Homeಮುಖಪುಟಎರಡು ವಾರಗಳಲ್ಲಿ ಸಾರ್ವಜನಿಕವಾಗಿ ಕ್ಷಮೆ ಕೇಳಿ | ಟಿಎಂಸಿ ಸಂಸದ ಸಾಕೇತ್ ಗೋಖಲೆಗೆ ದೆಹಲಿ ಹೈಕೋರ್ಟ್...

ಎರಡು ವಾರಗಳಲ್ಲಿ ಸಾರ್ವಜನಿಕವಾಗಿ ಕ್ಷಮೆ ಕೇಳಿ | ಟಿಎಂಸಿ ಸಂಸದ ಸಾಕೇತ್ ಗೋಖಲೆಗೆ ದೆಹಲಿ ಹೈಕೋರ್ಟ್ ಆದೇಶ

- Advertisement -
- Advertisement -

ಮಾಜಿ ರಾಜತಾಂತ್ರಿಕ ಅಧಿಕಾರಿ ಲಕ್ಷ್ಮಿ ಪುರಿ ಅವರು ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯಲ್ಲಿ, ಎರಡು ವಾರಗಳಲ್ಲಿ ಸಾರ್ವಜನಿಕವಾಗಿ ಕ್ಷಮೆಯಾಚಿಸುವಂತೆ ದೆಹಲಿ ಹೈಕೋರ್ಟ್ ತೃಣಮೂಲ ಕಾಂಗ್ರೆಸ್ ಸಂಸದ ಸಾಕೇತ್ ಗೋಖಲೆ ಅವರಿಗೆ ಆದೇಶಿಸಿದೆ.

ಜುಲೈ 2024 ರಲ್ಲಿ, ಗೋಖಲೆ ಅವರು ಪುರಿ ಅವರ ಬಗ್ಗೆ “ತಪ್ಪು ಮತ್ತು ಸುಳ್ಳು” ಆರೋಪಗಳನ್ನು ಮಾಡಿದ್ದಾರೆ ಎಂದು ಹೈಕೋರ್ಟ್ ತೀರ್ಪು ನೀಡಿದೆ. ಪುರಿ ಅವರು ಸ್ವಿಟ್ಜರ್ಲೆಂಡ್‌ನಲ್ಲಿ ಅಕ್ರಮ ಆಸ್ತಿಯನ್ನು ಖರೀದಿಸಿದ್ದಾರೆ ಎಂಬ ಗೋಖಲೆ ಅವರ ಹೇಳಿಕೆಗಳು ಸೇರಿವೆ.

ಗೋಖಲೆ ಅವರ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳ ಬಗ್ಗೆ ಅಸಮಾಧನ ವ್ಯಕ್ತಪಡಿಸಿದ್ದ ಪುರಿ, ಅವರ ಹೇಳಿಕೆ  “ಮಾನನಷ್ಟಕರ, ದುರುದ್ದೇಶಪೂರಿತ ಮತ್ತು ಸುಳ್ಳು ಮಾಹಿತಿಯನ್ನು ಆಧರಿಸಿವೆ” ಎಂದು ಆರೋಪಿಸಿ ಅವರ ವಿರುದ್ಧ ಮೊಕದ್ದಮೆ ಹೂಡಿದ್ದರು.

ಪ್ರಮುಖ ಇಂಗ್ಲಿಷ್ ದಿನಪತ್ರಿಕೆ ಮತ್ತು ಅವರ ಎಕ್ಸ್‌ ಹ್ಯಾಂಡಲ್‌ನಲ್ಲಿ ಗೋಖಲೆ ಕ್ಷಮೆಯಾಚಿಸಬೇಕು ಎಂದು ತನ್ನ ತೀರ್ಪಿನಲ್ಲಿ ನ್ಯಾಯಾಲಯವು ಆದೇಶಿಸಿದ್ದು, ಅವರಿಗೆ 50 ಲಕ್ಷ ರೂ. ಪರಿಹಾರವನ್ನು ಪಾವತಿಸಲು ಸಹ ಸೂಚಿಸಿದೆ.

ಜುಲೈ 2024ರ ಈ ಆದೇಶವನ್ನು ಹಿಂಪಡೆಯಬೇಕು ಎಂದು ಗೋಖಲೆ ಆಗ್ರಹಿದ್ದು, ತನ್ನ ವಕೀಲರು ಹಾಜರಾಗುವುದನ್ನು ನಿಲ್ಲಿಸಿದ ನಂತರ ವಿಚಾರಣೆಯನ್ನು ಪಕ್ಷಪಾತಿಯಾಗಿ ಅಥವಾ ಅವರ ಅನುಪಸ್ಥಿತಿಯಲ್ಲಿ ನೀಡಲಾಗಿದೆ ಎಂದು ವಾದಿಸಿದ್ದರು.

ಈ ಮಧ್ಯೆ, ಪುರಿ ಅವರು ಆದೇಶವನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸಿ ಹೈಕೋರ್ಟ್ ಅನ್ನು ಸಂಪರ್ಕಿಸಿದ್ದರು. ಆದೇಶವನ್ನು ಪಾಲಿಸದಿದ್ದಕ್ಕಾಗಿ ಅವರು ಗೋಖಲೆ ವಿರುದ್ಧ ನ್ಯಾಯಾಲಯ ನಿಂದನೆಯ ಪ್ರಕರಣವನ್ನೂ ಹೂಡಿದರು.

ಇದಕ್ಕೆ ಪ್ರತಿಕ್ರಿಯೆಯಾಗಿ, ಗೋಖಲೆ ಅವರ ವಕೀಲರು ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿ ಇತ್ಯರ್ಥವಾಗುವವರೆಗೆ ಮುಚ್ಚಿದ ಲಕೋಟೆಯಲ್ಲಿ ಕ್ಷಮೆಯಾಚನೆ ಸಲ್ಲಿಸುವುದಾಗಿ ಪ್ರಸ್ತಾಪಿಸಿದ್ದರು. ಆದಾಗ್ಯೂ, ನ್ಯಾಯಮೂರ್ತಿ ಅನೀಶ್ ದಯಾಳ್ ಮೇ 9 ರಂದು ವಿನಂತಿಯನ್ನು ವಜಾಗೊಳಿಸಿ, ಎರಡು ವಾರಗಳಲ್ಲಿ ಸಾರ್ವಜನಿಕ ಕ್ಷಮೆಯಾಚಿಸುವಂತೆ ಗೋಖಲೆ ಅವರಿಗೆ ಆದೇಶಿಸಿದ್ದಾರೆ. ಈ ಆದೇಶವನ್ನು ಗುರುವಾರ ಹೈಕೋರ್ಟ್ಬ ಹಿರಂಗಪಡಿಸಿದೆ.

“ಪ್ರತಿವಾದಿ [ಗೋಖಲೆ] ಸುಮ್ಮನೆ ತಡಮಾಡಿದ್ದು, ವಿಳಂಬ ಮಾಡುತ್ತಿದ್ದಾರೆ. ಇನ್ನೂ ತೀರ್ಪನ್ನು ಪಾಲಿಸಿಲ್ಲ” ಎಂದು ನ್ಯಾಯಮೂರ್ತಿ ಹೇಳಿದ್ದಾರೆ. ಮೇ 2 ರಂದು, 50 ಲಕ್ಷ ರೂ. ಪಾವತಿಸುವಂತೆ ನಿರ್ದೇಶಿಸಿದ ತನ್ನ ಆದೇಶವನ್ನು ಹಿಂಪಡೆಯಲು ನ್ಯಾಯಾಲಯ ನಿರಾಕರಿಸಿದೆ.

ಗೋಖಲೆ ಅವರು 50 ಲಕ್ಷ ರೂ. ಪರಿಹಾರವಾಗಿ ಠೇವಣಿ ಇಡುವ ಆದೇಶವನ್ನು ಪಾಲಿಸಲು ವಿಫಲವಾದ ಕಾರಣ ಅವರ ಮಾಸಿಕ ವೇತನ ರೂ. 1.9 ಲಕ್ಷವನ್ನು ಪ್ರತಿ ತಿಂಗಳು ಮುಟ್ಟುಗೋಲು ಹಾಕಿಕೊಳ್ಳುವಂತೆ ಹೈಕೋರ್ಟ್ ಏಪ್ರಿಲ್ 24 ರಂದು ನಿರ್ದೇಶಿಸಿತ್ತು.

ವಿಶ್ವಸಂಸ್ಥೆಯ ಮಾಜಿ ಸಹಾಯಕ ಮಹಾಕಾರ್ಯದರ್ಶಿ ಮತ್ತು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಪತ್ನಿ ಪುರಿ 2021 ರಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಜಿನೀವಾದಲ್ಲಿನ ಅಪಾರ್ಟ್ಮೆಂಟ್ ಕುರಿತು ಗೋಖಲೆ ಅವರು ನೀಡಿದ್ದ ಹೇಳಿಕೆಯು “ಅಜಾಗರೂಕ ಮತ್ತು ಸುಳ್ಳು ಆರೋಪಗಳಿಂದ” ಕೂಡಿದ್ದು, ಅದು ತನ್ನ ಖ್ಯಾತಿಗೆ ಕಳಂಕ ತಂದಿದೆ ಎಂದು ಅವರು ವಾದಿಸಿದ್ದರು.

ವಿಶ್ವಸಂಸ್ಥೆಯ ವ್ಯಾಪಾರ ಮತ್ತು ಅಭಿವೃದ್ಧಿ ಸಮ್ಮೇಳನಕ್ಕೆ ನಿಯೋಜನೆಗೊಂಡ ಭಾರತೀಯ ವಿದೇಶಾಂಗ ಸೇವೆಯ ಮಾಜಿ ಅಧಿಕಾರಿಯಾಗಿರುವ ಪುರಿ ತಮ್ಮ ಆದಾಯದ ಮೇಲೆ ಆಸ್ತಿಯನ್ನು ಮಾಡುತ್ತಿದ್ದಾರೆ ಎಂದು ಗೋಖಲೆ ಪ್ರಶ್ನಿಸಿದ್ದರು. ಅವರು ತಮ್ಮ ಪೋಸ್ಟ್‌ಗಳಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಟ್ಯಾಗ್ ಮಾಡಿ, ಈ ವಿಷಯದಲ್ಲಿ ಜಾರಿ ನಿರ್ದೇಶನಾಲಯದ ತನಿಖೆಗೆ ಕರೆ ನೀಡಿದ್ದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ತೆಲಂಗಾಣ| ಮಿಸ್ ವರ್ಲ್ಡ್ ಸ್ಪರ್ಧಿಗಳ ಪಾದ ತೊಳೆದ ಸ್ಥಳೀಯ ಮಹಿಳೆಯರು; ವಿಡಿಯೋ ವೈರಲ್

ತೆಲಂಗಾಣ| ಮಿಸ್ ವರ್ಲ್ಡ್ ಸ್ಪರ್ಧಿಗಳ ಪಾದ ತೊಳೆದ ಸ್ಥಳೀಯ ಮಹಿಳೆಯರು; ವಿಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...