Homeಫ್ಯಾಕ್ಟ್‌ಚೆಕ್Fact check: ಪಾಲ್ಘರ್ ಗುಂಪು ಹತ್ಯೆಯ ಬಗ್ಗೆ ಸುಳ್ಳು ವರದಿ ಮಾಡಿದ ಪಿಟಿಐ

Fact check: ಪಾಲ್ಘರ್ ಗುಂಪು ಹತ್ಯೆಯ ಬಗ್ಗೆ ಸುಳ್ಳು ವರದಿ ಮಾಡಿದ ಪಿಟಿಐ

ಏಪ್ರಿಲ್ 16, 2020 ರ ರಾತ್ರಿ, ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಇಬ್ಬರು ಹಿಂದೂ ಸಾದುಗಳು ಸೇರಿದಂತೆ ಮೂವರನ್ನು ಗುಂಪು ಹತ್ಯೆ ನಡೆಸಲಾಗಿತ್ತು.

- Advertisement -
- Advertisement -

ಸುದ್ದಿ ಜಾಲ ಏಜೆನ್ಸಿಯಾದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (ಪಿಟಿಐ) ಪಾಲ್ಘರ್ ಗುಂಪುಹತ್ಯೆ ಘಟನೆಯ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ಹೇಳಿಕೆಯನ್ನು ತಪ್ಪಾಗಿ ವರದಿ ಮಾಡಿದೆ. ಸಚಿವರು ಪೊಲೀಸರು ಬಂಧಿಸಿರುವ 101 ಆರೋಪಿಗಳ ಪಟ್ಟಿಯಲ್ಲಿ ಮುಸ್ಲಿಮರಿಲ್ಲ ಎಂದು ವೀಡಿಯೊವೊಂದರಲ್ಲಿ ಹೇಳಿದ್ದರು.

ಆದರೆ “ಪಾಲ್ಘರ್ ಹಲ್ಲೆ ಪ್ರಕರಣದಲ್ಲಿ ಬಂಧಿತರಾದವರಲ್ಲಿ ಹಿಂದೂಗಳಿಲ್ಲ: ಮಹಾ ಗೃಹ ಸಚಿವ ಅನಿಲ್ ದೇಶ್ಮುಖ್” ಎಂದು ಪಿಟಿಐ ವರದಿ ಮಾಡಿತ್ತು, ಆದರೆ ಈಗ ಟ್ವೀಟ್‌ ಅನ್ನು ಡಿಲೀಟ್ ಮಾಡಿದೆ.

ಟ್ವೀಟಿನ ಆರ್ಕೈವನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

ಪಿಟಿಐ ಅವರ ಟ್ವೀಟ್‌ಗೆ ಹಲವಾರು ಜನರು ಪ್ರತ್ಯುತ್ತರವಾಗಿ ತಪ್ಪುಗಳನ್ನು ಸರಿಪಡಿಸಲು ಹೇಳಿದ್ದರು.

 

ಏಪ್ರಿಲ್ 16, 2020 ರ ರಾತ್ರಿ, ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಇಬ್ಬರು ಹಿಂದೂ ಸಾದುಗಳನ್ನು ಸೇರಿದಂತೆ ಮೂವರನ್ನು ಉದ್ರಿಕ್ತ ಜನರು ಸೇರಿ ಗುಂಪು ಹತ್ಯೆ ನಡೆಸಿದ್ದರು. ಈ ಬಗ್ಗೆ ಈವರೆಗೆ ಬಾಲಾಪರಾಧಿಗಳು ಸೇರಿದಂತೆ 101 ಜನರನ್ನು ಬಂಧಿಸಲಾಗಿದೆ.

ಜನರ ಗುಂಪು ಹೊಡೆದು ಸಾಯಿಸುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹೊರಹೊಮ್ಮುತ್ತಿದ್ದಂತೆ, ಘಟನೆಯು ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ದಾಳಿಯೂ ಕೋಮು ಪ್ರೇರಿತವಾಗಿ ನಡೆದಿದೆ ಎಂದು ಕೂಡಾ ಸುದ್ದಿ ಹರಿದಾಡತೊಡಗಿತ್ತು. ಹತ್ಯೆಗೂ ಮೊದಲು ಪಾಲ್ಘರ್‌ನ ವಿವಿಧ ಹಳ್ಳಿಗಳಲ್ಲಿ ಮಕ್ಕಳ ಅಪಹರಣಕಾರರು ಮತ್ತು ಕಳ್ಳರು ಓಡಾಡುತ್ತಿದ್ದಾರೆ ಎಂಬ ವದಂತಿಗಳು ಸ್ಥಳೀಯವಾಗಿ ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿತ್ತು. ಹಾಗಾಗಿ ಬುಡಕಟ್ಟು ಜನರು ಮೂರು ಜನರ ಮೇಲೆ ಹಲ್ಲೆ ಮಾಡಿ ಸಾಯಿಸಿದ್ದರು.


ಇದನ್ನೂ ಓದಿ: ಪಾಲ್ಘರ್‌ ಘಟನೆಗೆ ಕೋಮು ಆಯಾಮವಿಲ್ಲ: ಮುಖ್ಯಮಂತ್ರಿ ಉದ್ದವ್ ಠಾಕ್ರೆ ಸ್ಪಷ್ಟನೆ


ಘಟನೆಯ ಬಗ್ಗೆ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ಅವರು ಮಾತನಾಡಿದ್ದನ್ನು ಪಿಟಿಐ ತಪ್ಪಾಗಿ ಟ್ವೀಟ್ ಮಾಡಿತ್ತು. ಪಿಟಿಐ ವರದಿಯಂತೆ ಅವರು ಹಿಂದೂ ಎಂಬ ಪದವನ್ನು ಬಳಸಿರಲಿಲ್ಲ. ಅವರು ಪೊಲೀಸರು ಬಂಧಿಸಿರುವ ಆರೋಪಿಗಳ ಪಟ್ಟಿಯನ್ನು ಉಲ್ಲೇಖಿಸಿ “ಬಂಧಿತರಲ್ಲಿ ಒಬ್ಬ ಮುಸ್ಲಿಂ ಕೂಡ ಇಲ್ಲ, ಘಟನೆಯನ್ನು ಕೋಮುವಾದಿಕರಣ ಮಾಡಿ ರಾಜಕೀಯ ಮಾಡುತ್ತಿರುವುದು ದುರದೃಷ್ಟಕರ” ಎಂದು ಹೇಳಿದ್ದರು.

ಈಗ ಪಿಟಿಐ ತನ್ನ ಟ್ವೀಟ್ ಅನ್ನು ಅಳಿಸಿಹಾಕಿದೆ, ಅದರ ಬದಲಾಗಿ ‘ಪದವನ್ನು ಬದಲಾಯಿಸಿ ಪುನರಾವರ್ತಿಸಲಾಗಿದೆ, ಪಾಲ್ಘರ್ ಹತ್ಯೆ ಪ್ರಕರಣದಲ್ಲಿ ಬಂಧಿಸಲ್ಪಟ್ಟವರಲ್ಲಿ ಮುಸ್ಲಿಮರು ಇಲ್ಲ: ಮಹಾ ಗೃಹ ಸಚಿವ ಅನಿಲ್ ದೇಶ್ಮುಖ್’ ಎಂದು ಟ್ವೀಟ್ ಮಾಡಿದೆ. ಆದರೆ ಈ ಹಿಂದೆ ಮಾಡಿದ ತಪ್ಪನ್ನು ಎಲ್ಲೂ ಉಲ್ಲೇಖಿಸಿಲ್ಲ, ತಪ್ಪನ್ನು ಒಪ್ಪಿಕೊಂಡಿಲ್ಲ ಹಾಗೂ ಅದರ ಬಗ್ಗೆ ಸ್ಪಷ್ಟನೆ ಕೂಡಾ ನೀಡಿಲ್ಲ.

ಘಟನೆಯ ಬಗ್ಗೆ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ಆರೋಪಿಗಳ ಹೆಸರಿನ ಪಟ್ಟಿಯನ್ನು ಟ್ವೀಟ್ ಮಾಡಿ, ಘಟನೆಗೆ ಕೋಮು ಬಣ್ಣ  ನೀಡುವ ಪ್ರಯತ್ನಗಳಾಗುತ್ತಿವೆ ಎಂದು ಹೇಳಿದ್ದರು.


ಇದನ್ನೂ ಓದಿ:  ಅರ್ನಬ್‌ ಗೋಸ್ವಾಮಿ ಮೇಲೆ ಹಲ್ಲೆ ಆರೋಪ; ಇಬ್ಬರ ಬಂಧನ 

ವಿಡಿಯೊ ನೋಡಿ: ಮಾಧ್ಯಮಗಳು ಸೃಷ್ಟಿಸಿರುವ ಸಾವಿನ ಬಾವಿ 


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...