Homeಕರ್ನಾಟಕನಾಳೆಯಿಂದ ಪಬ್, ಬಾರ್ ಅಂಡ್ ರೆಸ್ಟೋರೆಂಟ್ ಓಪನ್: ಕಾರ್ಯನಿರ್ವಹಿಸಲಿದೆ ಕೆ.ಆರ್‌.ಮಾರ್ಕೆಟ್

ನಾಳೆಯಿಂದ ಪಬ್, ಬಾರ್ ಅಂಡ್ ರೆಸ್ಟೋರೆಂಟ್ ಓಪನ್: ಕಾರ್ಯನಿರ್ವಹಿಸಲಿದೆ ಕೆ.ಆರ್‌.ಮಾರ್ಕೆಟ್

ಸೆಪ್ಟೆಂಬರ್ 7ರ ಬಳಿಕ ಒಂದು ರೈಲಿನಲ್ಲಿ 346 ಜನರಿಗಷ್ಟೇ ಅವಕಾಶ ನೀಡಲಾಗುತ್ತದೆ. ಮೆಟ್ರೋ ರೈಲುಗಳ ಕಾರ್ಯಾಚರಣೆನ್ನು ಬೆಳಗ್ಗೆ 7ರಿಂದ ರಾತ್ರಿ 8 ಗಂಟೆಯವರೆಗೆ ಸೀಮಿತಗೊಳಿಸುತ್ತಿದೆ.

- Advertisement -
- Advertisement -

ನಾಳೆಯಿಂದ ರಾಜ್ಯದಲ್ಲಿ ಅನ್ಲಾಕ್-4.0 ಜಾರಿಗೆ ಬರಲಿದ್ದು, ಕಳೆದೈದು ತಿಂಗಳುಗಳಿಂದ ಬಂದ್ ಆಗಿದ್ದ ಪಬ್, ಬಾರ್, ಕ್ಲಬ್ ಮತ್ತು ರೆಸ್ಟೋರೆಂಟ್‌ಗಳು ಪುನಾರಾಂಭವಾಗಲಿವೆ.

ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಅವಕಾಶವಿದ್ದರೂ, ಬಾರ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ಅಲ್ಲಿಯೇ ಕುಳಿತು ಮದ್ಯಸೇವನೆಗೆ ನಿಷೇಧ ಹೇರಲಾಗಿತ್ತು. ನಾಳೆಯಿಂದ ಆ ನಿರ್ಬಂಧ ಸಡಿಲಿಸಲಾಗಿದೆ. ಆದರೆ ಸರ್ಕಾರ ಇವುಗಳಿಗೂ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಿದ್ದು, ಕೊವೀಡ್ ತಡೆ ಮಾರ್ಗಸೂಚಿ ಪಾಲಿಸುವುದು ಕಡ್ಡಾಯವಾಗಿದೆ.

ಮಾರ್ಗಸೂಚಿಗಳು

  • ಪ್ರವೇಶ ದ್ವಾರದಲ್ಲಿ ಥರ್ಮಲ್ ಸ್ಕ್ಯಾನಿಂಗ್, ಸ್ಯಾನಿಟೈಸರ್ ವ್ಯವಸ್ಥೆ
  • ಶೇಕಡ 50 ರಷ್ಟು ಗ್ರಾಹಕರಿಗೆ ಮಾತ್ರ ಅವಕಾಶ
  • ಬಾರ್ ಮತ್ತು ರೆಸ್ಟೋರೆಂಟ್ ಕೆಲಸಗಾರರು ಗ್ರಾಹಕರ ಕೈಗೆ ಮದ್ಯ ಕೊಡುವಂತಿಲ್ಲ. ರೂಂ, ಕ್ಯಾಬಿನ್ ಗಳ ಬಾಗಿಲ ಬಾಗಿಲ ಬಳಿ ಮದ್ಯ ಅಥವಾ ಆಹಾರ ಇಡಬೇಕು..
  • ಕಂಟೋನ್ಮೆಂಟ್ ವಲಯಗಳಲ್ಲಿ ನಿರ್ಬಂಧ ಮಂದುವರಿಕೆ.

ಮತ್ತೆ ಶುರುವಾಯ್ತು ಮಾರ್ಕೆಟ್

ಇನ್ನು ಬೆಂಗಳೂರಿನ ಕೆ.ಆರ್.ಮಾರ್ಕೆಟ್ ನಾಳೆಯಿಂದ ವ್ಯಾಪಾರಕ್ಕೆ ಮುಕ್ತವಾಗಲಿದೆ. ಇಷ್ಟು ದಿನ ಸೀಲ್‌ಡೌನ್ ಮಾಡಿದ್ದ ಬಿಬಿಎಂಪಿ ಅಧಿಕಾರಿಗಳು ವ್ಯಾಪಾರ ವಹಿವಾಟಿಗೆ ಅವಕಾಶ ನೀಡಿದ್ದಾರೆ. ಮಾರುಕಟ್ಟೆಯಲ್ಲಿ ಜನಸಂದಣೆ ನಿಯಂತ್ರಿಸಲು ಮತ್ತು ಸುರಕ್ಷತಾ ಕ್ರಮಗಳನ್ನು ಪಾಲಿಸಲು ಮಳಿಗೆಗಳ ಮುಂಭಾಗ ಮಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.

ಪಾಲಿಕೆ ನಿಯಮಗಳನ್ನು ಪಾಲಿಸದವರಿಗೆ ದಂಡ ಹಾಕಲು ಬಿಬಿಎಂಪಿ ನಿರ್ಧರಿಸಿದೆ. ಮಾರುಕಟ್ಟೆ ಆವರಣ ಬಿಟ್ಟು ಹೊರ ಬಂದು ಅನಧಿಕೃತ ವ್ಯಾಪಾರ ಮಾಡುವವರಿಗೆ, ಮಾಸ್ಕ್ ಧರಿಸದೇ ಇರುವವರಿಗೆ ದಂಡ ಬೀಳಲಿದೆ. ಮಾರುಕಟ್ಟೆಯಲ್ಲಿ ಸ್ವಚ್ಛತೆ ಬಗ್ಗೆ ಹದ್ದಿನ ಕಣ್ಣಿಡಲು ಕೆ.ಆರ್.ಮಾರುಕಟ್ಟೆ ಮತ್ತು ಕಲಾಸಿಪಾಳ್ಯ ತರಕಾರಿ ಮಾರುಕಟ್ಟೆಯಲ್ಲಿ ಒಂದು ಪಾಳಿಗೆ 15 ಮಂದಿಯಂತೆ ಸುಮಾರು 60 ಮಾರ್ಷಲ್‌ಗಳನ್ನು ನೇಮಿಸಲಾಗಿದೆ.

ಇನ್ನು ಸೆಪ್ಟೆಂಬರ್ 7 ರಿಂದ ನಮ್ಮ ಮೆಟ್ರೋ ಪುನರಾರಂಭ ಮಾಡಲಿದೆ. ಬಿಎಂಆರ್‌ಸಿಎಲ್‌ನಿಂದ ಸ್ವಚ್ಛತಾಕಾರ್ಯ ಭರದಿಂದ ಸಾಗಿದೆ. ಪ್ರಯಾಣಿಕರ ಸುರಕ್ಷತಾ ದೃಷ್ಠಿಯಿಂದ ಬಿಎಂಆರ್‌ಸಿಎಲ್ ಹಲವು ನಿಯಮಗಳನ್ನು ಜಾರಿಗೊಳಿಸಿದೆ. ಪ್ರಯಾಣಿಕರ ಸಂಖ್ಯೆಯಲ್ಲಿ ಇಳಿಕೆ, ಮೆಟ್ರೋ ರೈಲು ಸಂಚಾರ ಸಮಯದಲ್ಲಿ ಬದಲಾವಣೆ ಜೊತೆಗೆ ಟಿಕೆಟ್ ನೀಡದೇ ಸ್ಮಾರ್ಟ್ ಕಾರ್ಡ್ ಇದ್ದವರಷ್ಟೇ ಪ್ರಯಾಣಿಸಬಹುದೆಂಬ ನಿಯಮ ಹೇರಲಾಗಿದೆ.

ಪ್ರತಿ ರೈಲಿನಲ್ಲಿ ಹಿಂದೆ ಗರಿಷ್ಟ 1,800 ರಿಂದ 2 ಸಾವಿರ ಮಂದಿ ಪ್ರಯಾಣಿಸುತ್ತಿದ್ದರು. ಆದರೆ ಸೆಪ್ಟೆಂಬರ್ 7ರ ಬಳಿಕ ಒಂದು ರೈಲಿನಲ್ಲಿ 346 ಜನರಿಗಷ್ಟೇ ಅವಕಾಶ ನೀಡಲಾಗುತ್ತದೆ. ಮೆಟ್ರೋ ರೈಲುಗಳ ಕಾರ್ಯಾಚರಣೆನ್ನು ಬೆಳಗ್ಗೆ 7ರಿಂದ ರಾತ್ರಿ 8 ಗಂಟೆಯವರೆಗೆ ಸೀಮಿತಗೊಳಿಸುತ್ತಿದೆ.

ಮೆಟ್ರೋ ನಿಲ್ದಾಣ ಪ್ರವೇಶಿಸಲು ಮಾಸ್ಕ್ ಧರಿಸಿರುವುದು ಕಡ್ಡಾಯವಾಗಿದೆ. ಸಾಮಾಜಿಕ ಅಂತರ ಪಾಲನೆ ಮಾಡಲೇಬೇಕು.

ಅನ್ಲಾಕ್ 4.0 ಜನರ ಆರ್ಥಿಕ ಜೀವನವನ್ನು ಗಮನದಲ್ಲಿಟ್ಟುಕೊಂಡು ಹಲವು ವ್ಯಾಪಾರ –ವಹಿವಾಟಿಗೆ ಅವಕಾಶ ನೀಡಿದೆ. ಆದರೇ ಜನ ಎಷ್ಟರ ಮಟ್ಟಿಗೆ ಕೋವಿಡ್ ತಡೆ ನಿಯಮಗಳನ್ನು ಪಾಲಿಸುತ್ತಾರೆ ಎನ್ನುವುದರ ಮೇಲೆ ಕೊರೋನಾ ಸೋಂಕು ನಿಯಂತ್ರಣ ಅವಲಂಭಿಸಿದೆ.


ಇದನ್ನೂ ಓದಿ:ಅನ್ಲಾಕ್ – 04: ಸೆಪ್ಟೆಂಬರ್ 07 ರಿಂದ ಮೆಟ್ರೋ ಸಂಚಾರ ಆರಂಭಕ್ಕೆ ಹಸಿರು ನಿಶಾನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...