್ನು ಕಡಿವಾಣ ಹಾಕಲು ಮುಂದಾಗಿದ್ದರು ಎಂದರು.

ಅಂದು ದಲಿತರಿಗೆ ಇದ್ದ ಏಕೈಕ ಆಸ್ತಿ ಸರ್ಕಾರ ಮಂಜೂರು ಮಾಡಿದ್ದ ಜಮೀನನ್ನು ಅವರಿಗೆ ಉಳಿಸಲು ಈ ಮಾದರಿ ಕಾನೂನನ್ನು ರಚನೆ ಮಾಡಿ ಎಲ್ಲಾ ರಾಜ್ಯಗಳಿಗೆ ಕಳಿಸಿಕೊಟ್ಟಿದ್ದರು. ಆಗ ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿದ್ದ ದೇವರಾಜ ಅರಸುರವರು ಮತ್ತು ಕಂದಾಯ ಸಚಿವರಾಗಿದ್ದ ಬಸವಲಿಂಗಪ್ಪನವರು ಮಸೂದೆ ಮಂಡಿಸಿ 1978 ರಿಂದ ಕಾನೂನು ಜಾರಿಯಲ್ಲಿದೆ ಎಂದು ಸಚಿವರಾದ ಕೃಷ್ಣಭೈರೇಗೌಡರು ತಿಳಿಸಿದರು.

ಈ ಕಾನೂನಿನ ಅನ್ವಯ ನಮ್ಮ ಜಮೀನು ವಾಪಸ್ ಕೊಡಬೇಕೆಂದು ಪರಿಶಿಷ್ಟ ಜಾತಿಯ ಒಬ್ಬರು ದಾವೆ ಹೂಡಿದ್ದರು. ಆದರೆ ಎಸಿಯವರು ನಿಮ್ಮ ಜಮೀನು ಮಾರಿ ಬಹಳ ವರ್ಷಗಳಾಗಿವೆ ಹಾಗಾಗಿ ಈಗ ಕೇಳಲು ಬರುವುದಿಲ್ಲ ಎಂದು ತೀರ್ಪು ನೀಡಿದ್ದರು. ಕೊನೆಗೆ ಅದೇ ಕೇಸು ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಆಗ ಸುಪ್ರೀಂ ಕೋರ್ಟ್ ಸೆಕ್ಷನ್ 5 ರಲ್ಲಿ ಕಾಲಮಿತಿ ನಿಗದಿ ಮಾಡಿಲ್ಲ ಅನ್ನುವ ನ್ಯೂನತೆಯನ್ನು ಗುರುತಿಸಿ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಇದ್ದ ಹಕ್ಕನ್ನು ಕೊಡಲಾಗಿಲ್ಲ ಎಂದು ಸಚಿವರು ವಿವರಿಸಿದರು.

ಆದರೆ ಮೂಲ ಕಾನೂನಿನಲ್ಲಿ ಯಾವತ್ತೇ ಭೂಮಿ ಮಂಜೂರಾಗಿದ್ದರೂ, ಯಾವತ್ತೂ ಪರಬಾರೆಯಾಗಿದ್ದರೂ ಸಹ ಯಾವತ್ತು ಬೇಕಾದರೂ ಪ್ರಶ್ನಿಸಿ ಪರಬಾರೆ ಮಾಡಿಕೊಳ್ಳಬೇಕು ಎಂದಿದೆ. ಆದರೆ ಕಾನೂನಿನಲ್ಲಿ ಕಾಲಮಿತಿಯ ಬಗ್ಗೆ ಸ್ಪಷ್ಟತೆ ಇಲ್ಲ ಎಂದು ಸುಪ್ರೀಂ ಹೇಳಿದೆ. ಹಾಗಾಗಿ ಎಸಿಗಳು ಸುಪ್ರೀಂ ಕೋರ್ಟ್‌ನ ಈ ಆದೇಶ ಇಟ್ಟುಕೊಂಡು ಕಾಲಮಿತಿ ಮೀರಿದೆ ಎಂಬ ನೆಪ ಹೇಳಿ ಅರ್ಜಿಗಳನ್ನು ತಳ್ಳಿಹಾಕುವುದು ನಡೆಯುತ್ತಿದೆ. 2017 ರಿಂದ ದಲಿತ ಸಮುದಾಯಗಳು ಈ ಕಾನೂನಿನ ನ್ಯೂನತೆ ಸರಿಪಡಿಸಲು ತಿದ್ದುಪಡಿ ತರಲು ಹೋರಾಟ, ಧರಣಿ ಮಾಡುತ್ತಾ ಬಂದಿದ್ದಾರೆ. ಎಲ್ಲಾ ರಾಜಕೀಯ ಪಕ್ಷಗಳಿಗೂ ಮನವಿ ಮಾಡಿದ್ದಾರೆ ಎಂದರು.

ನಮ್ಮ ಪಕ್ಷ ವಿರೋಧ ಪಕ್ಷದಲ್ಲಿದ್ದಾಗಲೇ, ‘ನಮ್ಮ ಸರ್ಕಾರ ಬಂದ ಕೂಡಲೇ ನ್ಯೂನತೆ ಸರಿಪಡಿಸಿ, 1978ರ ಮೂಲ ಕಾನೂನಿಗೆ ಜೀವ ತುಂಬುತ್ತೇವೆ’ ಎಂದು ಹೇಳಿದ್ದೆವು. ನಮ್ಮ ನಾಯಕರಾದ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್‌ರವರು ಚಿತ್ರದುರ್ಗದ ಸಮಾವೇಶದಲ್ಲಿ ದಲಿತರಿಗೆ ಈ ಮಾತನ್ನು ಕೊಟ್ಟಿದ್ದೆವು. ದಲಿತರು ಬಿಜೆಪಿಗೂ ಮನವಿ ಮಾಡಿದ್ದರೂ, ಬಿಜೆಪಿ 4 ವರ್ಷ ಅಧಿಕಾರದಲ್ಲಿದ್ದೂ ಸಹ ಮಾಡಿಲ್ಲ. ಫೆಬ್ರವರಿ ತಿಂಗಳಲ್ಲಿ 162ರಲ್ಲಿ 160ನೇ ಪ್ಯಾರದಲ್ಲಿ ಪ.ಜಾ ಮತ್ತು ಪ.ಪಂದವರ ಜಮೀನನ್ನು ಸಂರಕ್ಷಿಸಲು ಪಿಟಿಸಿಎಲ್ ಕಾಯ್ದೆಗೆ ಸೂಕ್ತ ತಿದ್ದುಪಡಿ ತರಲಾಗುವುದು ಎಂದು ಪೊಳ್ಳು ಭರವಸೆ ನೀಡಿದ್ದರು. ಆದರೆ ನ್ಯಾಯ ಕೊಡದೇ ಅನ್ಯಾಯ ಮುಂದುವರೆಸಿದ್ದರು ಎಂದು ಹೇಳಿದರು.

ನಮ್ಮ ಸರ್ಕಾರ ಮಾತು ಕೊಟ್ಟಂತೆ ಮುಖ್ಯಮಂತ್ರಿಗಳು ಬಜೆಟ್‌ನಲ್ಲಿ ಘೋಷಣೆ ಮಾಡಿದ್ದರು. ಮೊದಲನೇ ಅಧಿವೇಶನದಲ್ಲಿಯೇ ನಾವು ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ಮಂಡಿಸುತ್ತಿದ್ದೇವೆ. “ಸೆಕ್ಷನ್ 5(1)ಸಿ ನಲ್ಲಿ ಯಾವುದೇ ಕಾನೂನಿನಲ್ಲಿ ಏನೇ ಒಳಗೊಂಡಿದ್ದರೂ ಈ ಅಧಿನಿಯಮದ ಉಪಬಂಧಗಳನ್ನು ರದ್ದುಪಡಿಸಲು ಯಾವುದೇ ಕಾಲಮಿತಿ ಇರತಕ್ಕದ್ದಲ್ಲ ಎಂಬ ತಿದ್ದುಪಡಿ ಸೇರಿಸಿದ್ದೇವೆ” ಎಂದರು.

ದಲಿತರ ಜಮೀನು ಉಳಿಯಬೇಕೆಂಬ ಸದುದ್ದೇಶದಿಂದ ಇದನ್ನು ಮಾಡಿದ್ದೇವೆ. ಇದು ಹೊಸ ಕಾನೂನು ಅಲ್ಲ. ಕಾಲಮಿತಿಯ ಏನು ಹೇಳಿಲ್ಲ ಎಂದು ಸುಪ್ರಿಂ ಹೇಳಿದೆ. ಹಾಗಾಗಿ ಮೂಲ ಕಾನೂನಿನಲ್ಲಿ ನಾವು ಕಾಲಮಿತಿ ಇಲ್ಲ ಎಂದು ತಿದ್ದುಪಡಿ ಮಾಡುತ್ತಿದ್ದೇವೆ.

ಇದು ಪ್ರಕರಣಗಳು ಯಾವ ನ್ಯಾಯಾಲಯದಲ್ಲಿ ಇರಲಿ, ಎಸಿ, ಡಿಸಿ, ಹೈಕೋರ್ಟ್, ಸುಪ್ರೀಂ ಕೋರ್ಟ್‌ ಎಲ್ಲೇ ಇರಲಿ, ಪೆಂಡಿಂಗ್ ಇದ್ದರೂ ಸಹ ಅವುಗಳಿಗೆ ಈ ಕಾಯ್ದೆ ಜಾರಿಯಾಗುತ್ತದೆ. ಯಾವುದಾದರೂ ಪ್ರಕರಣಗಳು ನ್ಯಾಯಸಮ್ಮತವಾಗಿ ವಿಲೇ ಆಗಿಹೋಗಿದ್ದರೆ ಅವು ಇದರ ವ್ಯಾಪ್ತಿಗೆ ಬರುವುದಿಲ್ಲ. ಆದರೆ ಈ ಕಾನೂನು ಜಾರಿಗೆ ಬಂದ ನಂತರ ಪೆಂಡಿಂಗ್ ಇರುವ ಕೇಸ್‌ಗಳಿಗೂ ಅನ್ವಯವಾಗುತ್ತದೆ ಎಂದು ಅವರು ತಿಳಿಸಿದರು.

ಮಸೂದೆ ಕುರಿತು ಮಾತನಾಡಿದ ಮಾಜಿ ಸಚಿವರಾದ ಪಿ.ಎಂ ನರೇಂದ್ರ ಸ್ವಾಮಿಯವರು, “2017ರಿಂದ ಈಗಾಗಲೇ ದಲಿತರ ವಿರುದ್ಧವಾಗಿ ತೀರ್ಪು ಬಂದಿರುವ ಪ್ರಕರಣಗಳಿಗೂ ಈ ಕಾಯ್ದೆ ಅನ್ವಯವಾಗುವಂತೆ ತಿದ್ದುಪಡಿ ತರಬೇಕು. ಇಲ್ಲದಿದ್ದರೆ ಬಹಳಷ್ಟು ಜಮೀನು ಈಗಾಗಲೇ ದಲಿತರಿಂದ ಕಿತ್ತುಕೊಳ್ಳಲಾಗಿದೆ, ಅದು ವಾಪಸ್ ಬರುವುದಿಲ್ಲ” ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, “2017ರಿಂದ ಇತ್ತೀಚೆಗೆ 1558 ಪ್ರಕರಣಗಳು ಖರೀದಿದಾರರ ಪರವಾಗಿ ಇತ್ಯರ್ಥವಾಗಿವೆ. 1003 ಪ್ರಕರಣಗಳು ಪರಿಶಿಷ್ಟರ ಪರವಾಗಿ ಇತ್ಯರ್ಥವಾಗಿವೆ. ಗಮನಿಸಿಬೇಕಾದ ವಿಚಾರವೆಂದರೆ ಕಾನೂನಿನಲ್ಲಿ ಡಿಸಿಗಳಿಗೆ ಅಪೀಲ್ ಹೋಗುವ ಪವರ್ ಇದೆ. ಹಾಗಾಗಿ ಜಿಲ್ಲಾಧಿಕಾರಿಗಳ ಮುಂದೆ 2303 ಅಪೀಲ್‌ಗಳು ಹೋಗಿವೆ. ಹೈಕೋರ್ಟ್‌ನಲ್ಲಿ 719 ಅಪೀಲ್‌ಗಳು ಇವೆ. ಎಸಿ ಕೋರ್ಟ್‌ನಲ್ಲಿ ಮೂಲ ಮಂಜೂರುದಾರರ ವಿರುದ್ಧ ಆಗಿದ್ದರೂ ಅವರು ಮೇಲ್ಮನವಿ ಹೋಗಿದ್ದಾರೆ. ಹಾಗಾಗಿ ಆ ಪ್ರಕರಣಗಳಿಗೂ ಈ ತಿದ್ದುಪಡಿ ಅನ್ವಯಿಸುವುದರಿಂದ 95% ಪ್ರಕರಣಗಳಿಗೆ ನ್ಯಾಯ ಸಿಗುತ್ತದೆ ಎಂದರು.

ಇದನ್ನೂ ಓದಿ: ಮಾರಾಟವಾದ ದಲಿತರ ಭೂಮಿ ವಾಪಸ್ ಕೊಡಿಸುವ PTCL ಕಾಯ್ದೆ ಬಗ್ಗೆ ನಿಮಗೆ ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...