Homeಫ್ಯಾಕ್ಟ್‌ಚೆಕ್Fact check: ಪಾಲ್ಘರ್ ಗುಂಪು ಹತ್ಯೆಯ ಬಗ್ಗೆ ಸುಳ್ಳು ವರದಿ ಮಾಡಿದ ಪಿಟಿಐ

Fact check: ಪಾಲ್ಘರ್ ಗುಂಪು ಹತ್ಯೆಯ ಬಗ್ಗೆ ಸುಳ್ಳು ವರದಿ ಮಾಡಿದ ಪಿಟಿಐ

ಏಪ್ರಿಲ್ 16, 2020 ರ ರಾತ್ರಿ, ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಇಬ್ಬರು ಹಿಂದೂ ಸಾದುಗಳು ಸೇರಿದಂತೆ ಮೂವರನ್ನು ಗುಂಪು ಹತ್ಯೆ ನಡೆಸಲಾಗಿತ್ತು.

- Advertisement -
- Advertisement -

ಸುದ್ದಿ ಜಾಲ ಏಜೆನ್ಸಿಯಾದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (ಪಿಟಿಐ) ಪಾಲ್ಘರ್ ಗುಂಪುಹತ್ಯೆ ಘಟನೆಯ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ಹೇಳಿಕೆಯನ್ನು ತಪ್ಪಾಗಿ ವರದಿ ಮಾಡಿದೆ. ಸಚಿವರು ಪೊಲೀಸರು ಬಂಧಿಸಿರುವ 101 ಆರೋಪಿಗಳ ಪಟ್ಟಿಯಲ್ಲಿ ಮುಸ್ಲಿಮರಿಲ್ಲ ಎಂದು ವೀಡಿಯೊವೊಂದರಲ್ಲಿ ಹೇಳಿದ್ದರು.

ಆದರೆ “ಪಾಲ್ಘರ್ ಹಲ್ಲೆ ಪ್ರಕರಣದಲ್ಲಿ ಬಂಧಿತರಾದವರಲ್ಲಿ ಹಿಂದೂಗಳಿಲ್ಲ: ಮಹಾ ಗೃಹ ಸಚಿವ ಅನಿಲ್ ದೇಶ್ಮುಖ್” ಎಂದು ಪಿಟಿಐ ವರದಿ ಮಾಡಿತ್ತು, ಆದರೆ ಈಗ ಟ್ವೀಟ್‌ ಅನ್ನು ಡಿಲೀಟ್ ಮಾಡಿದೆ.

ಟ್ವೀಟಿನ ಆರ್ಕೈವನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

ಪಿಟಿಐ ಅವರ ಟ್ವೀಟ್‌ಗೆ ಹಲವಾರು ಜನರು ಪ್ರತ್ಯುತ್ತರವಾಗಿ ತಪ್ಪುಗಳನ್ನು ಸರಿಪಡಿಸಲು ಹೇಳಿದ್ದರು.

 

ಏಪ್ರಿಲ್ 16, 2020 ರ ರಾತ್ರಿ, ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಇಬ್ಬರು ಹಿಂದೂ ಸಾದುಗಳನ್ನು ಸೇರಿದಂತೆ ಮೂವರನ್ನು ಉದ್ರಿಕ್ತ ಜನರು ಸೇರಿ ಗುಂಪು ಹತ್ಯೆ ನಡೆಸಿದ್ದರು. ಈ ಬಗ್ಗೆ ಈವರೆಗೆ ಬಾಲಾಪರಾಧಿಗಳು ಸೇರಿದಂತೆ 101 ಜನರನ್ನು ಬಂಧಿಸಲಾಗಿದೆ.

ಜನರ ಗುಂಪು ಹೊಡೆದು ಸಾಯಿಸುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹೊರಹೊಮ್ಮುತ್ತಿದ್ದಂತೆ, ಘಟನೆಯು ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ದಾಳಿಯೂ ಕೋಮು ಪ್ರೇರಿತವಾಗಿ ನಡೆದಿದೆ ಎಂದು ಕೂಡಾ ಸುದ್ದಿ ಹರಿದಾಡತೊಡಗಿತ್ತು. ಹತ್ಯೆಗೂ ಮೊದಲು ಪಾಲ್ಘರ್‌ನ ವಿವಿಧ ಹಳ್ಳಿಗಳಲ್ಲಿ ಮಕ್ಕಳ ಅಪಹರಣಕಾರರು ಮತ್ತು ಕಳ್ಳರು ಓಡಾಡುತ್ತಿದ್ದಾರೆ ಎಂಬ ವದಂತಿಗಳು ಸ್ಥಳೀಯವಾಗಿ ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿತ್ತು. ಹಾಗಾಗಿ ಬುಡಕಟ್ಟು ಜನರು ಮೂರು ಜನರ ಮೇಲೆ ಹಲ್ಲೆ ಮಾಡಿ ಸಾಯಿಸಿದ್ದರು.


ಇದನ್ನೂ ಓದಿ: ಪಾಲ್ಘರ್‌ ಘಟನೆಗೆ ಕೋಮು ಆಯಾಮವಿಲ್ಲ: ಮುಖ್ಯಮಂತ್ರಿ ಉದ್ದವ್ ಠಾಕ್ರೆ ಸ್ಪಷ್ಟನೆ


ಘಟನೆಯ ಬಗ್ಗೆ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ಅವರು ಮಾತನಾಡಿದ್ದನ್ನು ಪಿಟಿಐ ತಪ್ಪಾಗಿ ಟ್ವೀಟ್ ಮಾಡಿತ್ತು. ಪಿಟಿಐ ವರದಿಯಂತೆ ಅವರು ಹಿಂದೂ ಎಂಬ ಪದವನ್ನು ಬಳಸಿರಲಿಲ್ಲ. ಅವರು ಪೊಲೀಸರು ಬಂಧಿಸಿರುವ ಆರೋಪಿಗಳ ಪಟ್ಟಿಯನ್ನು ಉಲ್ಲೇಖಿಸಿ “ಬಂಧಿತರಲ್ಲಿ ಒಬ್ಬ ಮುಸ್ಲಿಂ ಕೂಡ ಇಲ್ಲ, ಘಟನೆಯನ್ನು ಕೋಮುವಾದಿಕರಣ ಮಾಡಿ ರಾಜಕೀಯ ಮಾಡುತ್ತಿರುವುದು ದುರದೃಷ್ಟಕರ” ಎಂದು ಹೇಳಿದ್ದರು.

ಈಗ ಪಿಟಿಐ ತನ್ನ ಟ್ವೀಟ್ ಅನ್ನು ಅಳಿಸಿಹಾಕಿದೆ, ಅದರ ಬದಲಾಗಿ ‘ಪದವನ್ನು ಬದಲಾಯಿಸಿ ಪುನರಾವರ್ತಿಸಲಾಗಿದೆ, ಪಾಲ್ಘರ್ ಹತ್ಯೆ ಪ್ರಕರಣದಲ್ಲಿ ಬಂಧಿಸಲ್ಪಟ್ಟವರಲ್ಲಿ ಮುಸ್ಲಿಮರು ಇಲ್ಲ: ಮಹಾ ಗೃಹ ಸಚಿವ ಅನಿಲ್ ದೇಶ್ಮುಖ್’ ಎಂದು ಟ್ವೀಟ್ ಮಾಡಿದೆ. ಆದರೆ ಈ ಹಿಂದೆ ಮಾಡಿದ ತಪ್ಪನ್ನು ಎಲ್ಲೂ ಉಲ್ಲೇಖಿಸಿಲ್ಲ, ತಪ್ಪನ್ನು ಒಪ್ಪಿಕೊಂಡಿಲ್ಲ ಹಾಗೂ ಅದರ ಬಗ್ಗೆ ಸ್ಪಷ್ಟನೆ ಕೂಡಾ ನೀಡಿಲ್ಲ.

ಘಟನೆಯ ಬಗ್ಗೆ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ಆರೋಪಿಗಳ ಹೆಸರಿನ ಪಟ್ಟಿಯನ್ನು ಟ್ವೀಟ್ ಮಾಡಿ, ಘಟನೆಗೆ ಕೋಮು ಬಣ್ಣ  ನೀಡುವ ಪ್ರಯತ್ನಗಳಾಗುತ್ತಿವೆ ಎಂದು ಹೇಳಿದ್ದರು.


ಇದನ್ನೂ ಓದಿ:  ಅರ್ನಬ್‌ ಗೋಸ್ವಾಮಿ ಮೇಲೆ ಹಲ್ಲೆ ಆರೋಪ; ಇಬ್ಬರ ಬಂಧನ 

ವಿಡಿಯೊ ನೋಡಿ: ಮಾಧ್ಯಮಗಳು ಸೃಷ್ಟಿಸಿರುವ ಸಾವಿನ ಬಾವಿ 


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...