HomeಅಂಕಣಗಳುKarnataka against SIRಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

- Advertisement -
- Advertisement -

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು ಜಾತ್ಯತೀತ ಪಕ್ಷಗಳ ಮುಖಂಡರ ಬಹಿರಂಗ ಸಭೆ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಹಿರಿಯ ಪತ್ರಕರ್ತ ಸನತ್ ಕುಮಾರ್ ಬೆಳಗಲಿ, ಎಸ್‌ಐಆರ್ ವಿಷಯದಲ್ಲಿ ಸುಪ್ರೀಂ ಕೋರ್ಟ್‌ಲ್ಲೂ ನಮಗೆ ನ್ಯಾಯ ಸಿಕ್ಕಿಲ್ಲ. ಸುಪ್ರೀಂ ಕೋರ್ಟ್‌ನಿಂದ ಇತ್ತೀಚೆಗೆ ಬರುತ್ತಿರುವ ತೀರ್ಪುಗಳು ಆತಂಕ ಹುಟ್ಟಿಸುತ್ತಿವೆ ಎಂದರು.

ಎಸ್‌ಐಆರ್‌ನಲ್ಲಿ ಮೊದಲು ಮತದಾರರ ಪಟ್ಟಿಯಿಂದ ತೆಗಿಯುತ್ತಾರೆ, ಆಮೇಲೆ ನಾಗರಿಕರಲ್ಲ ಎನ್ನುತ್ತಾರೆ. ಈಗಾಗಲೇ ಪ್ರಾದೇಶಿಕ ಪಕ್ಷಗಳನ್ನು ಒಡೆದು ಅಧಿಕಾರಕ್ಕೆ ಬರುತ್ತಿದ್ದಾರೆ. ಈ ಅಪಾಯವನ್ನು ಎದುರಿಸಲು ಈಗ ಎದ್ದು ನಿಲ್ಲದಿದ್ದರೆ ಮುಂದೆ ಭಯಾನಕ ದಿನಗಳು ಬರಲಿವೆ ಎಂದು ಎಚ್ಚರಿಸಿದರು.

ಜನರು ವಿವಿಧ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ದ ಹೋರಾಟಗಳು ಮಾಡಬಾರದು ಎಂದು ಜಾತಿ ಧರ್ಮಗಳ ಮಧ್ಯೆ ಜಗಳ ತಂದಿಡುತ್ತಿದ್ದಾರೆ. ಬಿಜೆಪಿ ಆರ್‌ಎಸ್‌ಎಸ್ ಶಕ್ತಿಗಳ ವಿರುದ್ದ ನಾವು ಹೋರಾಡಬೇಕು. ಇಲ್ಲದಿದ್ದರೆ ಸಂವಿಧಾನ ನಾಶವಾಗಲಿದೆ, ಮನುಸ್ಮೃತಿ ಜಾರಿಗೆ ಬರಲಿದೆ ಎಂದರು.

ಹೋರಾಟಗಾರ ಬಿಎಸ್. ಸೊಪ್ಪಿನ ಮಾತನಾಡಿ, ಪ್ರಸ್ತುತ ದೇಶದಲ್ಲಿ ನಡೆಯುತ್ತಿರುವ ಚಟುವಟಿಕೆ, ರಾಜಕೀಯ ವಲಯದ ಬೆಳವಣಿಗೆಗಳು ನೋಡುವಾಗ ಭಯವಾಗ್ತಿದೆ. ಇದುವರೆಗೆ ನಡೆದ ಜನ ಪ್ರತಿನಿಧಿಗಳ ಅಯ್ಕೆ ಮುಂದೆ ನಡೆಯುವುದಿಲ್ಲ ಎಂಬ ಆತಂಕ ಶುರುವಾಗಿದೆ. ಸಾಂವಿಧಾನಿಕ ಸಂಸ್ಥೆಗಳು ಆಡಳಿತ ಪಕ್ಷದ ಕೈಗೊಂಬೆಯಾಗಿವೆ. ಇದರ ವಿರುದ್ದ ನಾವು ಎಚ್ಚೆತುಕೊಳ್ಳಬೇಕಾಗಿದೆ ಎಂದು ಹೇಳಿದರು.

ಈ ಹಿಂದೆ ಸಂವಿಧಾನ, ಸರ್ಕಾರ ನಾವು ಈ ದೇಶದವರು ಎಂದು ಹೇಳುತಿತ್ತು. ಈಗ ನಾವು ದಾಖಲೆ ಕೊಟ್ಟು ಸಾಬೀತುಪಡಿಸಬೇಕಾಗಿದೆ. ನಮ್ಮಲ್ಲಿರುವ ಆಧಾರ್ ಕಾರ್ಡ್, ರೇಷನ್ ಕಾರ್ಡ್‌ ಎಸ್‌ಐಆರ್‌ಗೆ ಅರ್ಹ ದಾಖಲೆಯಲ್ಲ ಎಂದಿದ್ದಾರೆ. ಹೀಗಿರುವಾಗ ನಾವು ಎಂತಹ ಸಂಕಷ್ಟದ ಪರಿಸ್ಥಿಯಿಯಲ್ಲಿದ್ದೇವೆ ಎಂದು ಕಳವಳ ವ್ಯಕ್ತಪಡಿಸಿದರು.

ಈಗಾಗಲೇ 13 ರಾಜ್ಯಗಳಲ್ಲಿ 6.5. ಕೋಟಿ ಜನರನ್ನು ಮತದಾರರ ಪಟ್ಟಿಯಿಂದ ಹೊರಗಿಟ್ಟಿದ್ದಾರೆ‌. ಇನ್ನೂ 6 ಕೋಟಿ ಜನರನ್ನು ಹೊರಗಿಡುತ್ತಾರೆ. ಹಾಗಾದರೆ, ಇವರೆಲ್ಲ ಪಾಕಿಸ್ತಾನಿಗಳ? ಎಂದು ಪ್ರಶ್ನಿಸಿದರು. ಸರ್ಕಾರದ ಒಳ ಉದ್ದೇಶ ಬಡವರು, ದಲಿತರು, ಕಾರ್ಮಿಕರನ್ನು ಮತದಾರರ ಪಟ್ಟಿಯಿಂದ ಹೊರ ಹಾಕುವುದು. ಏಕೆಂದರೆ ಇವರಿಗೆ ಅವರು ಮತ ಹಾಕುವುದಿಲ್ಲ ಎಂದರು.

ದಲಿತ ಸಂಘಟನೆಗಳ ಒಕ್ಕೂಟದ ಮುಖಂಡ ಗುರುನಾಥ್ ಉಳ್ಳಿಕಾಶಿ ಮಾತನಾಡಿ, ಎಸ್‌ಐಆರ್ ವೇಳೆ 12 ದಾಖಲೆಗಳನ್ನು ತೋರಿಸಿ ಎಂದು ಚುನಾವಣಾ ಆಯೋಗ ಹೇಳುತ್ತಿದೆ. ಆದರೆ, ದಾಖಲೆ ಕೊಡಬೇಕಾದವರು ನಾವಲ್ಲ, ಈ ಷಡ್ಯಂತ್ರ್ಯ ರೂಪಿಸಿದರು. ಅಂದರೆ ಆರ್‌ಎಸ್‌ಎಸ್‌, ಸಂಘಪರಿವಾರದವರು. ಏಕೆಂದರೆ, ಅವರ ಸಂಘಟನೆ ಇನ್ನೂ ನೋಂದಣಿಯೇ ಆಗಿಲ್ಲ. ಅವರು ಮೊದಲು ದಾಖಲೆಗಳನ್ನು ಕೊಡಲಿ, ಬಳಿಕ ನಾವೂ ಕೊಡುತ್ತೇವೆ ಎಂದು ಹೇಳಿದರು.

ಲಡಾಯಿ ಪ್ರಕಾಶನದ ಬಸವರಾಜ್ ಸೂಳೆಭಾವಿ ಮಾತನಾಡಿ, ಎಸ್ಐಅರ್ ಮೂಲಕ ಈ ದೇಶದ ಜನರ ನಾಗರಿಕತ್ವ ಪರಿಶೀಲಿಸಲು ಹೊರಟವರಿಗೆ ನಮ್ಮನೊಂದು ಸವಾಲಿದೆ. ದೆಹಲಿಯ ಕೆಂಪುಕೋಟೆ ಮೇಲೆ ಸ್ವಾತಂತ್ರ್ಯಕ್ಕಾಗಿ ಪ್ರಾಣತ್ಯಾಗ ಮಾಡಿದವರ ಹೆಸರಿದೆ. ಅದರಲ್ಲಿ ಒಬ್ಬರೇ ಒಬ್ಬ ಆರ್‌ಎಸ್‌ಎಸ್‌ ಸಂಘ ಪರಿವಾರದವರ ಹೆಸರು ತೋರಿಸಲಿ ಎಂದರು. ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಸಂಘಪರಿವಾರದವರು ಬ್ರಿಟಿಷರ ಜೊತೆ ಕೈಜೋಡಿಸಿದ್ದರು ಎಂದು ಆರೋಪಿಸಿದರು.

ಎಸ್‌ಐಆರ್ ಮೂಲಕ ನೀವು ಕಿತ್ತುಕೊಳ್ಳಲು ಮುಂದಾಗಿರುವ ನಮ್ಮ ನಾಗರಿಕತ್ವ ಉಳಿಸಿಕೊಳ್ಳಲು ನಾವು ಹೋರಾಡುತ್ತೇವೆ, ನಮ್ಮ ಹಕ್ಕುಗಳನ್ನು ಉಳಿಸುತ್ತೇವೆ. ಎಸ್‌ಐಅರ್ ಮೂಲಕ ನೀವು ಈ ದೇಶದಲ್ಲಿ ಕ್ರಾಂತಿಗೆ ನಾಂದಿ ಹಾಡುತಿದ್ದೀರಿ, ನಾವು ಆ ಕ್ರಾಂತಿಗೆ ಸಿದ್ದರಾಗುತ್ತೇವೆ ಎಂದರು.

ಅಮ್ಮಾರೂಡ ಗುರುಪೀಠದ ಶ್ರೀ ರಾಘವೇಂದ್ರ ಸ್ವಾಮೀಜಿ ಮಾತನಾಡಿ, ನಾವು ದಲಿತರು, ಅಲ್ಪಸಂಖ್ಯಾತರು ಸೇರಿದಂತೆ ಎಲ್ಲಾ ಹಿಂದುಳಿದ ಸಮುದಾಯದವರು ಒಗ್ಗಟ್ಟಾದರೆ ಯಾವುದೇ ಎಸ್ಐಆರ್ ನಮ್ಮನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ನಮ್ಮ‌ ಪೂರ್ವಜರು ತ್ಯಾಗಗಳನ್ನು ಮಾಡಿ ನಮಗೆ ಸ್ವಾತಂತ್ರ್ಯ ಕೊಡಿಸಿದರು. ಬಾಬಾ ಸಾಹೇಬರು ಸಂವಿಧಾನದ ಮೂಲಕ ನಮಗೆ ಹಕ್ಕುಗಳನ್ನು ನೀಡಿದರು. ಅದನ್ನು ಕೇಳುವ ಅವಕಾಶ ನಮಗಿದೆ ಎಂದರು.

ನಮ್ಮ ಸಮಾಜದಲ್ಲಿ ತಾರತಮ್ಯಗಳು ಮುಂದುವರಿದಿವೆ. ಮುಂದೆ ಇದ್ದವರು ಇನ್ನೂ ಮುಂದುವರಿಯುತ್ತಿದ್ದಾರೆ. ಹಿಂದುಳಿದವರು ಹಿಂದೆಯೇ ಇದ್ದೇವೆ. ಎಲ್ಲರಿಗೂ ಸಮಾನ ಅವಕಾಶಗಳು ಸಿಗಬೇಕು. ಅದಕ್ಕಾಗಿ ನಾವೆಲ್ಲ‌ ಒಗ್ಗಟ್ಟಿನಿಂದ ಹೋರಾಡಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ ಮುನ್ನಡೆಸುತ್ತಿರುವ ಯೂಸುಫ್ ಕನ್ನಿ, ಇಸಾಬೆಲ್ಲ ಝೇವಿಯರ್, ಸಂವಿಧಾನ ಸುರಕ್ಷಾ ಸಮಿತಿಯ ಸಂಚಾಲಕ ಅಶ್ರಫ್ ಅಲೀ ಮಾತನಾಡಿದರು.

ವಿವಿಧ ಜನ ಸಂಘಟನೆಗಳು ಮತ್ತು ಜಾತ್ಯತೀತ ಪಕ್ಷಗಳ ಮುಖಂಡರು ಮತ್ತು ಸಾರ್ವಜನಿಕರು ಇದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...