HomeಅಂಕಣಗಳುKarnataka against SIRಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

- Advertisement -
- Advertisement -

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು.

ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ ವಿವಿಧ ಸಂಘಟನೆಗಳ ಸ್ಥಳೀಯ ನಾಯಕರು ಹಾಗೂ ಸಾರ್ವಜನಿಕರು ಸ್ವಾಗತಿಸಿದರು. ಬಳಿಕ ಯರಗಟ್ಟಿಯ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಜಾಗೃತಿ ಭಾಷಣ ನಡೆಯಿತು.

ಜಾಥಾ ನಾಯಕ ಯೂಸುಫ್ ಕನ್ನಿ ಮಾತನಾಡಿ, ಎಸ್‌ಐಆರ್ ಯಾವುದೇ ಒಂದು ಕೋಮಿಗೆ ಸೀಮಿತವಲ್ಲ. ಈಗಾಗಲೇ ಎಸ್‌ಐಆರ್ ನಡೆದಿರುವ ರಾಜ್ಯಗಳಲ್ಲಿ ಬರೋಬ್ಬರಿ 6.5 ಕೋಟಿ ಜನರನ್ನು ಮತದಾರರ ಪಟ್ಟಿಯಿಂದ ಹೊರಗಿಡಲಾಗಿದೆ. ಇದರಲ್ಲಿ ಒಂದು ಕೋಟಿ ಚಿಲ್ಲರೆ ಮಾತ್ರ ಮುಸ್ಲಿಮರು, ಉಳಿದವರು ಹಿಂದೂ, ಕ್ರೈಸ್ತ ಸೇರಿದಂತೆ ಇತರ ಧರ್ಮೀಯರು, ಅದರಲ್ಲೂ ದಲಿತರು, ಆದಿವಾಸಿಗಳು, ಕೂಲಿ ಕಾರ್ಮಿಕರು ಎಂದರು.‌

ಪಶ್ಚಿಮ ಬಂಗಾಳ ಸೇರಿದಂತೆ ಇತರ ರಾಜ್ಯಗಳಲ್ಲಿ ಈಗಾಗಲೇ ಎಸ್‌ಐಆರ್‌ ನಡೆಸಿರುವ ಅವಾಂತರಗಳನ್ನು ವಿವರಿಸಿದ ಯೂಸುಫ್ ಕನ್ನಿ, ಇದೇ ತಿಂಗಳ 30ರಿಂದ ಪ್ರಾರಂಭಗೊಳ್ಳುವ ಎಸ್‌ಐಆರ್‌ ಅನ್ನು ಸೂಕ್ತವಾಗಿ ಎದುರಿಸುವ ಕುರಿತು ಜನರಲ್ಲಿ ಜಾಗೃತಿ ಮೂಡಿಸಿದರು. ಸ್ಥಳೀಯ ನಾಯಕರು ಈ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗುವಂತೆ ಕರೆ ನೀಡಿದರು.

ಸಾಮಾಜಿಕ ಹೋರಾಟಗಾರ್ತಿ ಇಸಾಬೆಲ್ಲ ಝೇವಿಯರ್ ಮಾತನಾಡಿ, ಎಸ್‌ಐಅರ್‌ನಲ್ಲಿ ಹೆಣ್ಣು ಮಕ್ಕಳನ್ಮು ಹೆಚ್ಚಾಗಿ ಮತದಾರರ ಪಟ್ಟಿಯಿಂದ ಹೊರಗಿಡಲಾಗಿದೆ. ಹೆಣ್ಣು ಮಕ್ಕಳಿಗೆ ಮದುವೆಗಿಂತ ಮೊದಲು ಒಂದು ಹೆಸರಿದ್ದರೆ, ಮದುವೆ ಬಳಿಕ ಇನ್ನೊಂದು ಹೆಸರಿಡಲಾಗುತ್ತದೆ.‌ ಇಂತವರ ದಾಖಲೆಗಳಲ್ಲಿ ಒಂದು ಅಕ್ಷರ ತಪ್ಪು ಇರಬಾರದು ಎಂದರೆ ಹೇಗೆ ಎಂದು ಪ್ರಶ್ನಿಸಿದರು. ದಾಖಲೆ ಇಲ್ಲದವರನ್ನು ದೇಶದವರೇ ಅಲ್ಲಾ ಅಂತಿದ್ದಾರೆ. ಬಡ ಹೆಣ್ಣು ಮಕ್ಕಳು ಎಲ್ಲಿಂದ ದಾಖಲೆ‌ ತರಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಅವ್ಯವಸ್ಥೆ ವಿರುದ್ದ ಎಲ್ಲ ಜನ ಸಮುದಾಯ ಒಂದಾಗಿ ಧ್ವನಿ ಎತ್ತಬೇಕು. ತಮ್ಮ ಮತದಾನದ ಹಕ್ಕನ್ನು ಉಳಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ದಲಿತ ಸಂಘರ್ಷ ಸಮಿತಿ (ಡಿಎಸ್‌ಎಸ್) ಮುಖಂಡ ಭಾಸ್ಕರ್ ಹಿರೇಮೈತ್ರಿ ಮಾತನಾಡಿ, ಎಸ್‌ಐಅರ್ ವೇಳೆ 12 ದಾಖಲೆಗಳನ್ನು ಕೇಳ್ತಿದಾರೆ. ಅಂತಹ ಯಾವುದೇ ದಾಖಲೆಗಳು ನಮ್ಮ‌ ಜನರಲ್ಲಿ ಇಲ್ಲ. ಚುನಾವಣಾ ಆಯೋಗ ದಾಖಲೆ ಸಿದ್ದಪಡಿಸಲು ಅವಕಾಶವನ್ನೂ ಕೊಡ್ತಿಲ್ಲ ಎಂದರು.

ನಮ್ಮ ದೇಶದ ಸ್ವಾತಂತ್ರ್ಯ ಪಡೆಯುವ ಮುನ್ನ ಎಲ್ಲರಿಗೂ ಮತದಾನದ ಹಕ್ಕು ಇರಲ್ಲಿಲ್ಲ. ಕೆಲವರಿಗೆ ಮಾತ್ರ ಇತ್ತು. ಅಂಬೇಡ್ಕರ್ ಅವರ ಸಂವಿಧಾನ ಎಲ್ಲಾ ಜನರಿಗೆ ಮತದಾನದ ಹಕ್ಕು ಕೊಟ್ಟಿತು. ಅದನ್ನು ಎಸ್‌ಐಅರ್ ಮೂಲಕ ಕಿತ್ತುಕೊಳ್ಳಲು ಮುಂದಾಗಿದ್ದಾರೆ ಎಂದು ಹೇಳಿದರು.

ಎಸ್‌ಐಆರ್ ವಿಷಯದಲ್ಲಿ ಹಿಂದೂ, ಮುಸ್ಲಿಂ ಎನ್ನುವಂತಹ ಜಾತಿ, ಧರ್ಮಗಳ ಬೇಧವಿಲ್ಲ. ಇದು ಎಲ್ಲಿರಿಗೂ ಅಪಾಯಕಾರಿ. ತಳ ಮಟ್ಟದ ಜನರೇ ಇದರ ಮುಖ್ಯ ಗುರಿ ಎಂದರು.

ಯರಗಟ್ಟಿ ಬಳಿಕ ಬೆಳಗಾವಿ ನಗರದ ಅಂಬೇಡ್ಕರ್ ಪಾರ್ಕ್‌ನಲ್ಲಿ ಅಂಬೇಡ್ಕರ್ ಪ್ರತಿಮೆಗೆ ಜಾಥಾ ತಂಡ ಮತ್ತು ಸ್ಥಳೀಯ ನಾಯಕರು ಮಾಲಾರ್ಪಣೆ ಮಾಡಿದರು. ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರ ಹಾಕಿದರು.

ಬಳಿಕ ಅಂಬೇಡ್ಕರ್ ಪಾರ್ಕ್‌ನಿಂದ ರಾಣಿ ಚೆನ್ನಮ್ಮ ಸರ್ಕಲ್ ಮೂಲಕ ಕನ್ನಡ ಭವನಕ್ಕೆ ಕಾಲ್ನಡಿಗೆ ಜಾಥಾ ನಡೆಯಿತು. ಕನ್ನಡ ಭವನದಲ್ಲಿ ವಿವಿಧ ಧರ್ಮಗಳ ಮುಖಂಡರು, ಸಮುದಾಯ ನಾಯಕರ ನೇತೃತ್ವದಲ್ಲಿ ಜಾಗೃತಿ ಸಭೆ ನಡೆಯಿತು.

ಈ ಕಾರ್ಯಕ್ರಮದಲ್ಲಿ ಜಾಥಾ ತಂಡದ ಇಸಾಬೆಲ್ಲ ಝೆವಿಯರ್, ಯೂಸುಫ್ ಕನ್ನಿ, ಸರೋವರ್ ಬೆಂಕಿಕೆರೆ ಮತ್ತು ಆರಿಫುಲ್ಲಾ ಮಾತನಾಡಿದರು.

ಯೋಗಾನಂದ ಸ್ವಾಮೀಜಿ, ಸಾಜಿದ್ ಮೌಲಾನ, ಪಾಸ್ಟರ್ ಶಾಂತಪ್ಪ, ಸ್ಥಳೀಯ ಹೋರಾಟಗಾರರಾದ ಮಂದಾ, ಶಿವಲೀಲ, ಅಯ್ನ ಶೇಕ್, ಬಂಡಾಯ ಸಾಹಿತ್ಯದ ಡಾ. ಹಿಮ್ಮಡಿ, ಜನಶಕ್ತಿಯ ರವಿ, ಜಮಾಅತೆ ಇಸ್ಲಾಮಿ ಹಿಂದ್‌ನ ಮುಖಂಡ ಯಾಸಿನ್ ಮಕಾನದಾರ ಸೇರಿದಂತೆ ಹಲವರು ಹಾಜರಿದ್ದರು

ಸಂಜೆ ಜಾಥಾ ತಂಡ ಬಿಷಪ್ ಹೌಸ್‌ನಲ್ಲಿ ಬೆಳಗಾವಿ ಕ್ರೈಸ್ತ ಧರ್ಮ ಪ್ರಾಂತ್ಯದ ಧರ್ಮ ಗುರುಗಳಾದ ಫಾದರ್ ಡೆರೆಕ್ ಅವರನ್ನು ಭೇಟಿಯಾಗಿ ಎಸ್‌ಐಅರ್ ಕುರಿತು ಮಹತ್ವದ ಚರ್ಚೆ ನಡೆಸಿತು‌.

ನಂತರ ಸಾಯಿನಗರದ ನೇಕಾರ ಗಲ್ಲಿಯಲ್ಲಿ ಸ್ಥಳೀಯ ನೇಕಾರ ಸಮುದಾಯದ ಜನರಿಗೆ ಎಸ್‌ಐಆರ್ ಕುರಿತು ಜಾಗೃತಿ ಮೂಡಿಸಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...