HomeಅಂಕಣಗಳುKarnataka against SIRಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

- Advertisement -
- Advertisement -

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು.

ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ ವಿವಿಧ ಸಂಘಟನೆಗಳ ಸ್ಥಳೀಯ ನಾಯಕರು ಹಾಗೂ ಸಾರ್ವಜನಿಕರು ಸ್ವಾಗತಿಸಿದರು. ಬಳಿಕ ಯರಗಟ್ಟಿಯ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಜಾಗೃತಿ ಭಾಷಣ ನಡೆಯಿತು.

ಜಾಥಾ ನಾಯಕ ಯೂಸುಫ್ ಕನ್ನಿ ಮಾತನಾಡಿ, ಎಸ್‌ಐಆರ್ ಯಾವುದೇ ಒಂದು ಕೋಮಿಗೆ ಸೀಮಿತವಲ್ಲ. ಈಗಾಗಲೇ ಎಸ್‌ಐಆರ್ ನಡೆದಿರುವ ರಾಜ್ಯಗಳಲ್ಲಿ ಬರೋಬ್ಬರಿ 6.5 ಕೋಟಿ ಜನರನ್ನು ಮತದಾರರ ಪಟ್ಟಿಯಿಂದ ಹೊರಗಿಡಲಾಗಿದೆ. ಇದರಲ್ಲಿ ಒಂದು ಕೋಟಿ ಚಿಲ್ಲರೆ ಮಾತ್ರ ಮುಸ್ಲಿಮರು, ಉಳಿದವರು ಹಿಂದೂ, ಕ್ರೈಸ್ತ ಸೇರಿದಂತೆ ಇತರ ಧರ್ಮೀಯರು, ಅದರಲ್ಲೂ ದಲಿತರು, ಆದಿವಾಸಿಗಳು, ಕೂಲಿ ಕಾರ್ಮಿಕರು ಎಂದರು.‌

ಪಶ್ಚಿಮ ಬಂಗಾಳ ಸೇರಿದಂತೆ ಇತರ ರಾಜ್ಯಗಳಲ್ಲಿ ಈಗಾಗಲೇ ಎಸ್‌ಐಆರ್‌ ನಡೆಸಿರುವ ಅವಾಂತರಗಳನ್ನು ವಿವರಿಸಿದ ಯೂಸುಫ್ ಕನ್ನಿ, ಇದೇ ತಿಂಗಳ 30ರಿಂದ ಪ್ರಾರಂಭಗೊಳ್ಳುವ ಎಸ್‌ಐಆರ್‌ ಅನ್ನು ಸೂಕ್ತವಾಗಿ ಎದುರಿಸುವ ಕುರಿತು ಜನರಲ್ಲಿ ಜಾಗೃತಿ ಮೂಡಿಸಿದರು. ಸ್ಥಳೀಯ ನಾಯಕರು ಈ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗುವಂತೆ ಕರೆ ನೀಡಿದರು.

ಸಾಮಾಜಿಕ ಹೋರಾಟಗಾರ್ತಿ ಇಸಾಬೆಲ್ಲ ಝೇವಿಯರ್ ಮಾತನಾಡಿ, ಎಸ್‌ಐಅರ್‌ನಲ್ಲಿ ಹೆಣ್ಣು ಮಕ್ಕಳನ್ಮು ಹೆಚ್ಚಾಗಿ ಮತದಾರರ ಪಟ್ಟಿಯಿಂದ ಹೊರಗಿಡಲಾಗಿದೆ. ಹೆಣ್ಣು ಮಕ್ಕಳಿಗೆ ಮದುವೆಗಿಂತ ಮೊದಲು ಒಂದು ಹೆಸರಿದ್ದರೆ, ಮದುವೆ ಬಳಿಕ ಇನ್ನೊಂದು ಹೆಸರಿಡಲಾಗುತ್ತದೆ.‌ ಇಂತವರ ದಾಖಲೆಗಳಲ್ಲಿ ಒಂದು ಅಕ್ಷರ ತಪ್ಪು ಇರಬಾರದು ಎಂದರೆ ಹೇಗೆ ಎಂದು ಪ್ರಶ್ನಿಸಿದರು. ದಾಖಲೆ ಇಲ್ಲದವರನ್ನು ದೇಶದವರೇ ಅಲ್ಲಾ ಅಂತಿದ್ದಾರೆ. ಬಡ ಹೆಣ್ಣು ಮಕ್ಕಳು ಎಲ್ಲಿಂದ ದಾಖಲೆ‌ ತರಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಅವ್ಯವಸ್ಥೆ ವಿರುದ್ದ ಎಲ್ಲ ಜನ ಸಮುದಾಯ ಒಂದಾಗಿ ಧ್ವನಿ ಎತ್ತಬೇಕು. ತಮ್ಮ ಮತದಾನದ ಹಕ್ಕನ್ನು ಉಳಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ದಲಿತ ಸಂಘರ್ಷ ಸಮಿತಿ (ಡಿಎಸ್‌ಎಸ್) ಮುಖಂಡ ಭಾಸ್ಕರ್ ಹಿರೇಮೈತ್ರಿ ಮಾತನಾಡಿ, ಎಸ್‌ಐಅರ್ ವೇಳೆ 12 ದಾಖಲೆಗಳನ್ನು ಕೇಳ್ತಿದಾರೆ. ಅಂತಹ ಯಾವುದೇ ದಾಖಲೆಗಳು ನಮ್ಮ‌ ಜನರಲ್ಲಿ ಇಲ್ಲ. ಚುನಾವಣಾ ಆಯೋಗ ದಾಖಲೆ ಸಿದ್ದಪಡಿಸಲು ಅವಕಾಶವನ್ನೂ ಕೊಡ್ತಿಲ್ಲ ಎಂದರು.

ನಮ್ಮ ದೇಶದ ಸ್ವಾತಂತ್ರ್ಯ ಪಡೆಯುವ ಮುನ್ನ ಎಲ್ಲರಿಗೂ ಮತದಾನದ ಹಕ್ಕು ಇರಲ್ಲಿಲ್ಲ. ಕೆಲವರಿಗೆ ಮಾತ್ರ ಇತ್ತು. ಅಂಬೇಡ್ಕರ್ ಅವರ ಸಂವಿಧಾನ ಎಲ್ಲಾ ಜನರಿಗೆ ಮತದಾನದ ಹಕ್ಕು ಕೊಟ್ಟಿತು. ಅದನ್ನು ಎಸ್‌ಐಅರ್ ಮೂಲಕ ಕಿತ್ತುಕೊಳ್ಳಲು ಮುಂದಾಗಿದ್ದಾರೆ ಎಂದು ಹೇಳಿದರು.

ಎಸ್‌ಐಆರ್ ವಿಷಯದಲ್ಲಿ ಹಿಂದೂ, ಮುಸ್ಲಿಂ ಎನ್ನುವಂತಹ ಜಾತಿ, ಧರ್ಮಗಳ ಬೇಧವಿಲ್ಲ. ಇದು ಎಲ್ಲಿರಿಗೂ ಅಪಾಯಕಾರಿ. ತಳ ಮಟ್ಟದ ಜನರೇ ಇದರ ಮುಖ್ಯ ಗುರಿ ಎಂದರು.

ಯರಗಟ್ಟಿ ಬಳಿಕ ಬೆಳಗಾವಿ ನಗರದ ಅಂಬೇಡ್ಕರ್ ಪಾರ್ಕ್‌ನಲ್ಲಿ ಅಂಬೇಡ್ಕರ್ ಪ್ರತಿಮೆಗೆ ಜಾಥಾ ತಂಡ ಮತ್ತು ಸ್ಥಳೀಯ ನಾಯಕರು ಮಾಲಾರ್ಪಣೆ ಮಾಡಿದರು. ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರ ಹಾಕಿದರು.

ಬಳಿಕ ಅಂಬೇಡ್ಕರ್ ಪಾರ್ಕ್‌ನಿಂದ ರಾಣಿ ಚೆನ್ನಮ್ಮ ಸರ್ಕಲ್ ಮೂಲಕ ಕನ್ನಡ ಭವನಕ್ಕೆ ಕಾಲ್ನಡಿಗೆ ಜಾಥಾ ನಡೆಯಿತು. ಕನ್ನಡ ಭವನದಲ್ಲಿ ವಿವಿಧ ಧರ್ಮಗಳ ಮುಖಂಡರು, ಸಮುದಾಯ ನಾಯಕರ ನೇತೃತ್ವದಲ್ಲಿ ಜಾಗೃತಿ ಸಭೆ ನಡೆಯಿತು.

ಈ ಕಾರ್ಯಕ್ರಮದಲ್ಲಿ ಜಾಥಾ ತಂಡದ ಇಸಾಬೆಲ್ಲ ಝೆವಿಯರ್, ಯೂಸುಫ್ ಕನ್ನಿ, ಸರೋವರ್ ಬೆಂಕಿಕೆರೆ ಮತ್ತು ಆರಿಫುಲ್ಲಾ ಮಾತನಾಡಿದರು.

ಯೋಗಾನಂದ ಸ್ವಾಮೀಜಿ, ಸಾಜಿದ್ ಮೌಲಾನ, ಪಾಸ್ಟರ್ ಶಾಂತಪ್ಪ, ಸ್ಥಳೀಯ ಹೋರಾಟಗಾರರಾದ ಮಂದಾ, ಶಿವಲೀಲ, ಅಯ್ನ ಶೇಕ್, ಬಂಡಾಯ ಸಾಹಿತ್ಯದ ಡಾ. ಹಿಮ್ಮಡಿ, ಜನಶಕ್ತಿಯ ರವಿ, ಜಮಾಅತೆ ಇಸ್ಲಾಮಿ ಹಿಂದ್‌ನ ಮುಖಂಡ ಯಾಸಿನ್ ಮಕಾನದಾರ ಸೇರಿದಂತೆ ಹಲವರು ಹಾಜರಿದ್ದರು

ಸಂಜೆ ಜಾಥಾ ತಂಡ ಬಿಷಪ್ ಹೌಸ್‌ನಲ್ಲಿ ಬೆಳಗಾವಿ ಕ್ರೈಸ್ತ ಧರ್ಮ ಪ್ರಾಂತ್ಯದ ಧರ್ಮ ಗುರುಗಳಾದ ಫಾದರ್ ಡೆರೆಕ್ ಅವರನ್ನು ಭೇಟಿಯಾಗಿ ಎಸ್‌ಐಅರ್ ಕುರಿತು ಮಹತ್ವದ ಚರ್ಚೆ ನಡೆಸಿತು‌.

ನಂತರ ಸಾಯಿನಗರದ ನೇಕಾರ ಗಲ್ಲಿಯಲ್ಲಿ ಸ್ಥಳೀಯ ನೇಕಾರ ಸಮುದಾಯದ ಜನರಿಗೆ ಎಸ್‌ಐಆರ್ ಕುರಿತು ಜಾಗೃತಿ ಮೂಡಿಸಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...