Homeಕರ್ನಾಟಕಪಿಯು ನಿರ್ದೇಶಕಿ ಸ್ನೇಹಲ್‌ ವರ್ಗಾವಣೆ; ಸಮವಸ್ತ್ರ ಸುತ್ತೋಲೆಯೇ ಕಾರಣ?

ಪಿಯು ನಿರ್ದೇಶಕಿ ಸ್ನೇಹಲ್‌ ವರ್ಗಾವಣೆ; ಸಮವಸ್ತ್ರ ಸುತ್ತೋಲೆಯೇ ಕಾರಣ?

- Advertisement -
- Advertisement -

ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿಯಾಗಿದ್ದ ಆರ್‌.ಸ್ನೇಹಲ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಹಿಜಾಬ್‌ ವಿವಾದದ ಹಿನ್ನೆಲೆಯಲ್ಲಿ ಸಮವಸ್ತ್ರ ಸಂಬಂಧ ಅವರು ಹೊರಡಿಸಿದ್ದ ಸುತ್ತೋಲೆಯೇ ವರ್ಗಾವಣೆಗೆ ಕಾರಣ ಎನ್ನಲಾಗಿದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.

ಸ್ನೇಹಲ್ ಹೊರಡಿಸಿದ್ದ ಸುತ್ತೋಲೆಯಿಂದಾಗಿ ಸರ್ಕಾರಕ್ಕೆ ಹಿನ್ನೆಡೆಯಾಗಿತ್ತು. ಈ ಹಿನ್ನೆಲೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸ್ನೇಹಲ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅವರ ಸ್ಥಾನಕ್ಕೆ ಬೀದರ್ ಜಿಲ್ಲಾಧಿಕಾರಿ ರಾಮಚಂದ್ರ ಅವರನ್ನು ನೇಮಿಸಲಾಗಿದೆ. ಆದರೆ ಸ್ನೇಹಲ್‌ ಅವರಿಗೆ ಯಾವುದೇ ಹುದ್ದೆಯನ್ನು ನೀಡಿಲ್ಲ.

ಉಡುಪಿಯಲ್ಲಿ ಹಿಜಾಬ್ ವಿವಾದ ಸೃಷ್ಟಿಯಾದ ಬಳಿಕ ಆರ್‌.ಸ್ನೇಹಲ್ ಅವರು ಸುತ್ತೋಲೆ ಹೊರಡಿಸಿ, “ಪಿಯು ಹಂತದಲ್ಲಿ ಸಮವಸ್ತ್ರ ಕಡ್ಡಾಯಗೊಳಿಸಿಲ್ಲ. ಕಾಲೇಜು ಆಡಳಿತ ಮಂಡಳಿಯವರು ಸಮವಸ್ತ್ರ ಕಡ್ಡಾಯಗೊಳಿಸಿರುವುದು ಕಾನೂನುಬಾಹಿರ” ಎಂದಿದ್ದರು ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.

ಈ ನಡುವೆ ಬಿಜೆಪಿಯ ಶಾಸಕರು, ಸಚಿವರು ಹಿಜಾಬ್‌ ಧರಿಸುವುದನ್ನು ವಿರೋಧಿಸುತ್ತಲೇ ಬಂದಿದ್ದು, ಕೋಮು ಕೇಂದ್ರಿತ ಚರ್ಚೆ ಬಿರುಸು ಪಡೆದಿದೆ. ಈ ನಡುವೆ ನಿರ್ದೇಶಕರು ಹೊರಡಿಸಿದ ಸುತ್ತೋಲೆಯಿಂದ ಬಿಜೆಪಿ ಶಾಸಕರು, ಸಚಿವರಿಗೆ ಮುಖಭಂಗವಾಗಿತ್ತು. ಈ ಎಲ್ಲ ಬೆಳವಣಿಗೆಗಳ ನಡುವೆ ಸ್ನೇಹಲ್‌ ಅವರನ್ನು ಯಾವುದೇ ಹುದ್ದೆಯನ್ನು ನೀಡದೆ ವರ್ಗಾವಣೆ ಮಾಡಲಾಗಿದೆ.

ಮೊದಲು ಉಡುಪಿ ಸರ್ಕಾರಿ ಕಾಲೇಜಿನಲ್ಲಿ ವಿವಾದ ಉಂಟಾಗಿತ್ತು. ಹಿಜಾಬ್‌ ಧರಿಸಿದ ವಿದ್ಯಾರ್ಥಿನಿಯರನ್ನು ಶಾಲೆಯಿಂದ ಹೊರಗಿಡಲಾಗಿತ್ತು. ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿತ್ತು. ಮುಸ್ಲಿಂ ವಿದ್ಯಾರ್ಥಿಗಳು ಹಿಜಾಬ್‌ ಧರಿಸಿ ಬಂದರೆ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದಿದ್ದರು. ಶಾಲೆಯ ಪ್ರಾಂಶುಪಾಲರು ಮುಸ್ಲಿಂ ಧಾರ್ಮಿಕ ಆಚರಣೆಯನ್ನು ವಿವಾದದ ಕೇಂದ್ರವಾಗಿಸಿದರು.

ಇಷ್ಟೆಲ್ಲ ಆದ ಮೇಲೆ ಕುಂದಾಪುರದಲ್ಲಿ ನಡೆದ ಮತ್ತೊಂದು ಪ್ರಕರಣ ಭಾರೀ ಸದ್ದು ಮಾಡಿದೆ. ಕಾಲೇಜಿನ ಪ್ರಾಂಶುಪಾಲರು ಮುಸ್ಲಿಂ ವಿದ್ಯಾರ್ಥಿನಿಯರನ್ನು ಅಮಾನವೀಯವಾಗಿ ಹೊರಗಡೆ ನಿಲ್ಲಿಸಿ ವಿವಾದ ಸೃಷ್ಟಿಸಿದರು. ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಸಮವಸ್ತ್ರ ಸಂಬಂಧ ಸರ್ಕಾರ ಮತ್ತೊಂದು ಆದೇಶ ಹೊರಡಿಸಿದೆ. ನ್ಯಾಯಾಲಯದ ಅಂಗಳದಲ್ಲಿ ಇರುವಾಗಲೇ ಸರ್ಕಾರ ಆದೇಶ ಹೊರಡಿಸಿ ಹಿಜಾಬ್‌ ಹಾಗೂ ಕೇಸರಿ ಶಾಲನ್ನು ನಿರ್ಬಂಧಿಸಿದೆ. ಎಲ್ಲ ಸರ್ಕಾರಿ ಶಾಲಾ, ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯಗೊಳಿಸಿದೆ.


ಇದನ್ನೂ ಓದಿರಿ: ನಾರಾಯಣ ಗುರುಗಳಿಗಾದ ಅವಮಾನ ಮುಚ್ಚಿಹಾಕಲು ಹಿಜಾಬ್ ವಿವಾದ ಸೃಷ್ಟಿ: ಸಂಘ ಪರಿವಾರದ ಮಾಜಿ ನಾಯಕ ಸುನಿಲ್ ಬಜಿಲಕೇರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...