Homeಕರ್ನಾಟಕನಾಳೆಯಿಂದ ಪಬ್, ಬಾರ್ ಅಂಡ್ ರೆಸ್ಟೋರೆಂಟ್ ಓಪನ್: ಕಾರ್ಯನಿರ್ವಹಿಸಲಿದೆ ಕೆ.ಆರ್‌.ಮಾರ್ಕೆಟ್

ನಾಳೆಯಿಂದ ಪಬ್, ಬಾರ್ ಅಂಡ್ ರೆಸ್ಟೋರೆಂಟ್ ಓಪನ್: ಕಾರ್ಯನಿರ್ವಹಿಸಲಿದೆ ಕೆ.ಆರ್‌.ಮಾರ್ಕೆಟ್

ಸೆಪ್ಟೆಂಬರ್ 7ರ ಬಳಿಕ ಒಂದು ರೈಲಿನಲ್ಲಿ 346 ಜನರಿಗಷ್ಟೇ ಅವಕಾಶ ನೀಡಲಾಗುತ್ತದೆ. ಮೆಟ್ರೋ ರೈಲುಗಳ ಕಾರ್ಯಾಚರಣೆನ್ನು ಬೆಳಗ್ಗೆ 7ರಿಂದ ರಾತ್ರಿ 8 ಗಂಟೆಯವರೆಗೆ ಸೀಮಿತಗೊಳಿಸುತ್ತಿದೆ.

- Advertisement -
- Advertisement -

ನಾಳೆಯಿಂದ ರಾಜ್ಯದಲ್ಲಿ ಅನ್ಲಾಕ್-4.0 ಜಾರಿಗೆ ಬರಲಿದ್ದು, ಕಳೆದೈದು ತಿಂಗಳುಗಳಿಂದ ಬಂದ್ ಆಗಿದ್ದ ಪಬ್, ಬಾರ್, ಕ್ಲಬ್ ಮತ್ತು ರೆಸ್ಟೋರೆಂಟ್‌ಗಳು ಪುನಾರಾಂಭವಾಗಲಿವೆ.

ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಅವಕಾಶವಿದ್ದರೂ, ಬಾರ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ಅಲ್ಲಿಯೇ ಕುಳಿತು ಮದ್ಯಸೇವನೆಗೆ ನಿಷೇಧ ಹೇರಲಾಗಿತ್ತು. ನಾಳೆಯಿಂದ ಆ ನಿರ್ಬಂಧ ಸಡಿಲಿಸಲಾಗಿದೆ. ಆದರೆ ಸರ್ಕಾರ ಇವುಗಳಿಗೂ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಿದ್ದು, ಕೊವೀಡ್ ತಡೆ ಮಾರ್ಗಸೂಚಿ ಪಾಲಿಸುವುದು ಕಡ್ಡಾಯವಾಗಿದೆ.

ಮಾರ್ಗಸೂಚಿಗಳು

  • ಪ್ರವೇಶ ದ್ವಾರದಲ್ಲಿ ಥರ್ಮಲ್ ಸ್ಕ್ಯಾನಿಂಗ್, ಸ್ಯಾನಿಟೈಸರ್ ವ್ಯವಸ್ಥೆ
  • ಶೇಕಡ 50 ರಷ್ಟು ಗ್ರಾಹಕರಿಗೆ ಮಾತ್ರ ಅವಕಾಶ
  • ಬಾರ್ ಮತ್ತು ರೆಸ್ಟೋರೆಂಟ್ ಕೆಲಸಗಾರರು ಗ್ರಾಹಕರ ಕೈಗೆ ಮದ್ಯ ಕೊಡುವಂತಿಲ್ಲ. ರೂಂ, ಕ್ಯಾಬಿನ್ ಗಳ ಬಾಗಿಲ ಬಾಗಿಲ ಬಳಿ ಮದ್ಯ ಅಥವಾ ಆಹಾರ ಇಡಬೇಕು..
  • ಕಂಟೋನ್ಮೆಂಟ್ ವಲಯಗಳಲ್ಲಿ ನಿರ್ಬಂಧ ಮಂದುವರಿಕೆ.

ಮತ್ತೆ ಶುರುವಾಯ್ತು ಮಾರ್ಕೆಟ್

ಇನ್ನು ಬೆಂಗಳೂರಿನ ಕೆ.ಆರ್.ಮಾರ್ಕೆಟ್ ನಾಳೆಯಿಂದ ವ್ಯಾಪಾರಕ್ಕೆ ಮುಕ್ತವಾಗಲಿದೆ. ಇಷ್ಟು ದಿನ ಸೀಲ್‌ಡೌನ್ ಮಾಡಿದ್ದ ಬಿಬಿಎಂಪಿ ಅಧಿಕಾರಿಗಳು ವ್ಯಾಪಾರ ವಹಿವಾಟಿಗೆ ಅವಕಾಶ ನೀಡಿದ್ದಾರೆ. ಮಾರುಕಟ್ಟೆಯಲ್ಲಿ ಜನಸಂದಣೆ ನಿಯಂತ್ರಿಸಲು ಮತ್ತು ಸುರಕ್ಷತಾ ಕ್ರಮಗಳನ್ನು ಪಾಲಿಸಲು ಮಳಿಗೆಗಳ ಮುಂಭಾಗ ಮಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.

ಪಾಲಿಕೆ ನಿಯಮಗಳನ್ನು ಪಾಲಿಸದವರಿಗೆ ದಂಡ ಹಾಕಲು ಬಿಬಿಎಂಪಿ ನಿರ್ಧರಿಸಿದೆ. ಮಾರುಕಟ್ಟೆ ಆವರಣ ಬಿಟ್ಟು ಹೊರ ಬಂದು ಅನಧಿಕೃತ ವ್ಯಾಪಾರ ಮಾಡುವವರಿಗೆ, ಮಾಸ್ಕ್ ಧರಿಸದೇ ಇರುವವರಿಗೆ ದಂಡ ಬೀಳಲಿದೆ. ಮಾರುಕಟ್ಟೆಯಲ್ಲಿ ಸ್ವಚ್ಛತೆ ಬಗ್ಗೆ ಹದ್ದಿನ ಕಣ್ಣಿಡಲು ಕೆ.ಆರ್.ಮಾರುಕಟ್ಟೆ ಮತ್ತು ಕಲಾಸಿಪಾಳ್ಯ ತರಕಾರಿ ಮಾರುಕಟ್ಟೆಯಲ್ಲಿ ಒಂದು ಪಾಳಿಗೆ 15 ಮಂದಿಯಂತೆ ಸುಮಾರು 60 ಮಾರ್ಷಲ್‌ಗಳನ್ನು ನೇಮಿಸಲಾಗಿದೆ.

ಇನ್ನು ಸೆಪ್ಟೆಂಬರ್ 7 ರಿಂದ ನಮ್ಮ ಮೆಟ್ರೋ ಪುನರಾರಂಭ ಮಾಡಲಿದೆ. ಬಿಎಂಆರ್‌ಸಿಎಲ್‌ನಿಂದ ಸ್ವಚ್ಛತಾಕಾರ್ಯ ಭರದಿಂದ ಸಾಗಿದೆ. ಪ್ರಯಾಣಿಕರ ಸುರಕ್ಷತಾ ದೃಷ್ಠಿಯಿಂದ ಬಿಎಂಆರ್‌ಸಿಎಲ್ ಹಲವು ನಿಯಮಗಳನ್ನು ಜಾರಿಗೊಳಿಸಿದೆ. ಪ್ರಯಾಣಿಕರ ಸಂಖ್ಯೆಯಲ್ಲಿ ಇಳಿಕೆ, ಮೆಟ್ರೋ ರೈಲು ಸಂಚಾರ ಸಮಯದಲ್ಲಿ ಬದಲಾವಣೆ ಜೊತೆಗೆ ಟಿಕೆಟ್ ನೀಡದೇ ಸ್ಮಾರ್ಟ್ ಕಾರ್ಡ್ ಇದ್ದವರಷ್ಟೇ ಪ್ರಯಾಣಿಸಬಹುದೆಂಬ ನಿಯಮ ಹೇರಲಾಗಿದೆ.

ಪ್ರತಿ ರೈಲಿನಲ್ಲಿ ಹಿಂದೆ ಗರಿಷ್ಟ 1,800 ರಿಂದ 2 ಸಾವಿರ ಮಂದಿ ಪ್ರಯಾಣಿಸುತ್ತಿದ್ದರು. ಆದರೆ ಸೆಪ್ಟೆಂಬರ್ 7ರ ಬಳಿಕ ಒಂದು ರೈಲಿನಲ್ಲಿ 346 ಜನರಿಗಷ್ಟೇ ಅವಕಾಶ ನೀಡಲಾಗುತ್ತದೆ. ಮೆಟ್ರೋ ರೈಲುಗಳ ಕಾರ್ಯಾಚರಣೆನ್ನು ಬೆಳಗ್ಗೆ 7ರಿಂದ ರಾತ್ರಿ 8 ಗಂಟೆಯವರೆಗೆ ಸೀಮಿತಗೊಳಿಸುತ್ತಿದೆ.

ಮೆಟ್ರೋ ನಿಲ್ದಾಣ ಪ್ರವೇಶಿಸಲು ಮಾಸ್ಕ್ ಧರಿಸಿರುವುದು ಕಡ್ಡಾಯವಾಗಿದೆ. ಸಾಮಾಜಿಕ ಅಂತರ ಪಾಲನೆ ಮಾಡಲೇಬೇಕು.

ಅನ್ಲಾಕ್ 4.0 ಜನರ ಆರ್ಥಿಕ ಜೀವನವನ್ನು ಗಮನದಲ್ಲಿಟ್ಟುಕೊಂಡು ಹಲವು ವ್ಯಾಪಾರ –ವಹಿವಾಟಿಗೆ ಅವಕಾಶ ನೀಡಿದೆ. ಆದರೇ ಜನ ಎಷ್ಟರ ಮಟ್ಟಿಗೆ ಕೋವಿಡ್ ತಡೆ ನಿಯಮಗಳನ್ನು ಪಾಲಿಸುತ್ತಾರೆ ಎನ್ನುವುದರ ಮೇಲೆ ಕೊರೋನಾ ಸೋಂಕು ನಿಯಂತ್ರಣ ಅವಲಂಭಿಸಿದೆ.


ಇದನ್ನೂ ಓದಿ:ಅನ್ಲಾಕ್ – 04: ಸೆಪ್ಟೆಂಬರ್ 07 ರಿಂದ ಮೆಟ್ರೋ ಸಂಚಾರ ಆರಂಭಕ್ಕೆ ಹಸಿರು ನಿಶಾನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...