Homeಮುಖಪುಟಸರ್ಕಾರದ ಅನುಮತಿ ಇಲ್ಲದೆ ಮಾರಾಟವಾದ ದಲಿತರ ಭೂಮಿ ವಾಪಸ್ ಕೊಡಿಸುವ ಪಿಟಿಸಿಎಲ್ ತಿದ್ದುಪಡಿ ಕಾಯ್ದೆ ಮಂಡನೆ

ಸರ್ಕಾರದ ಅನುಮತಿ ಇಲ್ಲದೆ ಮಾರಾಟವಾದ ದಲಿತರ ಭೂಮಿ ವಾಪಸ್ ಕೊಡಿಸುವ ಪಿಟಿಸಿಎಲ್ ತಿದ್ದುಪಡಿ ಕಾಯ್ದೆ ಮಂಡನೆ

ಪರಿಶಿಷ್ಟ ಜಾತಿ/ಪಂಗಡಗಳಿಗೆ ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತನ್ನು ಮೊದಲ ಅಧಿವೇಶನದಲ್ಲಿಯೇ ಈಡೇರಿಸಿದ್ದೇವೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ.

- Advertisement -
- Advertisement -

ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ ಕೆಲವು ಭೂಮಿಗಳ ವರ್ಗಾವಣೆ ನಿಷೇಧ ತಿದ್ದುಪಡಿ ವಿಧೇಯಕ (ಪಿಟಿಸಿಲ್ ತಿದ್ದುಪಡಿ ಮಸೂದೆ) 2023 ಅನ್ನು ಇಂದು ವಿಧಾನಸಭಾ ಅಧಿವೇಶನದಲ್ಲಿ ಕಂದಾಯ ಸಚಿವರಾದ ಕೃಷ್ಣ ಭೈರೇಗೌಡರು ಮಂಡಿಸಿದರು.

ನಂತರ ಮಾತನಾಡಿದ ಸಚಿವರು, “1978ರಲ್ಲಿ ಈ ಕಾನೂನನ್ನು ಇದೇ ಸದನ ಮಂಜೂರು ಮಾಡಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಸೇರಿದ ಜನರ ಸರ್ಕಾರದಿಂದ ಮಂಜೂರಾತಿಯಾಗಿರುವ ಜಮೀನುಗಳನ್ನು ಪರಭಾರೆ ಮಾಡಬೇಕಾದರೆ ಸರ್ಕಾರದ ಅನುಮತಿ ತೆಗೆದುಕೊಂಡಿರಬೇಕು. ಒಂದು ವೇಳೆ ಅನುಮತಿಯಿಲ್ಲದೇ ಮಾರಿದ್ದರೆ ಅಂತಹ ಜಮೀನುಗಳನ್ನು ಮೂಲ ಮಂಜೂರುದಾರರಿಗೆ ಮತ್ತೆ ಅವರಿಗೆ ಜಮೀನಿನ ಹಕ್ಕನ್ನು ನೀಡಬೇಕು ಎಂದು ಕಾನೂನು ತಂದಿತ್ತು. ಅಂದು ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಶ್ರೀಮತಿ ಇಂದಿರಾಗಾಂಧಿಯವರು ಪ್ರಧಾನಿಯಾಗಿದ್ದಾಗ ದೇಶದಲ್ಲಿ ಬಡವರಾಗಿದ್ದ ದಲಿತರು ತಿಳುವಳಿಕೆಯ ಕೊರತೆಯಿಂದ ಅವರ ಜಮೀನುಗಳನ್ನು ಸರ್ಕಾರದ ಅನುಮತಿಯಿಲ್ಲದೇ ಬೇರೆಯವರು ಕೊಂಡುಕೊಳ್ಳುವುದನ್ನು ಕಡಿವಾಣ ಹಾಕಲು ಮುಂದಾಗಿದ್ದರು ಎಂದರು.

ಅಂದು ದಲಿತರಿಗೆ ಇದ್ದ ಏಕೈಕ ಆಸ್ತಿ ಸರ್ಕಾರ ಮಂಜೂರು ಮಾಡಿದ್ದ ಜಮೀನನ್ನು ಅವರಿಗೆ ಉಳಿಸಲು ಈ ಮಾದರಿ ಕಾನೂನನ್ನು ರಚನೆ ಮಾಡಿ ಎಲ್ಲಾ ರಾಜ್ಯಗಳಿಗೆ ಕಳಿಸಿಕೊಟ್ಟಿದ್ದರು. ಆಗ ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿದ್ದ ದೇವರಾಜ ಅರಸುರವರು ಮತ್ತು ಕಂದಾಯ ಸಚಿವರಾಗಿದ್ದ ಬಸವಲಿಂಗಪ್ಪನವರು ಮಸೂದೆ ಮಂಡಿಸಿ 1978 ರಿಂದ ಕಾನೂನು ಜಾರಿಯಲ್ಲಿದೆ ಎಂದು ಸಚಿವರಾದ ಕೃಷ್ಣಭೈರೇಗೌಡರು ತಿಳಿಸಿದರು.

ಈ ಕಾನೂನಿನ ಅನ್ವಯ ನಮ್ಮ ಜಮೀನು ವಾಪಸ್ ಕೊಡಬೇಕೆಂದು ಪರಿಶಿಷ್ಟ ಜಾತಿಯ ಒಬ್ಬರು ದಾವೆ ಹೂಡಿದ್ದರು. ಆದರೆ ಎಸಿಯವರು ನಿಮ್ಮ ಜಮೀನು ಮಾರಿ ಬಹಳ ವರ್ಷಗಳಾಗಿವೆ ಹಾಗಾಗಿ ಈಗ ಕೇಳಲು ಬರುವುದಿಲ್ಲ ಎಂದು ತೀರ್ಪು ನೀಡಿದ್ದರು. ಕೊನೆಗೆ ಅದೇ ಕೇಸು ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಆಗ ಸುಪ್ರೀಂ ಕೋರ್ಟ್ ಸೆಕ್ಷನ್ 5 ರಲ್ಲಿ ಕಾಲಮಿತಿ ನಿಗದಿ ಮಾಡಿಲ್ಲ ಅನ್ನುವ ನ್ಯೂನತೆಯನ್ನು ಗುರುತಿಸಿ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಇದ್ದ ಹಕ್ಕನ್ನು ಕೊಡಲಾಗಿಲ್ಲ ಎಂದು ಸಚಿವರು ವಿವರಿಸಿದರು.

ಆದರೆ ಮೂಲ ಕಾನೂನಿನಲ್ಲಿ ಯಾವತ್ತೇ ಭೂಮಿ ಮಂಜೂರಾಗಿದ್ದರೂ, ಯಾವತ್ತೂ ಪರಬಾರೆಯಾಗಿದ್ದರೂ ಸಹ ಯಾವತ್ತು ಬೇಕಾದರೂ ಪ್ರಶ್ನಿಸಿ ಪರಬಾರೆ ಮಾಡಿಕೊಳ್ಳಬೇಕು ಎಂದಿದೆ. ಆದರೆ ಕಾನೂನಿನಲ್ಲಿ ಕಾಲಮಿತಿಯ ಬಗ್ಗೆ ಸ್ಪಷ್ಟತೆ ಇಲ್ಲ ಎಂದು ಸುಪ್ರೀಂ ಹೇಳಿದೆ. ಹಾಗಾಗಿ ಎಸಿಗಳು ಸುಪ್ರೀಂ ಕೋರ್ಟ್‌ನ ಈ ಆದೇಶ ಇಟ್ಟುಕೊಂಡು ಕಾಲಮಿತಿ ಮೀರಿದೆ ಎಂಬ ನೆಪ ಹೇಳಿ ಅರ್ಜಿಗಳನ್ನು ತಳ್ಳಿಹಾಕುವುದು ನಡೆಯುತ್ತಿದೆ. 2017 ರಿಂದ ದಲಿತ ಸಮುದಾಯಗಳು ಈ ಕಾನೂನಿನ ನ್ಯೂನತೆ ಸರಿಪಡಿಸಲು ತಿದ್ದುಪಡಿ ತರಲು ಹೋರಾಟ, ಧರಣಿ ಮಾಡುತ್ತಾ ಬಂದಿದ್ದಾರೆ. ಎಲ್ಲಾ ರಾಜಕೀಯ ಪಕ್ಷಗಳಿಗೂ ಮನವಿ ಮಾಡಿದ್ದಾರೆ ಎಂದರು.

ನಮ್ಮ ಪಕ್ಷ ವಿರೋಧ ಪಕ್ಷದಲ್ಲಿದ್ದಾಗಲೇ, ‘ನಮ್ಮ ಸರ್ಕಾರ ಬಂದ ಕೂಡಲೇ ನ್ಯೂನತೆ ಸರಿಪಡಿಸಿ, 1978ರ ಮೂಲ ಕಾನೂನಿಗೆ ಜೀವ ತುಂಬುತ್ತೇವೆ’ ಎಂದು ಹೇಳಿದ್ದೆವು. ನಮ್ಮ ನಾಯಕರಾದ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್‌ರವರು ಚಿತ್ರದುರ್ಗದ ಸಮಾವೇಶದಲ್ಲಿ ದಲಿತರಿಗೆ ಈ ಮಾತನ್ನು ಕೊಟ್ಟಿದ್ದೆವು. ದಲಿತರು ಬಿಜೆಪಿಗೂ ಮನವಿ ಮಾಡಿದ್ದರೂ, ಬಿಜೆಪಿ 4 ವರ್ಷ ಅಧಿಕಾರದಲ್ಲಿದ್ದೂ ಸಹ ಮಾಡಿಲ್ಲ. ಫೆಬ್ರವರಿ ತಿಂಗಳಲ್ಲಿ 162ರಲ್ಲಿ 160ನೇ ಪ್ಯಾರದಲ್ಲಿ ಪ.ಜಾ ಮತ್ತು ಪ.ಪಂದವರ ಜಮೀನನ್ನು ಸಂರಕ್ಷಿಸಲು ಪಿಟಿಸಿಎಲ್ ಕಾಯ್ದೆಗೆ ಸೂಕ್ತ ತಿದ್ದುಪಡಿ ತರಲಾಗುವುದು ಎಂದು ಪೊಳ್ಳು ಭರವಸೆ ನೀಡಿದ್ದರು. ಆದರೆ ನ್ಯಾಯ ಕೊಡದೇ ಅನ್ಯಾಯ ಮುಂದುವರೆಸಿದ್ದರು ಎಂದು ಹೇಳಿದರು.

ನಮ್ಮ ಸರ್ಕಾರ ಮಾತು ಕೊಟ್ಟಂತೆ ಮುಖ್ಯಮಂತ್ರಿಗಳು ಬಜೆಟ್‌ನಲ್ಲಿ ಘೋಷಣೆ ಮಾಡಿದ್ದರು. ಮೊದಲನೇ ಅಧಿವೇಶನದಲ್ಲಿಯೇ ನಾವು ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ಮಂಡಿಸುತ್ತಿದ್ದೇವೆ. “ಸೆಕ್ಷನ್ 5(1)ಸಿ ನಲ್ಲಿ ಯಾವುದೇ ಕಾನೂನಿನಲ್ಲಿ ಏನೇ ಒಳಗೊಂಡಿದ್ದರೂ ಈ ಅಧಿನಿಯಮದ ಉಪಬಂಧಗಳನ್ನು ರದ್ದುಪಡಿಸಲು ಯಾವುದೇ ಕಾಲಮಿತಿ ಇರತಕ್ಕದ್ದಲ್ಲ ಎಂಬ ತಿದ್ದುಪಡಿ ಸೇರಿಸಿದ್ದೇವೆ” ಎಂದರು.

ದಲಿತರ ಜಮೀನು ಉಳಿಯಬೇಕೆಂಬ ಸದುದ್ದೇಶದಿಂದ ಇದನ್ನು ಮಾಡಿದ್ದೇವೆ. ಇದು ಹೊಸ ಕಾನೂನು ಅಲ್ಲ. ಕಾಲಮಿತಿಯ ಏನು ಹೇಳಿಲ್ಲ ಎಂದು ಸುಪ್ರಿಂ ಹೇಳಿದೆ. ಹಾಗಾಗಿ ಮೂಲ ಕಾನೂನಿನಲ್ಲಿ ನಾವು ಕಾಲಮಿತಿ ಇಲ್ಲ ಎಂದು ತಿದ್ದುಪಡಿ ಮಾಡುತ್ತಿದ್ದೇವೆ.

ಇದು ಪ್ರಕರಣಗಳು ಯಾವ ನ್ಯಾಯಾಲಯದಲ್ಲಿ ಇರಲಿ, ಎಸಿ, ಡಿಸಿ, ಹೈಕೋರ್ಟ್, ಸುಪ್ರೀಂ ಕೋರ್ಟ್‌ ಎಲ್ಲೇ ಇರಲಿ, ಪೆಂಡಿಂಗ್ ಇದ್ದರೂ ಸಹ ಅವುಗಳಿಗೆ ಈ ಕಾಯ್ದೆ ಜಾರಿಯಾಗುತ್ತದೆ. ಯಾವುದಾದರೂ ಪ್ರಕರಣಗಳು ನ್ಯಾಯಸಮ್ಮತವಾಗಿ ವಿಲೇ ಆಗಿಹೋಗಿದ್ದರೆ ಅವು ಇದರ ವ್ಯಾಪ್ತಿಗೆ ಬರುವುದಿಲ್ಲ. ಆದರೆ ಈ ಕಾನೂನು ಜಾರಿಗೆ ಬಂದ ನಂತರ ಪೆಂಡಿಂಗ್ ಇರುವ ಕೇಸ್‌ಗಳಿಗೂ ಅನ್ವಯವಾಗುತ್ತದೆ ಎಂದು ಅವರು ತಿಳಿಸಿದರು.

ಮಸೂದೆ ಕುರಿತು ಮಾತನಾಡಿದ ಮಾಜಿ ಸಚಿವರಾದ ಪಿ.ಎಂ ನರೇಂದ್ರ ಸ್ವಾಮಿಯವರು, “2017ರಿಂದ ಈಗಾಗಲೇ ದಲಿತರ ವಿರುದ್ಧವಾಗಿ ತೀರ್ಪು ಬಂದಿರುವ ಪ್ರಕರಣಗಳಿಗೂ ಈ ಕಾಯ್ದೆ ಅನ್ವಯವಾಗುವಂತೆ ತಿದ್ದುಪಡಿ ತರಬೇಕು. ಇಲ್ಲದಿದ್ದರೆ ಬಹಳಷ್ಟು ಜಮೀನು ಈಗಾಗಲೇ ದಲಿತರಿಂದ ಕಿತ್ತುಕೊಳ್ಳಲಾಗಿದೆ, ಅದು ವಾಪಸ್ ಬರುವುದಿಲ್ಲ” ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, “2017ರಿಂದ ಇತ್ತೀಚೆಗೆ 1558 ಪ್ರಕರಣಗಳು ಖರೀದಿದಾರರ ಪರವಾಗಿ ಇತ್ಯರ್ಥವಾಗಿವೆ. 1003 ಪ್ರಕರಣಗಳು ಪರಿಶಿಷ್ಟರ ಪರವಾಗಿ ಇತ್ಯರ್ಥವಾಗಿವೆ. ಗಮನಿಸಿಬೇಕಾದ ವಿಚಾರವೆಂದರೆ ಕಾನೂನಿನಲ್ಲಿ ಡಿಸಿಗಳಿಗೆ ಅಪೀಲ್ ಹೋಗುವ ಪವರ್ ಇದೆ. ಹಾಗಾಗಿ ಜಿಲ್ಲಾಧಿಕಾರಿಗಳ ಮುಂದೆ 2303 ಅಪೀಲ್‌ಗಳು ಹೋಗಿವೆ. ಹೈಕೋರ್ಟ್‌ನಲ್ಲಿ 719 ಅಪೀಲ್‌ಗಳು ಇವೆ. ಎಸಿ ಕೋರ್ಟ್‌ನಲ್ಲಿ ಮೂಲ ಮಂಜೂರುದಾರರ ವಿರುದ್ಧ ಆಗಿದ್ದರೂ ಅವರು ಮೇಲ್ಮನವಿ ಹೋಗಿದ್ದಾರೆ. ಹಾಗಾಗಿ ಆ ಪ್ರಕರಣಗಳಿಗೂ ಈ ತಿದ್ದುಪಡಿ ಅನ್ವಯಿಸುವುದರಿಂದ 95% ಪ್ರಕರಣಗಳಿಗೆ ನ್ಯಾಯ ಸಿಗುತ್ತದೆ ಎಂದರು.

ಇದನ್ನೂ ಓದಿ: ಮಾರಾಟವಾದ ದಲಿತರ ಭೂಮಿ ವಾಪಸ್ ಕೊಡಿಸುವ PTCL ಕಾಯ್ದೆ ಬಗ್ಗೆ ನಿಮಗೆ ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...