Homeಮುಖಪುಟಎರಡು ವಾರಗಳಲ್ಲಿ ಸಾರ್ವಜನಿಕವಾಗಿ ಕ್ಷಮೆ ಕೇಳಿ | ಟಿಎಂಸಿ ಸಂಸದ ಸಾಕೇತ್ ಗೋಖಲೆಗೆ ದೆಹಲಿ ಹೈಕೋರ್ಟ್...

ಎರಡು ವಾರಗಳಲ್ಲಿ ಸಾರ್ವಜನಿಕವಾಗಿ ಕ್ಷಮೆ ಕೇಳಿ | ಟಿಎಂಸಿ ಸಂಸದ ಸಾಕೇತ್ ಗೋಖಲೆಗೆ ದೆಹಲಿ ಹೈಕೋರ್ಟ್ ಆದೇಶ

- Advertisement -
- Advertisement -

ಮಾಜಿ ರಾಜತಾಂತ್ರಿಕ ಅಧಿಕಾರಿ ಲಕ್ಷ್ಮಿ ಪುರಿ ಅವರು ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯಲ್ಲಿ, ಎರಡು ವಾರಗಳಲ್ಲಿ ಸಾರ್ವಜನಿಕವಾಗಿ ಕ್ಷಮೆಯಾಚಿಸುವಂತೆ ದೆಹಲಿ ಹೈಕೋರ್ಟ್ ತೃಣಮೂಲ ಕಾಂಗ್ರೆಸ್ ಸಂಸದ ಸಾಕೇತ್ ಗೋಖಲೆ ಅವರಿಗೆ ಆದೇಶಿಸಿದೆ.

ಜುಲೈ 2024 ರಲ್ಲಿ, ಗೋಖಲೆ ಅವರು ಪುರಿ ಅವರ ಬಗ್ಗೆ “ತಪ್ಪು ಮತ್ತು ಸುಳ್ಳು” ಆರೋಪಗಳನ್ನು ಮಾಡಿದ್ದಾರೆ ಎಂದು ಹೈಕೋರ್ಟ್ ತೀರ್ಪು ನೀಡಿದೆ. ಪುರಿ ಅವರು ಸ್ವಿಟ್ಜರ್ಲೆಂಡ್‌ನಲ್ಲಿ ಅಕ್ರಮ ಆಸ್ತಿಯನ್ನು ಖರೀದಿಸಿದ್ದಾರೆ ಎಂಬ ಗೋಖಲೆ ಅವರ ಹೇಳಿಕೆಗಳು ಸೇರಿವೆ.

ಗೋಖಲೆ ಅವರ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳ ಬಗ್ಗೆ ಅಸಮಾಧನ ವ್ಯಕ್ತಪಡಿಸಿದ್ದ ಪುರಿ, ಅವರ ಹೇಳಿಕೆ  “ಮಾನನಷ್ಟಕರ, ದುರುದ್ದೇಶಪೂರಿತ ಮತ್ತು ಸುಳ್ಳು ಮಾಹಿತಿಯನ್ನು ಆಧರಿಸಿವೆ” ಎಂದು ಆರೋಪಿಸಿ ಅವರ ವಿರುದ್ಧ ಮೊಕದ್ದಮೆ ಹೂಡಿದ್ದರು.

ಪ್ರಮುಖ ಇಂಗ್ಲಿಷ್ ದಿನಪತ್ರಿಕೆ ಮತ್ತು ಅವರ ಎಕ್ಸ್‌ ಹ್ಯಾಂಡಲ್‌ನಲ್ಲಿ ಗೋಖಲೆ ಕ್ಷಮೆಯಾಚಿಸಬೇಕು ಎಂದು ತನ್ನ ತೀರ್ಪಿನಲ್ಲಿ ನ್ಯಾಯಾಲಯವು ಆದೇಶಿಸಿದ್ದು, ಅವರಿಗೆ 50 ಲಕ್ಷ ರೂ. ಪರಿಹಾರವನ್ನು ಪಾವತಿಸಲು ಸಹ ಸೂಚಿಸಿದೆ.

ಜುಲೈ 2024ರ ಈ ಆದೇಶವನ್ನು ಹಿಂಪಡೆಯಬೇಕು ಎಂದು ಗೋಖಲೆ ಆಗ್ರಹಿದ್ದು, ತನ್ನ ವಕೀಲರು ಹಾಜರಾಗುವುದನ್ನು ನಿಲ್ಲಿಸಿದ ನಂತರ ವಿಚಾರಣೆಯನ್ನು ಪಕ್ಷಪಾತಿಯಾಗಿ ಅಥವಾ ಅವರ ಅನುಪಸ್ಥಿತಿಯಲ್ಲಿ ನೀಡಲಾಗಿದೆ ಎಂದು ವಾದಿಸಿದ್ದರು.

ಈ ಮಧ್ಯೆ, ಪುರಿ ಅವರು ಆದೇಶವನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸಿ ಹೈಕೋರ್ಟ್ ಅನ್ನು ಸಂಪರ್ಕಿಸಿದ್ದರು. ಆದೇಶವನ್ನು ಪಾಲಿಸದಿದ್ದಕ್ಕಾಗಿ ಅವರು ಗೋಖಲೆ ವಿರುದ್ಧ ನ್ಯಾಯಾಲಯ ನಿಂದನೆಯ ಪ್ರಕರಣವನ್ನೂ ಹೂಡಿದರು.

ಇದಕ್ಕೆ ಪ್ರತಿಕ್ರಿಯೆಯಾಗಿ, ಗೋಖಲೆ ಅವರ ವಕೀಲರು ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿ ಇತ್ಯರ್ಥವಾಗುವವರೆಗೆ ಮುಚ್ಚಿದ ಲಕೋಟೆಯಲ್ಲಿ ಕ್ಷಮೆಯಾಚನೆ ಸಲ್ಲಿಸುವುದಾಗಿ ಪ್ರಸ್ತಾಪಿಸಿದ್ದರು. ಆದಾಗ್ಯೂ, ನ್ಯಾಯಮೂರ್ತಿ ಅನೀಶ್ ದಯಾಳ್ ಮೇ 9 ರಂದು ವಿನಂತಿಯನ್ನು ವಜಾಗೊಳಿಸಿ, ಎರಡು ವಾರಗಳಲ್ಲಿ ಸಾರ್ವಜನಿಕ ಕ್ಷಮೆಯಾಚಿಸುವಂತೆ ಗೋಖಲೆ ಅವರಿಗೆ ಆದೇಶಿಸಿದ್ದಾರೆ. ಈ ಆದೇಶವನ್ನು ಗುರುವಾರ ಹೈಕೋರ್ಟ್ಬ ಹಿರಂಗಪಡಿಸಿದೆ.

“ಪ್ರತಿವಾದಿ [ಗೋಖಲೆ] ಸುಮ್ಮನೆ ತಡಮಾಡಿದ್ದು, ವಿಳಂಬ ಮಾಡುತ್ತಿದ್ದಾರೆ. ಇನ್ನೂ ತೀರ್ಪನ್ನು ಪಾಲಿಸಿಲ್ಲ” ಎಂದು ನ್ಯಾಯಮೂರ್ತಿ ಹೇಳಿದ್ದಾರೆ. ಮೇ 2 ರಂದು, 50 ಲಕ್ಷ ರೂ. ಪಾವತಿಸುವಂತೆ ನಿರ್ದೇಶಿಸಿದ ತನ್ನ ಆದೇಶವನ್ನು ಹಿಂಪಡೆಯಲು ನ್ಯಾಯಾಲಯ ನಿರಾಕರಿಸಿದೆ.

ಗೋಖಲೆ ಅವರು 50 ಲಕ್ಷ ರೂ. ಪರಿಹಾರವಾಗಿ ಠೇವಣಿ ಇಡುವ ಆದೇಶವನ್ನು ಪಾಲಿಸಲು ವಿಫಲವಾದ ಕಾರಣ ಅವರ ಮಾಸಿಕ ವೇತನ ರೂ. 1.9 ಲಕ್ಷವನ್ನು ಪ್ರತಿ ತಿಂಗಳು ಮುಟ್ಟುಗೋಲು ಹಾಕಿಕೊಳ್ಳುವಂತೆ ಹೈಕೋರ್ಟ್ ಏಪ್ರಿಲ್ 24 ರಂದು ನಿರ್ದೇಶಿಸಿತ್ತು.

ವಿಶ್ವಸಂಸ್ಥೆಯ ಮಾಜಿ ಸಹಾಯಕ ಮಹಾಕಾರ್ಯದರ್ಶಿ ಮತ್ತು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಪತ್ನಿ ಪುರಿ 2021 ರಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಜಿನೀವಾದಲ್ಲಿನ ಅಪಾರ್ಟ್ಮೆಂಟ್ ಕುರಿತು ಗೋಖಲೆ ಅವರು ನೀಡಿದ್ದ ಹೇಳಿಕೆಯು “ಅಜಾಗರೂಕ ಮತ್ತು ಸುಳ್ಳು ಆರೋಪಗಳಿಂದ” ಕೂಡಿದ್ದು, ಅದು ತನ್ನ ಖ್ಯಾತಿಗೆ ಕಳಂಕ ತಂದಿದೆ ಎಂದು ಅವರು ವಾದಿಸಿದ್ದರು.

ವಿಶ್ವಸಂಸ್ಥೆಯ ವ್ಯಾಪಾರ ಮತ್ತು ಅಭಿವೃದ್ಧಿ ಸಮ್ಮೇಳನಕ್ಕೆ ನಿಯೋಜನೆಗೊಂಡ ಭಾರತೀಯ ವಿದೇಶಾಂಗ ಸೇವೆಯ ಮಾಜಿ ಅಧಿಕಾರಿಯಾಗಿರುವ ಪುರಿ ತಮ್ಮ ಆದಾಯದ ಮೇಲೆ ಆಸ್ತಿಯನ್ನು ಮಾಡುತ್ತಿದ್ದಾರೆ ಎಂದು ಗೋಖಲೆ ಪ್ರಶ್ನಿಸಿದ್ದರು. ಅವರು ತಮ್ಮ ಪೋಸ್ಟ್‌ಗಳಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಟ್ಯಾಗ್ ಮಾಡಿ, ಈ ವಿಷಯದಲ್ಲಿ ಜಾರಿ ನಿರ್ದೇಶನಾಲಯದ ತನಿಖೆಗೆ ಕರೆ ನೀಡಿದ್ದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ತೆಲಂಗಾಣ| ಮಿಸ್ ವರ್ಲ್ಡ್ ಸ್ಪರ್ಧಿಗಳ ಪಾದ ತೊಳೆದ ಸ್ಥಳೀಯ ಮಹಿಳೆಯರು; ವಿಡಿಯೋ ವೈರಲ್

ತೆಲಂಗಾಣ| ಮಿಸ್ ವರ್ಲ್ಡ್ ಸ್ಪರ್ಧಿಗಳ ಪಾದ ತೊಳೆದ ಸ್ಥಳೀಯ ಮಹಿಳೆಯರು; ವಿಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...

ಲೆಬನಾನ್ ಮೇಲೆ ದಾಳಿ ಮುಂದುವರಿಸಿದ ಇಸ್ರೇಲ್ : 2 ಸಾವಿರ ದಾಟಿದ ಮೃತರ ಸಂಖ್ಯೆ

ಮಾರ್ಚ್ 2ರಿಂದ ಇಸ್ರೇಲ್ ನಡೆಸಿದ ದಾಳಿಯಲ್ಲಿ ಕನಿಷ್ಠ 2,020 ಜನರು ಸಾವನ್ನಪ್ಪಿದ್ದಾರೆ ಮತ್ತು 6,436 ಜನರು ಗಾಯಗೊಂಡಿದ್ದಾರೆ ಎಂದು ಲೆಬನಾನ್ ಆರೋಗ್ಯ ಸಚಿವಾಲಯ ತಿಳಿಸಿದೆ. ಸಾವನ್ನಪ್ಪಿದವರಲ್ಲಿ 165 ಮಕ್ಕಳು, 248 ಮಹಿಳೆಯರು ಮತ್ತು 85...

ಪ. ಬಂಗಾಳ ಚುನಾವಣೆ | ಭವಾನಿಪುರದಲ್ಲಿ ನನ್ನ ನಾಮಪತ್ರ ರದ್ದತಿಗೆ ಪಿತೂರಿ ನಡೆದಿತ್ತು : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳದ ಭವಾನಿಪುರ ವಿಧಾನಸಭಾ ಕ್ಷೇತ್ರದಲ್ಲಿ ತನ್ನ ನಾಮಪತ್ರವನ್ನು ರದ್ದುಗೊಳಿಸಲು ಉದ್ದೇಶಪೂರ್ವಕ ಪಿತೂರಿ ನಡೆದಿತ್ತು ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. "ನಮ್ಮ ಹೋರಾಟ ಬಿಜೆಪಿ ವಿರುದ್ಧವಲ್ಲ; ವ್ಯವಸ್ಥೆಯಲ್ಲಿರುವ ದೋಷಗಳ ವಿರುದ್ಧ. ನನ್ನ ಸ್ವಂತ...

ಇಸ್ರೇಲ್‌ನಾದ್ಯಂತ ಯುದ್ಧ ವಿರೋಧಿ ಪ್ರತಿಭಟನೆ : ನೆತನ್ಯಾಹು ಆಡಳಿತ ವಿರುದ್ಧ ಬೀದಿಗಿಳಿದ ಜನ

ಗಾಝಾದಲ್ಲಿ ಸುಮಾರು 80 ಸಾವಿರದಷ್ಟು ಜನರನ್ನು ಹತ್ಯೆಗೈದ ಬಳಿಕ, ಈಗ ಲೆಬನಾನ್ ಮತ್ತು ಇರಾನ್ ಮೇಲೆ ದಾಳಿ ನಡೆಸುತ್ತಿರುವ ಇಸ್ರೇಲ್‌ನ ಬೆಂಜಮಿನ್ ನೆತನ್ಯಾಹು ಸರ್ಕಾರದ ವಿರುದ್ದ ಅಲ್ಲಿನ ನಾಗರಿಕರು ಬೀದಿಗಿಳಿದಿದ್ದಾರೆ. ನೆತನ್ಯಾಹು ಆಡಳಿತದ...