Homeಮುಖಪುಟಸರ್ಕಾರದ ಅನುಮತಿ ಇಲ್ಲದೆ ಮಾರಾಟವಾದ ದಲಿತರ ಭೂಮಿ ವಾಪಸ್ ಕೊಡಿಸುವ ಪಿಟಿಸಿಎಲ್ ತಿದ್ದುಪಡಿ ಕಾಯ್ದೆ ಮಂಡನೆ

ಸರ್ಕಾರದ ಅನುಮತಿ ಇಲ್ಲದೆ ಮಾರಾಟವಾದ ದಲಿತರ ಭೂಮಿ ವಾಪಸ್ ಕೊಡಿಸುವ ಪಿಟಿಸಿಎಲ್ ತಿದ್ದುಪಡಿ ಕಾಯ್ದೆ ಮಂಡನೆ

ಪರಿಶಿಷ್ಟ ಜಾತಿ/ಪಂಗಡಗಳಿಗೆ ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತನ್ನು ಮೊದಲ ಅಧಿವೇಶನದಲ್ಲಿಯೇ ಈಡೇರಿಸಿದ್ದೇವೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ.

- Advertisement -
- Advertisement -

ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ ಕೆಲವು ಭೂಮಿಗಳ ವರ್ಗಾವಣೆ ನಿಷೇಧ ತಿದ್ದುಪಡಿ ವಿಧೇಯಕ (ಪಿಟಿಸಿಲ್ ತಿದ್ದುಪಡಿ ಮಸೂದೆ) 2023 ಅನ್ನು ಇಂದು ವಿಧಾನಸಭಾ ಅಧಿವೇಶನದಲ್ಲಿ ಕಂದಾಯ ಸಚಿವರಾದ ಕೃಷ್ಣ ಭೈರೇಗೌಡರು ಮಂಡಿಸಿದರು.

ನಂತರ ಮಾತನಾಡಿದ ಸಚಿವರು, “1978ರಲ್ಲಿ ಈ ಕಾನೂನನ್ನು ಇದೇ ಸದನ ಮಂಜೂರು ಮಾಡಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಸೇರಿದ ಜನರ ಸರ್ಕಾರದಿಂದ ಮಂಜೂರಾತಿಯಾಗಿರುವ ಜಮೀನುಗಳನ್ನು ಪರಭಾರೆ ಮಾಡಬೇಕಾದರೆ ಸರ್ಕಾರದ ಅನುಮತಿ ತೆಗೆದುಕೊಂಡಿರಬೇಕು. ಒಂದು ವೇಳೆ ಅನುಮತಿಯಿಲ್ಲದೇ ಮಾರಿದ್ದರೆ ಅಂತಹ ಜಮೀನುಗಳನ್ನು ಮೂಲ ಮಂಜೂರುದಾರರಿಗೆ ಮತ್ತೆ ಅವರಿಗೆ ಜಮೀನಿನ ಹಕ್ಕನ್ನು ನೀಡಬೇಕು ಎಂದು ಕಾನೂನು ತಂದಿತ್ತು. ಅಂದು ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಶ್ರೀಮತಿ ಇಂದಿರಾಗಾಂಧಿಯವರು ಪ್ರಧಾನಿಯಾಗಿದ್ದಾಗ ದೇಶದಲ್ಲಿ ಬಡವರಾಗಿದ್ದ ದಲಿತರು ತಿಳುವಳಿಕೆಯ ಕೊರತೆಯಿಂದ ಅವರ ಜಮೀನುಗಳನ್ನು ಸರ್ಕಾರದ ಅನುಮತಿಯಿಲ್ಲದೇ ಬೇರೆಯವರು ಕೊಂಡುಕೊಳ್ಳುವುದನ್ನು ಕಡಿವಾಣ ಹಾಕಲು ಮುಂದಾಗಿದ್ದರು ಎಂದರು.

ಅಂದು ದಲಿತರಿಗೆ ಇದ್ದ ಏಕೈಕ ಆಸ್ತಿ ಸರ್ಕಾರ ಮಂಜೂರು ಮಾಡಿದ್ದ ಜಮೀನನ್ನು ಅವರಿಗೆ ಉಳಿಸಲು ಈ ಮಾದರಿ ಕಾನೂನನ್ನು ರಚನೆ ಮಾಡಿ ಎಲ್ಲಾ ರಾಜ್ಯಗಳಿಗೆ ಕಳಿಸಿಕೊಟ್ಟಿದ್ದರು. ಆಗ ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿದ್ದ ದೇವರಾಜ ಅರಸುರವರು ಮತ್ತು ಕಂದಾಯ ಸಚಿವರಾಗಿದ್ದ ಬಸವಲಿಂಗಪ್ಪನವರು ಮಸೂದೆ ಮಂಡಿಸಿ 1978 ರಿಂದ ಕಾನೂನು ಜಾರಿಯಲ್ಲಿದೆ ಎಂದು ಸಚಿವರಾದ ಕೃಷ್ಣಭೈರೇಗೌಡರು ತಿಳಿಸಿದರು.

ಈ ಕಾನೂನಿನ ಅನ್ವಯ ನಮ್ಮ ಜಮೀನು ವಾಪಸ್ ಕೊಡಬೇಕೆಂದು ಪರಿಶಿಷ್ಟ ಜಾತಿಯ ಒಬ್ಬರು ದಾವೆ ಹೂಡಿದ್ದರು. ಆದರೆ ಎಸಿಯವರು ನಿಮ್ಮ ಜಮೀನು ಮಾರಿ ಬಹಳ ವರ್ಷಗಳಾಗಿವೆ ಹಾಗಾಗಿ ಈಗ ಕೇಳಲು ಬರುವುದಿಲ್ಲ ಎಂದು ತೀರ್ಪು ನೀಡಿದ್ದರು. ಕೊನೆಗೆ ಅದೇ ಕೇಸು ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಆಗ ಸುಪ್ರೀಂ ಕೋರ್ಟ್ ಸೆಕ್ಷನ್ 5 ರಲ್ಲಿ ಕಾಲಮಿತಿ ನಿಗದಿ ಮಾಡಿಲ್ಲ ಅನ್ನುವ ನ್ಯೂನತೆಯನ್ನು ಗುರುತಿಸಿ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಇದ್ದ ಹಕ್ಕನ್ನು ಕೊಡಲಾಗಿಲ್ಲ ಎಂದು ಸಚಿವರು ವಿವರಿಸಿದರು.

ಆದರೆ ಮೂಲ ಕಾನೂನಿನಲ್ಲಿ ಯಾವತ್ತೇ ಭೂಮಿ ಮಂಜೂರಾಗಿದ್ದರೂ, ಯಾವತ್ತೂ ಪರಬಾರೆಯಾಗಿದ್ದರೂ ಸಹ ಯಾವತ್ತು ಬೇಕಾದರೂ ಪ್ರಶ್ನಿಸಿ ಪರಬಾರೆ ಮಾಡಿಕೊಳ್ಳಬೇಕು ಎಂದಿದೆ. ಆದರೆ ಕಾನೂನಿನಲ್ಲಿ ಕಾಲಮಿತಿಯ ಬಗ್ಗೆ ಸ್ಪಷ್ಟತೆ ಇಲ್ಲ ಎಂದು ಸುಪ್ರೀಂ ಹೇಳಿದೆ. ಹಾಗಾಗಿ ಎಸಿಗಳು ಸುಪ್ರೀಂ ಕೋರ್ಟ್‌ನ ಈ ಆದೇಶ ಇಟ್ಟುಕೊಂಡು ಕಾಲಮಿತಿ ಮೀರಿದೆ ಎಂಬ ನೆಪ ಹೇಳಿ ಅರ್ಜಿಗಳನ್ನು ತಳ್ಳಿಹಾಕುವುದು ನಡೆಯುತ್ತಿದೆ. 2017 ರಿಂದ ದಲಿತ ಸಮುದಾಯಗಳು ಈ ಕಾನೂನಿನ ನ್ಯೂನತೆ ಸರಿಪಡಿಸಲು ತಿದ್ದುಪಡಿ ತರಲು ಹೋರಾಟ, ಧರಣಿ ಮಾಡುತ್ತಾ ಬಂದಿದ್ದಾರೆ. ಎಲ್ಲಾ ರಾಜಕೀಯ ಪಕ್ಷಗಳಿಗೂ ಮನವಿ ಮಾಡಿದ್ದಾರೆ ಎಂದರು.

ನಮ್ಮ ಪಕ್ಷ ವಿರೋಧ ಪಕ್ಷದಲ್ಲಿದ್ದಾಗಲೇ, ‘ನಮ್ಮ ಸರ್ಕಾರ ಬಂದ ಕೂಡಲೇ ನ್ಯೂನತೆ ಸರಿಪಡಿಸಿ, 1978ರ ಮೂಲ ಕಾನೂನಿಗೆ ಜೀವ ತುಂಬುತ್ತೇವೆ’ ಎಂದು ಹೇಳಿದ್ದೆವು. ನಮ್ಮ ನಾಯಕರಾದ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್‌ರವರು ಚಿತ್ರದುರ್ಗದ ಸಮಾವೇಶದಲ್ಲಿ ದಲಿತರಿಗೆ ಈ ಮಾತನ್ನು ಕೊಟ್ಟಿದ್ದೆವು. ದಲಿತರು ಬಿಜೆಪಿಗೂ ಮನವಿ ಮಾಡಿದ್ದರೂ, ಬಿಜೆಪಿ 4 ವರ್ಷ ಅಧಿಕಾರದಲ್ಲಿದ್ದೂ ಸಹ ಮಾಡಿಲ್ಲ. ಫೆಬ್ರವರಿ ತಿಂಗಳಲ್ಲಿ 162ರಲ್ಲಿ 160ನೇ ಪ್ಯಾರದಲ್ಲಿ ಪ.ಜಾ ಮತ್ತು ಪ.ಪಂದವರ ಜಮೀನನ್ನು ಸಂರಕ್ಷಿಸಲು ಪಿಟಿಸಿಎಲ್ ಕಾಯ್ದೆಗೆ ಸೂಕ್ತ ತಿದ್ದುಪಡಿ ತರಲಾಗುವುದು ಎಂದು ಪೊಳ್ಳು ಭರವಸೆ ನೀಡಿದ್ದರು. ಆದರೆ ನ್ಯಾಯ ಕೊಡದೇ ಅನ್ಯಾಯ ಮುಂದುವರೆಸಿದ್ದರು ಎಂದು ಹೇಳಿದರು.

ನಮ್ಮ ಸರ್ಕಾರ ಮಾತು ಕೊಟ್ಟಂತೆ ಮುಖ್ಯಮಂತ್ರಿಗಳು ಬಜೆಟ್‌ನಲ್ಲಿ ಘೋಷಣೆ ಮಾಡಿದ್ದರು. ಮೊದಲನೇ ಅಧಿವೇಶನದಲ್ಲಿಯೇ ನಾವು ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ಮಂಡಿಸುತ್ತಿದ್ದೇವೆ. “ಸೆಕ್ಷನ್ 5(1)ಸಿ ನಲ್ಲಿ ಯಾವುದೇ ಕಾನೂನಿನಲ್ಲಿ ಏನೇ ಒಳಗೊಂಡಿದ್ದರೂ ಈ ಅಧಿನಿಯಮದ ಉಪಬಂಧಗಳನ್ನು ರದ್ದುಪಡಿಸಲು ಯಾವುದೇ ಕಾಲಮಿತಿ ಇರತಕ್ಕದ್ದಲ್ಲ ಎಂಬ ತಿದ್ದುಪಡಿ ಸೇರಿಸಿದ್ದೇವೆ” ಎಂದರು.

ದಲಿತರ ಜಮೀನು ಉಳಿಯಬೇಕೆಂಬ ಸದುದ್ದೇಶದಿಂದ ಇದನ್ನು ಮಾಡಿದ್ದೇವೆ. ಇದು ಹೊಸ ಕಾನೂನು ಅಲ್ಲ. ಕಾಲಮಿತಿಯ ಏನು ಹೇಳಿಲ್ಲ ಎಂದು ಸುಪ್ರಿಂ ಹೇಳಿದೆ. ಹಾಗಾಗಿ ಮೂಲ ಕಾನೂನಿನಲ್ಲಿ ನಾವು ಕಾಲಮಿತಿ ಇಲ್ಲ ಎಂದು ತಿದ್ದುಪಡಿ ಮಾಡುತ್ತಿದ್ದೇವೆ.

ಇದು ಪ್ರಕರಣಗಳು ಯಾವ ನ್ಯಾಯಾಲಯದಲ್ಲಿ ಇರಲಿ, ಎಸಿ, ಡಿಸಿ, ಹೈಕೋರ್ಟ್, ಸುಪ್ರೀಂ ಕೋರ್ಟ್‌ ಎಲ್ಲೇ ಇರಲಿ, ಪೆಂಡಿಂಗ್ ಇದ್ದರೂ ಸಹ ಅವುಗಳಿಗೆ ಈ ಕಾಯ್ದೆ ಜಾರಿಯಾಗುತ್ತದೆ. ಯಾವುದಾದರೂ ಪ್ರಕರಣಗಳು ನ್ಯಾಯಸಮ್ಮತವಾಗಿ ವಿಲೇ ಆಗಿಹೋಗಿದ್ದರೆ ಅವು ಇದರ ವ್ಯಾಪ್ತಿಗೆ ಬರುವುದಿಲ್ಲ. ಆದರೆ ಈ ಕಾನೂನು ಜಾರಿಗೆ ಬಂದ ನಂತರ ಪೆಂಡಿಂಗ್ ಇರುವ ಕೇಸ್‌ಗಳಿಗೂ ಅನ್ವಯವಾಗುತ್ತದೆ ಎಂದು ಅವರು ತಿಳಿಸಿದರು.

ಮಸೂದೆ ಕುರಿತು ಮಾತನಾಡಿದ ಮಾಜಿ ಸಚಿವರಾದ ಪಿ.ಎಂ ನರೇಂದ್ರ ಸ್ವಾಮಿಯವರು, “2017ರಿಂದ ಈಗಾಗಲೇ ದಲಿತರ ವಿರುದ್ಧವಾಗಿ ತೀರ್ಪು ಬಂದಿರುವ ಪ್ರಕರಣಗಳಿಗೂ ಈ ಕಾಯ್ದೆ ಅನ್ವಯವಾಗುವಂತೆ ತಿದ್ದುಪಡಿ ತರಬೇಕು. ಇಲ್ಲದಿದ್ದರೆ ಬಹಳಷ್ಟು ಜಮೀನು ಈಗಾಗಲೇ ದಲಿತರಿಂದ ಕಿತ್ತುಕೊಳ್ಳಲಾಗಿದೆ, ಅದು ವಾಪಸ್ ಬರುವುದಿಲ್ಲ” ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, “2017ರಿಂದ ಇತ್ತೀಚೆಗೆ 1558 ಪ್ರಕರಣಗಳು ಖರೀದಿದಾರರ ಪರವಾಗಿ ಇತ್ಯರ್ಥವಾಗಿವೆ. 1003 ಪ್ರಕರಣಗಳು ಪರಿಶಿಷ್ಟರ ಪರವಾಗಿ ಇತ್ಯರ್ಥವಾಗಿವೆ. ಗಮನಿಸಿಬೇಕಾದ ವಿಚಾರವೆಂದರೆ ಕಾನೂನಿನಲ್ಲಿ ಡಿಸಿಗಳಿಗೆ ಅಪೀಲ್ ಹೋಗುವ ಪವರ್ ಇದೆ. ಹಾಗಾಗಿ ಜಿಲ್ಲಾಧಿಕಾರಿಗಳ ಮುಂದೆ 2303 ಅಪೀಲ್‌ಗಳು ಹೋಗಿವೆ. ಹೈಕೋರ್ಟ್‌ನಲ್ಲಿ 719 ಅಪೀಲ್‌ಗಳು ಇವೆ. ಎಸಿ ಕೋರ್ಟ್‌ನಲ್ಲಿ ಮೂಲ ಮಂಜೂರುದಾರರ ವಿರುದ್ಧ ಆಗಿದ್ದರೂ ಅವರು ಮೇಲ್ಮನವಿ ಹೋಗಿದ್ದಾರೆ. ಹಾಗಾಗಿ ಆ ಪ್ರಕರಣಗಳಿಗೂ ಈ ತಿದ್ದುಪಡಿ ಅನ್ವಯಿಸುವುದರಿಂದ 95% ಪ್ರಕರಣಗಳಿಗೆ ನ್ಯಾಯ ಸಿಗುತ್ತದೆ ಎಂದರು.

ಇದನ್ನೂ ಓದಿ: ಮಾರಾಟವಾದ ದಲಿತರ ಭೂಮಿ ವಾಪಸ್ ಕೊಡಿಸುವ PTCL ಕಾಯ್ದೆ ಬಗ್ಗೆ ನಿಮಗೆ ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....