Homeಮುಖಪುಟಎರಡು ವಾರಗಳಲ್ಲಿ ಸಾರ್ವಜನಿಕವಾಗಿ ಕ್ಷಮೆ ಕೇಳಿ | ಟಿಎಂಸಿ ಸಂಸದ ಸಾಕೇತ್ ಗೋಖಲೆಗೆ ದೆಹಲಿ ಹೈಕೋರ್ಟ್...

ಎರಡು ವಾರಗಳಲ್ಲಿ ಸಾರ್ವಜನಿಕವಾಗಿ ಕ್ಷಮೆ ಕೇಳಿ | ಟಿಎಂಸಿ ಸಂಸದ ಸಾಕೇತ್ ಗೋಖಲೆಗೆ ದೆಹಲಿ ಹೈಕೋರ್ಟ್ ಆದೇಶ

- Advertisement -
- Advertisement -

ಮಾಜಿ ರಾಜತಾಂತ್ರಿಕ ಅಧಿಕಾರಿ ಲಕ್ಷ್ಮಿ ಪುರಿ ಅವರು ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯಲ್ಲಿ, ಎರಡು ವಾರಗಳಲ್ಲಿ ಸಾರ್ವಜನಿಕವಾಗಿ ಕ್ಷಮೆಯಾಚಿಸುವಂತೆ ದೆಹಲಿ ಹೈಕೋರ್ಟ್ ತೃಣಮೂಲ ಕಾಂಗ್ರೆಸ್ ಸಂಸದ ಸಾಕೇತ್ ಗೋಖಲೆ ಅವರಿಗೆ ಆದೇಶಿಸಿದೆ.

ಜುಲೈ 2024 ರಲ್ಲಿ, ಗೋಖಲೆ ಅವರು ಪುರಿ ಅವರ ಬಗ್ಗೆ “ತಪ್ಪು ಮತ್ತು ಸುಳ್ಳು” ಆರೋಪಗಳನ್ನು ಮಾಡಿದ್ದಾರೆ ಎಂದು ಹೈಕೋರ್ಟ್ ತೀರ್ಪು ನೀಡಿದೆ. ಪುರಿ ಅವರು ಸ್ವಿಟ್ಜರ್ಲೆಂಡ್‌ನಲ್ಲಿ ಅಕ್ರಮ ಆಸ್ತಿಯನ್ನು ಖರೀದಿಸಿದ್ದಾರೆ ಎಂಬ ಗೋಖಲೆ ಅವರ ಹೇಳಿಕೆಗಳು ಸೇರಿವೆ.

ಗೋಖಲೆ ಅವರ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳ ಬಗ್ಗೆ ಅಸಮಾಧನ ವ್ಯಕ್ತಪಡಿಸಿದ್ದ ಪುರಿ, ಅವರ ಹೇಳಿಕೆ  “ಮಾನನಷ್ಟಕರ, ದುರುದ್ದೇಶಪೂರಿತ ಮತ್ತು ಸುಳ್ಳು ಮಾಹಿತಿಯನ್ನು ಆಧರಿಸಿವೆ” ಎಂದು ಆರೋಪಿಸಿ ಅವರ ವಿರುದ್ಧ ಮೊಕದ್ದಮೆ ಹೂಡಿದ್ದರು.

ಪ್ರಮುಖ ಇಂಗ್ಲಿಷ್ ದಿನಪತ್ರಿಕೆ ಮತ್ತು ಅವರ ಎಕ್ಸ್‌ ಹ್ಯಾಂಡಲ್‌ನಲ್ಲಿ ಗೋಖಲೆ ಕ್ಷಮೆಯಾಚಿಸಬೇಕು ಎಂದು ತನ್ನ ತೀರ್ಪಿನಲ್ಲಿ ನ್ಯಾಯಾಲಯವು ಆದೇಶಿಸಿದ್ದು, ಅವರಿಗೆ 50 ಲಕ್ಷ ರೂ. ಪರಿಹಾರವನ್ನು ಪಾವತಿಸಲು ಸಹ ಸೂಚಿಸಿದೆ.

ಜುಲೈ 2024ರ ಈ ಆದೇಶವನ್ನು ಹಿಂಪಡೆಯಬೇಕು ಎಂದು ಗೋಖಲೆ ಆಗ್ರಹಿದ್ದು, ತನ್ನ ವಕೀಲರು ಹಾಜರಾಗುವುದನ್ನು ನಿಲ್ಲಿಸಿದ ನಂತರ ವಿಚಾರಣೆಯನ್ನು ಪಕ್ಷಪಾತಿಯಾಗಿ ಅಥವಾ ಅವರ ಅನುಪಸ್ಥಿತಿಯಲ್ಲಿ ನೀಡಲಾಗಿದೆ ಎಂದು ವಾದಿಸಿದ್ದರು.

ಈ ಮಧ್ಯೆ, ಪುರಿ ಅವರು ಆದೇಶವನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸಿ ಹೈಕೋರ್ಟ್ ಅನ್ನು ಸಂಪರ್ಕಿಸಿದ್ದರು. ಆದೇಶವನ್ನು ಪಾಲಿಸದಿದ್ದಕ್ಕಾಗಿ ಅವರು ಗೋಖಲೆ ವಿರುದ್ಧ ನ್ಯಾಯಾಲಯ ನಿಂದನೆಯ ಪ್ರಕರಣವನ್ನೂ ಹೂಡಿದರು.

ಇದಕ್ಕೆ ಪ್ರತಿಕ್ರಿಯೆಯಾಗಿ, ಗೋಖಲೆ ಅವರ ವಕೀಲರು ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿ ಇತ್ಯರ್ಥವಾಗುವವರೆಗೆ ಮುಚ್ಚಿದ ಲಕೋಟೆಯಲ್ಲಿ ಕ್ಷಮೆಯಾಚನೆ ಸಲ್ಲಿಸುವುದಾಗಿ ಪ್ರಸ್ತಾಪಿಸಿದ್ದರು. ಆದಾಗ್ಯೂ, ನ್ಯಾಯಮೂರ್ತಿ ಅನೀಶ್ ದಯಾಳ್ ಮೇ 9 ರಂದು ವಿನಂತಿಯನ್ನು ವಜಾಗೊಳಿಸಿ, ಎರಡು ವಾರಗಳಲ್ಲಿ ಸಾರ್ವಜನಿಕ ಕ್ಷಮೆಯಾಚಿಸುವಂತೆ ಗೋಖಲೆ ಅವರಿಗೆ ಆದೇಶಿಸಿದ್ದಾರೆ. ಈ ಆದೇಶವನ್ನು ಗುರುವಾರ ಹೈಕೋರ್ಟ್ಬ ಹಿರಂಗಪಡಿಸಿದೆ.

“ಪ್ರತಿವಾದಿ [ಗೋಖಲೆ] ಸುಮ್ಮನೆ ತಡಮಾಡಿದ್ದು, ವಿಳಂಬ ಮಾಡುತ್ತಿದ್ದಾರೆ. ಇನ್ನೂ ತೀರ್ಪನ್ನು ಪಾಲಿಸಿಲ್ಲ” ಎಂದು ನ್ಯಾಯಮೂರ್ತಿ ಹೇಳಿದ್ದಾರೆ. ಮೇ 2 ರಂದು, 50 ಲಕ್ಷ ರೂ. ಪಾವತಿಸುವಂತೆ ನಿರ್ದೇಶಿಸಿದ ತನ್ನ ಆದೇಶವನ್ನು ಹಿಂಪಡೆಯಲು ನ್ಯಾಯಾಲಯ ನಿರಾಕರಿಸಿದೆ.

ಗೋಖಲೆ ಅವರು 50 ಲಕ್ಷ ರೂ. ಪರಿಹಾರವಾಗಿ ಠೇವಣಿ ಇಡುವ ಆದೇಶವನ್ನು ಪಾಲಿಸಲು ವಿಫಲವಾದ ಕಾರಣ ಅವರ ಮಾಸಿಕ ವೇತನ ರೂ. 1.9 ಲಕ್ಷವನ್ನು ಪ್ರತಿ ತಿಂಗಳು ಮುಟ್ಟುಗೋಲು ಹಾಕಿಕೊಳ್ಳುವಂತೆ ಹೈಕೋರ್ಟ್ ಏಪ್ರಿಲ್ 24 ರಂದು ನಿರ್ದೇಶಿಸಿತ್ತು.

ವಿಶ್ವಸಂಸ್ಥೆಯ ಮಾಜಿ ಸಹಾಯಕ ಮಹಾಕಾರ್ಯದರ್ಶಿ ಮತ್ತು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಪತ್ನಿ ಪುರಿ 2021 ರಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಜಿನೀವಾದಲ್ಲಿನ ಅಪಾರ್ಟ್ಮೆಂಟ್ ಕುರಿತು ಗೋಖಲೆ ಅವರು ನೀಡಿದ್ದ ಹೇಳಿಕೆಯು “ಅಜಾಗರೂಕ ಮತ್ತು ಸುಳ್ಳು ಆರೋಪಗಳಿಂದ” ಕೂಡಿದ್ದು, ಅದು ತನ್ನ ಖ್ಯಾತಿಗೆ ಕಳಂಕ ತಂದಿದೆ ಎಂದು ಅವರು ವಾದಿಸಿದ್ದರು.

ವಿಶ್ವಸಂಸ್ಥೆಯ ವ್ಯಾಪಾರ ಮತ್ತು ಅಭಿವೃದ್ಧಿ ಸಮ್ಮೇಳನಕ್ಕೆ ನಿಯೋಜನೆಗೊಂಡ ಭಾರತೀಯ ವಿದೇಶಾಂಗ ಸೇವೆಯ ಮಾಜಿ ಅಧಿಕಾರಿಯಾಗಿರುವ ಪುರಿ ತಮ್ಮ ಆದಾಯದ ಮೇಲೆ ಆಸ್ತಿಯನ್ನು ಮಾಡುತ್ತಿದ್ದಾರೆ ಎಂದು ಗೋಖಲೆ ಪ್ರಶ್ನಿಸಿದ್ದರು. ಅವರು ತಮ್ಮ ಪೋಸ್ಟ್‌ಗಳಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಟ್ಯಾಗ್ ಮಾಡಿ, ಈ ವಿಷಯದಲ್ಲಿ ಜಾರಿ ನಿರ್ದೇಶನಾಲಯದ ತನಿಖೆಗೆ ಕರೆ ನೀಡಿದ್ದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ತೆಲಂಗಾಣ| ಮಿಸ್ ವರ್ಲ್ಡ್ ಸ್ಪರ್ಧಿಗಳ ಪಾದ ತೊಳೆದ ಸ್ಥಳೀಯ ಮಹಿಳೆಯರು; ವಿಡಿಯೋ ವೈರಲ್

ತೆಲಂಗಾಣ| ಮಿಸ್ ವರ್ಲ್ಡ್ ಸ್ಪರ್ಧಿಗಳ ಪಾದ ತೊಳೆದ ಸ್ಥಳೀಯ ಮಹಿಳೆಯರು; ವಿಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...