Homeಫ್ಯಾಕ್ಟ್‌ಚೆಕ್Fact check: ಪಾಲ್ಘರ್ ಗುಂಪು ಹತ್ಯೆಯ ಬಗ್ಗೆ ಸುಳ್ಳು ವರದಿ ಮಾಡಿದ ಪಿಟಿಐ

Fact check: ಪಾಲ್ಘರ್ ಗುಂಪು ಹತ್ಯೆಯ ಬಗ್ಗೆ ಸುಳ್ಳು ವರದಿ ಮಾಡಿದ ಪಿಟಿಐ

ಏಪ್ರಿಲ್ 16, 2020 ರ ರಾತ್ರಿ, ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಇಬ್ಬರು ಹಿಂದೂ ಸಾದುಗಳು ಸೇರಿದಂತೆ ಮೂವರನ್ನು ಗುಂಪು ಹತ್ಯೆ ನಡೆಸಲಾಗಿತ್ತು.

- Advertisement -
- Advertisement -

ಸುದ್ದಿ ಜಾಲ ಏಜೆನ್ಸಿಯಾದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (ಪಿಟಿಐ) ಪಾಲ್ಘರ್ ಗುಂಪುಹತ್ಯೆ ಘಟನೆಯ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ಹೇಳಿಕೆಯನ್ನು ತಪ್ಪಾಗಿ ವರದಿ ಮಾಡಿದೆ. ಸಚಿವರು ಪೊಲೀಸರು ಬಂಧಿಸಿರುವ 101 ಆರೋಪಿಗಳ ಪಟ್ಟಿಯಲ್ಲಿ ಮುಸ್ಲಿಮರಿಲ್ಲ ಎಂದು ವೀಡಿಯೊವೊಂದರಲ್ಲಿ ಹೇಳಿದ್ದರು.

ಆದರೆ “ಪಾಲ್ಘರ್ ಹಲ್ಲೆ ಪ್ರಕರಣದಲ್ಲಿ ಬಂಧಿತರಾದವರಲ್ಲಿ ಹಿಂದೂಗಳಿಲ್ಲ: ಮಹಾ ಗೃಹ ಸಚಿವ ಅನಿಲ್ ದೇಶ್ಮುಖ್” ಎಂದು ಪಿಟಿಐ ವರದಿ ಮಾಡಿತ್ತು, ಆದರೆ ಈಗ ಟ್ವೀಟ್‌ ಅನ್ನು ಡಿಲೀಟ್ ಮಾಡಿದೆ.

ಟ್ವೀಟಿನ ಆರ್ಕೈವನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

ಪಿಟಿಐ ಅವರ ಟ್ವೀಟ್‌ಗೆ ಹಲವಾರು ಜನರು ಪ್ರತ್ಯುತ್ತರವಾಗಿ ತಪ್ಪುಗಳನ್ನು ಸರಿಪಡಿಸಲು ಹೇಳಿದ್ದರು.

 

ಏಪ್ರಿಲ್ 16, 2020 ರ ರಾತ್ರಿ, ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಇಬ್ಬರು ಹಿಂದೂ ಸಾದುಗಳನ್ನು ಸೇರಿದಂತೆ ಮೂವರನ್ನು ಉದ್ರಿಕ್ತ ಜನರು ಸೇರಿ ಗುಂಪು ಹತ್ಯೆ ನಡೆಸಿದ್ದರು. ಈ ಬಗ್ಗೆ ಈವರೆಗೆ ಬಾಲಾಪರಾಧಿಗಳು ಸೇರಿದಂತೆ 101 ಜನರನ್ನು ಬಂಧಿಸಲಾಗಿದೆ.

ಜನರ ಗುಂಪು ಹೊಡೆದು ಸಾಯಿಸುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹೊರಹೊಮ್ಮುತ್ತಿದ್ದಂತೆ, ಘಟನೆಯು ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ದಾಳಿಯೂ ಕೋಮು ಪ್ರೇರಿತವಾಗಿ ನಡೆದಿದೆ ಎಂದು ಕೂಡಾ ಸುದ್ದಿ ಹರಿದಾಡತೊಡಗಿತ್ತು. ಹತ್ಯೆಗೂ ಮೊದಲು ಪಾಲ್ಘರ್‌ನ ವಿವಿಧ ಹಳ್ಳಿಗಳಲ್ಲಿ ಮಕ್ಕಳ ಅಪಹರಣಕಾರರು ಮತ್ತು ಕಳ್ಳರು ಓಡಾಡುತ್ತಿದ್ದಾರೆ ಎಂಬ ವದಂತಿಗಳು ಸ್ಥಳೀಯವಾಗಿ ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿತ್ತು. ಹಾಗಾಗಿ ಬುಡಕಟ್ಟು ಜನರು ಮೂರು ಜನರ ಮೇಲೆ ಹಲ್ಲೆ ಮಾಡಿ ಸಾಯಿಸಿದ್ದರು.


ಇದನ್ನೂ ಓದಿ: ಪಾಲ್ಘರ್‌ ಘಟನೆಗೆ ಕೋಮು ಆಯಾಮವಿಲ್ಲ: ಮುಖ್ಯಮಂತ್ರಿ ಉದ್ದವ್ ಠಾಕ್ರೆ ಸ್ಪಷ್ಟನೆ


ಘಟನೆಯ ಬಗ್ಗೆ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ಅವರು ಮಾತನಾಡಿದ್ದನ್ನು ಪಿಟಿಐ ತಪ್ಪಾಗಿ ಟ್ವೀಟ್ ಮಾಡಿತ್ತು. ಪಿಟಿಐ ವರದಿಯಂತೆ ಅವರು ಹಿಂದೂ ಎಂಬ ಪದವನ್ನು ಬಳಸಿರಲಿಲ್ಲ. ಅವರು ಪೊಲೀಸರು ಬಂಧಿಸಿರುವ ಆರೋಪಿಗಳ ಪಟ್ಟಿಯನ್ನು ಉಲ್ಲೇಖಿಸಿ “ಬಂಧಿತರಲ್ಲಿ ಒಬ್ಬ ಮುಸ್ಲಿಂ ಕೂಡ ಇಲ್ಲ, ಘಟನೆಯನ್ನು ಕೋಮುವಾದಿಕರಣ ಮಾಡಿ ರಾಜಕೀಯ ಮಾಡುತ್ತಿರುವುದು ದುರದೃಷ್ಟಕರ” ಎಂದು ಹೇಳಿದ್ದರು.

ಈಗ ಪಿಟಿಐ ತನ್ನ ಟ್ವೀಟ್ ಅನ್ನು ಅಳಿಸಿಹಾಕಿದೆ, ಅದರ ಬದಲಾಗಿ ‘ಪದವನ್ನು ಬದಲಾಯಿಸಿ ಪುನರಾವರ್ತಿಸಲಾಗಿದೆ, ಪಾಲ್ಘರ್ ಹತ್ಯೆ ಪ್ರಕರಣದಲ್ಲಿ ಬಂಧಿಸಲ್ಪಟ್ಟವರಲ್ಲಿ ಮುಸ್ಲಿಮರು ಇಲ್ಲ: ಮಹಾ ಗೃಹ ಸಚಿವ ಅನಿಲ್ ದೇಶ್ಮುಖ್’ ಎಂದು ಟ್ವೀಟ್ ಮಾಡಿದೆ. ಆದರೆ ಈ ಹಿಂದೆ ಮಾಡಿದ ತಪ್ಪನ್ನು ಎಲ್ಲೂ ಉಲ್ಲೇಖಿಸಿಲ್ಲ, ತಪ್ಪನ್ನು ಒಪ್ಪಿಕೊಂಡಿಲ್ಲ ಹಾಗೂ ಅದರ ಬಗ್ಗೆ ಸ್ಪಷ್ಟನೆ ಕೂಡಾ ನೀಡಿಲ್ಲ.

ಘಟನೆಯ ಬಗ್ಗೆ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ಆರೋಪಿಗಳ ಹೆಸರಿನ ಪಟ್ಟಿಯನ್ನು ಟ್ವೀಟ್ ಮಾಡಿ, ಘಟನೆಗೆ ಕೋಮು ಬಣ್ಣ  ನೀಡುವ ಪ್ರಯತ್ನಗಳಾಗುತ್ತಿವೆ ಎಂದು ಹೇಳಿದ್ದರು.


ಇದನ್ನೂ ಓದಿ:  ಅರ್ನಬ್‌ ಗೋಸ್ವಾಮಿ ಮೇಲೆ ಹಲ್ಲೆ ಆರೋಪ; ಇಬ್ಬರ ಬಂಧನ 

ವಿಡಿಯೊ ನೋಡಿ: ಮಾಧ್ಯಮಗಳು ಸೃಷ್ಟಿಸಿರುವ ಸಾವಿನ ಬಾವಿ 


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....