Homeಕರ್ನಾಟಕತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

- Advertisement -
- Advertisement -

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಆ. 3ರಂದು ಪ್ರಿಯಾಂಕ್ ಖರ್ಗೆ ಅವರು ಮಾಧ್ಯಮಗಳಿಗೆ ನೀಡಿದ್ದ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿ ಪ್ರಕಟಿಸಿದ್ದ ಹಿನ್ನೆಲೆಯಲ್ಲಿ PTI ದೃಶ್ಯ ಮಾಧ್ಯಮ ವಿಭಾಗದ ಸಂಪಾದಕ ಶಾಝಿ ಝಮಾನ್ ಅವರು ಆಗಸ್ಟ್ 4ರಂದು ಖರ್ಗೆ ಅವರಿಗೆ ಪತ್ರ ಬರೆದು ಕ್ಷಮೆಯಾಚಿಸಿದ್ದಾರೆ.

ಪತ್ರದಲ್ಲಿ, “ನಮ್ಮ ಕಡೆಯಿಂದ ಸಂಭವಿಸಿದ ಮಾನವ ದೋಷದಿಂದ ನಿಮ್ಮ ಹೇಳಿಕೆಗೆ ಸಂಬಂಧಿಸಿ ತಪ್ಪು ಅರ್ಥೈಸುವಿಕೆ ಉಂಟಾಗಿದೆ. ತಪ್ಪನ್ನು ಸರಿಪಡಿಸುವುದು ಮತ್ತು ಸಂಬಂಧಪಟ್ಟ ಸಿಬ್ಬಂದಿಯಿಂದ ವಿವರಣೆ ಪಡೆಯುವುದು ಸೇರಿದಂತೆ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದೇವೆ. ಈ ತಪ್ಪಿಗೆ ನಾವು ಕ್ಷಮೆಯಾಚಿಸುತ್ತೇವೆ” ಎಂದು ತಿಳಿಸಿದ್ದಾರೆ.

ಈ ಪತ್ರವನ್ನು ಸಾಮಾಜಿಕ ತಾಣ ಎಕ್ಸ್‌ನಲ್ಲಿ ಹಂಚಿಕೊಂಡಿರುವ ಪ್ರಿಯಾಂಕ್ ಖರ್ಗೆ, “ಹಾನಿ ಈಗಾಗಲೇ ಆಗಿದೆ. ನಿಮ್ಮ ಕ್ಷಮೆಯಾಚನೆಯಿಂದ ಏನು ಪ್ರಯೋಜನ? ಈ ತಪ್ಪು ಮಾಹಿತಿಯನ್ನು ರಾಜಕೀಯ ಪಕ್ಷಗಳು ಮಾತ್ರವಲ್ಲ, ಸಾಮಾಜಿಕ ಮಾಧ್ಯಮದಲ್ಲಿನ ಕಂಟೆಂಟ್‌ ಕ್ರಿಯೆಟರ್‌ಗಳು ವ್ಯಾಪಕವಾಗಿ ವೈರಲ್‌ ಮಾಡಿದ್ದಾರೆ. ತಪ್ಪು ಮಾಹಿತಿ ವೈರಲ್ ಆದ ಬಳಿಕ ಉಂಟಾದ ಹಾನಿಯನ್ನು ಯಾರು ಸರಿಪಡಿಸಲಿದ್ದಾರೆ? ಎಷ್ಟು ಮಂದಿಯನ್ನು ಹೊಣೆಗಾರರನ್ನಾಗಿ ಮಾಡಲು ಸಾಧ್ಯ? ಭಾರತದಲ್ಲಿ ಜವಾಬ್ದಾರಿಯುತ ಪತ್ರಿಕೋದ್ಯಮವು ಹೆಚ್ಚಾಗಿ ಪುರಾಣವಾಗುತ್ತಿದೆ” ಎಂದು ಪೋಸ್ಟ್‌ ಮಾಡಿದ್ದಾರೆ.

ಇದರೊಂದಿಗೆ ಇಂಗ್ಲಿಷ್ ಸಾಹಿತಿ ಜೋನಾಥನ್ ಸ್ವಿಫ್ಟ್ ಅವರ, “ಸುಳ್ಳು ವೇಗವಾಗಿ ಹರಡುತ್ತದೆ; ಸತ್ಯ ಅದರ ಹಿಂದೆ ಬರುತ್ತದೆ. ಸತ್ಯ ತಲುಪುವಷ್ಟರಲ್ಲಿ ಸುಳ್ಳು ತನ್ನ ಪರಿಣಾಮ ಬೀರಿರುತ್ತದೆ” ಎಂಬ ಉಲ್ಲೇಖವನ್ನೂ ಅವರು ಹಂಚಿಕೊಂಡಿದ್ದಾರೆ.

ಏನಿದು ವಿವಾದ?

ವಿಜಯಪುರದ ತಿಕೋಟಾದಲ್ಲಿ ಪೊಲೀಸ್ ಕಾನ್‌ಸ್ಟೆಬಲ್ (ಸಿವಿಲ್) ಹುದ್ದೆಗೆ ಆಯ್ಕೆಗಾಗಿ ನಡೆದ ಪರೀಕ್ಷೆ ವೇಳೆ ಉಂಟಾದ ಪ್ರಶ್ನೆ ಪತ್ರಿಕೆ ಮತ್ತು ಒಎಂಆರ್‌ ಶೀಟ್‌ ಗೊಂದಲಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ವಿರೋಧ ಪಕ್ಷದ ನಾಯಕ ಆರ್. ಅಶೋಕ್‌ ತಮ್ಮ ರಾಜೀನಾಮೆಗೆ ಆಗ್ರಹಿಸುತ್ತಿರುವ ಕುರಿತು ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದ ಖರ್ಗೆ, “ನನ್ನ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ 25 ದಿನಗಳ ಉಪವಾಸ ಸತ್ಯಾಗ್ರಹ ನಡೆಸಲು ಸಿದ್ಧವಿದ್ದರೆ ಅದನ್ನು ಪರಿಗಣಿಸುತ್ತೇನೆ” ಎಂದು ಹೇಳಿದ್ದರು.

ಆದರೆ, ಈ ಹೇಳಿಕೆಯನ್ನು PTI ತಪ್ಪಾಗಿ ಅರ್ಥೈಸಿ, ಅದು ಉದ್ಯೋಗಾಕಾಂಕ್ಷಿಗಳನ್ನು ಉದ್ದೇಶಿಸಿ ನೀಡಿದ ಹೇಳಿಕೆ ಎಂಬ ಅರ್ಥ ಬರುವ ರೀತಿಯಲ್ಲಿ ವರದಿ ಹಾಗೂ ಎಕ್ಸ್‌ನಲ್ಲಿ ಪೋಸ್ಟ್ ಪ್ರಕಟಿಸಿತ್ತು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ಪ್ರಿಯಾಂಕ್ ಖರ್ಗೆ, ತಮ್ಮ ಹೇಳಿಕೆ ಬಿಜೆಪಿಯ ರಾಜಕೀಯವನ್ನು ಉದ್ದೇಶಿಸಿದ್ದೇ ಹೊರತು, ವಿದ್ಯಾರ್ಥಿಗಳು ಅಥವಾ ಉದ್ಯೋಗಾಕಾಂಕ್ಷಿಗಳನ್ನು ಉದ್ದೇಶಿಸಿರಲಿಲ್ಲ ಎಂದು ಸ್ಪಷ್ಟಪಡಿಸಿದ್ದರು.

ತಪ್ಪು ಮಾಹಿತಿ ಹರಡಿದ ಸುದ್ದಿ ಸಂಸ್ಥೆಗಳು ಹಾಗೂ ವ್ಯಕ್ತಿಗಳ ವಿರುದ್ಧ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ಗೃಹ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿರುವುದಾಗಿಯೂ ಅವರು ತಿಳಿಸಿದ್ದರು. ಸುಳ್ಳು ಸುದ್ದಿ ಲಕ್ಷಾಂತರ ಸರ್ಕಾರಿ ಉದ್ಯೋಗಾಕಾಂಕ್ಷಿಗಳಲ್ಲಿ ಅನಗತ್ಯ ಆತಂಕ ಸೃಷ್ಟಿಸುವ ಉದ್ದೇಶ ಹೊಂದಿದೆ ಎಂದು ಆರೋಪಿಸಿದ್ದರು.

ವಿವಾದದ ಬಳಿಕ PTI ತನ್ನ ಎಕ್ಸ್ ಖಾತೆಯಲ್ಲಿ ಮತ್ತೆ ಪ್ರತಿಕ್ರಿಯಿಸಿ, “ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿತ್ತು. ಆ. 3ರಂದು ಪ್ರಕಟಿಸಿದ್ದ ತಮ್ಮ ಹಿಂದಿನ ಎಕ್ಸ್ ಪೋಸ್ಟ್ ಅನ್ನು ಹಿಂತೆಗೆದುಕೊಳ್ಳಲಾಗಿದೆ. ಈ ತಪ್ಪಿಗೆ ತೀವ್ರ ವಿಷಾದ ವ್ಯಕ್ತಪಡಿಸುತ್ತೇವೆ” ಎಂದು ಸ್ಪಷ್ಟಪಡಿಸಿತ್ತು.

ಈ ತಿದ್ದುಪಡಿಯ ಮರುದಿನವೇ PTI ಖರ್ಗೆ ಅವರಿಗೆ ಅಧಿಕೃತ ಪತ್ರ ಬರೆದು ಕ್ಷಮೆಯಾಚಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...