HomeಅಂಕಣಗಳುKarnataka against SIRಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

- Advertisement -
- Advertisement -

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು ಜಾತ್ಯತೀತ ಪಕ್ಷಗಳ ಮುಖಂಡರ ಬಹಿರಂಗ ಸಭೆ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಹಿರಿಯ ಪತ್ರಕರ್ತ ಸನತ್ ಕುಮಾರ್ ಬೆಳಗಲಿ, ಎಸ್‌ಐಆರ್ ವಿಷಯದಲ್ಲಿ ಸುಪ್ರೀಂ ಕೋರ್ಟ್‌ಲ್ಲೂ ನಮಗೆ ನ್ಯಾಯ ಸಿಕ್ಕಿಲ್ಲ. ಸುಪ್ರೀಂ ಕೋರ್ಟ್‌ನಿಂದ ಇತ್ತೀಚೆಗೆ ಬರುತ್ತಿರುವ ತೀರ್ಪುಗಳು ಆತಂಕ ಹುಟ್ಟಿಸುತ್ತಿವೆ ಎಂದರು.

ಎಸ್‌ಐಆರ್‌ನಲ್ಲಿ ಮೊದಲು ಮತದಾರರ ಪಟ್ಟಿಯಿಂದ ತೆಗಿಯುತ್ತಾರೆ, ಆಮೇಲೆ ನಾಗರಿಕರಲ್ಲ ಎನ್ನುತ್ತಾರೆ. ಈಗಾಗಲೇ ಪ್ರಾದೇಶಿಕ ಪಕ್ಷಗಳನ್ನು ಒಡೆದು ಅಧಿಕಾರಕ್ಕೆ ಬರುತ್ತಿದ್ದಾರೆ. ಈ ಅಪಾಯವನ್ನು ಎದುರಿಸಲು ಈಗ ಎದ್ದು ನಿಲ್ಲದಿದ್ದರೆ ಮುಂದೆ ಭಯಾನಕ ದಿನಗಳು ಬರಲಿವೆ ಎಂದು ಎಚ್ಚರಿಸಿದರು.

ಜನರು ವಿವಿಧ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ದ ಹೋರಾಟಗಳು ಮಾಡಬಾರದು ಎಂದು ಜಾತಿ ಧರ್ಮಗಳ ಮಧ್ಯೆ ಜಗಳ ತಂದಿಡುತ್ತಿದ್ದಾರೆ. ಬಿಜೆಪಿ ಆರ್‌ಎಸ್‌ಎಸ್ ಶಕ್ತಿಗಳ ವಿರುದ್ದ ನಾವು ಹೋರಾಡಬೇಕು. ಇಲ್ಲದಿದ್ದರೆ ಸಂವಿಧಾನ ನಾಶವಾಗಲಿದೆ, ಮನುಸ್ಮೃತಿ ಜಾರಿಗೆ ಬರಲಿದೆ ಎಂದರು.

ಹೋರಾಟಗಾರ ಬಿಎಸ್. ಸೊಪ್ಪಿನ ಮಾತನಾಡಿ, ಪ್ರಸ್ತುತ ದೇಶದಲ್ಲಿ ನಡೆಯುತ್ತಿರುವ ಚಟುವಟಿಕೆ, ರಾಜಕೀಯ ವಲಯದ ಬೆಳವಣಿಗೆಗಳು ನೋಡುವಾಗ ಭಯವಾಗ್ತಿದೆ. ಇದುವರೆಗೆ ನಡೆದ ಜನ ಪ್ರತಿನಿಧಿಗಳ ಅಯ್ಕೆ ಮುಂದೆ ನಡೆಯುವುದಿಲ್ಲ ಎಂಬ ಆತಂಕ ಶುರುವಾಗಿದೆ. ಸಾಂವಿಧಾನಿಕ ಸಂಸ್ಥೆಗಳು ಆಡಳಿತ ಪಕ್ಷದ ಕೈಗೊಂಬೆಯಾಗಿವೆ. ಇದರ ವಿರುದ್ದ ನಾವು ಎಚ್ಚೆತುಕೊಳ್ಳಬೇಕಾಗಿದೆ ಎಂದು ಹೇಳಿದರು.

ಈ ಹಿಂದೆ ಸಂವಿಧಾನ, ಸರ್ಕಾರ ನಾವು ಈ ದೇಶದವರು ಎಂದು ಹೇಳುತಿತ್ತು. ಈಗ ನಾವು ದಾಖಲೆ ಕೊಟ್ಟು ಸಾಬೀತುಪಡಿಸಬೇಕಾಗಿದೆ. ನಮ್ಮಲ್ಲಿರುವ ಆಧಾರ್ ಕಾರ್ಡ್, ರೇಷನ್ ಕಾರ್ಡ್‌ ಎಸ್‌ಐಆರ್‌ಗೆ ಅರ್ಹ ದಾಖಲೆಯಲ್ಲ ಎಂದಿದ್ದಾರೆ. ಹೀಗಿರುವಾಗ ನಾವು ಎಂತಹ ಸಂಕಷ್ಟದ ಪರಿಸ್ಥಿಯಿಯಲ್ಲಿದ್ದೇವೆ ಎಂದು ಕಳವಳ ವ್ಯಕ್ತಪಡಿಸಿದರು.

ಈಗಾಗಲೇ 13 ರಾಜ್ಯಗಳಲ್ಲಿ 6.5. ಕೋಟಿ ಜನರನ್ನು ಮತದಾರರ ಪಟ್ಟಿಯಿಂದ ಹೊರಗಿಟ್ಟಿದ್ದಾರೆ‌. ಇನ್ನೂ 6 ಕೋಟಿ ಜನರನ್ನು ಹೊರಗಿಡುತ್ತಾರೆ. ಹಾಗಾದರೆ, ಇವರೆಲ್ಲ ಪಾಕಿಸ್ತಾನಿಗಳ? ಎಂದು ಪ್ರಶ್ನಿಸಿದರು. ಸರ್ಕಾರದ ಒಳ ಉದ್ದೇಶ ಬಡವರು, ದಲಿತರು, ಕಾರ್ಮಿಕರನ್ನು ಮತದಾರರ ಪಟ್ಟಿಯಿಂದ ಹೊರ ಹಾಕುವುದು. ಏಕೆಂದರೆ ಇವರಿಗೆ ಅವರು ಮತ ಹಾಕುವುದಿಲ್ಲ ಎಂದರು.

ದಲಿತ ಸಂಘಟನೆಗಳ ಒಕ್ಕೂಟದ ಮುಖಂಡ ಗುರುನಾಥ್ ಉಳ್ಳಿಕಾಶಿ ಮಾತನಾಡಿ, ಎಸ್‌ಐಆರ್ ವೇಳೆ 12 ದಾಖಲೆಗಳನ್ನು ತೋರಿಸಿ ಎಂದು ಚುನಾವಣಾ ಆಯೋಗ ಹೇಳುತ್ತಿದೆ. ಆದರೆ, ದಾಖಲೆ ಕೊಡಬೇಕಾದವರು ನಾವಲ್ಲ, ಈ ಷಡ್ಯಂತ್ರ್ಯ ರೂಪಿಸಿದರು. ಅಂದರೆ ಆರ್‌ಎಸ್‌ಎಸ್‌, ಸಂಘಪರಿವಾರದವರು. ಏಕೆಂದರೆ, ಅವರ ಸಂಘಟನೆ ಇನ್ನೂ ನೋಂದಣಿಯೇ ಆಗಿಲ್ಲ. ಅವರು ಮೊದಲು ದಾಖಲೆಗಳನ್ನು ಕೊಡಲಿ, ಬಳಿಕ ನಾವೂ ಕೊಡುತ್ತೇವೆ ಎಂದು ಹೇಳಿದರು.

ಲಡಾಯಿ ಪ್ರಕಾಶನದ ಬಸವರಾಜ್ ಸೂಳೆಭಾವಿ ಮಾತನಾಡಿ, ಎಸ್ಐಅರ್ ಮೂಲಕ ಈ ದೇಶದ ಜನರ ನಾಗರಿಕತ್ವ ಪರಿಶೀಲಿಸಲು ಹೊರಟವರಿಗೆ ನಮ್ಮನೊಂದು ಸವಾಲಿದೆ. ದೆಹಲಿಯ ಕೆಂಪುಕೋಟೆ ಮೇಲೆ ಸ್ವಾತಂತ್ರ್ಯಕ್ಕಾಗಿ ಪ್ರಾಣತ್ಯಾಗ ಮಾಡಿದವರ ಹೆಸರಿದೆ. ಅದರಲ್ಲಿ ಒಬ್ಬರೇ ಒಬ್ಬ ಆರ್‌ಎಸ್‌ಎಸ್‌ ಸಂಘ ಪರಿವಾರದವರ ಹೆಸರು ತೋರಿಸಲಿ ಎಂದರು. ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಸಂಘಪರಿವಾರದವರು ಬ್ರಿಟಿಷರ ಜೊತೆ ಕೈಜೋಡಿಸಿದ್ದರು ಎಂದು ಆರೋಪಿಸಿದರು.

ಎಸ್‌ಐಆರ್ ಮೂಲಕ ನೀವು ಕಿತ್ತುಕೊಳ್ಳಲು ಮುಂದಾಗಿರುವ ನಮ್ಮ ನಾಗರಿಕತ್ವ ಉಳಿಸಿಕೊಳ್ಳಲು ನಾವು ಹೋರಾಡುತ್ತೇವೆ, ನಮ್ಮ ಹಕ್ಕುಗಳನ್ನು ಉಳಿಸುತ್ತೇವೆ. ಎಸ್‌ಐಅರ್ ಮೂಲಕ ನೀವು ಈ ದೇಶದಲ್ಲಿ ಕ್ರಾಂತಿಗೆ ನಾಂದಿ ಹಾಡುತಿದ್ದೀರಿ, ನಾವು ಆ ಕ್ರಾಂತಿಗೆ ಸಿದ್ದರಾಗುತ್ತೇವೆ ಎಂದರು.

ಅಮ್ಮಾರೂಡ ಗುರುಪೀಠದ ಶ್ರೀ ರಾಘವೇಂದ್ರ ಸ್ವಾಮೀಜಿ ಮಾತನಾಡಿ, ನಾವು ದಲಿತರು, ಅಲ್ಪಸಂಖ್ಯಾತರು ಸೇರಿದಂತೆ ಎಲ್ಲಾ ಹಿಂದುಳಿದ ಸಮುದಾಯದವರು ಒಗ್ಗಟ್ಟಾದರೆ ಯಾವುದೇ ಎಸ್ಐಆರ್ ನಮ್ಮನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ನಮ್ಮ‌ ಪೂರ್ವಜರು ತ್ಯಾಗಗಳನ್ನು ಮಾಡಿ ನಮಗೆ ಸ್ವಾತಂತ್ರ್ಯ ಕೊಡಿಸಿದರು. ಬಾಬಾ ಸಾಹೇಬರು ಸಂವಿಧಾನದ ಮೂಲಕ ನಮಗೆ ಹಕ್ಕುಗಳನ್ನು ನೀಡಿದರು. ಅದನ್ನು ಕೇಳುವ ಅವಕಾಶ ನಮಗಿದೆ ಎಂದರು.

ನಮ್ಮ ಸಮಾಜದಲ್ಲಿ ತಾರತಮ್ಯಗಳು ಮುಂದುವರಿದಿವೆ. ಮುಂದೆ ಇದ್ದವರು ಇನ್ನೂ ಮುಂದುವರಿಯುತ್ತಿದ್ದಾರೆ. ಹಿಂದುಳಿದವರು ಹಿಂದೆಯೇ ಇದ್ದೇವೆ. ಎಲ್ಲರಿಗೂ ಸಮಾನ ಅವಕಾಶಗಳು ಸಿಗಬೇಕು. ಅದಕ್ಕಾಗಿ ನಾವೆಲ್ಲ‌ ಒಗ್ಗಟ್ಟಿನಿಂದ ಹೋರಾಡಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ ಮುನ್ನಡೆಸುತ್ತಿರುವ ಯೂಸುಫ್ ಕನ್ನಿ, ಇಸಾಬೆಲ್ಲ ಝೇವಿಯರ್, ಸಂವಿಧಾನ ಸುರಕ್ಷಾ ಸಮಿತಿಯ ಸಂಚಾಲಕ ಅಶ್ರಫ್ ಅಲೀ ಮಾತನಾಡಿದರು.

ವಿವಿಧ ಜನ ಸಂಘಟನೆಗಳು ಮತ್ತು ಜಾತ್ಯತೀತ ಪಕ್ಷಗಳ ಮುಖಂಡರು ಮತ್ತು ಸಾರ್ವಜನಿಕರು ಇದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...