HomeಅಂಕಣಗಳುKarnataka against SIRಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

- Advertisement -
- Advertisement -

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು.

ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ ವಿವಿಧ ಸಂಘಟನೆಗಳ ಸ್ಥಳೀಯ ನಾಯಕರು ಹಾಗೂ ಸಾರ್ವಜನಿಕರು ಸ್ವಾಗತಿಸಿದರು. ಬಳಿಕ ಯರಗಟ್ಟಿಯ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಜಾಗೃತಿ ಭಾಷಣ ನಡೆಯಿತು.

ಜಾಥಾ ನಾಯಕ ಯೂಸುಫ್ ಕನ್ನಿ ಮಾತನಾಡಿ, ಎಸ್‌ಐಆರ್ ಯಾವುದೇ ಒಂದು ಕೋಮಿಗೆ ಸೀಮಿತವಲ್ಲ. ಈಗಾಗಲೇ ಎಸ್‌ಐಆರ್ ನಡೆದಿರುವ ರಾಜ್ಯಗಳಲ್ಲಿ ಬರೋಬ್ಬರಿ 6.5 ಕೋಟಿ ಜನರನ್ನು ಮತದಾರರ ಪಟ್ಟಿಯಿಂದ ಹೊರಗಿಡಲಾಗಿದೆ. ಇದರಲ್ಲಿ ಒಂದು ಕೋಟಿ ಚಿಲ್ಲರೆ ಮಾತ್ರ ಮುಸ್ಲಿಮರು, ಉಳಿದವರು ಹಿಂದೂ, ಕ್ರೈಸ್ತ ಸೇರಿದಂತೆ ಇತರ ಧರ್ಮೀಯರು, ಅದರಲ್ಲೂ ದಲಿತರು, ಆದಿವಾಸಿಗಳು, ಕೂಲಿ ಕಾರ್ಮಿಕರು ಎಂದರು.‌

ಪಶ್ಚಿಮ ಬಂಗಾಳ ಸೇರಿದಂತೆ ಇತರ ರಾಜ್ಯಗಳಲ್ಲಿ ಈಗಾಗಲೇ ಎಸ್‌ಐಆರ್‌ ನಡೆಸಿರುವ ಅವಾಂತರಗಳನ್ನು ವಿವರಿಸಿದ ಯೂಸುಫ್ ಕನ್ನಿ, ಇದೇ ತಿಂಗಳ 30ರಿಂದ ಪ್ರಾರಂಭಗೊಳ್ಳುವ ಎಸ್‌ಐಆರ್‌ ಅನ್ನು ಸೂಕ್ತವಾಗಿ ಎದುರಿಸುವ ಕುರಿತು ಜನರಲ್ಲಿ ಜಾಗೃತಿ ಮೂಡಿಸಿದರು. ಸ್ಥಳೀಯ ನಾಯಕರು ಈ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗುವಂತೆ ಕರೆ ನೀಡಿದರು.

ಸಾಮಾಜಿಕ ಹೋರಾಟಗಾರ್ತಿ ಇಸಾಬೆಲ್ಲ ಝೇವಿಯರ್ ಮಾತನಾಡಿ, ಎಸ್‌ಐಅರ್‌ನಲ್ಲಿ ಹೆಣ್ಣು ಮಕ್ಕಳನ್ಮು ಹೆಚ್ಚಾಗಿ ಮತದಾರರ ಪಟ್ಟಿಯಿಂದ ಹೊರಗಿಡಲಾಗಿದೆ. ಹೆಣ್ಣು ಮಕ್ಕಳಿಗೆ ಮದುವೆಗಿಂತ ಮೊದಲು ಒಂದು ಹೆಸರಿದ್ದರೆ, ಮದುವೆ ಬಳಿಕ ಇನ್ನೊಂದು ಹೆಸರಿಡಲಾಗುತ್ತದೆ.‌ ಇಂತವರ ದಾಖಲೆಗಳಲ್ಲಿ ಒಂದು ಅಕ್ಷರ ತಪ್ಪು ಇರಬಾರದು ಎಂದರೆ ಹೇಗೆ ಎಂದು ಪ್ರಶ್ನಿಸಿದರು. ದಾಖಲೆ ಇಲ್ಲದವರನ್ನು ದೇಶದವರೇ ಅಲ್ಲಾ ಅಂತಿದ್ದಾರೆ. ಬಡ ಹೆಣ್ಣು ಮಕ್ಕಳು ಎಲ್ಲಿಂದ ದಾಖಲೆ‌ ತರಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಅವ್ಯವಸ್ಥೆ ವಿರುದ್ದ ಎಲ್ಲ ಜನ ಸಮುದಾಯ ಒಂದಾಗಿ ಧ್ವನಿ ಎತ್ತಬೇಕು. ತಮ್ಮ ಮತದಾನದ ಹಕ್ಕನ್ನು ಉಳಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ದಲಿತ ಸಂಘರ್ಷ ಸಮಿತಿ (ಡಿಎಸ್‌ಎಸ್) ಮುಖಂಡ ಭಾಸ್ಕರ್ ಹಿರೇಮೈತ್ರಿ ಮಾತನಾಡಿ, ಎಸ್‌ಐಅರ್ ವೇಳೆ 12 ದಾಖಲೆಗಳನ್ನು ಕೇಳ್ತಿದಾರೆ. ಅಂತಹ ಯಾವುದೇ ದಾಖಲೆಗಳು ನಮ್ಮ‌ ಜನರಲ್ಲಿ ಇಲ್ಲ. ಚುನಾವಣಾ ಆಯೋಗ ದಾಖಲೆ ಸಿದ್ದಪಡಿಸಲು ಅವಕಾಶವನ್ನೂ ಕೊಡ್ತಿಲ್ಲ ಎಂದರು.

ನಮ್ಮ ದೇಶದ ಸ್ವಾತಂತ್ರ್ಯ ಪಡೆಯುವ ಮುನ್ನ ಎಲ್ಲರಿಗೂ ಮತದಾನದ ಹಕ್ಕು ಇರಲ್ಲಿಲ್ಲ. ಕೆಲವರಿಗೆ ಮಾತ್ರ ಇತ್ತು. ಅಂಬೇಡ್ಕರ್ ಅವರ ಸಂವಿಧಾನ ಎಲ್ಲಾ ಜನರಿಗೆ ಮತದಾನದ ಹಕ್ಕು ಕೊಟ್ಟಿತು. ಅದನ್ನು ಎಸ್‌ಐಅರ್ ಮೂಲಕ ಕಿತ್ತುಕೊಳ್ಳಲು ಮುಂದಾಗಿದ್ದಾರೆ ಎಂದು ಹೇಳಿದರು.

ಎಸ್‌ಐಆರ್ ವಿಷಯದಲ್ಲಿ ಹಿಂದೂ, ಮುಸ್ಲಿಂ ಎನ್ನುವಂತಹ ಜಾತಿ, ಧರ್ಮಗಳ ಬೇಧವಿಲ್ಲ. ಇದು ಎಲ್ಲಿರಿಗೂ ಅಪಾಯಕಾರಿ. ತಳ ಮಟ್ಟದ ಜನರೇ ಇದರ ಮುಖ್ಯ ಗುರಿ ಎಂದರು.

ಯರಗಟ್ಟಿ ಬಳಿಕ ಬೆಳಗಾವಿ ನಗರದ ಅಂಬೇಡ್ಕರ್ ಪಾರ್ಕ್‌ನಲ್ಲಿ ಅಂಬೇಡ್ಕರ್ ಪ್ರತಿಮೆಗೆ ಜಾಥಾ ತಂಡ ಮತ್ತು ಸ್ಥಳೀಯ ನಾಯಕರು ಮಾಲಾರ್ಪಣೆ ಮಾಡಿದರು. ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರ ಹಾಕಿದರು.

ಬಳಿಕ ಅಂಬೇಡ್ಕರ್ ಪಾರ್ಕ್‌ನಿಂದ ರಾಣಿ ಚೆನ್ನಮ್ಮ ಸರ್ಕಲ್ ಮೂಲಕ ಕನ್ನಡ ಭವನಕ್ಕೆ ಕಾಲ್ನಡಿಗೆ ಜಾಥಾ ನಡೆಯಿತು. ಕನ್ನಡ ಭವನದಲ್ಲಿ ವಿವಿಧ ಧರ್ಮಗಳ ಮುಖಂಡರು, ಸಮುದಾಯ ನಾಯಕರ ನೇತೃತ್ವದಲ್ಲಿ ಜಾಗೃತಿ ಸಭೆ ನಡೆಯಿತು.

ಈ ಕಾರ್ಯಕ್ರಮದಲ್ಲಿ ಜಾಥಾ ತಂಡದ ಇಸಾಬೆಲ್ಲ ಝೆವಿಯರ್, ಯೂಸುಫ್ ಕನ್ನಿ, ಸರೋವರ್ ಬೆಂಕಿಕೆರೆ ಮತ್ತು ಆರಿಫುಲ್ಲಾ ಮಾತನಾಡಿದರು.

ಯೋಗಾನಂದ ಸ್ವಾಮೀಜಿ, ಸಾಜಿದ್ ಮೌಲಾನ, ಪಾಸ್ಟರ್ ಶಾಂತಪ್ಪ, ಸ್ಥಳೀಯ ಹೋರಾಟಗಾರರಾದ ಮಂದಾ, ಶಿವಲೀಲ, ಅಯ್ನ ಶೇಕ್, ಬಂಡಾಯ ಸಾಹಿತ್ಯದ ಡಾ. ಹಿಮ್ಮಡಿ, ಜನಶಕ್ತಿಯ ರವಿ, ಜಮಾಅತೆ ಇಸ್ಲಾಮಿ ಹಿಂದ್‌ನ ಮುಖಂಡ ಯಾಸಿನ್ ಮಕಾನದಾರ ಸೇರಿದಂತೆ ಹಲವರು ಹಾಜರಿದ್ದರು

ಸಂಜೆ ಜಾಥಾ ತಂಡ ಬಿಷಪ್ ಹೌಸ್‌ನಲ್ಲಿ ಬೆಳಗಾವಿ ಕ್ರೈಸ್ತ ಧರ್ಮ ಪ್ರಾಂತ್ಯದ ಧರ್ಮ ಗುರುಗಳಾದ ಫಾದರ್ ಡೆರೆಕ್ ಅವರನ್ನು ಭೇಟಿಯಾಗಿ ಎಸ್‌ಐಅರ್ ಕುರಿತು ಮಹತ್ವದ ಚರ್ಚೆ ನಡೆಸಿತು‌.

ನಂತರ ಸಾಯಿನಗರದ ನೇಕಾರ ಗಲ್ಲಿಯಲ್ಲಿ ಸ್ಥಳೀಯ ನೇಕಾರ ಸಮುದಾಯದ ಜನರಿಗೆ ಎಸ್‌ಐಆರ್ ಕುರಿತು ಜಾಗೃತಿ ಮೂಡಿಸಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...