Homeಫ್ಯಾಕ್ಟ್‌ಚೆಕ್Fact check: ಪಾಲ್ಘರ್ ಗುಂಪು ಹತ್ಯೆಯ ಬಗ್ಗೆ ಸುಳ್ಳು ವರದಿ ಮಾಡಿದ ಪಿಟಿಐ

Fact check: ಪಾಲ್ಘರ್ ಗುಂಪು ಹತ್ಯೆಯ ಬಗ್ಗೆ ಸುಳ್ಳು ವರದಿ ಮಾಡಿದ ಪಿಟಿಐ

ಏಪ್ರಿಲ್ 16, 2020 ರ ರಾತ್ರಿ, ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಇಬ್ಬರು ಹಿಂದೂ ಸಾದುಗಳು ಸೇರಿದಂತೆ ಮೂವರನ್ನು ಗುಂಪು ಹತ್ಯೆ ನಡೆಸಲಾಗಿತ್ತು.

- Advertisement -
- Advertisement -

ಸುದ್ದಿ ಜಾಲ ಏಜೆನ್ಸಿಯಾದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (ಪಿಟಿಐ) ಪಾಲ್ಘರ್ ಗುಂಪುಹತ್ಯೆ ಘಟನೆಯ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ಹೇಳಿಕೆಯನ್ನು ತಪ್ಪಾಗಿ ವರದಿ ಮಾಡಿದೆ. ಸಚಿವರು ಪೊಲೀಸರು ಬಂಧಿಸಿರುವ 101 ಆರೋಪಿಗಳ ಪಟ್ಟಿಯಲ್ಲಿ ಮುಸ್ಲಿಮರಿಲ್ಲ ಎಂದು ವೀಡಿಯೊವೊಂದರಲ್ಲಿ ಹೇಳಿದ್ದರು.

ಆದರೆ “ಪಾಲ್ಘರ್ ಹಲ್ಲೆ ಪ್ರಕರಣದಲ್ಲಿ ಬಂಧಿತರಾದವರಲ್ಲಿ ಹಿಂದೂಗಳಿಲ್ಲ: ಮಹಾ ಗೃಹ ಸಚಿವ ಅನಿಲ್ ದೇಶ್ಮುಖ್” ಎಂದು ಪಿಟಿಐ ವರದಿ ಮಾಡಿತ್ತು, ಆದರೆ ಈಗ ಟ್ವೀಟ್‌ ಅನ್ನು ಡಿಲೀಟ್ ಮಾಡಿದೆ.

ಟ್ವೀಟಿನ ಆರ್ಕೈವನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

ಪಿಟಿಐ ಅವರ ಟ್ವೀಟ್‌ಗೆ ಹಲವಾರು ಜನರು ಪ್ರತ್ಯುತ್ತರವಾಗಿ ತಪ್ಪುಗಳನ್ನು ಸರಿಪಡಿಸಲು ಹೇಳಿದ್ದರು.

 

ಏಪ್ರಿಲ್ 16, 2020 ರ ರಾತ್ರಿ, ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಇಬ್ಬರು ಹಿಂದೂ ಸಾದುಗಳನ್ನು ಸೇರಿದಂತೆ ಮೂವರನ್ನು ಉದ್ರಿಕ್ತ ಜನರು ಸೇರಿ ಗುಂಪು ಹತ್ಯೆ ನಡೆಸಿದ್ದರು. ಈ ಬಗ್ಗೆ ಈವರೆಗೆ ಬಾಲಾಪರಾಧಿಗಳು ಸೇರಿದಂತೆ 101 ಜನರನ್ನು ಬಂಧಿಸಲಾಗಿದೆ.

ಜನರ ಗುಂಪು ಹೊಡೆದು ಸಾಯಿಸುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹೊರಹೊಮ್ಮುತ್ತಿದ್ದಂತೆ, ಘಟನೆಯು ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ದಾಳಿಯೂ ಕೋಮು ಪ್ರೇರಿತವಾಗಿ ನಡೆದಿದೆ ಎಂದು ಕೂಡಾ ಸುದ್ದಿ ಹರಿದಾಡತೊಡಗಿತ್ತು. ಹತ್ಯೆಗೂ ಮೊದಲು ಪಾಲ್ಘರ್‌ನ ವಿವಿಧ ಹಳ್ಳಿಗಳಲ್ಲಿ ಮಕ್ಕಳ ಅಪಹರಣಕಾರರು ಮತ್ತು ಕಳ್ಳರು ಓಡಾಡುತ್ತಿದ್ದಾರೆ ಎಂಬ ವದಂತಿಗಳು ಸ್ಥಳೀಯವಾಗಿ ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿತ್ತು. ಹಾಗಾಗಿ ಬುಡಕಟ್ಟು ಜನರು ಮೂರು ಜನರ ಮೇಲೆ ಹಲ್ಲೆ ಮಾಡಿ ಸಾಯಿಸಿದ್ದರು.


ಇದನ್ನೂ ಓದಿ: ಪಾಲ್ಘರ್‌ ಘಟನೆಗೆ ಕೋಮು ಆಯಾಮವಿಲ್ಲ: ಮುಖ್ಯಮಂತ್ರಿ ಉದ್ದವ್ ಠಾಕ್ರೆ ಸ್ಪಷ್ಟನೆ


ಘಟನೆಯ ಬಗ್ಗೆ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ಅವರು ಮಾತನಾಡಿದ್ದನ್ನು ಪಿಟಿಐ ತಪ್ಪಾಗಿ ಟ್ವೀಟ್ ಮಾಡಿತ್ತು. ಪಿಟಿಐ ವರದಿಯಂತೆ ಅವರು ಹಿಂದೂ ಎಂಬ ಪದವನ್ನು ಬಳಸಿರಲಿಲ್ಲ. ಅವರು ಪೊಲೀಸರು ಬಂಧಿಸಿರುವ ಆರೋಪಿಗಳ ಪಟ್ಟಿಯನ್ನು ಉಲ್ಲೇಖಿಸಿ “ಬಂಧಿತರಲ್ಲಿ ಒಬ್ಬ ಮುಸ್ಲಿಂ ಕೂಡ ಇಲ್ಲ, ಘಟನೆಯನ್ನು ಕೋಮುವಾದಿಕರಣ ಮಾಡಿ ರಾಜಕೀಯ ಮಾಡುತ್ತಿರುವುದು ದುರದೃಷ್ಟಕರ” ಎಂದು ಹೇಳಿದ್ದರು.

ಈಗ ಪಿಟಿಐ ತನ್ನ ಟ್ವೀಟ್ ಅನ್ನು ಅಳಿಸಿಹಾಕಿದೆ, ಅದರ ಬದಲಾಗಿ ‘ಪದವನ್ನು ಬದಲಾಯಿಸಿ ಪುನರಾವರ್ತಿಸಲಾಗಿದೆ, ಪಾಲ್ಘರ್ ಹತ್ಯೆ ಪ್ರಕರಣದಲ್ಲಿ ಬಂಧಿಸಲ್ಪಟ್ಟವರಲ್ಲಿ ಮುಸ್ಲಿಮರು ಇಲ್ಲ: ಮಹಾ ಗೃಹ ಸಚಿವ ಅನಿಲ್ ದೇಶ್ಮುಖ್’ ಎಂದು ಟ್ವೀಟ್ ಮಾಡಿದೆ. ಆದರೆ ಈ ಹಿಂದೆ ಮಾಡಿದ ತಪ್ಪನ್ನು ಎಲ್ಲೂ ಉಲ್ಲೇಖಿಸಿಲ್ಲ, ತಪ್ಪನ್ನು ಒಪ್ಪಿಕೊಂಡಿಲ್ಲ ಹಾಗೂ ಅದರ ಬಗ್ಗೆ ಸ್ಪಷ್ಟನೆ ಕೂಡಾ ನೀಡಿಲ್ಲ.

ಘಟನೆಯ ಬಗ್ಗೆ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ಆರೋಪಿಗಳ ಹೆಸರಿನ ಪಟ್ಟಿಯನ್ನು ಟ್ವೀಟ್ ಮಾಡಿ, ಘಟನೆಗೆ ಕೋಮು ಬಣ್ಣ  ನೀಡುವ ಪ್ರಯತ್ನಗಳಾಗುತ್ತಿವೆ ಎಂದು ಹೇಳಿದ್ದರು.


ಇದನ್ನೂ ಓದಿ:  ಅರ್ನಬ್‌ ಗೋಸ್ವಾಮಿ ಮೇಲೆ ಹಲ್ಲೆ ಆರೋಪ; ಇಬ್ಬರ ಬಂಧನ 

ವಿಡಿಯೊ ನೋಡಿ: ಮಾಧ್ಯಮಗಳು ಸೃಷ್ಟಿಸಿರುವ ಸಾವಿನ ಬಾವಿ 


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...