HomeಅಂಕಣಗಳುKarnataka against SIRಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

- Advertisement -
- Advertisement -

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು ಜಾತ್ಯತೀತ ಪಕ್ಷಗಳ ಮುಖಂಡರ ಬಹಿರಂಗ ಸಭೆ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಹಿರಿಯ ಪತ್ರಕರ್ತ ಸನತ್ ಕುಮಾರ್ ಬೆಳಗಲಿ, ಎಸ್‌ಐಆರ್ ವಿಷಯದಲ್ಲಿ ಸುಪ್ರೀಂ ಕೋರ್ಟ್‌ಲ್ಲೂ ನಮಗೆ ನ್ಯಾಯ ಸಿಕ್ಕಿಲ್ಲ. ಸುಪ್ರೀಂ ಕೋರ್ಟ್‌ನಿಂದ ಇತ್ತೀಚೆಗೆ ಬರುತ್ತಿರುವ ತೀರ್ಪುಗಳು ಆತಂಕ ಹುಟ್ಟಿಸುತ್ತಿವೆ ಎಂದರು.

ಎಸ್‌ಐಆರ್‌ನಲ್ಲಿ ಮೊದಲು ಮತದಾರರ ಪಟ್ಟಿಯಿಂದ ತೆಗಿಯುತ್ತಾರೆ, ಆಮೇಲೆ ನಾಗರಿಕರಲ್ಲ ಎನ್ನುತ್ತಾರೆ. ಈಗಾಗಲೇ ಪ್ರಾದೇಶಿಕ ಪಕ್ಷಗಳನ್ನು ಒಡೆದು ಅಧಿಕಾರಕ್ಕೆ ಬರುತ್ತಿದ್ದಾರೆ. ಈ ಅಪಾಯವನ್ನು ಎದುರಿಸಲು ಈಗ ಎದ್ದು ನಿಲ್ಲದಿದ್ದರೆ ಮುಂದೆ ಭಯಾನಕ ದಿನಗಳು ಬರಲಿವೆ ಎಂದು ಎಚ್ಚರಿಸಿದರು.

ಜನರು ವಿವಿಧ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ದ ಹೋರಾಟಗಳು ಮಾಡಬಾರದು ಎಂದು ಜಾತಿ ಧರ್ಮಗಳ ಮಧ್ಯೆ ಜಗಳ ತಂದಿಡುತ್ತಿದ್ದಾರೆ. ಬಿಜೆಪಿ ಆರ್‌ಎಸ್‌ಎಸ್ ಶಕ್ತಿಗಳ ವಿರುದ್ದ ನಾವು ಹೋರಾಡಬೇಕು. ಇಲ್ಲದಿದ್ದರೆ ಸಂವಿಧಾನ ನಾಶವಾಗಲಿದೆ, ಮನುಸ್ಮೃತಿ ಜಾರಿಗೆ ಬರಲಿದೆ ಎಂದರು.

ಹೋರಾಟಗಾರ ಬಿಎಸ್. ಸೊಪ್ಪಿನ ಮಾತನಾಡಿ, ಪ್ರಸ್ತುತ ದೇಶದಲ್ಲಿ ನಡೆಯುತ್ತಿರುವ ಚಟುವಟಿಕೆ, ರಾಜಕೀಯ ವಲಯದ ಬೆಳವಣಿಗೆಗಳು ನೋಡುವಾಗ ಭಯವಾಗ್ತಿದೆ. ಇದುವರೆಗೆ ನಡೆದ ಜನ ಪ್ರತಿನಿಧಿಗಳ ಅಯ್ಕೆ ಮುಂದೆ ನಡೆಯುವುದಿಲ್ಲ ಎಂಬ ಆತಂಕ ಶುರುವಾಗಿದೆ. ಸಾಂವಿಧಾನಿಕ ಸಂಸ್ಥೆಗಳು ಆಡಳಿತ ಪಕ್ಷದ ಕೈಗೊಂಬೆಯಾಗಿವೆ. ಇದರ ವಿರುದ್ದ ನಾವು ಎಚ್ಚೆತುಕೊಳ್ಳಬೇಕಾಗಿದೆ ಎಂದು ಹೇಳಿದರು.

ಈ ಹಿಂದೆ ಸಂವಿಧಾನ, ಸರ್ಕಾರ ನಾವು ಈ ದೇಶದವರು ಎಂದು ಹೇಳುತಿತ್ತು. ಈಗ ನಾವು ದಾಖಲೆ ಕೊಟ್ಟು ಸಾಬೀತುಪಡಿಸಬೇಕಾಗಿದೆ. ನಮ್ಮಲ್ಲಿರುವ ಆಧಾರ್ ಕಾರ್ಡ್, ರೇಷನ್ ಕಾರ್ಡ್‌ ಎಸ್‌ಐಆರ್‌ಗೆ ಅರ್ಹ ದಾಖಲೆಯಲ್ಲ ಎಂದಿದ್ದಾರೆ. ಹೀಗಿರುವಾಗ ನಾವು ಎಂತಹ ಸಂಕಷ್ಟದ ಪರಿಸ್ಥಿಯಿಯಲ್ಲಿದ್ದೇವೆ ಎಂದು ಕಳವಳ ವ್ಯಕ್ತಪಡಿಸಿದರು.

ಈಗಾಗಲೇ 13 ರಾಜ್ಯಗಳಲ್ಲಿ 6.5. ಕೋಟಿ ಜನರನ್ನು ಮತದಾರರ ಪಟ್ಟಿಯಿಂದ ಹೊರಗಿಟ್ಟಿದ್ದಾರೆ‌. ಇನ್ನೂ 6 ಕೋಟಿ ಜನರನ್ನು ಹೊರಗಿಡುತ್ತಾರೆ. ಹಾಗಾದರೆ, ಇವರೆಲ್ಲ ಪಾಕಿಸ್ತಾನಿಗಳ? ಎಂದು ಪ್ರಶ್ನಿಸಿದರು. ಸರ್ಕಾರದ ಒಳ ಉದ್ದೇಶ ಬಡವರು, ದಲಿತರು, ಕಾರ್ಮಿಕರನ್ನು ಮತದಾರರ ಪಟ್ಟಿಯಿಂದ ಹೊರ ಹಾಕುವುದು. ಏಕೆಂದರೆ ಇವರಿಗೆ ಅವರು ಮತ ಹಾಕುವುದಿಲ್ಲ ಎಂದರು.

ದಲಿತ ಸಂಘಟನೆಗಳ ಒಕ್ಕೂಟದ ಮುಖಂಡ ಗುರುನಾಥ್ ಉಳ್ಳಿಕಾಶಿ ಮಾತನಾಡಿ, ಎಸ್‌ಐಆರ್ ವೇಳೆ 12 ದಾಖಲೆಗಳನ್ನು ತೋರಿಸಿ ಎಂದು ಚುನಾವಣಾ ಆಯೋಗ ಹೇಳುತ್ತಿದೆ. ಆದರೆ, ದಾಖಲೆ ಕೊಡಬೇಕಾದವರು ನಾವಲ್ಲ, ಈ ಷಡ್ಯಂತ್ರ್ಯ ರೂಪಿಸಿದರು. ಅಂದರೆ ಆರ್‌ಎಸ್‌ಎಸ್‌, ಸಂಘಪರಿವಾರದವರು. ಏಕೆಂದರೆ, ಅವರ ಸಂಘಟನೆ ಇನ್ನೂ ನೋಂದಣಿಯೇ ಆಗಿಲ್ಲ. ಅವರು ಮೊದಲು ದಾಖಲೆಗಳನ್ನು ಕೊಡಲಿ, ಬಳಿಕ ನಾವೂ ಕೊಡುತ್ತೇವೆ ಎಂದು ಹೇಳಿದರು.

ಲಡಾಯಿ ಪ್ರಕಾಶನದ ಬಸವರಾಜ್ ಸೂಳೆಭಾವಿ ಮಾತನಾಡಿ, ಎಸ್ಐಅರ್ ಮೂಲಕ ಈ ದೇಶದ ಜನರ ನಾಗರಿಕತ್ವ ಪರಿಶೀಲಿಸಲು ಹೊರಟವರಿಗೆ ನಮ್ಮನೊಂದು ಸವಾಲಿದೆ. ದೆಹಲಿಯ ಕೆಂಪುಕೋಟೆ ಮೇಲೆ ಸ್ವಾತಂತ್ರ್ಯಕ್ಕಾಗಿ ಪ್ರಾಣತ್ಯಾಗ ಮಾಡಿದವರ ಹೆಸರಿದೆ. ಅದರಲ್ಲಿ ಒಬ್ಬರೇ ಒಬ್ಬ ಆರ್‌ಎಸ್‌ಎಸ್‌ ಸಂಘ ಪರಿವಾರದವರ ಹೆಸರು ತೋರಿಸಲಿ ಎಂದರು. ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಸಂಘಪರಿವಾರದವರು ಬ್ರಿಟಿಷರ ಜೊತೆ ಕೈಜೋಡಿಸಿದ್ದರು ಎಂದು ಆರೋಪಿಸಿದರು.

ಎಸ್‌ಐಆರ್ ಮೂಲಕ ನೀವು ಕಿತ್ತುಕೊಳ್ಳಲು ಮುಂದಾಗಿರುವ ನಮ್ಮ ನಾಗರಿಕತ್ವ ಉಳಿಸಿಕೊಳ್ಳಲು ನಾವು ಹೋರಾಡುತ್ತೇವೆ, ನಮ್ಮ ಹಕ್ಕುಗಳನ್ನು ಉಳಿಸುತ್ತೇವೆ. ಎಸ್‌ಐಅರ್ ಮೂಲಕ ನೀವು ಈ ದೇಶದಲ್ಲಿ ಕ್ರಾಂತಿಗೆ ನಾಂದಿ ಹಾಡುತಿದ್ದೀರಿ, ನಾವು ಆ ಕ್ರಾಂತಿಗೆ ಸಿದ್ದರಾಗುತ್ತೇವೆ ಎಂದರು.

ಅಮ್ಮಾರೂಡ ಗುರುಪೀಠದ ಶ್ರೀ ರಾಘವೇಂದ್ರ ಸ್ವಾಮೀಜಿ ಮಾತನಾಡಿ, ನಾವು ದಲಿತರು, ಅಲ್ಪಸಂಖ್ಯಾತರು ಸೇರಿದಂತೆ ಎಲ್ಲಾ ಹಿಂದುಳಿದ ಸಮುದಾಯದವರು ಒಗ್ಗಟ್ಟಾದರೆ ಯಾವುದೇ ಎಸ್ಐಆರ್ ನಮ್ಮನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ನಮ್ಮ‌ ಪೂರ್ವಜರು ತ್ಯಾಗಗಳನ್ನು ಮಾಡಿ ನಮಗೆ ಸ್ವಾತಂತ್ರ್ಯ ಕೊಡಿಸಿದರು. ಬಾಬಾ ಸಾಹೇಬರು ಸಂವಿಧಾನದ ಮೂಲಕ ನಮಗೆ ಹಕ್ಕುಗಳನ್ನು ನೀಡಿದರು. ಅದನ್ನು ಕೇಳುವ ಅವಕಾಶ ನಮಗಿದೆ ಎಂದರು.

ನಮ್ಮ ಸಮಾಜದಲ್ಲಿ ತಾರತಮ್ಯಗಳು ಮುಂದುವರಿದಿವೆ. ಮುಂದೆ ಇದ್ದವರು ಇನ್ನೂ ಮುಂದುವರಿಯುತ್ತಿದ್ದಾರೆ. ಹಿಂದುಳಿದವರು ಹಿಂದೆಯೇ ಇದ್ದೇವೆ. ಎಲ್ಲರಿಗೂ ಸಮಾನ ಅವಕಾಶಗಳು ಸಿಗಬೇಕು. ಅದಕ್ಕಾಗಿ ನಾವೆಲ್ಲ‌ ಒಗ್ಗಟ್ಟಿನಿಂದ ಹೋರಾಡಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ ಮುನ್ನಡೆಸುತ್ತಿರುವ ಯೂಸುಫ್ ಕನ್ನಿ, ಇಸಾಬೆಲ್ಲ ಝೇವಿಯರ್, ಸಂವಿಧಾನ ಸುರಕ್ಷಾ ಸಮಿತಿಯ ಸಂಚಾಲಕ ಅಶ್ರಫ್ ಅಲೀ ಮಾತನಾಡಿದರು.

ವಿವಿಧ ಜನ ಸಂಘಟನೆಗಳು ಮತ್ತು ಜಾತ್ಯತೀತ ಪಕ್ಷಗಳ ಮುಖಂಡರು ಮತ್ತು ಸಾರ್ವಜನಿಕರು ಇದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...