HomeಅಂಕಣಗಳುKarnataka against SIRಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

- Advertisement -
- Advertisement -

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು.

ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ ಮುನ್ಸಿಪಾಲಿಟಿ ಸರ್ಕಲ್, ಎಲ್‌ಐಸಿ ಸರ್ಕಲ್‌, ಅಂಬೇಡ್ಕರ್ ಭವನ, ವಾಂಬೆ ಕಾಲೋನಿ, ಇಲ್ಯಾಸ್ ಮಸೀದಿ ಏರಿಯಾಗಳಲ್ಲಿ ಸಾಗಿ ಪಂಕಾ ಮಸೀದಿ ಬಳಿ ಸಮಾಪ್ತಿಯಾಯಿತು.

ಮುನ್ಸಿಪಾಲಿಟಿ ಸರ್ಕಲ್‌ನಲ್ಲಿ ವಿವಿಧ ಜನಸಂಘಟನೆಗಳು, ವೆಲ್ಫೇರ್ ಪಕ್ಷ, ಕಾಂಗ್ರೆಸ್ ಪಕ್ಷಗಳ ಸಹಯೋಗದಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಉಮೇಶ್ ಮೇಟಿ ಪಾಲ್ಗೊಂಡು ಜಾಥಾಗೆ ಶುಭ ಕೋರಿದರು. ಎಸ್‌ಐಆರ್ ಕುತಂತ್ರದ ವಿರುದ್ಧ ಜನರು ಎಚ್ಚೆತ್ತುಕೊಳ್ಳಬೇಕಾದ ಅವಶ್ಯಕತೆ ಇದೆ ಎಂದರು. ಕಾಂಗ್ರೆಸ್ ಕಾರ್ಯಕರ್ತರು ಈ ನಿಟ್ಟಿನಲ್ಲಿ ಕೆಲಸ ಮಾಡಬೇಕೆಂದು ಕರೆ ನೀಡಿದರು.

ಕಾಂಗ್ರೆಸ್ ಬಾಗಲಕೋಟೆ ಜಿಲ್ಲಾಧ್ಯಕ್ಷ ಎಸ್‌.ಜಿ ನಂಜಯ್ಯಮಠ ಅವರು ಮಾತನಾಡಿ, ಎಸ್‌ಐಆರ್‌ ಮೂಲಕ ಜನರ ಮತಕಡಿತಗೊಳಿಸಿ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅವರನ್ನು ಸೋಲಿಸಿದರು. ನೊಬೆಲ್ ಪುರಸ್ಕೃತ ಅಮರ್ತ್ಯಸೇನ್ ಅವರ ಮತದಾನದ ಹಕ್ಕು ಕಿತ್ತುಕೊಳ್ಳಲು ನೋಡಿದರು. ದೇಶಕ್ಕಾಗಿ ಸೇವೆ ಸಲ್ಲಿಸಿರುವ ಯೋಧನ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಿದ್ದಾರೆ ಎಂದರು.

ಜನರು ಎಸ್‌ಐಆರ್ ಬಗ್ಗೆ ಎಚ್ಚರಗೊಂಡು ಮತ ಹಕ್ಕು ಉಳಿಸಿಕೊಳ್ಳಿ. ಕಾರ್ಯಕರ್ಯರು, ಮುಖಂಡರು ಬೀದಿಗಿಳಿದು ಜನರ ಹಕ್ಕು ಉಳಿಸಲು ಪ್ರಯತ್ನಿಸಿ. ಎಸ್‌ಐಆರ್‌ ಮೂಲಕ ಅಂಬೇಡ್ಕರ್ ಅವರು ಕೊಟ್ಟ ಸಾಂವಿಧಾನಿಕ ಹಕ್ಕು ಮೊಟಕುಗೊಳಿಸುವುದು ಬಿಜೆಪಿಯ ಕುತಂತ್ರವಾಗಿದೆ. ನಮ್ಮ‌ರಾಜ್ಯದಲ್ಲಿ 91 ಕಾಂಗ್ರೆಸ್ ಕ್ಷೇತ್ರಗಳ ಮೇಲೆ ಕಣ್ಣಿಟ್ಟಿದ್ದಾರೆ. ಸಾಂಪ್ರಾದಯಿಕ ಮತ ಕಡಿಯಲು ತಂತ್ರ ರೂಪಿಸಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಹೋರಾಟಗಾರ ಹೆಚ್‌ಎನ್‌ ನೀಲ್ ನಾಯಕ, ಎದ್ದೇಳು ಕರ್ನಾಟಕದ ಪವಿತ್ರಾ ಜಕ್ಕಪ್ಪನವರ್, ಬಿಎಸ್ ಬಾಬಾ ಖಾನ್, ಸ್ಥಳೀಯ ನಾಯಕ ಹಾಜಿ ಸಾಬ್ ದಂಡಿನ್, ವೆಲ್ಫೇರ್ ಪಾರ್ಟಿ ಮತ್ತು ಕಾಂಗ್ರೆಸ್ ಪಾರ್ಟಿಯ ಸ್ಥಳೀಯ ಮುಖಂಡರು ಹಾಗೂ ನೂರಾರು ಮಂದಿ ಸಾರ್ವಜನಿಕರು ಇದ್ದರು.

ಮುನ್ಸಿಪಾಲಿಟಿ ಸರ್ಕಲ್‌ನಲ್ಲಿ ಸಭಾ ಕಾರ್ಯಕ್ರಮದ ಬಳಿಕ, ಎಸ್‌ಐಆರ್ ವಿರುದ್ಧ ಬೃಹತ್ ಕಾಲ್ನಡಿಗೆ ಜಾಥಾ ನಡೆಯಿತು. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಜಾಥಾದಲ್ಲಿ ಪಾಲ್ಗೊಂಡರು. ಚುನಾವಣಾ ಆಯೋಗ, ಎಸ್‌ಐಆರ್ ವಿರುದ್ದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ನಗರದ ವಾಂಬೆ ಕಾಲೋನಿ, ಇಲ್ಯಾಸ್ ಮಸೀದಿ ಮತ್ತು ಪಂಕಾ ಮಸೀದಿ ಪ್ರದೇಶಗಳಲ್ಲಿ ಎಸ್‌ಐಆರ್ ವಿರೋಧಿ ಒಕ್ಕೂಟದ ಪ್ರಮುಖರಾದ ಜಮಾಅತೆ ಇಸ್ಲಾಮಿ ಹಿಂದ್‌ನ ರಾಜ್ಯ ಪ್ರಧಾನ ಕಾರ್ಯದರ್ಶಿ ಮೌಲಾನ ಯೂಸುಫ್ ಕನ್ನಿ, ಆರಿಫುಲ್ಲಾ ಖಾನ್, ಸರೋವರ್ ಬೆಂಕಿಕೆರೆ ಜಾಗೃತಿ ಭಾಷಣಗಳನ್ನು ಮಾಡಿದರು. ಜನರಲ್ಲಿ ಎಸ್‌ಐಆರ್ ಕುರಿತು ಅರಿವು ಮೂಡಿಸಿದರು. ಈ ಸಂದರ್ಭದಲ್ಲಿ ಕರಪತ್ರಗಳನ್ನು ಹಂಚಲಾಯಿತು.

ಇದಕ್ಕೂ ಮುನ್ನ ನಗರದ ಪ್ರವಾಸಿ ಮಂದಿರದಲ್ಲಿ ಮಾಜಿ ಸಚಿವ ವಿಎಸ್ ಉಗ್ರಪ್ಪ ಅವರನ್ನು ಭೇಟಿಯಾದ ಜಾಥಾ ತಂಡ ಮಾತುಕತೆ ನಡೆಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...