Homeಕರ್ನಾಟಕನಾಳೆಯಿಂದ ಪಬ್, ಬಾರ್ ಅಂಡ್ ರೆಸ್ಟೋರೆಂಟ್ ಓಪನ್: ಕಾರ್ಯನಿರ್ವಹಿಸಲಿದೆ ಕೆ.ಆರ್‌.ಮಾರ್ಕೆಟ್

ನಾಳೆಯಿಂದ ಪಬ್, ಬಾರ್ ಅಂಡ್ ರೆಸ್ಟೋರೆಂಟ್ ಓಪನ್: ಕಾರ್ಯನಿರ್ವಹಿಸಲಿದೆ ಕೆ.ಆರ್‌.ಮಾರ್ಕೆಟ್

ಸೆಪ್ಟೆಂಬರ್ 7ರ ಬಳಿಕ ಒಂದು ರೈಲಿನಲ್ಲಿ 346 ಜನರಿಗಷ್ಟೇ ಅವಕಾಶ ನೀಡಲಾಗುತ್ತದೆ. ಮೆಟ್ರೋ ರೈಲುಗಳ ಕಾರ್ಯಾಚರಣೆನ್ನು ಬೆಳಗ್ಗೆ 7ರಿಂದ ರಾತ್ರಿ 8 ಗಂಟೆಯವರೆಗೆ ಸೀಮಿತಗೊಳಿಸುತ್ತಿದೆ.

- Advertisement -
- Advertisement -

ನಾಳೆಯಿಂದ ರಾಜ್ಯದಲ್ಲಿ ಅನ್ಲಾಕ್-4.0 ಜಾರಿಗೆ ಬರಲಿದ್ದು, ಕಳೆದೈದು ತಿಂಗಳುಗಳಿಂದ ಬಂದ್ ಆಗಿದ್ದ ಪಬ್, ಬಾರ್, ಕ್ಲಬ್ ಮತ್ತು ರೆಸ್ಟೋರೆಂಟ್‌ಗಳು ಪುನಾರಾಂಭವಾಗಲಿವೆ.

ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಅವಕಾಶವಿದ್ದರೂ, ಬಾರ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ಅಲ್ಲಿಯೇ ಕುಳಿತು ಮದ್ಯಸೇವನೆಗೆ ನಿಷೇಧ ಹೇರಲಾಗಿತ್ತು. ನಾಳೆಯಿಂದ ಆ ನಿರ್ಬಂಧ ಸಡಿಲಿಸಲಾಗಿದೆ. ಆದರೆ ಸರ್ಕಾರ ಇವುಗಳಿಗೂ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಿದ್ದು, ಕೊವೀಡ್ ತಡೆ ಮಾರ್ಗಸೂಚಿ ಪಾಲಿಸುವುದು ಕಡ್ಡಾಯವಾಗಿದೆ.

ಮಾರ್ಗಸೂಚಿಗಳು

  • ಪ್ರವೇಶ ದ್ವಾರದಲ್ಲಿ ಥರ್ಮಲ್ ಸ್ಕ್ಯಾನಿಂಗ್, ಸ್ಯಾನಿಟೈಸರ್ ವ್ಯವಸ್ಥೆ
  • ಶೇಕಡ 50 ರಷ್ಟು ಗ್ರಾಹಕರಿಗೆ ಮಾತ್ರ ಅವಕಾಶ
  • ಬಾರ್ ಮತ್ತು ರೆಸ್ಟೋರೆಂಟ್ ಕೆಲಸಗಾರರು ಗ್ರಾಹಕರ ಕೈಗೆ ಮದ್ಯ ಕೊಡುವಂತಿಲ್ಲ. ರೂಂ, ಕ್ಯಾಬಿನ್ ಗಳ ಬಾಗಿಲ ಬಾಗಿಲ ಬಳಿ ಮದ್ಯ ಅಥವಾ ಆಹಾರ ಇಡಬೇಕು..
  • ಕಂಟೋನ್ಮೆಂಟ್ ವಲಯಗಳಲ್ಲಿ ನಿರ್ಬಂಧ ಮಂದುವರಿಕೆ.

ಮತ್ತೆ ಶುರುವಾಯ್ತು ಮಾರ್ಕೆಟ್

ಇನ್ನು ಬೆಂಗಳೂರಿನ ಕೆ.ಆರ್.ಮಾರ್ಕೆಟ್ ನಾಳೆಯಿಂದ ವ್ಯಾಪಾರಕ್ಕೆ ಮುಕ್ತವಾಗಲಿದೆ. ಇಷ್ಟು ದಿನ ಸೀಲ್‌ಡೌನ್ ಮಾಡಿದ್ದ ಬಿಬಿಎಂಪಿ ಅಧಿಕಾರಿಗಳು ವ್ಯಾಪಾರ ವಹಿವಾಟಿಗೆ ಅವಕಾಶ ನೀಡಿದ್ದಾರೆ. ಮಾರುಕಟ್ಟೆಯಲ್ಲಿ ಜನಸಂದಣೆ ನಿಯಂತ್ರಿಸಲು ಮತ್ತು ಸುರಕ್ಷತಾ ಕ್ರಮಗಳನ್ನು ಪಾಲಿಸಲು ಮಳಿಗೆಗಳ ಮುಂಭಾಗ ಮಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.

ಪಾಲಿಕೆ ನಿಯಮಗಳನ್ನು ಪಾಲಿಸದವರಿಗೆ ದಂಡ ಹಾಕಲು ಬಿಬಿಎಂಪಿ ನಿರ್ಧರಿಸಿದೆ. ಮಾರುಕಟ್ಟೆ ಆವರಣ ಬಿಟ್ಟು ಹೊರ ಬಂದು ಅನಧಿಕೃತ ವ್ಯಾಪಾರ ಮಾಡುವವರಿಗೆ, ಮಾಸ್ಕ್ ಧರಿಸದೇ ಇರುವವರಿಗೆ ದಂಡ ಬೀಳಲಿದೆ. ಮಾರುಕಟ್ಟೆಯಲ್ಲಿ ಸ್ವಚ್ಛತೆ ಬಗ್ಗೆ ಹದ್ದಿನ ಕಣ್ಣಿಡಲು ಕೆ.ಆರ್.ಮಾರುಕಟ್ಟೆ ಮತ್ತು ಕಲಾಸಿಪಾಳ್ಯ ತರಕಾರಿ ಮಾರುಕಟ್ಟೆಯಲ್ಲಿ ಒಂದು ಪಾಳಿಗೆ 15 ಮಂದಿಯಂತೆ ಸುಮಾರು 60 ಮಾರ್ಷಲ್‌ಗಳನ್ನು ನೇಮಿಸಲಾಗಿದೆ.

ಇನ್ನು ಸೆಪ್ಟೆಂಬರ್ 7 ರಿಂದ ನಮ್ಮ ಮೆಟ್ರೋ ಪುನರಾರಂಭ ಮಾಡಲಿದೆ. ಬಿಎಂಆರ್‌ಸಿಎಲ್‌ನಿಂದ ಸ್ವಚ್ಛತಾಕಾರ್ಯ ಭರದಿಂದ ಸಾಗಿದೆ. ಪ್ರಯಾಣಿಕರ ಸುರಕ್ಷತಾ ದೃಷ್ಠಿಯಿಂದ ಬಿಎಂಆರ್‌ಸಿಎಲ್ ಹಲವು ನಿಯಮಗಳನ್ನು ಜಾರಿಗೊಳಿಸಿದೆ. ಪ್ರಯಾಣಿಕರ ಸಂಖ್ಯೆಯಲ್ಲಿ ಇಳಿಕೆ, ಮೆಟ್ರೋ ರೈಲು ಸಂಚಾರ ಸಮಯದಲ್ಲಿ ಬದಲಾವಣೆ ಜೊತೆಗೆ ಟಿಕೆಟ್ ನೀಡದೇ ಸ್ಮಾರ್ಟ್ ಕಾರ್ಡ್ ಇದ್ದವರಷ್ಟೇ ಪ್ರಯಾಣಿಸಬಹುದೆಂಬ ನಿಯಮ ಹೇರಲಾಗಿದೆ.

ಪ್ರತಿ ರೈಲಿನಲ್ಲಿ ಹಿಂದೆ ಗರಿಷ್ಟ 1,800 ರಿಂದ 2 ಸಾವಿರ ಮಂದಿ ಪ್ರಯಾಣಿಸುತ್ತಿದ್ದರು. ಆದರೆ ಸೆಪ್ಟೆಂಬರ್ 7ರ ಬಳಿಕ ಒಂದು ರೈಲಿನಲ್ಲಿ 346 ಜನರಿಗಷ್ಟೇ ಅವಕಾಶ ನೀಡಲಾಗುತ್ತದೆ. ಮೆಟ್ರೋ ರೈಲುಗಳ ಕಾರ್ಯಾಚರಣೆನ್ನು ಬೆಳಗ್ಗೆ 7ರಿಂದ ರಾತ್ರಿ 8 ಗಂಟೆಯವರೆಗೆ ಸೀಮಿತಗೊಳಿಸುತ್ತಿದೆ.

ಮೆಟ್ರೋ ನಿಲ್ದಾಣ ಪ್ರವೇಶಿಸಲು ಮಾಸ್ಕ್ ಧರಿಸಿರುವುದು ಕಡ್ಡಾಯವಾಗಿದೆ. ಸಾಮಾಜಿಕ ಅಂತರ ಪಾಲನೆ ಮಾಡಲೇಬೇಕು.

ಅನ್ಲಾಕ್ 4.0 ಜನರ ಆರ್ಥಿಕ ಜೀವನವನ್ನು ಗಮನದಲ್ಲಿಟ್ಟುಕೊಂಡು ಹಲವು ವ್ಯಾಪಾರ –ವಹಿವಾಟಿಗೆ ಅವಕಾಶ ನೀಡಿದೆ. ಆದರೇ ಜನ ಎಷ್ಟರ ಮಟ್ಟಿಗೆ ಕೋವಿಡ್ ತಡೆ ನಿಯಮಗಳನ್ನು ಪಾಲಿಸುತ್ತಾರೆ ಎನ್ನುವುದರ ಮೇಲೆ ಕೊರೋನಾ ಸೋಂಕು ನಿಯಂತ್ರಣ ಅವಲಂಭಿಸಿದೆ.


ಇದನ್ನೂ ಓದಿ:ಅನ್ಲಾಕ್ – 04: ಸೆಪ್ಟೆಂಬರ್ 07 ರಿಂದ ಮೆಟ್ರೋ ಸಂಚಾರ ಆರಂಭಕ್ಕೆ ಹಸಿರು ನಿಶಾನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...